Homeಮುಖಪುಟಮೂಡಿಗೆರೆ: ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ - ವಿಜಯ ಸಂಕಲ್ಪ ಯಾತ್ರೆ ರದ್ದು

ಮೂಡಿಗೆರೆ: ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ – ವಿಜಯ ಸಂಕಲ್ಪ ಯಾತ್ರೆ ರದ್ದು

- Advertisement -
- Advertisement -

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಯವರ ಪರ ಮತ್ತು ವಿರೋಧಿ ಬಣದ ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿ ತಳ್ಳಾಟ-ನೂಕಾಟ ನಡೆಸಿದ ಪರಿಣಾಮ ಇಂದು ಮೂಡಿಗೆರೆಯಲ್ಲಿ ನಡೆಯಬೇಕಿದ್ದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ರದ್ದಾಗಿದೆ.

ಇಂದು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಆಗಮಿಸಿದ್ದರು. ಅವರು ಶೃಂಗೇರಿಯಿಂದ ಮೂಡಿಗೆರೆ ತಲುಪಿದೊಡನೆ ಕಾರ್ಯಕರ್ತರ ಗುಂಪೊಂದು ಬೇಡ ಬೇಡ ಕುಮಾರಸ್ವಾಮಿ ಬೇಡ, ಬೇಕು ಬೇಕು ಬಿಜೆಪಿ ಬೇಕು ಎಂಬ ಘೋಷಣೆಗಳನ್ನು ಕೂಗಿದರು. ಕುಮಾರಸ್ವಾಮಿ ವಿರುದ್ಧ ಫ್ಲೆಕಾರ್ಡ್‌ಗಳನ್ನು ಪ್ರದರ್ಶಿಸಿ, ಕಾರಿಗೆ ಮುತ್ತಿಗೆ ಹಾಕಿದರು. ಕೂಡಲೇ ಮತ್ತೊಂದು ಗುಂಪು ‘ಬೇಕೇ ಬೇಕು ಕುಮಾರಸ್ವಾಮಿ ಬೇಕು’ ಎಂದು ಘೋಷಣೆಗಳನ್ನು ಕೂಗಿದರು. ಇದರಿಂದ ಬಿಗುವಿನ ವಾತವಾರಣ ನಿರ್ಮಾಣವಾಯಿತು.

ಸ್ಥಳದಲ್ಲಿ ತಳ್ಳಾಟ, ನೂಕಾಟ ನಡೆಯಿತು. ನೂಕು ನುಗ್ಗಲು  ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಯಡಿಯೂರಪ್ಪನವರು ಕಾರಿನಿಂದ ಇಳಿಯದೆ ಅಲ್ಲಿಂದ ಚಿಕ್ಕಮಗಳೂರಿಗೆ ತೆರಳಿದರು. ಸಂಕಲ್ಪ ಯಾತ್ರೆ ಮೊಟಕುಗೊಂಡಿತು. ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಸಿ.ಕಲ್ಮರುಡಪ್ಪ, ಎಂ.ಕೆ.ಪ್ರಾಣೇಶ್‌ ಮೊದಲಾದವರು ಇದ್ದರು ಸಹ ಪರಿಸ್ಥಿತಿ ತಿಳಿಗೊಳಿಸಲು ಸಾಧ್ಯವಾಗಲಿಲ್ಲ.

ಇತ್ತೀಚೆಗೆ ಕೋಲಾರದಲ್ಲಿಯೂ ಸಹ ನಿರೀಕ್ಷಿತ ಜನ ಸೇರದ ಕಾರಣ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ರದ್ದಾಗಿತ್ತು. ಆ ಪಟ್ಟಿಗೆ ಮೂಡಿಗೆರೆ ಸಹ ಸೇರಿಕೊಂಡಿದೆ.

ತದನಂತರ ಪತ್ರಿಕಾ ಗೋಷ್ಟಿ ನಡೆಸಿದ ಎಂ.ಪಿ ಕುಮಾರಸ್ವಾಮಿಯವರು “ನಾನೊಬ್ಬ ದಲಿತ ಎನ್ನುವ ಕಾರಣದಿಂದ ಪಕ್ಷದಲ್ಲಿ ನನ್ನ ವಿರುದ್ದ ಕೆಲಸವರು ಪಿತೂರಿ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ನನ್ನಿಂದಾಗಿ ಪಕ್ಷದ ನಾಯಕರಿಗೆ ಮುಜುಗರ ಆಗಿದ್ದಕ್ಕೆ ಕ್ಷಮೆ ಯಾಚಿಸಿರುವ ಅವರು, ಕ್ಷೇತ್ರದಲ್ಲಿ ಬಹುತೇಕ ವಿಶ್ವಾಸ ನನಗಿದೆ. ಆದರೆ ಕೆಲವರು ಸೋಲಿಸಬೇಕೆಂದು ಪಿತೂರಿ ಮಾಡುತ್ತಿದ್ದಾರೆ ಎಂದರು.

ಘಟನೆಯ ನಂತರವೂ ಬಿ.ಎಸ್ ಯಡಿಯೂರಪ್ಪನವರು ನನ್ನನ್ನು ಹತ್ತಿರಕ್ಕೆ ಕರೆದು ನೀನೆ ಕ್ಷೇತ್ರದ ಅಭ್ಯರ್ಥಿ ಮತ್ತು ನೀನು ಗೆಲ್ಲುತ್ತೀಯ ಎಂದು ಅಭಯ ನೀಡಿದ್ದಾರೆ ಎಂದರು.

ಶಾಸಕ ಎಂ.ಪಿ ಕುಮಾರಸ್ವಾಮಿಯವರ ವಿರುದ್ಧ ಬಿಜೆಪಿಯ ಬಣವೊಂದು ಬಹಳ ಹಿಂದಿನಿಂದಲೂ ಕೆಲಸ ಮಾಡುತ್ತಿದ್ದು, ಈ ಬಾರಿ ಅವರಿಗೆ ಬಿಜೆಪಿ ಟಿಕೆಟ್ ನೀಡಬಾರದೆಂದು ಆಗ್ರಹಿಸಿದೆ. ಇನ್ನು ಎಂ.ಪಿ ಕುಮಾರಸ್ವಾಮಿಯವರು ಸಹ ಬಿಜೆಪಿ ಪಕ್ಷದೊಂದಿಗೆ ಅಷ್ಟಕಷ್ಟೆ ಎನ್ನುವ ಸಂಬಂಧ ಹೊಂದಿದ್ದಾರೆ.

ಎಂ.ಪಿ ಕುಮಾರಸ್ವಾಮಿಯವರು 2021ರಲ್ಲಿ ‘ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ವ್ಯಾಪ್ತಿಗೆ ಮೂಡಿಗೆರೆ ಕ್ಷೇತ್ರವನ್ನು ಸೇರಿಸಿ, ಮನೆ, ಜಮೀನು ಮತ್ತು ಬೆಳೆಹಾನಿ ಆದವರಿಗೆ ಪರಿಹಾರ ನೀಡಿ’ ಎಂದು ಒತ್ತಾಯಿಸಿ ವಿಧಾನಸೌಧದ ಮುಂದಿನ ಗಾಂಧಿ ಪ್ರತಿಮೆ ಎದುರು ತಮ್ಮದೇ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಧರಣಿ ನಡೆಸಿ ಗಮನ ಸೆಳೆದಿದ್ದರು.

ಅಲ್ಲದೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಪತ್ರಿಕಾ ಹೇಳಿಕೆ ನೀಡಿ ಖಂಡಿಸಿದ್ದರು. “ಇತ್ತೀಚೆಗೆ ದ್ವೇಷದ ರಾಜಕಾರಣ ಹೆಚ್ಚುತ್ತಿದೆ. ಇದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದುದು. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ, ಆಡಳಿತ ಪಕ್ಷಗಳು ಹೇಗಿರಬೇಕೆಂದು ಹಿಂದಿನ ನಾಯಕರು ಮಾದರಿ ಹಾಕಿಕೊಟ್ಟಿದ್ದಾರೆ. ಅಂತಹ ನಾಯಕರನ್ನು ಟೀಕಿಸುವುದು ಸರಿಯಲ್ಲ” ಎಂದಿದ್ದರು.

ಎಂ.ಪಿ ಕುಮಾರಸ್ವಾಮಿಯವರ ಕಳೆದ ವರ್ಷ ತನ್ನ ಮೇಲೆ ಹಲ್ಲೆಯಾಗಿದೆ ಎಂದು ದೂರು ನೀಡಿದ್ದರು. ಆನೆ ನಿಗ್ರಹ ಕೆಲಸದಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಕೆಲ ಗ್ರಾಮಸ್ಥರು ಅವರ ಮೇಲೆ ಹಲ್ಲೆ ನಡೆಸಿದ್ದರು. ಹಾಗಾಗಿ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ನೆಹರು ಕುರಿತು ಸಿ.ಟಿ ರವಿ ಅವಹೇಳನಕಾರಿ ಹೇಳಿಕೆಗೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...