Homeಮುಖಪುಟಗ್ರೇಟಾ ಹಂಚಿಕೊಂಡಿದ್ದ ’ಟೂಲ್‌ಕಿಟ್’‌ ತನಿಖೆಯಿಂದ ಬಹಳ ವಿಚಾರ ಹೊರಬರಲಿದೆ: ಕೇಂದ್ರ ಸರ್ಕಾರ

ಗ್ರೇಟಾ ಹಂಚಿಕೊಂಡಿದ್ದ ’ಟೂಲ್‌ಕಿಟ್’‌ ತನಿಖೆಯಿಂದ ಬಹಳ ವಿಚಾರ ಹೊರಬರಲಿದೆ: ಕೇಂದ್ರ ಸರ್ಕಾರ

ಭಾರತೀಯ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯ ಸಮುದಾಯದಿಂದ ಬೆಂಬಲ ಹೆಚ್ಚುತ್ತಿರುವುದು ಕೇಂದ್ರ ಸರ್ಕಾರವನ್ನು ತೀವ್ರ ಮುಜುಗರಕ್ಕೀಡಾಗಿಸಿದೆ.

- Advertisement -
- Advertisement -

ಖ್ಯಾತ ಅಂತಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಭಾರತೀಯ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು ಎಂಬ ಮಾಹಿತಿಯಿರುವ ’ಟೂಲ್‌ಕಿಟ್‌’ ಒಂದನ್ನು ತಮ್ಮ ಟ್ವೀಟ್‌ ಒಂದರಲ್ಲಿ ಹಂಚಿಕೊಂಡಿದ್ದರು. ಕೇಂದ್ರ ಸರ್ಕಾರ ಇದೀಗ ಟೂಲ್‌ಕಿಟ್‌‌ ಬೆನ್ನು ಬಿದ್ದಿದ್ದು, ಟೂಲ್‌ಕಿಟ್ ತಯಾರಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದೆ. ಈ ಬಗ್ಗೆ ಮಾತನಾಡಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌‌, ಗ್ರೇಟಾ ಹಂಚಿಕೊಂಡಿದ್ದ ‘ಟೂಲ್‌ ಕಿಟ್‌’ ತನಿಖೆಯಿಂದ ಬಹಳಷ್ಟು ವಿಚಾರಗಳು ಹೊರಬರಲಿವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಶನಿವಾರ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಸಚಿವ ಜೈಶಂಕರ್‌, “ಹೊರದೇಶಗಳ ಕೆಲ ಸೆಲೆಬ್ರಿಟಿಗಳು ರೈತರ ಪ್ರತಿಭಟನೆಯ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಆದರೆ, ಅವರಿಗೆ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಬಗ್ಗೆ ಹೆಚ್ಚು ತಿಳಿದಿಲ್ಲ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

“ಟೂಲ್‌ ಕಿಟ್‌ನಿಂದ ಬಹಳಷ್ಟು ವಿಚಾರಗಳು ಈಗಾಗಲೇ ಬಹಿರಂಗಗೊಂಡಿವೆ. ಮುಂದಿನ ದಿನಗಳಲ್ಲಿ ಏನು ಹೊರಬರುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ. ಕೆಲ ಸೆಲೆಬ್ರಿಟಿಗಳು ತಮಗೆ ಹೆಚ್ಚು ಅರ್ಥವಾಗದ ವಿಷಯಗಳ ಬಗ್ಗೆ ಹೇಳಿಕೆಗಳನ್ನು ನೀಡಿದ್ದಾರೆ. ಇದಕ್ಕೆ ವಿದೇಶಾಂಗ ಸಚಿವಾಲಯವು ಪ್ರತಿಕ್ರಿಯಿಸಲೇಬೇಕಾದ ಅನಿವಾರ್ಯತೆ ಇತ್ತು” ಎಂದು ಹೇಳಿದ್ದಾರೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಬುಧವಾರ ಸಂಜೆ “ಟೂಲ್‌ಕಿಟ್” ಅನ್ನು ಟ್ವೀಟ್ ಮಾಡಿದ್ದರು, ಆದರೆ ಇದು ಜನವರಿ 26 ರಂದು ನಡೆದ ಗಣರಾಜ್ಯೋತ್ಸವದ ಪ್ರತಿಭಟನೆಯ ಮೇಲೆ ಕೇಂದ್ರೀಕೃತವಾಗಿತ್ತು. ಸ್ವಲ್ಪ ಸಮಯದ ನಂತರ ಆ ಪೋಸ್ಟ್ ಡಿಲೀಟ್ ಮಾಡಿ, ಗುರುವಾರ ಬೆಳಿಗ್ಗೆ, ಹೊಸ ಟೂಲ್‌ಕಿಟ್ ಅನ್ನು ಪೋಸ್ಟ್ ಮಾಡಿದ್ದರು. ಈ ಹೊಸ ಟೂಲ್‌ಕಿಟ್ ಫೆಬ್ರವರಿ 13 ಮತ್ತು 14 ರಂದು ಪ್ರಪಂಚಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು.

ಟೂಲ್‌ಕಿಟ್‌ ತಯಾರಿಸಿದವರ ಬಗ್ಗೆ ಎಫ್‌‌ಐಆರ್‌ ದಾಖಲಾದ ನಂತರವು ಗ್ರೇಟಾ ಥನ್‌ಬರ್ಗ್, “ನಾನು ಇನ್ನೂ ರೈತರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ಅದನ್ನು ಎಂದಿಗೂ ಬದಲಾಯಿಸುವುದಿಲ್ಲ” ಎಂದಿದ್ದರು.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

 

ಕಳೆದ ಕೆಲವು ದಿನಗಳಿಂದ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ ಹಲವಾರು ಅಂತಾರಾಷ್ಟ್ರೀಯ ವ್ಯಕ್ತಿಗಳಲ್ಲಿ ಈ ಯುವ ಪರಿಸರ ಕಾರ್ಯಕರ್ತೆ ಕೂಡ ಸೇರಿದ್ದಾರೆ. ಈ ಬೆಂಬಲದಿಂದ ಕೇಂದ್ರವು ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನಕ್ಕೆ ಜಾಗತಿಕ ಮನ್ನಣೆ ಪ್ರಾಪ್ತವಾಗಿದ್ದು, ಭಾರತ ಸರ್ಕಾರಕ್ಕೆ ಜಾಗತಿಕ ಮಟ್ಟದಲ್ಲಿ ಇರಿಸುಮುರಿಸು ಉಂಟಾಗಿದೆ.

ಟ್ವಿಟರ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪಾಪ್ ತಾರೆ ರಿಹಾನ್ನಾ ಅವರ ಪೋಸ್ಟ್‌ನೊಂದಿಗೆ ಮಂಗಳವಾರ ಸಂಜೆ ಇದು ಪ್ರಾರಂಭವಾಯಿತು. ಹಲವಾರು ಅಮೆರಿಕ ಜನಪ್ರತಿನಿಧಿಗಳು ಮತ್ತು ಇತರರು ಇದನ್ನು ಅನುಸರಿಸುತ್ತಿದ್ದಂತೆ, ಸರ್ಕಾರವು “ವಿದೇಶಿಗರು ಭಾರತದ ಆಂತರಿಕ ವಿಷಯದಲ್ಲಿ ತಲೆಹಾಕಬಾರದು” ಎಂದು ಎಚ್ಚರಿಕೆ ನೀಡಿ ಪ್ರಕಟಣೆ ಹೊರಡಿಸಿತ್ತು.

ಇದನ್ನೂ ಓದಿ:ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...