Homeಕರ್ನಾಟಕಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ‘ಬಿ ರಿಪೋರ್ಟ್’ / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ (ಮಾರ್ಚ್ 26) ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠವು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ ಪಾರ್ವತಿ, ಅವರ ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ, ಭೂಮಾಲೀಕ ದೇವರಾಜು, ಇಡಿ ಮತ್ತು ಲೋಕಾಯುಕ್ತ ಪೊಲೀಸರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ ಎಂದು ಕಾನೂನು ಸುದ್ದಿ ಸಂಸ್ಥೆ livelaw.in ವರದಿ ಹೇಳಿದೆ.

ಜನವರಿ 28ರಂದು ವಿಚಾರಣಾ ನ್ಯಾಯಾಲಯ ಆಪಾದಿತ ಹಗರಣದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಬಿ ರಿಪೋರ್ಟ್ ಸ್ವೀಕರಿಸಿತ್ತು. ಇದರ ವಿರುದ್ದ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯಲ್ಲಿ ಬಿ ರಿಪೋರ್ಟ್ ತಿರಸ್ಕರಿಸಬೇಕೆಂದು ಕೋರಿದ್ದಾರೆ. ಪ್ರಕರಣದ ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಕರಣದ ಹೊಸ ತನಿಖೆಗೆ ನಿರ್ದೇಶನ ನೀಡಬೇಕು. ಸಿಆರ್‌ಪಿಸಿ ಸೆಕ್ಷನ್ 173 (ಈಗ ಬಿಎನ್‌ಎಸ್‌ಎಸ್‌ ಸೆಕ್ಷನ್ 193) ಅಡಿಯಲ್ಲಿ ಹೊಸ ವರದಿ ಸಲ್ಲಿಸಲು ಸದರಿ ತನಿಖಾ ಸಂಸ್ಥೆಗೆ ನಿರ್ದೇಶನ ನೀಡಬೇಕು. ತನಿಖೆಯನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಮೇಲ್ವಿಚಾರಣೆ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಅಥವಾ ಪ್ರಾಸಿಕ್ಯೂಷನ್‌ಗೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 218ರ ಅಡಿಯಲ್ಲಿ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಎತ್ತಿಹಿಡಿದು, ‘ಸಿದ್ದರಾಮಯ್ಯ ಮತ್ತು ಕರ್ನಾಟಕ ರಾಜ್ಯ ಹಾಗೂ ಇತರರು’ ಪ್ರಕರಣದಲ್ಲಿ (ಡಬ್ಲ್ಯೂಪಿ ಸಂಖ್ಯೆ 22356/2024) ಸಮನ್ವಯ ಪೀಠವು ಸೆಪ್ಟೆಂಬರ್ 2024ರ ತನ್ನ ಆದೇಶದಲ್ಲಿ ನೀಡಿದ ಅವಲೋಕನಗಳ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ಈ ಪರಿಹಾರಗಳನ್ನು ಕೋರಿದ್ದಾರೆ ಎಂದು livelaw.in ವರದಿ ಹೇಳಿದೆ.

ಸ್ನೇಹಮಯಿ ಕೃಷ್ಣ ತನ್ನ ಅರ್ಜಿಯಲ್ಲಿ ದಿನಾಂಕ 30.11.2024ರ ಜಾರಿ ನಿರ್ದೇಶನಾಲಯದ (ಇಡಿ) ಪತ್ರ ವ್ಯವಹಾರ ಮತ್ತು ಜನವರಿ 2026ರ ಇಡಿ ಪತ್ರಿಕಾ ಪ್ರಕಟಣೆಯನ್ನು ಸಹ ಉಲ್ಲೇಖಿಸಿದ್ದಾರೆ.

ಪ್ರಕರಣ ಒಂದೇ ಆದರೂ, ಇತರ ಮುಡಾ ಅಧಿಕಾರಿಗಳ ವಿರುದ್ಧ ಹೆಚ್ಚಿನ ತನಿಖೆಗೆ ಆದೇಶ ನೀಡಿ, ಸಿಎಂ ಮತ್ತು ಅವರ ಕುಟುಂಬದ ಸದಸ್ಯರ ಪರ ‘ಬಿ’ ರಿಪೊರ್ಟ್ ಅನ್ನು ವಿಚಾರಣಾ ನ್ಯಾಯಾಲಯ ಅಂಗೀಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಸಂಶಯ ವ್ಯಕ್ತಪಡಿಸಿದ್ದಾರೆ.

ಸಿಎಂ, ಅವರ ಕುಟುಂಬದ ಸದಸ್ಯರು ಮತ್ತು ಭ್ರಷ್ಟ ಅಧಿಕಾರಿಗಳು ಸೇರಿ ಈ ಮುಡಾ ಭೂ ಹಗರಣವನ್ನು ಒಂದು ‘ಏಕರೂಪದ, ಸಂಯೋಜಿತ ಸಂಚಿನ ಯೋಜನೆ’ಯಡಿ ನಡೆಸಿದ್ದಾರೆ ಎಂಬ ವಾಸ್ತವವನ್ನು ವಿಚಾರಣಾ ನ್ಯಾಯಾಲಯವು ಪರಿಗಣಿಸುವಲ್ಲಿ ವಿಫಲವಾಗಿದೆ ಎಂದು ಕೃಷ್ಣ ಆರೋಪಿಸಿದ್ದಾರೆ.

ಸಾರ್ವಜನಿಕ ಹುದ್ದೆಯಲ್ಲಿರುವ ಒಬ್ಬ ಹಾಲಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ದುರುಪಯೋಗದ ಆರೋಪಗಳಿರುವ ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಅಂಗೀಕರಿಸುವುದು ತನಿಖಾ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ನಿಷ್ಪಕ್ಷಪಾತದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸುತ್ತದೆ ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಇಡಿ ಸಲ್ಲಿಸಿದ ಪತ್ರ ವ್ಯವಹಾರ ಮತ್ತು ದಾಖಲೆಗಳನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಅಲ್ಲದೆ, ಪ್ರಕರಣದ ಆರಂಭಿಕ ಹಂತದಲ್ಲಿಯೇ ‘ಸಂದೇಹಾತೀತ ಸಾಕ್ಷ್ಯಾಧಾರದ ಮಾನದಂಡ’ವನ್ನು (standard of proof beyond reasonable doubt) ಅಳವಡಿಸಿಕೊಂಡು ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಸ್ನೇಹಮಯಿ ಕೃಷ್ಣ ದೂರಿದ್ದಾರೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...