Homeಕರ್ನಾಟಕಮುಡಾ ಪ್ರಕರಣ | ಸಿಎಂ ವಿರುದ್ಧದ ಖಾಸಗಿ ದೂರು : ವಿಚಾರಣೆ ಅಂಗೀಕಾರದ ಕುರಿತು ಆದೇಶ...

ಮುಡಾ ಪ್ರಕರಣ | ಸಿಎಂ ವಿರುದ್ಧದ ಖಾಸಗಿ ದೂರು : ವಿಚಾರಣೆ ಅಂಗೀಕಾರದ ಕುರಿತು ಆದೇಶ ಕಾಯ್ದಿರಿಸಿದ ಕೋರ್ಟ್

- Advertisement -
- Advertisement -

ಆಪಾದಿತ ಮುಡಾ ನಿವೇಶನ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಐವರ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವುದರ ಬಗೆಗಿನ ಆದೇಶವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಯ್ದಿರಿಸಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ನಡೆಸಿದ್ದಾರೆ.

ಅರ್ಜಿದಾರ ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್‌ ಅವರು “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ 3.16 ಗುಂಟೆ ಜಮೀನು ಮಾರಾಟ ಮಾಡುವ ಅಧಿಕಾರವೇ ಜೆ ದೇವರಾಜುಗೆ ಇಲ್ಲ” ಎಂದಿದ್ದಾರೆ.

“ದೇವರಾಜುವಿನಿಂದ ಮಲ್ಲಿಕಾರ್ಜುನ ಸ್ವಾಮಿಗೆ 2004ರಲ್ಲಿ ಕ್ರಯಪತ್ರವಾಗಿಲ್ಲ. ಆದರೆ, ಮಲ್ಲಿಕಾರ್ಜುನ ಸ್ವಾಮಿ ಅವರು ಪಾರ್ವತಿ ಅವರಿಗೆ ದಾನ ಮಾಡುತ್ತಾರೆ. ಬಡಾವಣೆಗಾಗಿ ಮಾರ್ಪಾಡು ಮಾಡಿರುವ ಭೂಮಿಯು ಕೃಷಿ ಭೂಮಿ ಹೇಗೆ ಆಗುತ್ತದೆ? ಇದೆಲ್ಲಾ ಆದ ಬಳಿಕ ಸಿಎಂ ಪತ್ನಿ ಪಾರ್ವತಿ ಅವರು ಬದಲಿ ನಿವೇಶನಕ್ಕೆ ಮನವಿ ಸಲ್ಲಿಸಿದ್ದರು. ಇಲ್ಲಿ ದೇವರಾಜು, ಮಲ್ಲಿಕಾರ್ಜುನ ಸ್ವಾಮಿ, ಪಾವರ್ತಿ ಯಾರಿಗೂ ಹಕ್ಕು (ಟೈಟಲ್‌) ಇರುವುದಿಲ್ಲ. ಹಕ್ಕು ಇಲ್ಲದಿರುವ ಭೂಮಿಗೆ ಪರಿಹಾರ ಕೋರಿದ್ದಾರೆ. ಇಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಂಪೂರ್ಣವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ನಿಯಮದಂತೆ 50:50 ಯೋಜನೆಯಡಿ ಬದಲಿ ನಿವೇಶನ ಮಂಜೂರು ಮಾಡಲು ಮುಡಾ ಅಯುಕ್ತರು ನಿರ್ಧಾರ ಮಾಡಿದ್ದರು. ಒಂದೊಮ್ಮೆ ಪಾರ್ವತಿ ಅವರಿಗೆ ಹಕ್ಕು ಇದ್ದರೂ, ಅವರು 4,800 ಚದರ ಅಡಿ ಮಾತ್ರ ಪಡೆಯಲು ಅವಕಾಶ ಇದೆ. ಅದು ಕೂಡ ಸ್ವಾಧೀನ ಆಗಿರುವ ಅದೇ ಲೇಔಟ್‌ನಲ್ಲಿ ಪಡೆಯಬಹುದು. ಇಲ್ಲಿ ಪಾವರ್ತಿ ಅವರಿಗೆ ಬದಲಿ ನಿವೇಶನ ಮಂಜೂರು ಮಾಡಲು 2005ರ 50:50 ನಿಯಮ ಬಳಕೆ ಮಾಡಲಾಗಿದೆ. ಅಲ್ಲದೇ, ವಿಶೇಷ ಬಡಾವಣೆಯಲ್ಲಿ ಬದಲಿ ನಿವೇಶನ ಮಂಜೂರು ನೀಡಲು ಆಯುಕ್ತರು ನಿರ್ಧಾರ ಮಾಡಿದ್ದಾರೆ. ಸಿಎಂ ಹೇಳಿರುವ ಪ್ರಕಾರ ಅದು ಕೃಷಿ ಭೂಮಿಯಾಗಿರುವುದರಿಂದ ಪಾರ್ವತಿ ಅವರು ಹಕ್ಕು ಹೊಂದಿದ್ದರೆ ಎರಡು ನಿವೇಶನ ಮಾತ್ರ ನೀಡಬಹುದಿತ್ತು. ಆದರೆ, 38 ಸಾವಿರ ಚದರ ಅಡಿ ಪಡೆಯಲು ಹೇಗೆ ಸಾಧ್ಯ? ಪಾರ್ವತಿ ಅವರಿಗೆ ಮಾಲೀಕತ್ವದ ಹಕ್ಕು ಇಲ್ಲದಿರುವುದರಿಂದ ಇದು ಶುದ್ಧ ಹಗರಣವಾಗಿದೆ. ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಪಡೆಯಲಾಗಿದೆ” ಎಂದು ವಾದಿಸಿದ್ದಾರೆ.

ವಾದ ಆಲಿಸಿದ ನ್ಯಾಯಾಲಯವು, ಆದೇಶ ಕಾಯ್ದಿರಿಸಿ ವಿಚಾರಣೆಯನ್ನು ಆಗಸ್ಟ್‌ 13ಕ್ಕೆ ಮುಂದೂಡಿದೆ.

ಕೃಪೆ ; ಬಾರ್ & ಬೆಂಚ್

ಇದನ್ನೂ ಓದಿ : ಕೊಪ್ಪಳ | ಅಂಗನವಾಡಿ ಮಕ್ಕಳ ಮೊಟ್ಟೆ ಕಸಿದುಕೊಂಡ ವಿಡಿಯೋ ವೈರಲ್ : ಇಬ್ಬರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...