Homeಕರ್ನಾಟಕಮುಡಾ ಪ್ರಕರಣ| ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶ

ಮುಡಾ ಪ್ರಕರಣ| ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ತನಿಖೆ ಮುಂದುವರಿಸದಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಸಿಬಿಐ ತನಿಖೆಗೆ ಕೋರಿರುವ ಅರ್ಜಿಯನ್ನು ತಾನು ನಿರ್ಧರಿಸುವವರೆಗೆ ಲೋಕಾಯುಕ್ತ ತನಿಖೆ ನಡೆಸಬಾರದು ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಅರ್ಜಿ ವಿಚಾರಣೆ ನಡೆಸಿ, ಸಿಬಿಐ ತನಿಖೆಗೆ ಕೋರಿ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜನವರಿ 15ಕ್ಕೆ ಮುಂದೂಡಿದರು.

ವಿಚಾರಣೆಗೆ ಹಾಜರಾಗಿದ್ದ ಸಿದ್ದರಾಮಯ್ಯ ಅವರ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಪರ ವಾದ ಮಂಡಿಸಿದ ವಕೀಲರು, “ಎರಡು ದಿನಗಳ ಹಿಂದೆಯಷ್ಟೇ ನೋಟಿಸ್​ ಜಾರಿಯಾಗಿದೆ; ಅದಕ್ಕೆ ಆಕ್ಷೇಪಣೆ ಸಿದ್ದಪಡಿಸಬೇಕಾಗಿದೆ. ಆದ್ದರಿಂದ, ಅರ್ಜಿಯ ವಿಚಾರಣೆ ಮುಂದೂಡಬೇಕು” ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಪರ ಹಾಜರಿದ್ದ ಹಿರಿಯ ವಕೀಲ ರವಿವರ್ಮ ಕುಮಾರ್​, “ಆಕ್ಷೇಪಣೆ ಸಲ್ಲಿಸಲು ನಮಗೆ ಕಾಲಾವಕಾಶ ನೀಡಬೇಕು” ಎಂದರು. “ಜಾರಿ ನಿರ್ದೇಶನಾಲಯವನ್ನು(ಇ.ಡಿ) ಪ್ರತಿವಾದಿಯನ್ನಾಗಿಸಬೇಕು ಎಂದು ಎಂದು ಪೀಠ ಸೂಚನೆ ನೀಡಿತು.

“ನಮ್ಮ ಕಕ್ಷಿದಾರರಿಗೆ ಈವರೆಗೂ ನೋಟಿಸ್​ ಜಾರಿ ಮಾಡಿಲ್ಲ. ಆದರೂ, ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಬಾರದೆಂದು ಆದೇಶಿಸಲಾಗಿದೆ. ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಎಂದು ಅರ್ಜಿದಾರರು ಕೇಳಿಯೇ ಇಲ್ಲ. ಆದರೂ ಈ ಆದೇಶ ನೀಡಲಾಗಿದೆ. ಲೋಕಾಯುಕ್ತ ತನಿಖೆಯಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ನಮ್ಮ ವಾದ ಆಲಿಸದೆಯೇ ಸ್ವಯಂಪ್ರೇರಿತವಾಗಿ ಈ ಆದೇಶ ನೀಡುವುದು ಎಷ್ಟು ಸರಿ” ಎಂದು ರವಿವರ್ಮ ಕುಮಾರ್​ ನ್ಯಾಯಾಲಯದ ಗಮನಕ್ಕೆ ತಂದರು.

“ಅರ್ಜಿ ಸಲ್ಲಿಕೆಯಾಗಿ 35 ದಿನಗಳಾಗಿವೆ. ಆದರೂ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿರಲಿಲ್ಲ. ಹೀಗಾಗಿ ಹ್ಯಾಂಡ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ಪ್ರತಿವಾದಿಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಯಾವುದೇ ಮಧ್ಯಂತರ ತಡೆ ನೀಡಿಲ್ಲ. ಸೆಷನ್ಸ್ ಕೋರ್ಟ್​ಗೆ ಡಿ.24ಕ್ಕೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಬೇಕಿದೆ. ಅಂತಿಮ ವರದಿ ಸಲ್ಲಿಸಿದರೆ ಅರ್ಜಿ ವಿಚಾರಣೆಗೆ ತೊಂದರೆಯಾಗುತ್ತದೆ. ಹೀಗಾಗಿ, ಅಂತಿಮ ವರದಿ ಸಲ್ಲಿಸಲು ನೀಡಿರುವ ಗಡುವು ವಿಸ್ತರಿಸಲಾಗುತ್ತಿದೆ” ಎಂದು ನ್ಯಾಯಪೀಠ ತಿಳಿಸಿತು.

“ಈ ಹಿಂದೆ ಜನವರಿ 28ರವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಸಲ್ಲಿಕೆಗೆ ಕಾಲಾವಕಾಶ ನೀಡುತ್ತಿದ್ದೇನೆ” ಎಂದು ತಿಳಿಸಿದ ನ್ಯಾಯಾಧಿಶರು, ವಿಚಾರಣೆಯನ್ನು ಮುಂದೂಡಿದರು.

ಇದನ್ನೂ ಓದಿ; ಸದನದಲ್ಲೆ ಅಶ್ಲೀಲವಾಗಿ ನಿಂದಿಸಿದ ಸಿಟಿ ರವಿಗೆ ಮಂತ್ರಿ ಲಕ್ಷ್ಮಿ ಹೆಬ್ಬಾಲ್ಕರ್ ಅವರ ಬೆಂಬಲಿಗರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...