Homeಅಂತರಾಷ್ಟ್ರೀಯಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ 'ಒಪಿ ಇಂಡಿಯಾ'ಗೆ ಜಾಹಿರಾತು ನಿಲ್ಲಿಸಿದ MUBI

ಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ ‘ಒಪಿ ಇಂಡಿಯಾ’ಗೆ ಜಾಹಿರಾತು ನಿಲ್ಲಿಸಿದ MUBI

ಇಂಗ್ಲೆಂಡ್ ಮೂಲದ 'ಸ್ಟಾಪ್ ಫಂಡಿಂಗ್ ಹೇಟ್' ಅಭಿಯಾನವು ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

- Advertisement -
- Advertisement -

ಸುಳ್ಳು ಹಾಗೂ ದ್ವೇಷ ಹರಡುತ್ತಿದೆ ಎಂದು ನಿರಂತರವಾಗಿ ಆರೋಪಿಸಲ್ಪಡುತ್ತಿರುವ ಹಿಂದುತ್ವದ ವೆಬ್‌ಸೈಟ್ ಒಪಿ ಇಂಡಿಯಾದಲ್ಲಿ ತನ್ನ ಜಾಹೀರಾತುಗಳನ್ನು ನಿಲ್ಲಿಸುವುದಾಗಿ ಖ್ಯಾತ ಚಲನಚಿತ್ರ ಸ್ಟ್ರೀಮಿಂಗ್ ಸೇವೆಯಾದ ಮುಬಿ (MUBI) ಸೇರಿದಂತೆ ಇತರ ಸಂಸ್ಥೆಗಳು ಪ್ರಕಟಿಸಿವೆ. 

“ಹಲಾಲ್‌ ಕಾನೂಬದ್ದ ಎಂದಾದರೆ, ಮುಸ್ಲಿಮರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಕೆಲಸ ನೀಡುವ ಸಂಸ್ಥೆಗಳು ಘೋಷಿಸುವ ಹಕ್ಕು ಹೊಂದಿವೆ” ಎಂಬ ಲೇಖನವೊಂದನ್ನು ಒಪಿಇಂಡಿಯಾ ಪ್ರಕಟಿಸಿತ್ತು. ಇಂಗ್ಲೆಂಡ್‌ ಮೂಲದ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಈ ಬಗ್ಗೆ ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ಒಪಿ ಇಂಡಿಯಾ ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನಕ್ಕೆ “ತನ್ನ ಜಾಹೀರಾತುಗಳು ಸೇರಿದಂತೆ ಹಲವು ಕಂಪನಿಗಳ ಹಲವು ಜಾಹಿರಾತುಗಳು ಒಪಿಇಂಡಿಯಾ ವೆಬ್‌ಸೈಟ್‌ನಲ್ಲಿ ಗೋಚರಿಸುತ್ತಿವೆ” ಎಂದು ಎಚ್ಚರಿಸಿದ್ದ ಕಂಪನಿಗಳಲ್ಲಿ ಮುಬಿ ಕೂಡ ಒಂದು. ಕಂಪನಿಯು “ಇದು ಮತ್ತೆ ಸಂಭವಿಸುವುದಿಲ್ಲ ಎಂದು ಖಚಿತಪಡಿಸುತ್ತದೆ” ಎಂದು ಟ್ವೀಟ್ ಮಾಡಿದೆ.

“ಜಾಹೀರಾತು ಚಟುವಟಿಕೆಗಳಿಗಾಗಿ ನಮ್ಮ ನಿರ್ಬಂಧಿತ ಸೈಟ್‌ಗಳ ಪಟ್ಟಿಗೆ ನಾವು ತಕ್ಷಣ ಒಪಿ ಇಂಡಿಯಾವನ್ನು ಸೇರಿಸಿದ್ದೇವೆ” ಎಂದು ಮುಬಿ ಸಂವಹನ ನಿರ್ದೇಶಕ ಸೋಫಿ ರತಿಗನ್ ಹೇಳಿದ್ದಾರೆ.

ಆನ್‌ಲೈನ್ ಜಾಹೀರಾತುಗಳು ಸಾಮಾನ್ಯವಾಗಿ ನೆಟ್‌ವರ್ಕ್‌ಗಳು ಮತ್ತು ಮಾರುಕಟ್ಟೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಪರಿಣಾಮವಾಗಿ, ಜಾಹೀರಾತುಗಳನ್ನು ಹೆಚ್ಚಾಗಿ ವೆಬ್‌ಸೈಟ್‌ಗಳಲ್ಲಿ ಸ್ವಯಂಚಾಲಿತವಾಗಿ ಇರಿಸಿ ಗ್ರಾಹಕರನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಆದಾಗ್ಯೂ, ಬ್ರಾಂಡ್‌ಗಳು ತಮ್ಮ ಜಾಹೀರಾತುಗಳು ಕೆಲವು ವೆಬ್‌ಸೈಟ್‌ಗಳಲ್ಲಿ ಗೋಚರಿಸಬಾರದು ಎಂದು ಕಪ್ಪುಪಟ್ಟಿಗೆ ಸೇರಿಸುವ ಆಯ್ಕೆಯನ್ನು ಹೊಂದಿರುತ್ತವೆ.

ಮುಬಿ ಜೊತೆಗೆ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸೇಡ್ ಬ್ಯುಸಿನೆಸ್ ಸ್ಕೂಲ್ ಹಾಗೂ ಆನ್‌ಲೈನ್ ಜಾಹೀರಾತು ನೆಟ್‌ವರ್ಕ್‌ನ ರುಬಿಕಾನ್ ಪ್ರಾಜೆಕ್ಟ್ ಸೇರಿದಂತೆ ಹಲವಾರು ಸಂಸ್ಥೆಗಳು ಒಪಿಇಂಡಿಯಾದಿಂದ ಕೈಬಿಡುವುದಾಗಿ ತಿಳಿಸಿವೆ.

 

ಈ ಅಭಿಯಾನವು ಆರಂಭದಲ್ಲಿ ಇಂಗ್ಲೆಂಡ್ ಮೇಲೆ ಕೇಂದ್ರೀಕೃತವಾಗಿತ್ತು ಆದರೆ ಕಾಲಾನಂತರದಲ್ಲಿ ದ್ವೇಷ ಹರಡುವುದನ್ನು ಉದಾಹರಣೆಗಳ ಸಹಿತ ನಮ್ಮ ಗಮನಕ್ಕೆ ತಂದರೆ ಅವುಗಳ ಮೇಲೆ ಬೆಳಕು ಚೆಲ್ಲುತ್ತದೆ ಎಂದು ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನದ ನಿರ್ದೇಶಕ ರಿಚರ್ಡ್ ವಿಲ್ಸನ್ ಹೇಳುತ್ತಾರೆ.

ಅಮೇರಿಕಾ ಮೂಲದ ಸ್ಲೀಪಿಂಗ್ ಜೈಂಟ್ಸ್ ಪ್ರಾರಂಭಿಸಿದ ಟ್ವಿಟ್ಟರ್ ಅಭಿಯಾನದಿಂದ ಪ್ರೇರಿತವಾಗಿ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಸ್ಫೂರ್ತಿ ಪಡೆದಿದೆ ಎಂದು ವಿಲ್ಸನ್ ಹೇಳಿದ್ದಾರೆ, ಇದು ಬಿಳಿ ರಾಷ್ಟ್ರೀಯತಾವಾದಿ ವೆಬ್‌ಸೈಟ್‌ ಬ್ರೀಟ್‌ಬಾರ್ಟ್‌ನಲ್ಲಿ ಜಾಹೀರಾತು ನಿಲ್ಲಿಸಲು 4,000 ಕಂಪನಿಗಳಿಗೆ ಯಶಸ್ವಿಯಾಗಿ ಮನವರಿಕೆ ಮಾಡಿಕೊಟ್ಟಿದೆ.


ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...