Homeಮುಖಪುಟಪಿಕ್ನಿಕ್ ಸ್ಪಾಟ್ ಆಗಿ ಬದಲಾದ ಅಟಲ್ ಸೇತು; ಮುಂಬೈ ಪೊಲೀಸರಿಂದ ವಾಹನ ಸವಾರರಿಗೆ ಎಚ್ಚರಿಕೆ

ಪಿಕ್ನಿಕ್ ಸ್ಪಾಟ್ ಆಗಿ ಬದಲಾದ ಅಟಲ್ ಸೇತು; ಮುಂಬೈ ಪೊಲೀಸರಿಂದ ವಾಹನ ಸವಾರರಿಗೆ ಎಚ್ಚರಿಕೆ

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಅಟಲ್ ಸೇತುವೆಯನ್ನು (ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್) ವಾಹನ ಸವಾರರು ಪಿಕ್ನಿಕ್ ಸ್ಪಾಟ್ ಆಗಿ ಪರಿವರ್ತಿಸಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಿಮಿಸಿದೆ.

ಜನರು ಫೋಟೋ ತೆಗೆಸಿಕೊಳ್ಳುವುದಕ್ಕಾಗಿಯೇ ಸೇತುವೆಯ ಮೇಲೆ ತಮ್ಮ ವಾಹನಗಳನ್ನು ನಿಲ್ಲಿಸುತ್ತಿದ್ದು, ಕೆಲವರು ನಿಯಮಗಳನ್ನು ಉಲ್ಲಂಘಿಸಿ ಹಳಿಗಳನ್ನು ಹತ್ತುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಹಲವಾರು ಫೋಟೋಗಳು ಮತ್ತು ವೀಡಿಯೊಗಳಲ್ಲಿ ಜನರು ಎಲ್ಲೆಂದರಲ್ಲಿ ಕಸ ಹಾಕಿರುವುದು ಕಾಣಬಹುದಾಗಿದೆ. ಜೊತೆಗೆ, ಸೆಲ್ಫಿಗಾಗಿ ರೇಲಿಂಗ್ಸ್‌ಗಳನ್ನು ಹತ್ತುವುದು, ವೀಕ್ಷಣಾ ಗೋಪುರ ತಲುಪಲು ದಂಪತಿಗಳು ಸೇತುವೆಯ ಏಣಿಯನ್ನು ದಾಟುತ್ತಿರುವ ವಿಡಿಯೋಗಳು ವೈರಲ್ ಆಗಿದೆ.

ಈ ಬಗ್ಗೆ ಮುಂಬೈ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ನೀಡಿದ್ದಾರೆ. ಅಟಲ್ ಸೇತು ಮೇಲೆ ವಾಹನ ನಿಲ್ಲಿಸುವವರ ವಿರುದ್ಧ ಕಠಿಣ ಕ್ರಮದ ಸೂಚನೆ ನೀಡಿದ್ದಾರೆ. ಅಟಲ್ ಸೇತು ವೀಕ್ಷಿಸಲು ಯೋಗ್ಯವಾಗಿದ್ದರೂ, ಫೋಟೋಗಳಿಗಾಗಿ ವಾಹನ ನಿಲ್ಲಿಸುವುದು ಕಾನೂನುಬಾಹಿರವಾಗಿದೆ. ಹಾಗೆ ಮಾಡುವ ವ್ಯಕ್ತಿಗಳು ಎಫ್ಐಆರ್‌ಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯಲ್ಲಿ ತಿಳಿಸಲಾಗಿದೆ.

‘ಅಟಲ್ ಸೇತು ಖಂಡಿತವಾಗಿಯೂ ವೀಕ್ಷಣೆಗೆ ಯೋಗ್ಯವಾಗಿದೆ. ಆದರೆ, ಅದಕ್ಕಾಗಿ ವಾಹನ ನಿಲ್ಲಿಸುವುದು ಮತ್ತು ಫೋಟೋಗಳನ್ನು ಕ್ಲಿಕ್ ಮಾಡುವುದು ಕಾನೂನುಬಾಹಿರವಾಗಿದೆ. ನೀವು ಎಂಟಿಎಚ್ಎಲ್ ನಲ್ಲಿ ವಾಹನ ನಿಲ್ಲಿಸಿದರೆ ಎಫ್ಐಆರ್ ಅನ್ನು ಎದುರಿಸಬೇಕಾಗುತ್ತದೆ’ ಎಂದು ಮುಂಬೈ ಟ್ರಾಫಿಕ್ ಪೊಲೀಸರು ಎಕ್ಸ್ ನಲ್ಲಿ ಬರೆದಿದ್ದಾರೆ.

“ಅಟಲ್ ಸೇತು, 21.8 ಕಿಮೀ ಉದ್ದದ ಪಿಕ್ನಿಕ್ ಸ್ಪಾಟ್ ಅಲ್ಲ” ಎಂಬ ಶೀರ್ಷಿಕೆಯೊಂದಿಗೆ ಜನರು ನಿಯಮಗಳನ್ನು ಉಲ್ಲಂಘಿಸುವ ಚಿತ್ರಗಳನ್ನು ಸಹ ಪೊಲೀಸರು ಹಂಚಿಕೊಂಡಿದ್ದಾರೆ. ಮುಂಬೈ ಮತ್ತು ನವಿ ಮುಂಬೈ ನಡುವೆ ವೇಗವಾಗಿ ಪ್ರಯಾಣಿಸಲು ಅನುಕೂಲಕ್ಕಾಗಿ ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾದ ಎಂಟಿಎಚ್ಎಲ್ ಅನ್ನು ನಿರ್ಮಿಸಲಾಗಿದೆ ಎಂದು ಪೊಲೀಸರು ಪ್ರಯಾಣಿಕರಿಗೆ ನೆನಪಿಸಿದ್ದಾರೆ.

₹17,840 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಎಂಟಿಎಚ್ಎಲ್, ಸಮುದ್ರದ ಮೇಲೆ 16.5 ಕಿಮೀ ವ್ಯಾಪಿಸಿದೆ ಮತ್ತು ಎರಡು ದಡಗಳ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ; ಮಥುರಾ: ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...