Homeಮುಖಪುಟಗ್ರೇಟಾ ಹಂಚಿಕೊಂಡಿದ್ದ ’ಟೂಲ್‌ಕಿಟ್’‌ ತನಿಖೆಯಿಂದ ಬಹಳ ವಿಚಾರ ಹೊರಬರಲಿದೆ: ಕೇಂದ್ರ ಸರ್ಕಾರ

ಗ್ರೇಟಾ ಹಂಚಿಕೊಂಡಿದ್ದ ’ಟೂಲ್‌ಕಿಟ್’‌ ತನಿಖೆಯಿಂದ ಬಹಳ ವಿಚಾರ ಹೊರಬರಲಿದೆ: ಕೇಂದ್ರ ಸರ್ಕಾರ

ಭಾರತೀಯ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯ ಸಮುದಾಯದಿಂದ ಬೆಂಬಲ ಹೆಚ್ಚುತ್ತಿರುವುದು ಕೇಂದ್ರ ಸರ್ಕಾರವನ್ನು ತೀವ್ರ ಮುಜುಗರಕ್ಕೀಡಾಗಿಸಿದೆ.

- Advertisement -
- Advertisement -

ಖ್ಯಾತ ಅಂತಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಭಾರತೀಯ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು ಎಂಬ ಮಾಹಿತಿಯಿರುವ ’ಟೂಲ್‌ಕಿಟ್‌’ ಒಂದನ್ನು ತಮ್ಮ ಟ್ವೀಟ್‌ ಒಂದರಲ್ಲಿ ಹಂಚಿಕೊಂಡಿದ್ದರು. ಕೇಂದ್ರ ಸರ್ಕಾರ ಇದೀಗ ಟೂಲ್‌ಕಿಟ್‌‌ ಬೆನ್ನು ಬಿದ್ದಿದ್ದು, ಟೂಲ್‌ಕಿಟ್ ತಯಾರಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದೆ. ಈ ಬಗ್ಗೆ ಮಾತನಾಡಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌‌, ಗ್ರೇಟಾ ಹಂಚಿಕೊಂಡಿದ್ದ ‘ಟೂಲ್‌ ಕಿಟ್‌’ ತನಿಖೆಯಿಂದ ಬಹಳಷ್ಟು ವಿಚಾರಗಳು ಹೊರಬರಲಿವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಶನಿವಾರ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಸಚಿವ ಜೈಶಂಕರ್‌, “ಹೊರದೇಶಗಳ ಕೆಲ ಸೆಲೆಬ್ರಿಟಿಗಳು ರೈತರ ಪ್ರತಿಭಟನೆಯ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಆದರೆ, ಅವರಿಗೆ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಬಗ್ಗೆ ಹೆಚ್ಚು ತಿಳಿದಿಲ್ಲ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

“ಟೂಲ್‌ ಕಿಟ್‌ನಿಂದ ಬಹಳಷ್ಟು ವಿಚಾರಗಳು ಈಗಾಗಲೇ ಬಹಿರಂಗಗೊಂಡಿವೆ. ಮುಂದಿನ ದಿನಗಳಲ್ಲಿ ಏನು ಹೊರಬರುತ್ತದೆ ಎಂಬುದನ್ನು ನಾವು ಕಾದು ನೋಡಬೇಕಾಗಿದೆ. ಕೆಲ ಸೆಲೆಬ್ರಿಟಿಗಳು ತಮಗೆ ಹೆಚ್ಚು ಅರ್ಥವಾಗದ ವಿಷಯಗಳ ಬಗ್ಗೆ ಹೇಳಿಕೆಗಳನ್ನು ನೀಡಿದ್ದಾರೆ. ಇದಕ್ಕೆ ವಿದೇಶಾಂಗ ಸಚಿವಾಲಯವು ಪ್ರತಿಕ್ರಿಯಿಸಲೇಬೇಕಾದ ಅನಿವಾರ್ಯತೆ ಇತ್ತು” ಎಂದು ಹೇಳಿದ್ದಾರೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಬುಧವಾರ ಸಂಜೆ “ಟೂಲ್‌ಕಿಟ್” ಅನ್ನು ಟ್ವೀಟ್ ಮಾಡಿದ್ದರು, ಆದರೆ ಇದು ಜನವರಿ 26 ರಂದು ನಡೆದ ಗಣರಾಜ್ಯೋತ್ಸವದ ಪ್ರತಿಭಟನೆಯ ಮೇಲೆ ಕೇಂದ್ರೀಕೃತವಾಗಿತ್ತು. ಸ್ವಲ್ಪ ಸಮಯದ ನಂತರ ಆ ಪೋಸ್ಟ್ ಡಿಲೀಟ್ ಮಾಡಿ, ಗುರುವಾರ ಬೆಳಿಗ್ಗೆ, ಹೊಸ ಟೂಲ್‌ಕಿಟ್ ಅನ್ನು ಪೋಸ್ಟ್ ಮಾಡಿದ್ದರು. ಈ ಹೊಸ ಟೂಲ್‌ಕಿಟ್ ಫೆಬ್ರವರಿ 13 ಮತ್ತು 14 ರಂದು ಪ್ರಪಂಚಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು.

ಟೂಲ್‌ಕಿಟ್‌ ತಯಾರಿಸಿದವರ ಬಗ್ಗೆ ಎಫ್‌‌ಐಆರ್‌ ದಾಖಲಾದ ನಂತರವು ಗ್ರೇಟಾ ಥನ್‌ಬರ್ಗ್, “ನಾನು ಇನ್ನೂ ರೈತರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ಅದನ್ನು ಎಂದಿಗೂ ಬದಲಾಯಿಸುವುದಿಲ್ಲ” ಎಂದಿದ್ದರು.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

 

ಕಳೆದ ಕೆಲವು ದಿನಗಳಿಂದ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ ಹಲವಾರು ಅಂತಾರಾಷ್ಟ್ರೀಯ ವ್ಯಕ್ತಿಗಳಲ್ಲಿ ಈ ಯುವ ಪರಿಸರ ಕಾರ್ಯಕರ್ತೆ ಕೂಡ ಸೇರಿದ್ದಾರೆ. ಈ ಬೆಂಬಲದಿಂದ ಕೇಂದ್ರವು ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನಕ್ಕೆ ಜಾಗತಿಕ ಮನ್ನಣೆ ಪ್ರಾಪ್ತವಾಗಿದ್ದು, ಭಾರತ ಸರ್ಕಾರಕ್ಕೆ ಜಾಗತಿಕ ಮಟ್ಟದಲ್ಲಿ ಇರಿಸುಮುರಿಸು ಉಂಟಾಗಿದೆ.

ಟ್ವಿಟರ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪಾಪ್ ತಾರೆ ರಿಹಾನ್ನಾ ಅವರ ಪೋಸ್ಟ್‌ನೊಂದಿಗೆ ಮಂಗಳವಾರ ಸಂಜೆ ಇದು ಪ್ರಾರಂಭವಾಯಿತು. ಹಲವಾರು ಅಮೆರಿಕ ಜನಪ್ರತಿನಿಧಿಗಳು ಮತ್ತು ಇತರರು ಇದನ್ನು ಅನುಸರಿಸುತ್ತಿದ್ದಂತೆ, ಸರ್ಕಾರವು “ವಿದೇಶಿಗರು ಭಾರತದ ಆಂತರಿಕ ವಿಷಯದಲ್ಲಿ ತಲೆಹಾಕಬಾರದು” ಎಂದು ಎಚ್ಚರಿಕೆ ನೀಡಿ ಪ್ರಕಟಣೆ ಹೊರಡಿಸಿತ್ತು.

ಇದನ್ನೂ ಓದಿ:ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...