Homeಕರ್ನಾಟಕಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ

- Advertisement -
- Advertisement -

ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ (ಸೆ.2) ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ಆಗಸ್ಟ್ 29ರಂದು ಸಿದ್ದರಾಮಯ್ಯ ಅವರ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಇಂದಿಗೆ (ಆ.31) ವಿಚಾರಣೆ ಮುಂದೂಡಿತ್ತು. ಇಂದು ಮತ್ತೆ ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಸುದೀರ್ಘ ಸಮಯ ವಾದ ಆಲಿಸಿತು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಮುಡಾ ಪ್ರಕರಣದಲ್ಲಿ 6ನೇ ಪ್ರತಿವಾದಿ ಪಿಎಸ್‌ ಪ್ರದೀಪ್‌ ಕುಮಾರ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಮಣೀಂದರ್‌ ಸಿಂಗ್‌ ವಾದ ಮಂಡಿಸಿದರು. ಟಿ ಜೆ ಅಬ್ರಾಹಂ ಪರವಾಗಿ ವಕೀಲ ರಂಗನಾಥ್ ರೆಡ್ಡಿ ವಾದಿಸಿದರು.

ಪ್ರದೀಪ್‌ ಕುಮಾರ್‌ ಪರವಾಗಿ ವಕೀಲ ಪ್ರಭುಲಿಂಗ ನಾವದಗಿ ವಾದ ಆರಂಭಿಸುತ್ತಿದ್ದಂತೆ “ಈ ಪ್ರಕರಣದಲ್ಲಿ ಯಾರೂ ಕೂಡಾ ಸಿದ್ದರಾಮಯ್ಯ ಅವರ ಪಾತ್ರವೇನೆಂದು ಹೇಳಿಲ್ಲ. ನೀವಾದರೂ ಈ ಬಗ್ಗೆ ಮಾತನಾಡುತ್ತೀರಾ?” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಪ್ರಶ್ನಿಸಿದ್ದಾರೆ.

ಇನ್ನು ಈ ಪ್ರಕರಣವನ್ನು ಸ್ವತಂತ್ರ್ಯ ತನಿಖಾ ಸಂಸ್ಥೆಗಳ ಅಧಿಕಾರಿಗಳ ತಂಡವು ತನಿಖೆ ನಡೆಸಬೇಕು. ಅಕೌಂಟೆಂಟ್‌ಗಳು ಕೂಡಾ ಈ ತಂಡದಲ್ಲಿರಬೇಕು ಎಂದು ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಮಣೀಂದರ್ ಸಿಂಗ್ ಮನವಿ ಮಾಡಿದ್ದಾರೆ.

ಮೂರು ದೂರಿನಲ್ಲಿಯೂ ಒಂದೇ ಅಂಶಗಳಿದ್ದವು. ಆದ್ದರಿಂದ ಒಂದೇ ಶೋಕಾಸ್ ನೋಟಿಸ್ ನೀಡಲಾಗಿದೆ. ಎಲ್ಲಾ ದೂರುಗಳಿಗೂ ಶೋಕಾಸ್ ನೋಟಿಸ್ ನೀಡಬೇಕೇ ಬೇಡವೇ ಎಂಬುವುದು ರಾಜ್ಯಪಾಲರಿಗೆ ಬಿಟ್ಟ ವಿಚಾರ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸ್ಪಷ್ಟಪಡಿಸಿದ್ದಾರೆ.

“ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ಬಂದಾಗ ರಾಜ್ಯಪಾಲರು ಏಕಾಏಕಿ ನಿರ್ಧಾರ ಕೈಗೊಂಡಿಲ್ಲ. ಎಲ್ಲ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಹೆಚ್ಚುವರಿ ದಾಖಲೆ ತರಿಸಿಕೊಂಡು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ” ಎಂದು ಮೆಹ್ತಾ ಹೇಳಿದರು.

“ಸಚಿವರುಗಳನ್ನು ಆಯ್ಕೆ ಮಾಡುವವರು ಸಿಎಂ ಆಗಿದ್ದಾರೆ. ಅವರ ಪರವಾಗಿಯೇ ಸಚಿವರುಗಳು ನಿರ್ಧಾರ ಕೈಗೊಳ್ಳುತ್ತಾರೆ. ಆದ್ದರಿಂದ ಕ್ಯಾಬಿನೆಟ್ ನಿರ್ಧಾರವನ್ನು ಪಾಲಿಸಿಲ್ಲ. ಸ್ವಂತ ವಿವೇಚನೆ ಬಳಸಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ” ಎಂದು ತಿಳಿಸಿದರು.

ವಾದ ಆಲಿಸಿದ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಸೆ.2ಕ್ಕೆ ಮುಂದೂಡಿದೆ ಮತ್ತು ಮಧ್ಯಂತರ ಆದೇಶವನ್ನು ಮುಂದುವರೆಸಿ, ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಆದೇಶಿಸಿದೆ.

ಇದನ್ನೂ ಓದಿ : ಮುಡಾ ಪ್ರಕರಣ | ಕಾಂಗ್ರೆಸ್‌ ನಾಯಕರಿಂದ ‘ರಾಜಭವನ ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...