Homeಕರ್ನಾಟಕಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಅಂತ್ಯ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಅಂತ್ಯ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಗುರುವಾರ (ಸೆ.12) ಆದೇಶ ಕಾಯ್ದಿರಿಸಿದೆ.

ಅರ್ಜಿ ವಿಲೇವಾರಿಯಾಗುವವರೆಗೆ ಮಧ್ಯಂತರ ಆದೇಶ ಚಾಲ್ತಿಯಲ್ಲಿರಲಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಹೇಳಿದೆ.

ಗುರುವಾರ ಅರ್ಜಿ ವಿಚಾರಣೆ ವೇಳೆ ಸಿಎಂ ಸಿದ್ದರಾಮಯ್ಯ ಪರವಾಗಿ ನ್ಯಾಯಾಲಯಕ್ಕೆ ಪ್ರತ್ಯುತ್ತರ ಮಂಡಿಸಿದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ, “ರಾಜ್ಯಪಾಲರು ಸಿಎಂಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವ ಶಿಫಾರಸ್ಸಿನಲ್ಲಿ ಉಲ್ಲೇಖಿಸಿರುವ ಅಂಶಗಳಲ್ಲಿ ಎದ್ದು ಕಾಣುವ ಅತಾರ್ಕಿಕ ಅಂಶಗಳನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶದಲ್ಲಿ ಪಟ್ಟಿ ಮಾಡಿಲ್ಲ. ಸಂಪುಟದ ಶಿಫಾರಸ್ಸು ಪಕ್ಷಪಾತಿ ಎಂಬುವುದನ್ನಷ್ಟೇ ಹೇಳಿದ್ದಾರೆ. ಈ ಮೂಲಕ ಸ್ವತಂತ್ರವಾಗಿ ವಿವೇಚನೆ ಬಳಸಿಲ್ಲ ಎಂಬುವುದು ಸ್ಪಷ್ಟವಾಗುತ್ತದೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಸೆಕ್ಷನ್‌ 17ಎ ಅಡಿ ತನಿಖೆಗೆ ಅನುಮತಿಸುವಾಗ ತನಿಖಾಧಿಕಾರಿ ಅಭಿಪ್ರಾಯ ರೂಪಿಸಿರಬೇಕು. ಇದು ಹಾಲಿ ಪ್ರಕರಣದಲ್ಲಿ ಪಾಲನೆಯಾಗಿಲ್ಲ. ಹಾಗಾಗಿ, ರಾಜ್ಯಪಾಲರ ಆದೇಶವನ್ನು ವಜಾ ಮಾಡಬೇಕು” ಎಂದು ಕೋರಿದರು.

ಮುಂದುವರೆದು, “ರಾಜ್ಯಪಾಲರು ತಮ್ಮ ಆದೇಶದಲ್ಲಿ ಉಲ್ಲೇಖಿಸಿರುವ ಮಧ್ಯಪ್ರದೇಶ ಪೊಲೀಸ್‌ ಸ್ಥಾಪನಾ ತೀರ್ಪಿನ ಪ್ರಕರಣವು ಸಂಪೂರ್ಣವಾಗಿ ಸಿದ್ದರಾಮಯ್ಯ ಪರವಾಗಿದೆ. ಆದರೆ, ಅದನ್ನು ಅವರು ತಪ್ಪಾಗಿ ವ್ಯಾಖ್ಯಾನಿಸಿದ್ದಾರೆ. ಇನ್ನು, ದೂರುದಾರ ಅಬ್ರಹಾಂ ಅವರು ಪ್ರಾಮಾಣಿಕರಲ್ಲ. ಅವರಿಗೆ 25 ಲಕ್ಷ ರೂಪಾಯಿ ದಂಡ ವಿಧಿಸಲಾಗಿದ್ದು, ಹಲವು ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿವೆ” ಎಂದರು.

ಈ ವೇಳೆ ಮಧ್ಯ ಪ್ರವೇಶಿಸಿದ ಪೀಠ, “ಯಾವ ಸಂಪುಟ ತನ್ನ ನಾಯಕನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸರಿ ಎಂದು ಹೇಳುತ್ತದೆ?” ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಸಿಂಘ್ವಿ, “ರಾಜಕೀಯದಲ್ಲಿ ಸಾಕಷ್ಟು ಬಾರಿ ಸಂಪುಟ ತಮ್ಮ ಮುಖ್ಯಮಂತ್ರಿ ವಿರುದ್ಧ ನಡೆದುಕೊಂಡಿದೆ” ಎಂದು ಸಮಜಾಯಿಷಿ ನೀಡಿದರು.

ಸಿಎಂ ಪರವಾಗಿಯೇ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌, “ಅಬ್ರಹಾಂ ಅವರ ಜೊತೆ ರಾಜ್ಯಪಾಲರು ಚರ್ಚಿಸಿದ್ದಾರೆ. ಆದರೆ, ಸ್ನೇಹಮಯಿ ಕೃಷ್ಣ ಅನುಮತಿ ಕೋರಿದರೂ ಅವರ ಜೊತೆಗಿನ ಚರ್ಚೆಯ ಕುರಿತ ಯಾವುದೇ ದಾಖಲೆ ಇಲ್ಲ. ಮತ್ತೊಬ್ಬ ದೂರುದಾರ ಪ್ರದೀಪ್‌ ಕುಮಾರ್‌ ವಿಚಾರದಲ್ಲೂ ಅದೇ ನಿಲುವನ್ನು ರಾಜ್ಯಪಾಲರು ಅನುಸರಿಸಿದ್ದಾರೆ” ಎಂದು ತಿಳಿಸಿದರು.

ಸ್ನೇಹಮಯಿ ಕೃಷ್ಣ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ್, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ, ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಪ್ರೊ. ರವಿವರ್ಮ ಕುಮಾರ್‌ ವಾದ ಮಂಡಿಸಿದರು.

ವಾದ ಆಲಿಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತು.

ಇದನ್ನೂ ಓದಿ : ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಿರಿ: ನಾಗರಿಕ ಸಂಘಟನೆಯಿಂದ ಮುಖ್ಯಮಂತ್ರಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...