Homeಕರ್ನಾಟಕಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ...

ಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಶೋಧ ನಡೆಸಿದೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರು ಮತ್ತು ಇತರ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.ಮುಡಾ ಕಚೇರಿ

20 ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡ, ಕೇಂದ್ರ ಅರೆಸೇನಾ ಪಡೆಗಳೊಂದಿಗೆ ಮೈಸೂರಿನ ಮುಡಾ ಕಚೇರಿ ಮತ್ತು ಇತರ ಸ್ಥಳಗಳಲ್ಲಿ ದಾಳಿ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಮುಡಾ ವ್ಯಾಪ್ತಿಯಲ್ಲಿ ನಡೆದ ₹5,000 ಕೋಟಿ ಅವ್ಯವಹಾರ ಸೇರಿದಂತೆ ದೊಡ್ಡ ಪ್ರಮಾಣದ ಅವ್ಯವಹಾರ ನಡೆದಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿ ಸೇರಿದಂತೆ ಹಿರಿಯ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ದೂರಿನಂತೆ ಇಡಿ ಈ ತನಿಖೆ ನಡೆಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ. ಮುಡಾ ಕಚೇರಿ

ಈ ದಾಳಿಯು ಸಿಎಂ ಸಿದ್ದರಾಮಯ್ಯ ಅಥವಾ ಅವರ ಕುಟುಂಬಕ್ಕೆ ಸೇರಿದ ಯಾವುದೇ ನಿವೇಶನಗಳನ್ನು ಒಳಗೊಂಡಿಲ್ಲವಾದರೂ, ಮುಖ್ಯಮಂತ್ರಿ ಮತ್ತು ಇತರರನ್ನು ಈ ಹಿಂದೆ ಇಡಿ ಸಲ್ಲಿಸಿದ ಎಫ್‌ಐಆರ್‌ಗೆ ಸಮಾನವಾದ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ಇಸಿಐಆರ್) ಹೆಸರಿಸಲಾಗಿತ್ತು. ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಇತ್ತೀಚೆಗೆ ಲೋಕಾಯುಕ್ತ ಎಫ್‌ಐಆರ್‌ ದಾಖಲಿಸಿದ ನಂತರ ಇಡಿ ಇಸಿಐಆರ್‌ ದಾಖಲಿಸಿತ್ತು.

ಸೆಪ್ಟೆಂಬರ್ 27ರಂದು ದಾಖಲಾಗಿರುವ ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರಿಗೆ ನೀಡಿದ್ದ 14 ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರನ್ನೂ ಹೆಸರಿಸಲಾಗಿದೆ. ಮಲ್ಲಿಕಾರ್ಜುನ ಸ್ವಾಮಿ ಅವರು ಭೂಮಿ ಖರೀದಿಸಿ ನಂತರ ಅದನ್ನು ಪಾರ್ವತಿ ಅವರಿಗೆ ಉಡುಗೊರೆಯಾಗಿ ನೀಡಿದ್ದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ತಾನು ಯಾವುದೇ ತಪ್ಪೆಸಗಿಲ್ಲ ಎಂದು ಪ್ರತಿಪಾದಿಸಿದ್ದು, ಪ್ರತಿಪಕ್ಷಗಳು ನನ್ನನ್ನು ಕಂಡು ಹೆದರಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ನನ್ನ ವಿರುದ್ಧ ಇದೇ ಮೊದಲ ರಾಜಕೀಯ ಪ್ರಕರಣವಾಗಿದೆ ಎಂದು ಅವರು ಹೇಳಿದ್ದಾರೆ. ಇಡಿ ತನ್ನ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳನ್ನು ಸಹ ಸೇರಿಸಿದ್ದು, ಲೋಕಾಯುಕ್ತದಿಂದ ಸಮಾನಾಂತರ ತನಿಖೆಯೊಂದಿಗೆ ತನಿಖೆಗಳು ಮುಂದುವರಿಯುತ್ತವೆ.

ಇದನ್ನೂ ಓದಿ: ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು

ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...

ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ...

ನೋಯ್ಡಾ ಕಾರ್ಮಿಕ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ, 7 ಎಫ್‌ಐಆರ್‌: ಅಶಾಂತಿಯ ಹಿಂದೆ ‘ಸಂಘಟಿತ ಸಿಂಡಿಕೇಟ್’ ಕುರಿತು ತನಿಖೆ

ನೋಯ್ಡಾದಲ್ಲಿ ಹಿಂಸಾತ್ಮಕವಾಗಿ ತಿರುಗಿದ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಮಂಗಳವಾರ ಹೇಳಿದ್ದಾರೆ,...