Homeಅಂತರಾಷ್ಟ್ರೀಯಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ 'ಒಪಿ ಇಂಡಿಯಾ'ಗೆ ಜಾಹಿರಾತು ನಿಲ್ಲಿಸಿದ MUBI

ಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ ‘ಒಪಿ ಇಂಡಿಯಾ’ಗೆ ಜಾಹಿರಾತು ನಿಲ್ಲಿಸಿದ MUBI

ಇಂಗ್ಲೆಂಡ್ ಮೂಲದ 'ಸ್ಟಾಪ್ ಫಂಡಿಂಗ್ ಹೇಟ್' ಅಭಿಯಾನವು ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

- Advertisement -
- Advertisement -

ಸುಳ್ಳು ಹಾಗೂ ದ್ವೇಷ ಹರಡುತ್ತಿದೆ ಎಂದು ನಿರಂತರವಾಗಿ ಆರೋಪಿಸಲ್ಪಡುತ್ತಿರುವ ಹಿಂದುತ್ವದ ವೆಬ್‌ಸೈಟ್ ಒಪಿ ಇಂಡಿಯಾದಲ್ಲಿ ತನ್ನ ಜಾಹೀರಾತುಗಳನ್ನು ನಿಲ್ಲಿಸುವುದಾಗಿ ಖ್ಯಾತ ಚಲನಚಿತ್ರ ಸ್ಟ್ರೀಮಿಂಗ್ ಸೇವೆಯಾದ ಮುಬಿ (MUBI) ಸೇರಿದಂತೆ ಇತರ ಸಂಸ್ಥೆಗಳು ಪ್ರಕಟಿಸಿವೆ. 

“ಹಲಾಲ್‌ ಕಾನೂಬದ್ದ ಎಂದಾದರೆ, ಮುಸ್ಲಿಮರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಕೆಲಸ ನೀಡುವ ಸಂಸ್ಥೆಗಳು ಘೋಷಿಸುವ ಹಕ್ಕು ಹೊಂದಿವೆ” ಎಂಬ ಲೇಖನವೊಂದನ್ನು ಒಪಿಇಂಡಿಯಾ ಪ್ರಕಟಿಸಿತ್ತು. ಇಂಗ್ಲೆಂಡ್‌ ಮೂಲದ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಈ ಬಗ್ಗೆ ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ಒಪಿ ಇಂಡಿಯಾ ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನಕ್ಕೆ “ತನ್ನ ಜಾಹೀರಾತುಗಳು ಸೇರಿದಂತೆ ಹಲವು ಕಂಪನಿಗಳ ಹಲವು ಜಾಹಿರಾತುಗಳು ಒಪಿಇಂಡಿಯಾ ವೆಬ್‌ಸೈಟ್‌ನಲ್ಲಿ ಗೋಚರಿಸುತ್ತಿವೆ” ಎಂದು ಎಚ್ಚರಿಸಿದ್ದ ಕಂಪನಿಗಳಲ್ಲಿ ಮುಬಿ ಕೂಡ ಒಂದು. ಕಂಪನಿಯು “ಇದು ಮತ್ತೆ ಸಂಭವಿಸುವುದಿಲ್ಲ ಎಂದು ಖಚಿತಪಡಿಸುತ್ತದೆ” ಎಂದು ಟ್ವೀಟ್ ಮಾಡಿದೆ.

“ಜಾಹೀರಾತು ಚಟುವಟಿಕೆಗಳಿಗಾಗಿ ನಮ್ಮ ನಿರ್ಬಂಧಿತ ಸೈಟ್‌ಗಳ ಪಟ್ಟಿಗೆ ನಾವು ತಕ್ಷಣ ಒಪಿ ಇಂಡಿಯಾವನ್ನು ಸೇರಿಸಿದ್ದೇವೆ” ಎಂದು ಮುಬಿ ಸಂವಹನ ನಿರ್ದೇಶಕ ಸೋಫಿ ರತಿಗನ್ ಹೇಳಿದ್ದಾರೆ.

ಆನ್‌ಲೈನ್ ಜಾಹೀರಾತುಗಳು ಸಾಮಾನ್ಯವಾಗಿ ನೆಟ್‌ವರ್ಕ್‌ಗಳು ಮತ್ತು ಮಾರುಕಟ್ಟೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಪರಿಣಾಮವಾಗಿ, ಜಾಹೀರಾತುಗಳನ್ನು ಹೆಚ್ಚಾಗಿ ವೆಬ್‌ಸೈಟ್‌ಗಳಲ್ಲಿ ಸ್ವಯಂಚಾಲಿತವಾಗಿ ಇರಿಸಿ ಗ್ರಾಹಕರನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಆದಾಗ್ಯೂ, ಬ್ರಾಂಡ್‌ಗಳು ತಮ್ಮ ಜಾಹೀರಾತುಗಳು ಕೆಲವು ವೆಬ್‌ಸೈಟ್‌ಗಳಲ್ಲಿ ಗೋಚರಿಸಬಾರದು ಎಂದು ಕಪ್ಪುಪಟ್ಟಿಗೆ ಸೇರಿಸುವ ಆಯ್ಕೆಯನ್ನು ಹೊಂದಿರುತ್ತವೆ.

ಮುಬಿ ಜೊತೆಗೆ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸೇಡ್ ಬ್ಯುಸಿನೆಸ್ ಸ್ಕೂಲ್ ಹಾಗೂ ಆನ್‌ಲೈನ್ ಜಾಹೀರಾತು ನೆಟ್‌ವರ್ಕ್‌ನ ರುಬಿಕಾನ್ ಪ್ರಾಜೆಕ್ಟ್ ಸೇರಿದಂತೆ ಹಲವಾರು ಸಂಸ್ಥೆಗಳು ಒಪಿಇಂಡಿಯಾದಿಂದ ಕೈಬಿಡುವುದಾಗಿ ತಿಳಿಸಿವೆ.

 

ಈ ಅಭಿಯಾನವು ಆರಂಭದಲ್ಲಿ ಇಂಗ್ಲೆಂಡ್ ಮೇಲೆ ಕೇಂದ್ರೀಕೃತವಾಗಿತ್ತು ಆದರೆ ಕಾಲಾನಂತರದಲ್ಲಿ ದ್ವೇಷ ಹರಡುವುದನ್ನು ಉದಾಹರಣೆಗಳ ಸಹಿತ ನಮ್ಮ ಗಮನಕ್ಕೆ ತಂದರೆ ಅವುಗಳ ಮೇಲೆ ಬೆಳಕು ಚೆಲ್ಲುತ್ತದೆ ಎಂದು ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನದ ನಿರ್ದೇಶಕ ರಿಚರ್ಡ್ ವಿಲ್ಸನ್ ಹೇಳುತ್ತಾರೆ.

ಅಮೇರಿಕಾ ಮೂಲದ ಸ್ಲೀಪಿಂಗ್ ಜೈಂಟ್ಸ್ ಪ್ರಾರಂಭಿಸಿದ ಟ್ವಿಟ್ಟರ್ ಅಭಿಯಾನದಿಂದ ಪ್ರೇರಿತವಾಗಿ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಸ್ಫೂರ್ತಿ ಪಡೆದಿದೆ ಎಂದು ವಿಲ್ಸನ್ ಹೇಳಿದ್ದಾರೆ, ಇದು ಬಿಳಿ ರಾಷ್ಟ್ರೀಯತಾವಾದಿ ವೆಬ್‌ಸೈಟ್‌ ಬ್ರೀಟ್‌ಬಾರ್ಟ್‌ನಲ್ಲಿ ಜಾಹೀರಾತು ನಿಲ್ಲಿಸಲು 4,000 ಕಂಪನಿಗಳಿಗೆ ಯಶಸ್ವಿಯಾಗಿ ಮನವರಿಕೆ ಮಾಡಿಕೊಟ್ಟಿದೆ.


ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...