Homeಮುಖಪುಟಗ್ರೇಟಾ ಹಂಚಿಕೊಂಡಿದ್ದ ’ಟೂಲ್‌ಕಿಟ್’‌ ತನಿಖೆಯಿಂದ ಬಹಳ ವಿಚಾರ ಹೊರಬರಲಿದೆ: ಕೇಂದ್ರ ಸರ್ಕಾರ

ಗ್ರೇಟಾ ಹಂಚಿಕೊಂಡಿದ್ದ ’ಟೂಲ್‌ಕಿಟ್’‌ ತನಿಖೆಯಿಂದ ಬಹಳ ವಿಚಾರ ಹೊರಬರಲಿದೆ: ಕೇಂದ್ರ ಸರ್ಕಾರ

ಭಾರತೀಯ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯ ಸಮುದಾಯದಿಂದ ಬೆಂಬಲ ಹೆಚ್ಚುತ್ತಿರುವುದು ಕೇಂದ್ರ ಸರ್ಕಾರವನ್ನು ತೀವ್ರ ಮುಜುಗರಕ್ಕೀಡಾಗಿಸಿದೆ.

- Advertisement -
- Advertisement -

ಖ್ಯಾತ ಅಂತಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಭಾರತೀಯ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು ಎಂಬ ಮಾಹಿತಿಯಿರುವ ’ಟೂಲ್‌ಕಿಟ್‌’ ಒಂದನ್ನು ತಮ್ಮ ಟ್ವೀಟ್‌ ಒಂದರಲ್ಲಿ ಹಂಚಿಕೊಂಡಿದ್ದರು. ಕೇಂದ್ರ ಸರ್ಕಾರ ಇದೀಗ ಟೂಲ್‌ಕಿಟ್‌‌ ಬೆನ್ನು ಬಿದ್ದಿದ್ದು, ಟೂಲ್‌ಕಿಟ್ ತಯಾರಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದೆ. ಈ ಬಗ್ಗೆ ಮಾತನಾಡಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌‌, ಗ್ರೇಟಾ ಹಂಚಿಕೊಂಡಿದ್ದ ‘ಟೂಲ್‌ ಕಿಟ್‌’ ತನಿಖೆಯಿಂದ ಬಹಳಷ್ಟು ವಿಚಾರಗಳು ಹೊರಬರಲಿವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಶನಿವಾರ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಸಚಿವ ಜೈಶಂಕರ್‌, “ಹೊರದೇಶಗಳ ಕೆಲ ಸೆಲೆಬ್ರಿಟಿಗಳು ರೈತರ ಪ್ರತಿಭಟನೆಯ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಆದರೆ, ಅವರಿಗೆ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಬಗ್ಗೆ ಹೆಚ್ಚು ತಿಳಿದಿಲ್ಲ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

“ಟೂಲ್‌ ಕಿಟ್‌ನಿಂದ ಬಹಳಷ್ಟು ವಿಚಾರಗಳು ಈಗಾಗಲೇ ಬಹಿರಂಗಗೊಂಡಿವೆ. ಮುಂದಿನ ದಿನಗಳಲ್ಲಿ ಏನು ಹೊರಬರುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ. ಕೆಲ ಸೆಲೆಬ್ರಿಟಿಗಳು ತಮಗೆ ಹೆಚ್ಚು ಅರ್ಥವಾಗದ ವಿಷಯಗಳ ಬಗ್ಗೆ ಹೇಳಿಕೆಗಳನ್ನು ನೀಡಿದ್ದಾರೆ. ಇದಕ್ಕೆ ವಿದೇಶಾಂಗ ಸಚಿವಾಲಯವು ಪ್ರತಿಕ್ರಿಯಿಸಲೇಬೇಕಾದ ಅನಿವಾರ್ಯತೆ ಇತ್ತು” ಎಂದು ಹೇಳಿದ್ದಾರೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಬುಧವಾರ ಸಂಜೆ “ಟೂಲ್‌ಕಿಟ್” ಅನ್ನು ಟ್ವೀಟ್ ಮಾಡಿದ್ದರು, ಆದರೆ ಇದು ಜನವರಿ 26 ರಂದು ನಡೆದ ಗಣರಾಜ್ಯೋತ್ಸವದ ಪ್ರತಿಭಟನೆಯ ಮೇಲೆ ಕೇಂದ್ರೀಕೃತವಾಗಿತ್ತು. ಸ್ವಲ್ಪ ಸಮಯದ ನಂತರ ಆ ಪೋಸ್ಟ್ ಡಿಲೀಟ್ ಮಾಡಿ, ಗುರುವಾರ ಬೆಳಿಗ್ಗೆ, ಹೊಸ ಟೂಲ್‌ಕಿಟ್ ಅನ್ನು ಪೋಸ್ಟ್ ಮಾಡಿದ್ದರು. ಈ ಹೊಸ ಟೂಲ್‌ಕಿಟ್ ಫೆಬ್ರವರಿ 13 ಮತ್ತು 14 ರಂದು ಪ್ರಪಂಚಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು.

ಟೂಲ್‌ಕಿಟ್‌ ತಯಾರಿಸಿದವರ ಬಗ್ಗೆ ಎಫ್‌‌ಐಆರ್‌ ದಾಖಲಾದ ನಂತರವು ಗ್ರೇಟಾ ಥನ್‌ಬರ್ಗ್, “ನಾನು ಇನ್ನೂ ರೈತರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ಅದನ್ನು ಎಂದಿಗೂ ಬದಲಾಯಿಸುವುದಿಲ್ಲ” ಎಂದಿದ್ದರು.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

 

ಕಳೆದ ಕೆಲವು ದಿನಗಳಿಂದ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ ಹಲವಾರು ಅಂತಾರಾಷ್ಟ್ರೀಯ ವ್ಯಕ್ತಿಗಳಲ್ಲಿ ಈ ಯುವ ಪರಿಸರ ಕಾರ್ಯಕರ್ತೆ ಕೂಡ ಸೇರಿದ್ದಾರೆ. ಈ ಬೆಂಬಲದಿಂದ ಕೇಂದ್ರವು ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನಕ್ಕೆ ಜಾಗತಿಕ ಮನ್ನಣೆ ಪ್ರಾಪ್ತವಾಗಿದ್ದು, ಭಾರತ ಸರ್ಕಾರಕ್ಕೆ ಜಾಗತಿಕ ಮಟ್ಟದಲ್ಲಿ ಇರಿಸುಮುರಿಸು ಉಂಟಾಗಿದೆ.

ಟ್ವಿಟರ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪಾಪ್ ತಾರೆ ರಿಹಾನ್ನಾ ಅವರ ಪೋಸ್ಟ್‌ನೊಂದಿಗೆ ಮಂಗಳವಾರ ಸಂಜೆ ಇದು ಪ್ರಾರಂಭವಾಯಿತು. ಹಲವಾರು ಅಮೆರಿಕ ಜನಪ್ರತಿನಿಧಿಗಳು ಮತ್ತು ಇತರರು ಇದನ್ನು ಅನುಸರಿಸುತ್ತಿದ್ದಂತೆ, ಸರ್ಕಾರವು “ವಿದೇಶಿಗರು ಭಾರತದ ಆಂತರಿಕ ವಿಷಯದಲ್ಲಿ ತಲೆಹಾಕಬಾರದು” ಎಂದು ಎಚ್ಚರಿಕೆ ನೀಡಿ ಪ್ರಕಟಣೆ ಹೊರಡಿಸಿತ್ತು.

ಇದನ್ನೂ ಓದಿ:ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...