Homeಅಂತರಾಷ್ಟ್ರೀಯಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ 'ಒಪಿ ಇಂಡಿಯಾ'ಗೆ ಜಾಹಿರಾತು ನಿಲ್ಲಿಸಿದ MUBI

ಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ ‘ಒಪಿ ಇಂಡಿಯಾ’ಗೆ ಜಾಹಿರಾತು ನಿಲ್ಲಿಸಿದ MUBI

ಇಂಗ್ಲೆಂಡ್ ಮೂಲದ 'ಸ್ಟಾಪ್ ಫಂಡಿಂಗ್ ಹೇಟ್' ಅಭಿಯಾನವು ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

- Advertisement -
- Advertisement -

ಸುಳ್ಳು ಹಾಗೂ ದ್ವೇಷ ಹರಡುತ್ತಿದೆ ಎಂದು ನಿರಂತರವಾಗಿ ಆರೋಪಿಸಲ್ಪಡುತ್ತಿರುವ ಹಿಂದುತ್ವದ ವೆಬ್‌ಸೈಟ್ ಒಪಿ ಇಂಡಿಯಾದಲ್ಲಿ ತನ್ನ ಜಾಹೀರಾತುಗಳನ್ನು ನಿಲ್ಲಿಸುವುದಾಗಿ ಖ್ಯಾತ ಚಲನಚಿತ್ರ ಸ್ಟ್ರೀಮಿಂಗ್ ಸೇವೆಯಾದ ಮುಬಿ (MUBI) ಸೇರಿದಂತೆ ಇತರ ಸಂಸ್ಥೆಗಳು ಪ್ರಕಟಿಸಿವೆ. 

“ಹಲಾಲ್‌ ಕಾನೂಬದ್ದ ಎಂದಾದರೆ, ಮುಸ್ಲಿಮರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಕೆಲಸ ನೀಡುವ ಸಂಸ್ಥೆಗಳು ಘೋಷಿಸುವ ಹಕ್ಕು ಹೊಂದಿವೆ” ಎಂಬ ಲೇಖನವೊಂದನ್ನು ಒಪಿಇಂಡಿಯಾ ಪ್ರಕಟಿಸಿತ್ತು. ಇಂಗ್ಲೆಂಡ್‌ ಮೂಲದ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಈ ಬಗ್ಗೆ ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ಒಪಿ ಇಂಡಿಯಾ ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನಕ್ಕೆ “ತನ್ನ ಜಾಹೀರಾತುಗಳು ಸೇರಿದಂತೆ ಹಲವು ಕಂಪನಿಗಳ ಹಲವು ಜಾಹಿರಾತುಗಳು ಒಪಿಇಂಡಿಯಾ ವೆಬ್‌ಸೈಟ್‌ನಲ್ಲಿ ಗೋಚರಿಸುತ್ತಿವೆ” ಎಂದು ಎಚ್ಚರಿಸಿದ್ದ ಕಂಪನಿಗಳಲ್ಲಿ ಮುಬಿ ಕೂಡ ಒಂದು. ಕಂಪನಿಯು “ಇದು ಮತ್ತೆ ಸಂಭವಿಸುವುದಿಲ್ಲ ಎಂದು ಖಚಿತಪಡಿಸುತ್ತದೆ” ಎಂದು ಟ್ವೀಟ್ ಮಾಡಿದೆ.

“ಜಾಹೀರಾತು ಚಟುವಟಿಕೆಗಳಿಗಾಗಿ ನಮ್ಮ ನಿರ್ಬಂಧಿತ ಸೈಟ್‌ಗಳ ಪಟ್ಟಿಗೆ ನಾವು ತಕ್ಷಣ ಒಪಿ ಇಂಡಿಯಾವನ್ನು ಸೇರಿಸಿದ್ದೇವೆ” ಎಂದು ಮುಬಿ ಸಂವಹನ ನಿರ್ದೇಶಕ ಸೋಫಿ ರತಿಗನ್ ಹೇಳಿದ್ದಾರೆ.

ಆನ್‌ಲೈನ್ ಜಾಹೀರಾತುಗಳು ಸಾಮಾನ್ಯವಾಗಿ ನೆಟ್‌ವರ್ಕ್‌ಗಳು ಮತ್ತು ಮಾರುಕಟ್ಟೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಪರಿಣಾಮವಾಗಿ, ಜಾಹೀರಾತುಗಳನ್ನು ಹೆಚ್ಚಾಗಿ ವೆಬ್‌ಸೈಟ್‌ಗಳಲ್ಲಿ ಸ್ವಯಂಚಾಲಿತವಾಗಿ ಇರಿಸಿ ಗ್ರಾಹಕರನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಆದಾಗ್ಯೂ, ಬ್ರಾಂಡ್‌ಗಳು ತಮ್ಮ ಜಾಹೀರಾತುಗಳು ಕೆಲವು ವೆಬ್‌ಸೈಟ್‌ಗಳಲ್ಲಿ ಗೋಚರಿಸಬಾರದು ಎಂದು ಕಪ್ಪುಪಟ್ಟಿಗೆ ಸೇರಿಸುವ ಆಯ್ಕೆಯನ್ನು ಹೊಂದಿರುತ್ತವೆ.

ಮುಬಿ ಜೊತೆಗೆ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸೇಡ್ ಬ್ಯುಸಿನೆಸ್ ಸ್ಕೂಲ್ ಹಾಗೂ ಆನ್‌ಲೈನ್ ಜಾಹೀರಾತು ನೆಟ್‌ವರ್ಕ್‌ನ ರುಬಿಕಾನ್ ಪ್ರಾಜೆಕ್ಟ್ ಸೇರಿದಂತೆ ಹಲವಾರು ಸಂಸ್ಥೆಗಳು ಒಪಿಇಂಡಿಯಾದಿಂದ ಕೈಬಿಡುವುದಾಗಿ ತಿಳಿಸಿವೆ.

 

ಈ ಅಭಿಯಾನವು ಆರಂಭದಲ್ಲಿ ಇಂಗ್ಲೆಂಡ್ ಮೇಲೆ ಕೇಂದ್ರೀಕೃತವಾಗಿತ್ತು ಆದರೆ ಕಾಲಾನಂತರದಲ್ಲಿ ದ್ವೇಷ ಹರಡುವುದನ್ನು ಉದಾಹರಣೆಗಳ ಸಹಿತ ನಮ್ಮ ಗಮನಕ್ಕೆ ತಂದರೆ ಅವುಗಳ ಮೇಲೆ ಬೆಳಕು ಚೆಲ್ಲುತ್ತದೆ ಎಂದು ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನದ ನಿರ್ದೇಶಕ ರಿಚರ್ಡ್ ವಿಲ್ಸನ್ ಹೇಳುತ್ತಾರೆ.

ಅಮೇರಿಕಾ ಮೂಲದ ಸ್ಲೀಪಿಂಗ್ ಜೈಂಟ್ಸ್ ಪ್ರಾರಂಭಿಸಿದ ಟ್ವಿಟ್ಟರ್ ಅಭಿಯಾನದಿಂದ ಪ್ರೇರಿತವಾಗಿ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಸ್ಫೂರ್ತಿ ಪಡೆದಿದೆ ಎಂದು ವಿಲ್ಸನ್ ಹೇಳಿದ್ದಾರೆ, ಇದು ಬಿಳಿ ರಾಷ್ಟ್ರೀಯತಾವಾದಿ ವೆಬ್‌ಸೈಟ್‌ ಬ್ರೀಟ್‌ಬಾರ್ಟ್‌ನಲ್ಲಿ ಜಾಹೀರಾತು ನಿಲ್ಲಿಸಲು 4,000 ಕಂಪನಿಗಳಿಗೆ ಯಶಸ್ವಿಯಾಗಿ ಮನವರಿಕೆ ಮಾಡಿಕೊಟ್ಟಿದೆ.


ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...