Homeಅಂತರಾಷ್ಟ್ರೀಯಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ 'ಒಪಿ ಇಂಡಿಯಾ'ಗೆ ಜಾಹಿರಾತು ನಿಲ್ಲಿಸಿದ MUBI

ಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ ‘ಒಪಿ ಇಂಡಿಯಾ’ಗೆ ಜಾಹಿರಾತು ನಿಲ್ಲಿಸಿದ MUBI

ಇಂಗ್ಲೆಂಡ್ ಮೂಲದ 'ಸ್ಟಾಪ್ ಫಂಡಿಂಗ್ ಹೇಟ್' ಅಭಿಯಾನವು ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

- Advertisement -
- Advertisement -

ಸುಳ್ಳು ಹಾಗೂ ದ್ವೇಷ ಹರಡುತ್ತಿದೆ ಎಂದು ನಿರಂತರವಾಗಿ ಆರೋಪಿಸಲ್ಪಡುತ್ತಿರುವ ಹಿಂದುತ್ವದ ವೆಬ್‌ಸೈಟ್ ಒಪಿ ಇಂಡಿಯಾದಲ್ಲಿ ತನ್ನ ಜಾಹೀರಾತುಗಳನ್ನು ನಿಲ್ಲಿಸುವುದಾಗಿ ಖ್ಯಾತ ಚಲನಚಿತ್ರ ಸ್ಟ್ರೀಮಿಂಗ್ ಸೇವೆಯಾದ ಮುಬಿ (MUBI) ಸೇರಿದಂತೆ ಇತರ ಸಂಸ್ಥೆಗಳು ಪ್ರಕಟಿಸಿವೆ. 

“ಹಲಾಲ್‌ ಕಾನೂಬದ್ದ ಎಂದಾದರೆ, ಮುಸ್ಲಿಮರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಕೆಲಸ ನೀಡುವ ಸಂಸ್ಥೆಗಳು ಘೋಷಿಸುವ ಹಕ್ಕು ಹೊಂದಿವೆ” ಎಂಬ ಲೇಖನವೊಂದನ್ನು ಒಪಿಇಂಡಿಯಾ ಪ್ರಕಟಿಸಿತ್ತು. ಇಂಗ್ಲೆಂಡ್‌ ಮೂಲದ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಈ ಬಗ್ಗೆ ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ಒಪಿ ಇಂಡಿಯಾ ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನಕ್ಕೆ “ತನ್ನ ಜಾಹೀರಾತುಗಳು ಸೇರಿದಂತೆ ಹಲವು ಕಂಪನಿಗಳ ಹಲವು ಜಾಹಿರಾತುಗಳು ಒಪಿಇಂಡಿಯಾ ವೆಬ್‌ಸೈಟ್‌ನಲ್ಲಿ ಗೋಚರಿಸುತ್ತಿವೆ” ಎಂದು ಎಚ್ಚರಿಸಿದ್ದ ಕಂಪನಿಗಳಲ್ಲಿ ಮುಬಿ ಕೂಡ ಒಂದು. ಕಂಪನಿಯು “ಇದು ಮತ್ತೆ ಸಂಭವಿಸುವುದಿಲ್ಲ ಎಂದು ಖಚಿತಪಡಿಸುತ್ತದೆ” ಎಂದು ಟ್ವೀಟ್ ಮಾಡಿದೆ.

“ಜಾಹೀರಾತು ಚಟುವಟಿಕೆಗಳಿಗಾಗಿ ನಮ್ಮ ನಿರ್ಬಂಧಿತ ಸೈಟ್‌ಗಳ ಪಟ್ಟಿಗೆ ನಾವು ತಕ್ಷಣ ಒಪಿ ಇಂಡಿಯಾವನ್ನು ಸೇರಿಸಿದ್ದೇವೆ” ಎಂದು ಮುಬಿ ಸಂವಹನ ನಿರ್ದೇಶಕ ಸೋಫಿ ರತಿಗನ್ ಹೇಳಿದ್ದಾರೆ.

ಆನ್‌ಲೈನ್ ಜಾಹೀರಾತುಗಳು ಸಾಮಾನ್ಯವಾಗಿ ನೆಟ್‌ವರ್ಕ್‌ಗಳು ಮತ್ತು ಮಾರುಕಟ್ಟೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಪರಿಣಾಮವಾಗಿ, ಜಾಹೀರಾತುಗಳನ್ನು ಹೆಚ್ಚಾಗಿ ವೆಬ್‌ಸೈಟ್‌ಗಳಲ್ಲಿ ಸ್ವಯಂಚಾಲಿತವಾಗಿ ಇರಿಸಿ ಗ್ರಾಹಕರನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಆದಾಗ್ಯೂ, ಬ್ರಾಂಡ್‌ಗಳು ತಮ್ಮ ಜಾಹೀರಾತುಗಳು ಕೆಲವು ವೆಬ್‌ಸೈಟ್‌ಗಳಲ್ಲಿ ಗೋಚರಿಸಬಾರದು ಎಂದು ಕಪ್ಪುಪಟ್ಟಿಗೆ ಸೇರಿಸುವ ಆಯ್ಕೆಯನ್ನು ಹೊಂದಿರುತ್ತವೆ.

ಮುಬಿ ಜೊತೆಗೆ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸೇಡ್ ಬ್ಯುಸಿನೆಸ್ ಸ್ಕೂಲ್ ಹಾಗೂ ಆನ್‌ಲೈನ್ ಜಾಹೀರಾತು ನೆಟ್‌ವರ್ಕ್‌ನ ರುಬಿಕಾನ್ ಪ್ರಾಜೆಕ್ಟ್ ಸೇರಿದಂತೆ ಹಲವಾರು ಸಂಸ್ಥೆಗಳು ಒಪಿಇಂಡಿಯಾದಿಂದ ಕೈಬಿಡುವುದಾಗಿ ತಿಳಿಸಿವೆ.

 

ಈ ಅಭಿಯಾನವು ಆರಂಭದಲ್ಲಿ ಇಂಗ್ಲೆಂಡ್ ಮೇಲೆ ಕೇಂದ್ರೀಕೃತವಾಗಿತ್ತು ಆದರೆ ಕಾಲಾನಂತರದಲ್ಲಿ ದ್ವೇಷ ಹರಡುವುದನ್ನು ಉದಾಹರಣೆಗಳ ಸಹಿತ ನಮ್ಮ ಗಮನಕ್ಕೆ ತಂದರೆ ಅವುಗಳ ಮೇಲೆ ಬೆಳಕು ಚೆಲ್ಲುತ್ತದೆ ಎಂದು ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನದ ನಿರ್ದೇಶಕ ರಿಚರ್ಡ್ ವಿಲ್ಸನ್ ಹೇಳುತ್ತಾರೆ.

ಅಮೇರಿಕಾ ಮೂಲದ ಸ್ಲೀಪಿಂಗ್ ಜೈಂಟ್ಸ್ ಪ್ರಾರಂಭಿಸಿದ ಟ್ವಿಟ್ಟರ್ ಅಭಿಯಾನದಿಂದ ಪ್ರೇರಿತವಾಗಿ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಸ್ಫೂರ್ತಿ ಪಡೆದಿದೆ ಎಂದು ವಿಲ್ಸನ್ ಹೇಳಿದ್ದಾರೆ, ಇದು ಬಿಳಿ ರಾಷ್ಟ್ರೀಯತಾವಾದಿ ವೆಬ್‌ಸೈಟ್‌ ಬ್ರೀಟ್‌ಬಾರ್ಟ್‌ನಲ್ಲಿ ಜಾಹೀರಾತು ನಿಲ್ಲಿಸಲು 4,000 ಕಂಪನಿಗಳಿಗೆ ಯಶಸ್ವಿಯಾಗಿ ಮನವರಿಕೆ ಮಾಡಿಕೊಟ್ಟಿದೆ.


ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...