Homeಕರ್ನಾಟಕಏಕಾಂಗಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕ: ಧರಣಿ ಬಳಿಕ ಸಿದ್ದರಾಮಯ್ಯ ಭೇಟಿ

ಏಕಾಂಗಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕ: ಧರಣಿ ಬಳಿಕ ಸಿದ್ದರಾಮಯ್ಯ ಭೇಟಿ

- Advertisement -
- Advertisement -

ಚಿಕ್ಕಮಗಳೂರಿನ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ತಮ್ಮದೆ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದ್ದಾರೆ. ತಮ್ಮ ಮೂಡಿಗೆರೆ ಕ್ಷೇತ್ರವನ್ನು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ಗೆ ಸೇರಿಸಿ ಎಂದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

ನಮ್ಮದೇ ಸರ್ಕಾರವಿದ್ದರೂ ಕೂಡ ನನ್ನ ಕ್ಷೇತ್ರದಲ್ಲಿನ ಕೆಲಸಗಳನ್ನು, ಸಮಸ್ಯೆಗಳನ್ನು, ಆದ್ಯತೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮೂಡಿಗೆರೆ ಕ್ಷೇತ್ರವನ್ನು ಸೇರಿಸಿ, ಮನೆ, ಜಮೀನು ಮತ್ತು ಬೆಳೆಹಾನಿ ಆದವರಿಗೆ ಪರಿಹಾರ ನೀಡಿ ಎಂದು ಒತ್ತಾಯಿಸಿ, ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಎದುರು ಏಕಾಂಗಿಯಾಗಿ ಧರಣಿ ನಡೆಸಿದ್ದಾರೆ.

ನಮ್ಮ ಕ್ಷೇತ್ರವನ್ನು ಕಡೆಗಣಿಸಿ, ಬೇಡಿಕೆಗಳಿಗೆ ಸರ್ಕಾರ ಏಕೋ ಗಮನವೇ ಹರಿಸುತ್ತಿಲ್ಲ, ಹಾಗಾಗಿ ಧರಣಿ ಕುಳಿತುಕೊಂಡಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪರಿಶಿಷ್ಟ ಜಾತಿಯವರನ್ನು ಸಿನಿಮಾ ಉದ್ಯಮದಿಂದ ಹೊರಹಾಕಬೇಕು ಎಂದ ತಮಿಳು ನಟಿ: ಪ್ರಕರಣ ದಾಖಲು

’ಕಳೆದ ಎರಡು ವರ್ಷದಿಂದ ಮೂಡಿಗೆರೆ ಕ್ಷೇತ್ರ ಪ್ರವಾಹಕ್ಕೆ ತುತ್ತಾಗಿದೆ. ಆದರೂ ಪರಿಹಾರ ಕೊಡುವಲ್ಲಿ ಅನ್ಯಾಯವಾಗಿದೆ. ಅಲ್ಲದೆ ಅತಿವೃಷ್ಟಿ ಪಟ್ಟಿಯಿಂದ ಕ್ಷೇತ್ರವನ್ನು ಕೈಬಿಟ್ಟಿರುವುದು ಸರಿಯಲ್ಲ. ಮೀಸಲು ಕ್ಷೇತ್ರ ಎನ್ನುವ ಕಾರಣಕ್ಕೆ ತಾರತಮ್ಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಶಾಸಕ ಎಂ.ಪಿ. ಕುಮಾರಸ್ವಾಮಿ ಮನವೊಲಿಸಿ ಕರೆದುಕೊಂಡು ಹೋಗಲು ಬಂದ ಕಂದಾಯ ಸಚಿವ ಆರ್.ಅಶೋಕ್‌ ಮುಂದೆ ಕುಮಾರಸ್ವಾಮಿ ಕಣ್ಣೀರು ಕೂಡಾ ಹಾಕಿದ್ದಾರೆ.

ಶಾಸಕರ ಏಕಾಂಗಿ ಹೋರಾಟಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ’ಸ್ವಪಕ್ಷದ ಶಾಸಕರೇ ಪ್ರತಿಭಟಿಸುತ್ತಿರುವುದು ಬಿಜೆಪಿ ದುರಾಡಳಿತಕ್ಕೆ ಕನ್ನಡಿ. ಕಳೆದ 2 ವರ್ಷದಿಂದ ಭೂಕುಸಿತ, ಪ್ರವಾಹದಿಂದಾಗಿ ರಾಜ್ಯದ ಜನರು ಹೈರಾಣಾಗಿದ್ದಾರೆ, 25 ಸಂಸದರಿದ್ದೂ, ಡಬಲ್ ಇಂಜಿನ್ ಸರ್ಕಾರಗಳಿದ್ದೂ ನಯಾಪೈಸೆ ಪರಿಹಾರ ಕೊಡಲಾಗದ ಮೇಲೆ ಬಿಜೆಪಿಗೆ ಏಕೆ ಅಧಿಕಾರ? ‘ಆತ್ಮ’ವಿದ್ದರೆ ಬಿಜೆಪಿ ಆತ್ಮವಿಮರ್ಶೆ ಮಾಡಿಕೊಳ್ಳಲಿ’ ಎಂದಿದೆ.

ಧರಣಿ ಬೆನ್ನಲ್ಲೇ ಬಿಜೆಪಿ ಶಾಸಕ ಎಂ.ಪಿ‌ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಹಿನ್ನೆಲೆ ಶುಭಕೋರಲು ಆಗಮಿಸಿದ್ದರು ಎಂದು ಹೇಳಲಾಗುತ್ತಿದ್ದರೂ, ಸುಮಾರು ಹತ್ತು ನಿಮಿಷಗಳ ಕಾಲ ಇಬ್ಬರು ನಾಯಕರು ಮಾತುಕತೆ ನಡೆಸಿದ್ದಾರೆ.


ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ ನಿಷೇಧ; ಆದೇಶ ಹಿಂಪಡೆಯುವಂತೆ ಪುಷ್ಪ ಬೆಳೆಗಾರರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...