Homeಕರ್ನಾಟಕಮೂಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೂಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

- Advertisement -
- Advertisement -

ಆಪಾದಿತ ಮೂಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ.

ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಇವರ ಸಹೋದರ ಬಿ.ಎಂ ಮಲ್ಲಿಕಾರ್ಜುನಸ್ವಾಮಿ, ಮೂಡಾದ ಮಾಜಿ‌ ಅಧ್ಯಕ್ಷರಾದ ಬಸವನಗೌಡ, ಹೆಚ್.ವಿ ರಾಜೀವ್ ಹಾಗೂ ಆಯುಕ್ತರಾಗಿದ್ದ ಡಿ.ಬಿ ನಟೇಶ್ ವಿರುದ್ಧ ಅಧಿಕಾರ ದುರುಪಯೋಗ, ವಂಚನೆ ಹಾಗೂ ಭ್ರಷ್ಟಾಚಾರ ಆರೋಪದಡಿ ಬಿಜೆಪಿ ಮುಖಂಡ ಎನ್.ಆರ್‌ ರಮೇಶ್ ದೂರು ದಾಖಲಿಸಿದ್ದಾರೆ.

ದೂರು ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಮೇಶ್, “1997-98ರಲ್ಲಿ ಜೆ.ಹೆಚ್​ ಪಟೇಲ್​ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಸ್ವಾಧೀನಪಡಿಸಿಕೊಂಡ ದೇವನೂರು ಮೂರನೇ ಬಡಾವಣೆಯನ್ನು ಮೂಡಾ ಕೈ ಬಿಡುವಂತೆ ಅಧಿಸೂಚನೆ ಹೊರಡಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅಲ್ಲದೆ 2004-05ರಲ್ಲಿ ಧರ್ಮಸಿಂಗ್ ಅವರ ಸರ್ಕಾರದಲ್ಲೂ ಉಪ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ಇದೇ ಭೂಮಿಯನ್ನು ಮೃತ ಲಿಂಗ ಎಂಬ ವ್ಯಕ್ತಿಯ ಹೆಸರಿನಲ್ಲಿ ಭೂ ಪರಿವರ್ತನೆ ಮಾಡಿಸಿದ್ದರು” ಎಂದು ಆರೋಪಿಸಿದ್ದಾರೆ.

ದೂರಿನಲ್ಲಿ ಏನಿದೆ?

ಸಿದ್ದರಾಮಯ್ಯ ಅವರು ರಾಜಕೀಯ ಪ್ರಭಾವದಿಂದ ತಮ್ಮ ಪತ್ನಿಯ ಹೆಸರಿಗೆ ಕಾನೂನು ಬಾಹಿರವಾಗಿ ಬದಲಿ ನಿವೇಶನ ಪಡೆದು, ಈ ಮೂಲಕ 40 ಕೋಟಿ ರೂಪಾಯಿಗಿಂತ ಹೆಚ್ಚು ಹಣ ಸರ್ಕಾರಕ್ಕೆ ನಷ್ಟವಾಗಲು ಕಾರಣರಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಿಎಂ ಪತ್ನಿ ಹೆಸರಿನಲ್ಲಿರುವ 3.16 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡು, ಬಳಿಕ 1998ರಲ್ಲಿ ಭೂಸ್ವಾಧೀನದಿಂದ ಕೈ ಬಿಟ್ಟಿತ್ತು. 2005ರಲ್ಲಿ ವ್ಯವಸಾಯ ಭೂಮಿಯಿಂದ ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಯಾಗಿತ್ತು. ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನಸ್ವಾಮಿ ಹೆಸರಿನಲ್ಲಿದ್ದ ಭೂಮಿಯನ್ನು ಸಹೋದರಿ ಪಾರ್ವತಿಗೆ ಭೂ ದಾನ ಮಾಡಿದ್ದರು ಎಂದು ಉಲ್ಲೇಖಿಸಲಾಗಿದೆ.

ಈ ಪ್ರಕರಣದಲ್ಲಿ ಬಿ.ಎಂ ಪಾರ್ವತಿಯವರಿಗೆ ವಾಸ್ತವವಾಗಿ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನಗಳಿಗೆ ಬದಲಾಗಿ, ಅದಕ್ಕಿಂತಲೂ ಹತ್ತಾರು ವರ್ಷಗಳ ಹಿಂದೆಯೇ ಮುಡಾ ಅಭಿವೃದ್ಧಿಪಡಿಸಿರುವ “ವಿಜಯನಗರ 3 ಮತ್ತು 4ನೇ ಹಂತದ ಬಡಾವಣೆ” ಗಳಲ್ಲಿನ ಅತ್ಯಂತ ಆಯಕಟ್ಟಿನ ಸ್ಥಳಗಳಲ್ಲಿರುವ ದುಬಾರಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ರಾಜ್ಯದ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ಧರಾಮಯ್ಯನವರ ರಾಜಕೀಯ ಪ್ರಭಾವಗಳಿಗೆ ಒಳಗಾಗಿ ಮುಡಾದ ಅಧ್ಯಕ್ಷರಾಗಿದ್ದ ಹೆಚ್‌.ವಿ ರಾಜೀವ್ ಮತ್ತು ಆಯುಕ್ತರಾಗಿದ್ದ ಡಿ.ಬಿ ನಟೇಶ್ ಅವರು ಈ ಕಾನೂನುಬಾಹಿರ ಕೃತ್ಯವನ್ನು ಎಸಗಿದ್ದಾರೆ‌‌ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...