Homeಅಂತರಾಷ್ಟ್ರೀಯಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ 'ಒಪಿ ಇಂಡಿಯಾ'ಗೆ ಜಾಹಿರಾತು ನಿಲ್ಲಿಸಿದ MUBI

ಸುಳ್ಳು, ದ್ವೇಷ ಹರಡುವ ಹಿಂದುತ್ವದ ವೆಬ್‌ಸೈಟ್ ‘ಒಪಿ ಇಂಡಿಯಾ’ಗೆ ಜಾಹಿರಾತು ನಿಲ್ಲಿಸಿದ MUBI

ಇಂಗ್ಲೆಂಡ್ ಮೂಲದ 'ಸ್ಟಾಪ್ ಫಂಡಿಂಗ್ ಹೇಟ್' ಅಭಿಯಾನವು ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

- Advertisement -
- Advertisement -

ಸುಳ್ಳು ಹಾಗೂ ದ್ವೇಷ ಹರಡುತ್ತಿದೆ ಎಂದು ನಿರಂತರವಾಗಿ ಆರೋಪಿಸಲ್ಪಡುತ್ತಿರುವ ಹಿಂದುತ್ವದ ವೆಬ್‌ಸೈಟ್ ಒಪಿ ಇಂಡಿಯಾದಲ್ಲಿ ತನ್ನ ಜಾಹೀರಾತುಗಳನ್ನು ನಿಲ್ಲಿಸುವುದಾಗಿ ಖ್ಯಾತ ಚಲನಚಿತ್ರ ಸ್ಟ್ರೀಮಿಂಗ್ ಸೇವೆಯಾದ ಮುಬಿ (MUBI) ಸೇರಿದಂತೆ ಇತರ ಸಂಸ್ಥೆಗಳು ಪ್ರಕಟಿಸಿವೆ. 

“ಹಲಾಲ್‌ ಕಾನೂಬದ್ದ ಎಂದಾದರೆ, ಮುಸ್ಲಿಮರನ್ನು ನೇಮಿಸಿಕೊಳ್ಳುವುದಿಲ್ಲ ಎಂದು ಕೆಲಸ ನೀಡುವ ಸಂಸ್ಥೆಗಳು ಘೋಷಿಸುವ ಹಕ್ಕು ಹೊಂದಿವೆ” ಎಂಬ ಲೇಖನವೊಂದನ್ನು ಒಪಿಇಂಡಿಯಾ ಪ್ರಕಟಿಸಿತ್ತು. ಇಂಗ್ಲೆಂಡ್‌ ಮೂಲದ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಈ ಬಗ್ಗೆ ಗಮನ ಸೆಳೆದ ಕಾರಣ ಇತರ ಹಲವು ಬ್ರಾಂಡ್‌ಗಳು ಕೂಡಾ ತಮ್ಮ ಜಾಹೀರಾತುಗಳನ್ನು ಒಪಿ ಇಂಡಿಯಾ ವೆಬ್‌ಸೈಟ್‌ನಿಂದ ಕೈಬಿಡುವುದಾಗಿ ಹೇಳಿದೆ.

ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನಕ್ಕೆ “ತನ್ನ ಜಾಹೀರಾತುಗಳು ಸೇರಿದಂತೆ ಹಲವು ಕಂಪನಿಗಳ ಹಲವು ಜಾಹಿರಾತುಗಳು ಒಪಿಇಂಡಿಯಾ ವೆಬ್‌ಸೈಟ್‌ನಲ್ಲಿ ಗೋಚರಿಸುತ್ತಿವೆ” ಎಂದು ಎಚ್ಚರಿಸಿದ್ದ ಕಂಪನಿಗಳಲ್ಲಿ ಮುಬಿ ಕೂಡ ಒಂದು. ಕಂಪನಿಯು “ಇದು ಮತ್ತೆ ಸಂಭವಿಸುವುದಿಲ್ಲ ಎಂದು ಖಚಿತಪಡಿಸುತ್ತದೆ” ಎಂದು ಟ್ವೀಟ್ ಮಾಡಿದೆ.

“ಜಾಹೀರಾತು ಚಟುವಟಿಕೆಗಳಿಗಾಗಿ ನಮ್ಮ ನಿರ್ಬಂಧಿತ ಸೈಟ್‌ಗಳ ಪಟ್ಟಿಗೆ ನಾವು ತಕ್ಷಣ ಒಪಿ ಇಂಡಿಯಾವನ್ನು ಸೇರಿಸಿದ್ದೇವೆ” ಎಂದು ಮುಬಿ ಸಂವಹನ ನಿರ್ದೇಶಕ ಸೋಫಿ ರತಿಗನ್ ಹೇಳಿದ್ದಾರೆ.

ಆನ್‌ಲೈನ್ ಜಾಹೀರಾತುಗಳು ಸಾಮಾನ್ಯವಾಗಿ ನೆಟ್‌ವರ್ಕ್‌ಗಳು ಮತ್ತು ಮಾರುಕಟ್ಟೆಗಳ ಮೂಲಕ ಕಾರ್ಯನಿರ್ವಹಿಸುತ್ತದೆ. ಪರಿಣಾಮವಾಗಿ, ಜಾಹೀರಾತುಗಳನ್ನು ಹೆಚ್ಚಾಗಿ ವೆಬ್‌ಸೈಟ್‌ಗಳಲ್ಲಿ ಸ್ವಯಂಚಾಲಿತವಾಗಿ ಇರಿಸಿ ಗ್ರಾಹಕರನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಆದಾಗ್ಯೂ, ಬ್ರಾಂಡ್‌ಗಳು ತಮ್ಮ ಜಾಹೀರಾತುಗಳು ಕೆಲವು ವೆಬ್‌ಸೈಟ್‌ಗಳಲ್ಲಿ ಗೋಚರಿಸಬಾರದು ಎಂದು ಕಪ್ಪುಪಟ್ಟಿಗೆ ಸೇರಿಸುವ ಆಯ್ಕೆಯನ್ನು ಹೊಂದಿರುತ್ತವೆ.

ಮುಬಿ ಜೊತೆಗೆ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸೇಡ್ ಬ್ಯುಸಿನೆಸ್ ಸ್ಕೂಲ್ ಹಾಗೂ ಆನ್‌ಲೈನ್ ಜಾಹೀರಾತು ನೆಟ್‌ವರ್ಕ್‌ನ ರುಬಿಕಾನ್ ಪ್ರಾಜೆಕ್ಟ್ ಸೇರಿದಂತೆ ಹಲವಾರು ಸಂಸ್ಥೆಗಳು ಒಪಿಇಂಡಿಯಾದಿಂದ ಕೈಬಿಡುವುದಾಗಿ ತಿಳಿಸಿವೆ.

 

ಈ ಅಭಿಯಾನವು ಆರಂಭದಲ್ಲಿ ಇಂಗ್ಲೆಂಡ್ ಮೇಲೆ ಕೇಂದ್ರೀಕೃತವಾಗಿತ್ತು ಆದರೆ ಕಾಲಾನಂತರದಲ್ಲಿ ದ್ವೇಷ ಹರಡುವುದನ್ನು ಉದಾಹರಣೆಗಳ ಸಹಿತ ನಮ್ಮ ಗಮನಕ್ಕೆ ತಂದರೆ ಅವುಗಳ ಮೇಲೆ ಬೆಳಕು ಚೆಲ್ಲುತ್ತದೆ ಎಂದು ಸ್ಟಾಪ್ ಫಂಡಿಂಗ್ ಹೇಟ್ ಅಭಿಯಾನದ ನಿರ್ದೇಶಕ ರಿಚರ್ಡ್ ವಿಲ್ಸನ್ ಹೇಳುತ್ತಾರೆ.

ಅಮೇರಿಕಾ ಮೂಲದ ಸ್ಲೀಪಿಂಗ್ ಜೈಂಟ್ಸ್ ಪ್ರಾರಂಭಿಸಿದ ಟ್ವಿಟ್ಟರ್ ಅಭಿಯಾನದಿಂದ ಪ್ರೇರಿತವಾಗಿ ‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನವು ಸ್ಫೂರ್ತಿ ಪಡೆದಿದೆ ಎಂದು ವಿಲ್ಸನ್ ಹೇಳಿದ್ದಾರೆ, ಇದು ಬಿಳಿ ರಾಷ್ಟ್ರೀಯತಾವಾದಿ ವೆಬ್‌ಸೈಟ್‌ ಬ್ರೀಟ್‌ಬಾರ್ಟ್‌ನಲ್ಲಿ ಜಾಹೀರಾತು ನಿಲ್ಲಿಸಲು 4,000 ಕಂಪನಿಗಳಿಗೆ ಯಶಸ್ವಿಯಾಗಿ ಮನವರಿಕೆ ಮಾಡಿಕೊಟ್ಟಿದೆ.


ಓದಿ: ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...