Homeಕರ್ನಾಟಕಮುಡಾ ಪ್ರಕರಣ | ಸಿಎಂ ವಿರುದ್ಧದ ಖಾಸಗಿ ದೂರು : ವಿಚಾರಣೆ ಅಂಗೀಕಾರದ ಕುರಿತು ಆದೇಶ...

ಮುಡಾ ಪ್ರಕರಣ | ಸಿಎಂ ವಿರುದ್ಧದ ಖಾಸಗಿ ದೂರು : ವಿಚಾರಣೆ ಅಂಗೀಕಾರದ ಕುರಿತು ಆದೇಶ ಕಾಯ್ದಿರಿಸಿದ ಕೋರ್ಟ್

- Advertisement -
- Advertisement -

ಆಪಾದಿತ ಮುಡಾ ನಿವೇಶನ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಐವರ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವುದರ ಬಗೆಗಿನ ಆದೇಶವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಯ್ದಿರಿಸಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ನಡೆಸಿದ್ದಾರೆ.

ಅರ್ಜಿದಾರ ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್‌ ಅವರು “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ 3.16 ಗುಂಟೆ ಜಮೀನು ಮಾರಾಟ ಮಾಡುವ ಅಧಿಕಾರವೇ ಜೆ ದೇವರಾಜುಗೆ ಇಲ್ಲ” ಎಂದಿದ್ದಾರೆ.

“ದೇವರಾಜುವಿನಿಂದ ಮಲ್ಲಿಕಾರ್ಜುನ ಸ್ವಾಮಿಗೆ 2004ರಲ್ಲಿ ಕ್ರಯಪತ್ರವಾಗಿಲ್ಲ. ಆದರೆ, ಮಲ್ಲಿಕಾರ್ಜುನ ಸ್ವಾಮಿ ಅವರು ಪಾರ್ವತಿ ಅವರಿಗೆ ದಾನ ಮಾಡುತ್ತಾರೆ. ಬಡಾವಣೆಗಾಗಿ ಮಾರ್ಪಾಡು ಮಾಡಿರುವ ಭೂಮಿಯು ಕೃಷಿ ಭೂಮಿ ಹೇಗೆ ಆಗುತ್ತದೆ? ಇದೆಲ್ಲಾ ಆದ ಬಳಿಕ ಸಿಎಂ ಪತ್ನಿ ಪಾರ್ವತಿ ಅವರು ಬದಲಿ ನಿವೇಶನಕ್ಕೆ ಮನವಿ ಸಲ್ಲಿಸಿದ್ದರು. ಇಲ್ಲಿ ದೇವರಾಜು, ಮಲ್ಲಿಕಾರ್ಜುನ ಸ್ವಾಮಿ, ಪಾವರ್ತಿ ಯಾರಿಗೂ ಹಕ್ಕು (ಟೈಟಲ್‌) ಇರುವುದಿಲ್ಲ. ಹಕ್ಕು ಇಲ್ಲದಿರುವ ಭೂಮಿಗೆ ಪರಿಹಾರ ಕೋರಿದ್ದಾರೆ. ಇಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಂಪೂರ್ಣವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ನಿಯಮದಂತೆ 50:50 ಯೋಜನೆಯಡಿ ಬದಲಿ ನಿವೇಶನ ಮಂಜೂರು ಮಾಡಲು ಮುಡಾ ಅಯುಕ್ತರು ನಿರ್ಧಾರ ಮಾಡಿದ್ದರು. ಒಂದೊಮ್ಮೆ ಪಾರ್ವತಿ ಅವರಿಗೆ ಹಕ್ಕು ಇದ್ದರೂ, ಅವರು 4,800 ಚದರ ಅಡಿ ಮಾತ್ರ ಪಡೆಯಲು ಅವಕಾಶ ಇದೆ. ಅದು ಕೂಡ ಸ್ವಾಧೀನ ಆಗಿರುವ ಅದೇ ಲೇಔಟ್‌ನಲ್ಲಿ ಪಡೆಯಬಹುದು. ಇಲ್ಲಿ ಪಾವರ್ತಿ ಅವರಿಗೆ ಬದಲಿ ನಿವೇಶನ ಮಂಜೂರು ಮಾಡಲು 2005ರ 50:50 ನಿಯಮ ಬಳಕೆ ಮಾಡಲಾಗಿದೆ. ಅಲ್ಲದೇ, ವಿಶೇಷ ಬಡಾವಣೆಯಲ್ಲಿ ಬದಲಿ ನಿವೇಶನ ಮಂಜೂರು ನೀಡಲು ಆಯುಕ್ತರು ನಿರ್ಧಾರ ಮಾಡಿದ್ದಾರೆ. ಸಿಎಂ ಹೇಳಿರುವ ಪ್ರಕಾರ ಅದು ಕೃಷಿ ಭೂಮಿಯಾಗಿರುವುದರಿಂದ ಪಾರ್ವತಿ ಅವರು ಹಕ್ಕು ಹೊಂದಿದ್ದರೆ ಎರಡು ನಿವೇಶನ ಮಾತ್ರ ನೀಡಬಹುದಿತ್ತು. ಆದರೆ, 38 ಸಾವಿರ ಚದರ ಅಡಿ ಪಡೆಯಲು ಹೇಗೆ ಸಾಧ್ಯ? ಪಾರ್ವತಿ ಅವರಿಗೆ ಮಾಲೀಕತ್ವದ ಹಕ್ಕು ಇಲ್ಲದಿರುವುದರಿಂದ ಇದು ಶುದ್ಧ ಹಗರಣವಾಗಿದೆ. ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಪಡೆಯಲಾಗಿದೆ” ಎಂದು ವಾದಿಸಿದ್ದಾರೆ.

ವಾದ ಆಲಿಸಿದ ನ್ಯಾಯಾಲಯವು, ಆದೇಶ ಕಾಯ್ದಿರಿಸಿ ವಿಚಾರಣೆಯನ್ನು ಆಗಸ್ಟ್‌ 13ಕ್ಕೆ ಮುಂದೂಡಿದೆ.

ಕೃಪೆ ; ಬಾರ್ & ಬೆಂಚ್

ಇದನ್ನೂ ಓದಿ : ಕೊಪ್ಪಳ | ಅಂಗನವಾಡಿ ಮಕ್ಕಳ ಮೊಟ್ಟೆ ಕಸಿದುಕೊಂಡ ವಿಡಿಯೋ ವೈರಲ್ : ಇಬ್ಬರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...