Homeಕರ್ನಾಟಕಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ

- Advertisement -
- Advertisement -

ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ (ಸೆ.2) ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ಆಗಸ್ಟ್ 29ರಂದು ಸಿದ್ದರಾಮಯ್ಯ ಅವರ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಇಂದಿಗೆ (ಆ.31) ವಿಚಾರಣೆ ಮುಂದೂಡಿತ್ತು. ಇಂದು ಮತ್ತೆ ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಸುದೀರ್ಘ ಸಮಯ ವಾದ ಆಲಿಸಿತು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಮುಡಾ ಪ್ರಕರಣದಲ್ಲಿ 6ನೇ ಪ್ರತಿವಾದಿ ಪಿಎಸ್‌ ಪ್ರದೀಪ್‌ ಕುಮಾರ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಮಣೀಂದರ್‌ ಸಿಂಗ್‌ ವಾದ ಮಂಡಿಸಿದರು. ಟಿ ಜೆ ಅಬ್ರಾಹಂ ಪರವಾಗಿ ವಕೀಲ ರಂಗನಾಥ್ ರೆಡ್ಡಿ ವಾದಿಸಿದರು.

ಪ್ರದೀಪ್‌ ಕುಮಾರ್‌ ಪರವಾಗಿ ವಕೀಲ ಪ್ರಭುಲಿಂಗ ನಾವದಗಿ ವಾದ ಆರಂಭಿಸುತ್ತಿದ್ದಂತೆ “ಈ ಪ್ರಕರಣದಲ್ಲಿ ಯಾರೂ ಕೂಡಾ ಸಿದ್ದರಾಮಯ್ಯ ಅವರ ಪಾತ್ರವೇನೆಂದು ಹೇಳಿಲ್ಲ. ನೀವಾದರೂ ಈ ಬಗ್ಗೆ ಮಾತನಾಡುತ್ತೀರಾ?” ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಪ್ರಶ್ನಿಸಿದ್ದಾರೆ.

ಇನ್ನು ಈ ಪ್ರಕರಣವನ್ನು ಸ್ವತಂತ್ರ್ಯ ತನಿಖಾ ಸಂಸ್ಥೆಗಳ ಅಧಿಕಾರಿಗಳ ತಂಡವು ತನಿಖೆ ನಡೆಸಬೇಕು. ಅಕೌಂಟೆಂಟ್‌ಗಳು ಕೂಡಾ ಈ ತಂಡದಲ್ಲಿರಬೇಕು ಎಂದು ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಮಣೀಂದರ್ ಸಿಂಗ್ ಮನವಿ ಮಾಡಿದ್ದಾರೆ.

ಮೂರು ದೂರಿನಲ್ಲಿಯೂ ಒಂದೇ ಅಂಶಗಳಿದ್ದವು. ಆದ್ದರಿಂದ ಒಂದೇ ಶೋಕಾಸ್ ನೋಟಿಸ್ ನೀಡಲಾಗಿದೆ. ಎಲ್ಲಾ ದೂರುಗಳಿಗೂ ಶೋಕಾಸ್ ನೋಟಿಸ್ ನೀಡಬೇಕೇ ಬೇಡವೇ ಎಂಬುವುದು ರಾಜ್ಯಪಾಲರಿಗೆ ಬಿಟ್ಟ ವಿಚಾರ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸ್ಪಷ್ಟಪಡಿಸಿದ್ದಾರೆ.

“ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ಬಂದಾಗ ರಾಜ್ಯಪಾಲರು ಏಕಾಏಕಿ ನಿರ್ಧಾರ ಕೈಗೊಂಡಿಲ್ಲ. ಎಲ್ಲ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಹೆಚ್ಚುವರಿ ದಾಖಲೆ ತರಿಸಿಕೊಂಡು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ” ಎಂದು ಮೆಹ್ತಾ ಹೇಳಿದರು.

“ಸಚಿವರುಗಳನ್ನು ಆಯ್ಕೆ ಮಾಡುವವರು ಸಿಎಂ ಆಗಿದ್ದಾರೆ. ಅವರ ಪರವಾಗಿಯೇ ಸಚಿವರುಗಳು ನಿರ್ಧಾರ ಕೈಗೊಳ್ಳುತ್ತಾರೆ. ಆದ್ದರಿಂದ ಕ್ಯಾಬಿನೆಟ್ ನಿರ್ಧಾರವನ್ನು ಪಾಲಿಸಿಲ್ಲ. ಸ್ವಂತ ವಿವೇಚನೆ ಬಳಸಿ ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ” ಎಂದು ತಿಳಿಸಿದರು.

ವಾದ ಆಲಿಸಿದ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಸೆ.2ಕ್ಕೆ ಮುಂದೂಡಿದೆ ಮತ್ತು ಮಧ್ಯಂತರ ಆದೇಶವನ್ನು ಮುಂದುವರೆಸಿ, ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಆದೇಶಿಸಿದೆ.

ಇದನ್ನೂ ಓದಿ : ಮುಡಾ ಪ್ರಕರಣ | ಕಾಂಗ್ರೆಸ್‌ ನಾಯಕರಿಂದ ‘ರಾಜಭವನ ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...