Homeಕರ್ನಾಟಕಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ

- Advertisement -
- Advertisement -

ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ (ಸೆ.2) ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ಆಗಸ್ಟ್ 29ರಂದು ಸಿದ್ದರಾಮಯ್ಯ ಅವರ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಇಂದಿಗೆ (ಆ.31) ವಿಚಾರಣೆ ಮುಂದೂಡಿತ್ತು. ಇಂದು ಮತ್ತೆ ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಸುದೀರ್ಘ ಸಮಯ ವಾದ ಆಲಿಸಿತು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಮುಡಾ ಪ್ರಕರಣದಲ್ಲಿ 6ನೇ ಪ್ರತಿವಾದಿ ಪಿಎಸ್‌ ಪ್ರದೀಪ್‌ ಕುಮಾರ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಮಣೀಂದರ್‌ ಸಿಂಗ್‌ ವಾದ ಮಂಡಿಸಿದರು. ಟಿ ಜೆ ಅಬ್ರಾಹಂ ಪರವಾಗಿ ವಕೀಲ ರಂಗನಾಥ್ ರೆಡ್ಡಿ ವಾದಿಸಿದರು.

ಪ್ರದೀಪ್‌ ಕುಮಾರ್‌ ಪರವಾಗಿ ವಕೀಲ ಪ್ರಭುಲಿಂಗ ನಾವದಗಿ ವಾದ ಆರಂಭಿಸುತ್ತಿದ್ದಂತೆ “ಈ ಪ್ರಕರಣದಲ್ಲಿ ಯಾರೂ ಕೂಡಾ ಸಿದ್ದರಾಮಯ್ಯ ಅವರ ಪಾತ್ರವೇನೆಂದು ಹೇಳಿಲ್ಲ. ನೀವಾದರೂ ಈ ಬಗ್ಗೆ ಮಾತನಾಡುತ್ತೀರಾ?” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಪ್ರಶ್ನಿಸಿದ್ದಾರೆ.

ಇನ್ನು ಈ ಪ್ರಕರಣವನ್ನು ಸ್ವತಂತ್ರ್ಯ ತನಿಖಾ ಸಂಸ್ಥೆಗಳ ಅಧಿಕಾರಿಗಳ ತಂಡವು ತನಿಖೆ ನಡೆಸಬೇಕು. ಅಕೌಂಟೆಂಟ್‌ಗಳು ಕೂಡಾ ಈ ತಂಡದಲ್ಲಿರಬೇಕು ಎಂದು ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಮಣೀಂದರ್ ಸಿಂಗ್ ಮನವಿ ಮಾಡಿದ್ದಾರೆ.

ಮೂರು ದೂರಿನಲ್ಲಿಯೂ ಒಂದೇ ಅಂಶಗಳಿದ್ದವು. ಆದ್ದರಿಂದ ಒಂದೇ ಶೋಕಾಸ್ ನೋಟಿಸ್ ನೀಡಲಾಗಿದೆ. ಎಲ್ಲಾ ದೂರುಗಳಿಗೂ ಶೋಕಾಸ್ ನೋಟಿಸ್ ನೀಡಬೇಕೇ ಬೇಡವೇ ಎಂಬುವುದು ರಾಜ್ಯಪಾಲರಿಗೆ ಬಿಟ್ಟ ವಿಚಾರ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸ್ಪಷ್ಟಪಡಿಸಿದ್ದಾರೆ.

“ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ಬಂದಾಗ ರಾಜ್ಯಪಾಲರು ಏಕಾಏಕಿ ನಿರ್ಧಾರ ಕೈಗೊಂಡಿಲ್ಲ. ಎಲ್ಲ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಹೆಚ್ಚುವರಿ ದಾಖಲೆ ತರಿಸಿಕೊಂಡು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ” ಎಂದು ಮೆಹ್ತಾ ಹೇಳಿದರು.

“ಸಚಿವರುಗಳನ್ನು ಆಯ್ಕೆ ಮಾಡುವವರು ಸಿಎಂ ಆಗಿದ್ದಾರೆ. ಅವರ ಪರವಾಗಿಯೇ ಸಚಿವರುಗಳು ನಿರ್ಧಾರ ಕೈಗೊಳ್ಳುತ್ತಾರೆ. ಆದ್ದರಿಂದ ಕ್ಯಾಬಿನೆಟ್ ನಿರ್ಧಾರವನ್ನು ಪಾಲಿಸಿಲ್ಲ. ಸ್ವಂತ ವಿವೇಚನೆ ಬಳಸಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ” ಎಂದು ತಿಳಿಸಿದರು.

ವಾದ ಆಲಿಸಿದ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಸೆ.2ಕ್ಕೆ ಮುಂದೂಡಿದೆ ಮತ್ತು ಮಧ್ಯಂತರ ಆದೇಶವನ್ನು ಮುಂದುವರೆಸಿ, ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಆದೇಶಿಸಿದೆ.

ಇದನ್ನೂ ಓದಿ : ಮುಡಾ ಪ್ರಕರಣ | ಕಾಂಗ್ರೆಸ್‌ ನಾಯಕರಿಂದ ‘ರಾಜಭವನ ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...