Homeಮುಖಪುಟಮೂಡಿಗೆರೆ: ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ - ವಿಜಯ ಸಂಕಲ್ಪ ಯಾತ್ರೆ ರದ್ದು

ಮೂಡಿಗೆರೆ: ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ – ವಿಜಯ ಸಂಕಲ್ಪ ಯಾತ್ರೆ ರದ್ದು

- Advertisement -
- Advertisement -

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಯವರ ಪರ ಮತ್ತು ವಿರೋಧಿ ಬಣದ ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿ ತಳ್ಳಾಟ-ನೂಕಾಟ ನಡೆಸಿದ ಪರಿಣಾಮ ಇಂದು ಮೂಡಿಗೆರೆಯಲ್ಲಿ ನಡೆಯಬೇಕಿದ್ದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ರದ್ದಾಗಿದೆ.

ಇಂದು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಆಗಮಿಸಿದ್ದರು. ಅವರು ಶೃಂಗೇರಿಯಿಂದ ಮೂಡಿಗೆರೆ ತಲುಪಿದೊಡನೆ ಕಾರ್ಯಕರ್ತರ ಗುಂಪೊಂದು ಬೇಡ ಬೇಡ ಕುಮಾರಸ್ವಾಮಿ ಬೇಡ, ಬೇಕು ಬೇಕು ಬಿಜೆಪಿ ಬೇಕು ಎಂಬ ಘೋಷಣೆಗಳನ್ನು ಕೂಗಿದರು. ಕುಮಾರಸ್ವಾಮಿ ವಿರುದ್ಧ ಫ್ಲೆಕಾರ್ಡ್‌ಗಳನ್ನು ಪ್ರದರ್ಶಿಸಿ, ಕಾರಿಗೆ ಮುತ್ತಿಗೆ ಹಾಕಿದರು. ಕೂಡಲೇ ಮತ್ತೊಂದು ಗುಂಪು ‘ಬೇಕೇ ಬೇಕು ಕುಮಾರಸ್ವಾಮಿ ಬೇಕು’ ಎಂದು ಘೋಷಣೆಗಳನ್ನು ಕೂಗಿದರು. ಇದರಿಂದ ಬಿಗುವಿನ ವಾತವಾರಣ ನಿರ್ಮಾಣವಾಯಿತು.

ಸ್ಥಳದಲ್ಲಿ ತಳ್ಳಾಟ, ನೂಕಾಟ ನಡೆಯಿತು. ನೂಕು ನುಗ್ಗಲು  ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಯಡಿಯೂರಪ್ಪನವರು ಕಾರಿನಿಂದ ಇಳಿಯದೆ ಅಲ್ಲಿಂದ ಚಿಕ್ಕಮಗಳೂರಿಗೆ ತೆರಳಿದರು. ಸಂಕಲ್ಪ ಯಾತ್ರೆ ಮೊಟಕುಗೊಂಡಿತು. ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಸಿ.ಕಲ್ಮರುಡಪ್ಪ, ಎಂ.ಕೆ.ಪ್ರಾಣೇಶ್‌ ಮೊದಲಾದವರು ಇದ್ದರು ಸಹ ಪರಿಸ್ಥಿತಿ ತಿಳಿಗೊಳಿಸಲು ಸಾಧ್ಯವಾಗಲಿಲ್ಲ.

ಇತ್ತೀಚೆಗೆ ಕೋಲಾರದಲ್ಲಿಯೂ ಸಹ ನಿರೀಕ್ಷಿತ ಜನ ಸೇರದ ಕಾರಣ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ರದ್ದಾಗಿತ್ತು. ಆ ಪಟ್ಟಿಗೆ ಮೂಡಿಗೆರೆ ಸಹ ಸೇರಿಕೊಂಡಿದೆ.

ತದನಂತರ ಪತ್ರಿಕಾ ಗೋಷ್ಟಿ ನಡೆಸಿದ ಎಂ.ಪಿ ಕುಮಾರಸ್ವಾಮಿಯವರು “ನಾನೊಬ್ಬ ದಲಿತ ಎನ್ನುವ ಕಾರಣದಿಂದ ಪಕ್ಷದಲ್ಲಿ ನನ್ನ ವಿರುದ್ದ ಕೆಲಸವರು ಪಿತೂರಿ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ನನ್ನಿಂದಾಗಿ ಪಕ್ಷದ ನಾಯಕರಿಗೆ ಮುಜುಗರ ಆಗಿದ್ದಕ್ಕೆ ಕ್ಷಮೆ ಯಾಚಿಸಿರುವ ಅವರು, ಕ್ಷೇತ್ರದಲ್ಲಿ ಬಹುತೇಕ ವಿಶ್ವಾಸ ನನಗಿದೆ. ಆದರೆ ಕೆಲವರು ಸೋಲಿಸಬೇಕೆಂದು ಪಿತೂರಿ ಮಾಡುತ್ತಿದ್ದಾರೆ ಎಂದರು.

ಘಟನೆಯ ನಂತರವೂ ಬಿ.ಎಸ್ ಯಡಿಯೂರಪ್ಪನವರು ನನ್ನನ್ನು ಹತ್ತಿರಕ್ಕೆ ಕರೆದು ನೀನೆ ಕ್ಷೇತ್ರದ ಅಭ್ಯರ್ಥಿ ಮತ್ತು ನೀನು ಗೆಲ್ಲುತ್ತೀಯ ಎಂದು ಅಭಯ ನೀಡಿದ್ದಾರೆ ಎಂದರು.

ಶಾಸಕ ಎಂ.ಪಿ ಕುಮಾರಸ್ವಾಮಿಯವರ ವಿರುದ್ಧ ಬಿಜೆಪಿಯ ಬಣವೊಂದು ಬಹಳ ಹಿಂದಿನಿಂದಲೂ ಕೆಲಸ ಮಾಡುತ್ತಿದ್ದು, ಈ ಬಾರಿ ಅವರಿಗೆ ಬಿಜೆಪಿ ಟಿಕೆಟ್ ನೀಡಬಾರದೆಂದು ಆಗ್ರಹಿಸಿದೆ. ಇನ್ನು ಎಂ.ಪಿ ಕುಮಾರಸ್ವಾಮಿಯವರು ಸಹ ಬಿಜೆಪಿ ಪಕ್ಷದೊಂದಿಗೆ ಅಷ್ಟಕಷ್ಟೆ ಎನ್ನುವ ಸಂಬಂಧ ಹೊಂದಿದ್ದಾರೆ.

ಎಂ.ಪಿ ಕುಮಾರಸ್ವಾಮಿಯವರು 2021ರಲ್ಲಿ ‘ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ವ್ಯಾಪ್ತಿಗೆ ಮೂಡಿಗೆರೆ ಕ್ಷೇತ್ರವನ್ನು ಸೇರಿಸಿ, ಮನೆ, ಜಮೀನು ಮತ್ತು ಬೆಳೆಹಾನಿ ಆದವರಿಗೆ ಪರಿಹಾರ ನೀಡಿ’ ಎಂದು ಒತ್ತಾಯಿಸಿ ವಿಧಾನಸೌಧದ ಮುಂದಿನ ಗಾಂಧಿ ಪ್ರತಿಮೆ ಎದುರು ತಮ್ಮದೇ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಧರಣಿ ನಡೆಸಿ ಗಮನ ಸೆಳೆದಿದ್ದರು.

ಅಲ್ಲದೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಪತ್ರಿಕಾ ಹೇಳಿಕೆ ನೀಡಿ ಖಂಡಿಸಿದ್ದರು. “ಇತ್ತೀಚೆಗೆ ದ್ವೇಷದ ರಾಜಕಾರಣ ಹೆಚ್ಚುತ್ತಿದೆ. ಇದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದುದು. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ, ಆಡಳಿತ ಪಕ್ಷಗಳು ಹೇಗಿರಬೇಕೆಂದು ಹಿಂದಿನ ನಾಯಕರು ಮಾದರಿ ಹಾಕಿಕೊಟ್ಟಿದ್ದಾರೆ. ಅಂತಹ ನಾಯಕರನ್ನು ಟೀಕಿಸುವುದು ಸರಿಯಲ್ಲ” ಎಂದಿದ್ದರು.

ಎಂ.ಪಿ ಕುಮಾರಸ್ವಾಮಿಯವರ ಕಳೆದ ವರ್ಷ ತನ್ನ ಮೇಲೆ ಹಲ್ಲೆಯಾಗಿದೆ ಎಂದು ದೂರು ನೀಡಿದ್ದರು. ಆನೆ ನಿಗ್ರಹ ಕೆಲಸದಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಕೆಲ ಗ್ರಾಮಸ್ಥರು ಅವರ ಮೇಲೆ ಹಲ್ಲೆ ನಡೆಸಿದ್ದರು. ಹಾಗಾಗಿ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ನೆಹರು ಕುರಿತು ಸಿ.ಟಿ ರವಿ ಅವಹೇಳನಕಾರಿ ಹೇಳಿಕೆಗೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...