Homeಮುಖಪುಟಗ್ರೇಟಾ ಹಂಚಿಕೊಂಡಿದ್ದ ’ಟೂಲ್‌ಕಿಟ್’‌ ತನಿಖೆಯಿಂದ ಬಹಳ ವಿಚಾರ ಹೊರಬರಲಿದೆ: ಕೇಂದ್ರ ಸರ್ಕಾರ

ಗ್ರೇಟಾ ಹಂಚಿಕೊಂಡಿದ್ದ ’ಟೂಲ್‌ಕಿಟ್’‌ ತನಿಖೆಯಿಂದ ಬಹಳ ವಿಚಾರ ಹೊರಬರಲಿದೆ: ಕೇಂದ್ರ ಸರ್ಕಾರ

ಭಾರತೀಯ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯ ಸಮುದಾಯದಿಂದ ಬೆಂಬಲ ಹೆಚ್ಚುತ್ತಿರುವುದು ಕೇಂದ್ರ ಸರ್ಕಾರವನ್ನು ತೀವ್ರ ಮುಜುಗರಕ್ಕೀಡಾಗಿಸಿದೆ.

- Advertisement -
- Advertisement -

ಖ್ಯಾತ ಅಂತಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಭಾರತೀಯ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು ಎಂಬ ಮಾಹಿತಿಯಿರುವ ’ಟೂಲ್‌ಕಿಟ್‌’ ಒಂದನ್ನು ತಮ್ಮ ಟ್ವೀಟ್‌ ಒಂದರಲ್ಲಿ ಹಂಚಿಕೊಂಡಿದ್ದರು. ಕೇಂದ್ರ ಸರ್ಕಾರ ಇದೀಗ ಟೂಲ್‌ಕಿಟ್‌‌ ಬೆನ್ನು ಬಿದ್ದಿದ್ದು, ಟೂಲ್‌ಕಿಟ್ ತಯಾರಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದೆ. ಈ ಬಗ್ಗೆ ಮಾತನಾಡಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌‌, ಗ್ರೇಟಾ ಹಂಚಿಕೊಂಡಿದ್ದ ‘ಟೂಲ್‌ ಕಿಟ್‌’ ತನಿಖೆಯಿಂದ ಬಹಳಷ್ಟು ವಿಚಾರಗಳು ಹೊರಬರಲಿವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಶನಿವಾರ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಸಚಿವ ಜೈಶಂಕರ್‌, “ಹೊರದೇಶಗಳ ಕೆಲ ಸೆಲೆಬ್ರಿಟಿಗಳು ರೈತರ ಪ್ರತಿಭಟನೆಯ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಆದರೆ, ಅವರಿಗೆ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಬಗ್ಗೆ ಹೆಚ್ಚು ತಿಳಿದಿಲ್ಲ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

“ಟೂಲ್‌ ಕಿಟ್‌ನಿಂದ ಬಹಳಷ್ಟು ವಿಚಾರಗಳು ಈಗಾಗಲೇ ಬಹಿರಂಗಗೊಂಡಿವೆ. ಮುಂದಿನ ದಿನಗಳಲ್ಲಿ ಏನು ಹೊರಬರುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ. ಕೆಲ ಸೆಲೆಬ್ರಿಟಿಗಳು ತಮಗೆ ಹೆಚ್ಚು ಅರ್ಥವಾಗದ ವಿಷಯಗಳ ಬಗ್ಗೆ ಹೇಳಿಕೆಗಳನ್ನು ನೀಡಿದ್ದಾರೆ. ಇದಕ್ಕೆ ವಿದೇಶಾಂಗ ಸಚಿವಾಲಯವು ಪ್ರತಿಕ್ರಿಯಿಸಲೇಬೇಕಾದ ಅನಿವಾರ್ಯತೆ ಇತ್ತು” ಎಂದು ಹೇಳಿದ್ದಾರೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಬುಧವಾರ ಸಂಜೆ “ಟೂಲ್‌ಕಿಟ್” ಅನ್ನು ಟ್ವೀಟ್ ಮಾಡಿದ್ದರು, ಆದರೆ ಇದು ಜನವರಿ 26 ರಂದು ನಡೆದ ಗಣರಾಜ್ಯೋತ್ಸವದ ಪ್ರತಿಭಟನೆಯ ಮೇಲೆ ಕೇಂದ್ರೀಕೃತವಾಗಿತ್ತು. ಸ್ವಲ್ಪ ಸಮಯದ ನಂತರ ಆ ಪೋಸ್ಟ್ ಡಿಲೀಟ್ ಮಾಡಿ, ಗುರುವಾರ ಬೆಳಿಗ್ಗೆ, ಹೊಸ ಟೂಲ್‌ಕಿಟ್ ಅನ್ನು ಪೋಸ್ಟ್ ಮಾಡಿದ್ದರು. ಈ ಹೊಸ ಟೂಲ್‌ಕಿಟ್ ಫೆಬ್ರವರಿ 13 ಮತ್ತು 14 ರಂದು ಪ್ರಪಂಚಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು.

ಟೂಲ್‌ಕಿಟ್‌ ತಯಾರಿಸಿದವರ ಬಗ್ಗೆ ಎಫ್‌‌ಐಆರ್‌ ದಾಖಲಾದ ನಂತರವು ಗ್ರೇಟಾ ಥನ್‌ಬರ್ಗ್, “ನಾನು ಇನ್ನೂ ರೈತರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ಅದನ್ನು ಎಂದಿಗೂ ಬದಲಾಯಿಸುವುದಿಲ್ಲ” ಎಂದಿದ್ದರು.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

 

ಕಳೆದ ಕೆಲವು ದಿನಗಳಿಂದ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ ಹಲವಾರು ಅಂತಾರಾಷ್ಟ್ರೀಯ ವ್ಯಕ್ತಿಗಳಲ್ಲಿ ಈ ಯುವ ಪರಿಸರ ಕಾರ್ಯಕರ್ತೆ ಕೂಡ ಸೇರಿದ್ದಾರೆ. ಈ ಬೆಂಬಲದಿಂದ ಕೇಂದ್ರವು ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನಕ್ಕೆ ಜಾಗತಿಕ ಮನ್ನಣೆ ಪ್ರಾಪ್ತವಾಗಿದ್ದು, ಭಾರತ ಸರ್ಕಾರಕ್ಕೆ ಜಾಗತಿಕ ಮಟ್ಟದಲ್ಲಿ ಇರಿಸುಮುರಿಸು ಉಂಟಾಗಿದೆ.

ಟ್ವಿಟರ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪಾಪ್ ತಾರೆ ರಿಹಾನ್ನಾ ಅವರ ಪೋಸ್ಟ್‌ನೊಂದಿಗೆ ಮಂಗಳವಾರ ಸಂಜೆ ಇದು ಪ್ರಾರಂಭವಾಯಿತು. ಹಲವಾರು ಅಮೆರಿಕ ಜನಪ್ರತಿನಿಧಿಗಳು ಮತ್ತು ಇತರರು ಇದನ್ನು ಅನುಸರಿಸುತ್ತಿದ್ದಂತೆ, ಸರ್ಕಾರವು “ವಿದೇಶಿಗರು ಭಾರತದ ಆಂತರಿಕ ವಿಷಯದಲ್ಲಿ ತಲೆಹಾಕಬಾರದು” ಎಂದು ಎಚ್ಚರಿಕೆ ನೀಡಿ ಪ್ರಕಟಣೆ ಹೊರಡಿಸಿತ್ತು.

ಇದನ್ನೂ ಓದಿ:ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...