Homeಕರ್ನಾಟಕಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಅಂತ್ಯ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಅಂತ್ಯ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಗುರುವಾರ (ಸೆ.12) ಆದೇಶ ಕಾಯ್ದಿರಿಸಿದೆ.

ಅರ್ಜಿ ವಿಲೇವಾರಿಯಾಗುವವರೆಗೆ ಮಧ್ಯಂತರ ಆದೇಶ ಚಾಲ್ತಿಯಲ್ಲಿರಲಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಹೇಳಿದೆ.

ಗುರುವಾರ ಅರ್ಜಿ ವಿಚಾರಣೆ ವೇಳೆ ಸಿಎಂ ಸಿದ್ದರಾಮಯ್ಯ ಪರವಾಗಿ ನ್ಯಾಯಾಲಯಕ್ಕೆ ಪ್ರತ್ಯುತ್ತರ ಮಂಡಿಸಿದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ, “ರಾಜ್ಯಪಾಲರು ಸಿಎಂಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವ ಶಿಫಾರಸ್ಸಿನಲ್ಲಿ ಉಲ್ಲೇಖಿಸಿರುವ ಅಂಶಗಳಲ್ಲಿ ಎದ್ದು ಕಾಣುವ ಅತಾರ್ಕಿಕ ಅಂಶಗಳನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶದಲ್ಲಿ ಪಟ್ಟಿ ಮಾಡಿಲ್ಲ. ಸಂಪುಟದ ಶಿಫಾರಸ್ಸು ಪಕ್ಷಪಾತಿ ಎಂಬುವುದನ್ನಷ್ಟೇ ಹೇಳಿದ್ದಾರೆ. ಈ ಮೂಲಕ ಸ್ವತಂತ್ರವಾಗಿ ವಿವೇಚನೆ ಬಳಸಿಲ್ಲ ಎಂಬುವುದು ಸ್ಪಷ್ಟವಾಗುತ್ತದೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಸೆಕ್ಷನ್‌ 17ಎ ಅಡಿ ತನಿಖೆಗೆ ಅನುಮತಿಸುವಾಗ ತನಿಖಾಧಿಕಾರಿ ಅಭಿಪ್ರಾಯ ರೂಪಿಸಿರಬೇಕು. ಇದು ಹಾಲಿ ಪ್ರಕರಣದಲ್ಲಿ ಪಾಲನೆಯಾಗಿಲ್ಲ. ಹಾಗಾಗಿ, ರಾಜ್ಯಪಾಲರ ಆದೇಶವನ್ನು ವಜಾ ಮಾಡಬೇಕು” ಎಂದು ಕೋರಿದರು.

ಮುಂದುವರೆದು, “ರಾಜ್ಯಪಾಲರು ತಮ್ಮ ಆದೇಶದಲ್ಲಿ ಉಲ್ಲೇಖಿಸಿರುವ ಮಧ್ಯಪ್ರದೇಶ ಪೊಲೀಸ್‌ ಸ್ಥಾಪನಾ ತೀರ್ಪಿನ ಪ್ರಕರಣವು ಸಂಪೂರ್ಣವಾಗಿ ಸಿದ್ದರಾಮಯ್ಯ ಪರವಾಗಿದೆ. ಆದರೆ, ಅದನ್ನು ಅವರು ತಪ್ಪಾಗಿ ವ್ಯಾಖ್ಯಾನಿಸಿದ್ದಾರೆ. ಇನ್ನು, ದೂರುದಾರ ಅಬ್ರಹಾಂ ಅವರು ಪ್ರಾಮಾಣಿಕರಲ್ಲ. ಅವರಿಗೆ 25 ಲಕ್ಷ ರೂಪಾಯಿ ದಂಡ ವಿಧಿಸಲಾಗಿದ್ದು, ಹಲವು ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿವೆ” ಎಂದರು.

ಈ ವೇಳೆ ಮಧ್ಯ ಪ್ರವೇಶಿಸಿದ ಪೀಠ, “ಯಾವ ಸಂಪುಟ ತನ್ನ ನಾಯಕನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸರಿ ಎಂದು ಹೇಳುತ್ತದೆ?” ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಸಿಂಘ್ವಿ, “ರಾಜಕೀಯದಲ್ಲಿ ಸಾಕಷ್ಟು ಬಾರಿ ಸಂಪುಟ ತಮ್ಮ ಮುಖ್ಯಮಂತ್ರಿ ವಿರುದ್ಧ ನಡೆದುಕೊಂಡಿದೆ” ಎಂದು ಸಮಜಾಯಿಷಿ ನೀಡಿದರು.

ಸಿಎಂ ಪರವಾಗಿಯೇ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌, “ಅಬ್ರಹಾಂ ಅವರ ಜೊತೆ ರಾಜ್ಯಪಾಲರು ಚರ್ಚಿಸಿದ್ದಾರೆ. ಆದರೆ, ಸ್ನೇಹಮಯಿ ಕೃಷ್ಣ ಅನುಮತಿ ಕೋರಿದರೂ ಅವರ ಜೊತೆಗಿನ ಚರ್ಚೆಯ ಕುರಿತ ಯಾವುದೇ ದಾಖಲೆ ಇಲ್ಲ. ಮತ್ತೊಬ್ಬ ದೂರುದಾರ ಪ್ರದೀಪ್‌ ಕುಮಾರ್‌ ವಿಚಾರದಲ್ಲೂ ಅದೇ ನಿಲುವನ್ನು ರಾಜ್ಯಪಾಲರು ಅನುಸರಿಸಿದ್ದಾರೆ” ಎಂದು ತಿಳಿಸಿದರು.

ಸ್ನೇಹಮಯಿ ಕೃಷ್ಣ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ್, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ, ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಪ್ರೊ. ರವಿವರ್ಮ ಕುಮಾರ್‌ ವಾದ ಮಂಡಿಸಿದರು.

ವಾದ ಆಲಿಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತು.

ಇದನ್ನೂ ಓದಿ : ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಿರಿ: ನಾಗರಿಕ ಸಂಘಟನೆಯಿಂದ ಮುಖ್ಯಮಂತ್ರಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...