Homeಅಂತರಾಷ್ಟ್ರೀಯಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ 'ಒಪಿ ಇಂಡಿಯಾ'ಗೆ ಜಾಹಿರಾತು ನಿಲ್ಲಿಸಿದ MUBI

ಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ ‘ಒಪಿ ಇಂಡಿಯಾ’ಗೆ ಜಾಹಿರಾತು ನಿಲ್ಲಿಸಿದ MUBI

ಇಂಗ್ಲೆಂಡ್ ಮೂಲದ 'ಸ್ಟಾಪ್ ಫಂಡಿಂಗ್ ಹೇಟ್' ಅಭಿಯಾನವು ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

- Advertisement -
- Advertisement -

ಸುಳ್ಳು ಹಾಗೂ ದ್ವೇಷ ಹರಡುತ್ತಿದೆ ಎಂದು ನಿರಂತರವಾಗಿ ಆರೋಪಿಸಲ್ಪಡುತ್ತಿರುವ ಹಿಂದುತ್ವದ ವೆಬ್‌ಸೈಟ್ ಒಪಿ ಇಂಡಿಯಾದಲ್ಲಿ ತನ್ನ ಜಾಹೀರಾತುಗಳನ್ನು ನಿಲ್ಲಿಸುವುದಾಗಿ ಖ್ಯಾತ ಚಲನಚಿತ್ರ ಸ್ಟ್ರೀಮಿಂಗ್ ಸೇವೆಯಾದ ಮುಬಿ (MUBI) ಸೇರಿದಂತೆ ಇತರ ಸಂಸ್ಥೆಗಳು ಪ್ರಕಟಿಸಿವೆ. 

“ಹಲಾಲ್‌ ಕಾನೂಬದ್ದ ಎಂದಾದರೆ, ಮುಸ್ಲಿಮರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಕೆಲಸ ನೀಡುವ ಸಂಸ್ಥೆಗಳು ಘೋಷಿಸುವ ಹಕ್ಕು ಹೊಂದಿವೆ” ಎಂಬ ಲೇಖನವೊಂದನ್ನು ಒಪಿಇಂಡಿಯಾ ಪ್ರಕಟಿಸಿತ್ತು. ಇಂಗ್ಲೆಂಡ್‌ ಮೂಲದ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಈ ಬಗ್ಗೆ ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ಒಪಿ ಇಂಡಿಯಾ ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನಕ್ಕೆ “ತನ್ನ ಜಾಹೀರಾತುಗಳು ಸೇರಿದಂತೆ ಹಲವು ಕಂಪನಿಗಳ ಹಲವು ಜಾಹಿರಾತುಗಳು ಒಪಿಇಂಡಿಯಾ ವೆಬ್‌ಸೈಟ್‌ನಲ್ಲಿ ಗೋಚರಿಸುತ್ತಿವೆ” ಎಂದು ಎಚ್ಚರಿಸಿದ್ದ ಕಂಪನಿಗಳಲ್ಲಿ ಮುಬಿ ಕೂಡ ಒಂದು. ಕಂಪನಿಯು “ಇದು ಮತ್ತೆ ಸಂಭವಿಸುವುದಿಲ್ಲ ಎಂದು ಖಚಿತಪಡಿಸುತ್ತದೆ” ಎಂದು ಟ್ವೀಟ್ ಮಾಡಿದೆ.

“ಜಾಹೀರಾತು ಚಟುವಟಿಕೆಗಳಿಗಾಗಿ ನಮ್ಮ ನಿರ್ಬಂಧಿತ ಸೈಟ್‌ಗಳ ಪಟ್ಟಿಗೆ ನಾವು ತಕ್ಷಣ ಒಪಿ ಇಂಡಿಯಾವನ್ನು ಸೇರಿಸಿದ್ದೇವೆ” ಎಂದು ಮುಬಿ ಸಂವಹನ ನಿರ್ದೇಶಕ ಸೋಫಿ ರತಿಗನ್ ಹೇಳಿದ್ದಾರೆ.

ಆನ್‌ಲೈನ್ ಜಾಹೀರಾತುಗಳು ಸಾಮಾನ್ಯವಾಗಿ ನೆಟ್‌ವರ್ಕ್‌ಗಳು ಮತ್ತು ಮಾರುಕಟ್ಟೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಪರಿಣಾಮವಾಗಿ, ಜಾಹೀರಾತುಗಳನ್ನು ಹೆಚ್ಚಾಗಿ ವೆಬ್‌ಸೈಟ್‌ಗಳಲ್ಲಿ ಸ್ವಯಂಚಾಲಿತವಾಗಿ ಇರಿಸಿ ಗ್ರಾಹಕರನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಆದಾಗ್ಯೂ, ಬ್ರಾಂಡ್‌ಗಳು ತಮ್ಮ ಜಾಹೀರಾತುಗಳು ಕೆಲವು ವೆಬ್‌ಸೈಟ್‌ಗಳಲ್ಲಿ ಗೋಚರಿಸಬಾರದು ಎಂದು ಕಪ್ಪುಪಟ್ಟಿಗೆ ಸೇರಿಸುವ ಆಯ್ಕೆಯನ್ನು ಹೊಂದಿರುತ್ತವೆ.

ಮುಬಿ ಜೊತೆಗೆ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸೇಡ್ ಬ್ಯುಸಿನೆಸ್ ಸ್ಕೂಲ್ ಹಾಗೂ ಆನ್‌ಲೈನ್ ಜಾಹೀರಾತು ನೆಟ್‌ವರ್ಕ್‌ನ ರುಬಿಕಾನ್ ಪ್ರಾಜೆಕ್ಟ್ ಸೇರಿದಂತೆ ಹಲವಾರು ಸಂಸ್ಥೆಗಳು ಒಪಿಇಂಡಿಯಾದಿಂದ ಕೈಬಿಡುವುದಾಗಿ ತಿಳಿಸಿವೆ.

 

ಈ ಅಭಿಯಾನವು ಆರಂಭದಲ್ಲಿ ಇಂಗ್ಲೆಂಡ್ ಮೇಲೆ ಕೇಂದ್ರೀಕೃತವಾಗಿತ್ತು ಆದರೆ ಕಾಲಾನಂತರದಲ್ಲಿ ದ್ವೇಷ ಹರಡುವುದನ್ನು ಉದಾಹರಣೆಗಳ ಸಹಿತ ನಮ್ಮ ಗಮನಕ್ಕೆ ತಂದರೆ ಅವುಗಳ ಮೇಲೆ ಬೆಳಕು ಚೆಲ್ಲುತ್ತದೆ ಎಂದು ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನದ ನಿರ್ದೇಶಕ ರಿಚರ್ಡ್ ವಿಲ್ಸನ್ ಹೇಳುತ್ತಾರೆ.

ಅಮೇರಿಕಾ ಮೂಲದ ಸ್ಲೀಪಿಂಗ್ ಜೈಂಟ್ಸ್ ಪ್ರಾರಂಭಿಸಿದ ಟ್ವಿಟ್ಟರ್ ಅಭಿಯಾನದಿಂದ ಪ್ರೇರಿತವಾಗಿ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಸ್ಫೂರ್ತಿ ಪಡೆದಿದೆ ಎಂದು ವಿಲ್ಸನ್ ಹೇಳಿದ್ದಾರೆ, ಇದು ಬಿಳಿ ರಾಷ್ಟ್ರೀಯತಾವಾದಿ ವೆಬ್‌ಸೈಟ್‌ ಬ್ರೀಟ್‌ಬಾರ್ಟ್‌ನಲ್ಲಿ ಜಾಹೀರಾತು ನಿಲ್ಲಿಸಲು 4,000 ಕಂಪನಿಗಳಿಗೆ ಯಶಸ್ವಿಯಾಗಿ ಮನವರಿಕೆ ಮಾಡಿಕೊಟ್ಟಿದೆ.


ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....