Homeಕರ್ನಾಟಕಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅನುಮತಿಸಿದ 'ಬಿಎನ್‌ಎಸ್‌ಎಸ್‌' ಕಾಯ್ದೆ ಹೇಳುವುದೇನು..?

ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅನುಮತಿಸಿದ ‘ಬಿಎನ್‌ಎಸ್‌ಎಸ್‌’ ಕಾಯ್ದೆ ಹೇಳುವುದೇನು..?

- Advertisement -
- Advertisement -

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಭ್ರಷ್ಟಾಚಾರ ತಡೆ ಕಾಯ್ದೆಯ (ಪಿಸಿಎ) ಸೆಕ್ಷನ್ 17ಎ ಅಡಿಯಲ್ಲಿ ರಾಜ್ಯಪಾಲರು ಅನುಮತಿ ಮಾಡಿದ್ದನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಎತ್ತಿ ಹಿಡಿದಿದೆ. ಆದರೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್ 218 ರ ಪ್ರಕಾರ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕಳೆದ ತಿಂಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ಸಿಎಂ ಪತ್ನಿ ಪಾರ್ವತಿ ಅವರಿಗೆ ವಿಜಯನಗರದ ಪ್ರತಿಷ್ಟಿತ ಪ್ರದೇಶದಲ್ಲಿ ಮಂಜೂರು ಮಾಡಿದ ಭೂಮಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳನ್ನು ದಾಖಲಿಸಲು ಮೂವರು ಸಾಮಾಜಿಕ ಕಾರ್ಯಕರ್ತರಿಗೆ ಅನುಮತಿ ನೀಡಿದ್ದರು.

“ಆಪಾದಿತ ಪ್ರಕರಣದ ಬಗ್ಗೆ ತರಾತುರಿಯಲ್ಲಿ ರಾಜ್ಯಪಾಲರ ನಿರ್ಧಾರವು ಆದೇಶವನ್ನು ಉಲ್ಲಂಘಿಸಿಲ್ಲ.. ಆದೇಶವು ಪಿಸಿಎಯ ಸೆಕ್ಷನ್ 17 ಎ ಅಡಿಯಲ್ಲಿ ಅನುಮೋದನೆಗೆ ನಿರ್ಬಂಧಿತವಾಗಿದೆ. ಬಿಎನ್‌ಎಸ್‌ಎಸ್‌ನ 218 ರ ಅಡಿಯಲ್ಲಿ ಅನುಮತಿ ನೀಡುವ ಆದೇಶವಲ್ಲ” ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯದ ಹಿನ್ನಡೆಯ ನಂತರ ಸಿದ್ದರಾಮಯ್ಯ ಅವರು ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ ಹಲವು ವಿವರಣೆ ನೀಡಿದ್ದಾರೆ.

ಭ್ರಷ್ಟಾಚಾರ ವಿರೋಧಿ ಕಾನೂನಿನ ಸೆಕ್ಷನ್ 17ಎ ಎಂದರೇನು?

ಭಾರತೀಯ ದಂಡ ಸಂಹಿತೆಗೆ ಬದಲಾಗಿ ಪರಿಚಯಿಸಲಾದ ಸೆಕ್ಷನ್ 17ಎ, ಜುಲೈ 26, 2018 ರಂದು ಜಾರಿಗೆ ಬಂದಿದೆ. ಇದು ಸಾರ್ವಜನಿಕ ಸೇವಕರಿಗೆ ಕ್ಷುಲ್ಲಕ ಆಧಾರದ ಮೇಲೆ ತನಿಖೆಗೆ ಹೆಚ್ಚುವರಿ ರಕ್ಷಣೆ ನೀಡುತ್ತದೆ.

ಭ್ರಷ್ಟಾಚಾರ ತಡೆ ಕಾಯಿದೆಯಡಿಯಲ್ಲಿ ಸಾರ್ವಜನಿಕ ಸೇವಕರು ಎಸಗಿದ್ದಾರೆಂದು ಆರೋಪಿಸಲಾದ ಯಾವುದೇ ಅಪರಾಧದ ಕುರಿತು ಯಾವುದೇ ವಿಚಾರಣೆ ಅಥವಾ ತನಿಖೆಯನ್ನು ನಡೆಸಲು ಪೊಲೀಸ್ ಅಧಿಕಾರಿಯು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವುದನ್ನು ಈ ನಿಬಂಧನೆಯು ಕಡ್ಡಾಯಗೊಳಿಸುತ್ತದೆ.

ಸಿದ್ದರಾಮಯ್ಯ ಪ್ರಕರಣದಲ್ಲಿ ಈಗಾಗಲೇ ಮೂವರು ಖಾಸಗಿ ದೂರುದಾರರು ರಾಜ್ಯಪಾಲರ ಪೂರ್ವಾನುಮತಿ ಪಡೆದಿದ್ದಾರೆ. ಇದಲ್ಲದೆ, ಸೆಕ್ಷನ್ 17 ಎ ಅಡಿಯಲ್ಲಿ ವೈಯಕ್ತಿಕ ವಿಚಾರಣೆಯ ಅವಕಾಶವನ್ನು ನೀಡುವುದು ಕಡ್ಡಾಯವಲ್ಲ ಎಂದು ನ್ಯಾಯಾಲಯವು ಗಮನಿಸಿದೆ.

‘ಬಿಎನ್‌ಎಸ್‌ಎಸ್‌’ನ ವಿಭಾಗ 218 ಕುರಿತು

ಸಿಆರ್‌ಪಿಸಿ ಯ ಸೆಕ್ಷನ್ 197 ಅನ್ನು ಬದಲಿಸಿದ ಬಿಎನ್‌ಎಸ್‌ಎಸ್‌ ನ ವಿಭಾಗ 218, ಸಾರ್ವಜನಿಕ ಸೇವಕರು ಮತ್ತು ನ್ಯಾಯಾಧೀಶರ ಕಾನೂನು ಕ್ರಮಕ್ಕೆ ಸಂಬಂಧಿಸಿದೆ.

ಕೇಂದ್ರ ಅಥವಾ ರಾಜ್ಯ ಸರ್ಕಾರವು 120 ದಿನಗಳಲ್ಲಿ ಸಾರ್ವಜನಿಕ ಸೇವಕನನ್ನು ವಿಚಾರಣೆಗೆ ಒಳಪಡಿಸಲು ಮಂಜೂರಾತಿಗಾಗಿ ವಿನಂತಿಯನ್ನು ನಿರ್ಧರಿಸಬೇಕು ಎಂದು ಇದು ಹೇಳುತ್ತದೆ. ಹಾಗೆ ಮಾಡಲು ವಿಫಲವಾದರೆ, ಮಂಜೂರಾತಿಯನ್ನು ನೀಡಲಾಗಿದೆ ಎಂದು ಪರಿಗಣಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...