Homeಕರ್ನಾಟಕಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

ಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

- Advertisement -
- Advertisement -

ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದ ಪ್ರಕರಣದಲ್ಲಿ ಗೋಣಿಬೀಡು PSI ಅರ್ಜುನ್ ಅವರನ್ನು ಬುಧವಾರ ರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ತನ್ನ ಗ್ರಾಮದ ಮಹಿಳೆ ಕಾಣೆಯಾಗಿದ್ದ ಪ್ರಕರಣದಲ್ಲಿ ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಲಾಗಿದೆ. ಅಮಾನವೀಯವಾಗಿ ನಡೆದುಕೊಂಡ ಪಿಎಸ್‌ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಸಂತ್ರಸ್ತ ಯುವಕ ಪುನೀತ್ ಮೇ 10 ರಂದೇ ದೂರು ನೀಡಿದ್ದರು.

ಮೇ 22 ರಂದು ಹಲವು ಪತ್ರಿಕೆಗಳಲ್ಲಿ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಈ ಘಟನೆ ವರದಿಯಾಗಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿ ತೀವ್ರ ಖಂಡನೆ, ಆಕ್ರೋಶ ವ್ಯಕ್ತವಾಗಿತ್ತು. ಈ ಎಲ್ಲಾ ಒತ್ತಡಗಳಿಂದ ಕೊನೆಗೂ ಗೋಣಿಬೀಡು PSI ಅರ್ಜುನ್ ವಿರುದ್ಧ ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸು ದಾಖಲಾಗಿತ್ತು.

ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ಬಳಿಕ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು. ವಿವಿಧ ಪ್ರಕರಣಗಳಲ್ಲಿ ಶಂಕಿತರನ್ನು ವಿಚಾರಣೆ ನೆಪದಲ್ಲಿ ಕರೆಸಿ ವಿಕೃತವಾಗಿ ನಡೆದುಕೊಂಡಿರುವ ಅರ್ಜುನ್ ವಿಕೃತ ಘಟನೆಗಳ ವಿವರ ಪ್ರಾಥಮಿಕ ವಿಚಾರಣೆ ವೇಳೆ ಬೆಳಕಿಗೆ ಬಂದಿತ್ತು. ಅರ್ಜುನ್ ನನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶಿಸಿತ್ತು.

ಬಂಧನ ಸುಳಿವು ಸಿಕ್ಕ ನಂತರ ಪಿಎಸ್‌ಐ ಅರ್ಜುನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಸ್ಥಳೀಯ ನ್ಯಾಯಾಲಯ ಮತ್ತು ಹೈಕೋರ್ಟ್ ಏಕ ಸದಸ್ಯ ಪೀಠ ಕೂಡ ಜಾಮೀನು ನೀಡಲು ನಿರಾಕರಿಸಿತ್ತು. ಬಳಿಕ ಅರ್ಜುನ್ ತಲೆ ಮರೆಸಿಕೊಂಡಿದ್ದರು. ಈಗ ಸಿಐಡಿ ಪೊಲೀಸರು ಆರೋಪಿ ಅರ್ಜುನ್‌ನನ್ನು ಬಂಧಿಸಿದ್ದಾರೆ.

ಮೇ 10 ರಂದು ಈ ಅಮಾನವೀಯ ಘಟನೆ ನಡೆದಿತ್ತು. ಅಂದೇ ಸಂತ್ರಸ್ತ ಯುವಕ ದೂರು ಸಲ್ಲಿಸಿದ್ದರು. ಆದರೆ, ಎಫ್‌ಐಆರ್‌ ದಾಖಲಾಗಿರಲಿಲ್ಲ. ಬಳಿಕ ದಲಿತ ಸಂಘರ್ಷ ಸಮಿತಿ, ಜಿಲ್ಲಾ ಕಾಂಗ್ರೆಸ್ ಸೇರಿದಂತೆ ಸಾಮಾಜಿಕ ಕಾರ್ಯಕರ್ತರು, ಹಲವು ಪತ್ರಿಕೆಗಳಲ್ಲಿ ಇಂಗ್ಲಿಷ್ ಮಾಧ್ಯಮಗಳು ವರದಿ ಮಾಡಿ ಒತ್ತಡ ತಂದ ಬಳಿಕ ಮೇ 22 ರಂದು ದೂರು ದಾಖಲಾಗಿತ್ತು.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...