Homeಅಂತರಾಷ್ಟ್ರೀಯಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ 'ಒಪಿ ಇಂಡಿಯಾ'ಗೆ ಜಾಹಿರಾತು ನಿಲ್ಲಿಸಿದ MUBI

ಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ ‘ಒಪಿ ಇಂಡಿಯಾ’ಗೆ ಜಾಹಿರಾತು ನಿಲ್ಲಿಸಿದ MUBI

ಇಂಗ್ಲೆಂಡ್ ಮೂಲದ 'ಸ್ಟಾಪ್ ಫಂಡಿಂಗ್ ಹೇಟ್' ಅಭಿಯಾನವು ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

- Advertisement -
- Advertisement -

ಸುಳ್ಳು ಹಾಗೂ ದ್ವೇಷ ಹರಡುತ್ತಿದೆ ಎಂದು ನಿರಂತರವಾಗಿ ಆರೋಪಿಸಲ್ಪಡುತ್ತಿರುವ ಹಿಂದುತ್ವದ ವೆಬ್‌ಸೈಟ್ ಒಪಿ ಇಂಡಿಯಾದಲ್ಲಿ ತನ್ನ ಜಾಹೀರಾತುಗಳನ್ನು ನಿಲ್ಲಿಸುವುದಾಗಿ ಖ್ಯಾತ ಚಲನಚಿತ್ರ ಸ್ಟ್ರೀಮಿಂಗ್ ಸೇವೆಯಾದ ಮುಬಿ (MUBI) ಸೇರಿದಂತೆ ಇತರ ಸಂಸ್ಥೆಗಳು ಪ್ರಕಟಿಸಿವೆ. 

“ಹಲಾಲ್‌ ಕಾನೂಬದ್ದ ಎಂದಾದರೆ, ಮುಸ್ಲಿಮರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಕೆಲಸ ನೀಡುವ ಸಂಸ್ಥೆಗಳು ಘೋಷಿಸುವ ಹಕ್ಕು ಹೊಂದಿವೆ” ಎಂಬ ಲೇಖನವೊಂದನ್ನು ಒಪಿಇಂಡಿಯಾ ಪ್ರಕಟಿಸಿತ್ತು. ಇಂಗ್ಲೆಂಡ್‌ ಮೂಲದ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಈ ಬಗ್ಗೆ ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ಒಪಿ ಇಂಡಿಯಾ ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನಕ್ಕೆ “ತನ್ನ ಜಾಹೀರಾತುಗಳು ಸೇರಿದಂತೆ ಹಲವು ಕಂಪನಿಗಳ ಹಲವು ಜಾಹಿರಾತುಗಳು ಒಪಿಇಂಡಿಯಾ ವೆಬ್‌ಸೈಟ್‌ನಲ್ಲಿ ಗೋಚರಿಸುತ್ತಿವೆ” ಎಂದು ಎಚ್ಚರಿಸಿದ್ದ ಕಂಪನಿಗಳಲ್ಲಿ ಮುಬಿ ಕೂಡ ಒಂದು. ಕಂಪನಿಯು “ಇದು ಮತ್ತೆ ಸಂಭವಿಸುವುದಿಲ್ಲ ಎಂದು ಖಚಿತಪಡಿಸುತ್ತದೆ” ಎಂದು ಟ್ವೀಟ್ ಮಾಡಿದೆ.

“ಜಾಹೀರಾತು ಚಟುವಟಿಕೆಗಳಿಗಾಗಿ ನಮ್ಮ ನಿರ್ಬಂಧಿತ ಸೈಟ್‌ಗಳ ಪಟ್ಟಿಗೆ ನಾವು ತಕ್ಷಣ ಒಪಿ ಇಂಡಿಯಾವನ್ನು ಸೇರಿಸಿದ್ದೇವೆ” ಎಂದು ಮುಬಿ ಸಂವಹನ ನಿರ್ದೇಶಕ ಸೋಫಿ ರತಿಗನ್ ಹೇಳಿದ್ದಾರೆ.

ಆನ್‌ಲೈನ್ ಜಾಹೀರಾತುಗಳು ಸಾಮಾನ್ಯವಾಗಿ ನೆಟ್‌ವರ್ಕ್‌ಗಳು ಮತ್ತು ಮಾರುಕಟ್ಟೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಪರಿಣಾಮವಾಗಿ, ಜಾಹೀರಾತುಗಳನ್ನು ಹೆಚ್ಚಾಗಿ ವೆಬ್‌ಸೈಟ್‌ಗಳಲ್ಲಿ ಸ್ವಯಂಚಾಲಿತವಾಗಿ ಇರಿಸಿ ಗ್ರಾಹಕರನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಆದಾಗ್ಯೂ, ಬ್ರಾಂಡ್‌ಗಳು ತಮ್ಮ ಜಾಹೀರಾತುಗಳು ಕೆಲವು ವೆಬ್‌ಸೈಟ್‌ಗಳಲ್ಲಿ ಗೋಚರಿಸಬಾರದು ಎಂದು ಕಪ್ಪುಪಟ್ಟಿಗೆ ಸೇರಿಸುವ ಆಯ್ಕೆಯನ್ನು ಹೊಂದಿರುತ್ತವೆ.

ಮುಬಿ ಜೊತೆಗೆ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸೇಡ್ ಬ್ಯುಸಿನೆಸ್ ಸ್ಕೂಲ್ ಹಾಗೂ ಆನ್‌ಲೈನ್ ಜಾಹೀರಾತು ನೆಟ್‌ವರ್ಕ್‌ನ ರುಬಿಕಾನ್ ಪ್ರಾಜೆಕ್ಟ್ ಸೇರಿದಂತೆ ಹಲವಾರು ಸಂಸ್ಥೆಗಳು ಒಪಿಇಂಡಿಯಾದಿಂದ ಕೈಬಿಡುವುದಾಗಿ ತಿಳಿಸಿವೆ.

 

ಈ ಅಭಿಯಾನವು ಆರಂಭದಲ್ಲಿ ಇಂಗ್ಲೆಂಡ್ ಮೇಲೆ ಕೇಂದ್ರೀಕೃತವಾಗಿತ್ತು ಆದರೆ ಕಾಲಾನಂತರದಲ್ಲಿ ದ್ವೇಷ ಹರಡುವುದನ್ನು ಉದಾಹರಣೆಗಳ ಸಹಿತ ನಮ್ಮ ಗಮನಕ್ಕೆ ತಂದರೆ ಅವುಗಳ ಮೇಲೆ ಬೆಳಕು ಚೆಲ್ಲುತ್ತದೆ ಎಂದು ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನದ ನಿರ್ದೇಶಕ ರಿಚರ್ಡ್ ವಿಲ್ಸನ್ ಹೇಳುತ್ತಾರೆ.

ಅಮೇರಿಕಾ ಮೂಲದ ಸ್ಲೀಪಿಂಗ್ ಜೈಂಟ್ಸ್ ಪ್ರಾರಂಭಿಸಿದ ಟ್ವಿಟ್ಟರ್ ಅಭಿಯಾನದಿಂದ ಪ್ರೇರಿತವಾಗಿ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಸ್ಫೂರ್ತಿ ಪಡೆದಿದೆ ಎಂದು ವಿಲ್ಸನ್ ಹೇಳಿದ್ದಾರೆ, ಇದು ಬಿಳಿ ರಾಷ್ಟ್ರೀಯತಾವಾದಿ ವೆಬ್‌ಸೈಟ್‌ ಬ್ರೀಟ್‌ಬಾರ್ಟ್‌ನಲ್ಲಿ ಜಾಹೀರಾತು ನಿಲ್ಲಿಸಲು 4,000 ಕಂಪನಿಗಳಿಗೆ ಯಶಸ್ವಿಯಾಗಿ ಮನವರಿಕೆ ಮಾಡಿಕೊಟ್ಟಿದೆ.


ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...