Homeಕರ್ನಾಟಕಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

ಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

- Advertisement -
- Advertisement -

ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದ ಪ್ರಕರಣದಲ್ಲಿ ಗೋಣಿಬೀಡು PSI ಅರ್ಜುನ್ ಅವರನ್ನು ಬುಧವಾರ ರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ತನ್ನ ಗ್ರಾಮದ ಮಹಿಳೆ ಕಾಣೆಯಾಗಿದ್ದ ಪ್ರಕರಣದಲ್ಲಿ ನನ್ನನ್ನು ವಿನಾಕಾರಣ ಠಾಣೆಗೆ ಕರೆದೊಯ್ದು ಬೆಳಗ್ಗಿನಿಂದ ರಾತ್ರಿವರೆಗೂ ಕ್ರೂರವಾಗಿ ದೌರ್ಜನ್ಯ ನಡೆಸಿ, ಮೂತ್ರ ಕುಡಿಸಿ, ಜಾತಿ ನಿಂದನೆ ಮಾಡಲಾಗಿದೆ. ಅಮಾನವೀಯವಾಗಿ ನಡೆದುಕೊಂಡ ಪಿಎಸ್‌ಐ ಅರ್ಜುನ್ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪೋಲೀಸ್ ಮಹಾ ನಿರ್ದೇಶಕರು, ಪಶ್ಚಿಮ ವಲಯ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಸಂತ್ರಸ್ತ ಯುವಕ ಪುನೀತ್ ಮೇ 10 ರಂದೇ ದೂರು ನೀಡಿದ್ದರು.

ಮೇ 22 ರಂದು ಹಲವು ಪತ್ರಿಕೆಗಳಲ್ಲಿ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಈ ಘಟನೆ ವರದಿಯಾಗಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿ ತೀವ್ರ ಖಂಡನೆ, ಆಕ್ರೋಶ ವ್ಯಕ್ತವಾಗಿತ್ತು. ಈ ಎಲ್ಲಾ ಒತ್ತಡಗಳಿಂದ ಕೊನೆಗೂ ಗೋಣಿಬೀಡು PSI ಅರ್ಜುನ್ ವಿರುದ್ಧ ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸು ದಾಖಲಾಗಿತ್ತು.

ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ಬಳಿಕ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು. ವಿವಿಧ ಪ್ರಕರಣಗಳಲ್ಲಿ ಶಂಕಿತರನ್ನು ವಿಚಾರಣೆ ನೆಪದಲ್ಲಿ ಕರೆಸಿ ವಿಕೃತವಾಗಿ ನಡೆದುಕೊಂಡಿರುವ ಅರ್ಜುನ್ ವಿಕೃತ ಘಟನೆಗಳ ವಿವರ ಪ್ರಾಥಮಿಕ ವಿಚಾರಣೆ ವೇಳೆ ಬೆಳಕಿಗೆ ಬಂದಿತ್ತು. ಅರ್ಜುನ್ ನನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶಿಸಿತ್ತು.

ಬಂಧನ ಸುಳಿವು ಸಿಕ್ಕ ನಂತರ ಪಿಎಸ್‌ಐ ಅರ್ಜುನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಸ್ಥಳೀಯ ನ್ಯಾಯಾಲಯ ಮತ್ತು ಹೈಕೋರ್ಟ್ ಏಕ ಸದಸ್ಯ ಪೀಠ ಕೂಡ ಜಾಮೀನು ನೀಡಲು ನಿರಾಕರಿಸಿತ್ತು. ಬಳಿಕ ಅರ್ಜುನ್ ತಲೆ ಮರೆಸಿಕೊಂಡಿದ್ದರು. ಈಗ ಸಿಐಡಿ ಪೊಲೀಸರು ಆರೋಪಿ ಅರ್ಜುನ್‌ನನ್ನು ಬಂಧಿಸಿದ್ದಾರೆ.

ಮೇ 10 ರಂದು ಈ ಅಮಾನವೀಯ ಘಟನೆ ನಡೆದಿತ್ತು. ಅಂದೇ ಸಂತ್ರಸ್ತ ಯುವಕ ದೂರು ಸಲ್ಲಿಸಿದ್ದರು. ಆದರೆ, ಎಫ್‌ಐಆರ್‌ ದಾಖಲಾಗಿರಲಿಲ್ಲ. ಬಳಿಕ ದಲಿತ ಸಂಘರ್ಷ ಸಮಿತಿ, ಜಿಲ್ಲಾ ಕಾಂಗ್ರೆಸ್ ಸೇರಿದಂತೆ ಸಾಮಾಜಿಕ ಕಾರ್ಯಕರ್ತರು, ಹಲವು ಪತ್ರಿಕೆಗಳಲ್ಲಿ ಇಂಗ್ಲಿಷ್ ಮಾಧ್ಯಮಗಳು ವರದಿ ಮಾಡಿ ಒತ್ತಡ ತಂದ ಬಳಿಕ ಮೇ 22 ರಂದು ದೂರು ದಾಖಲಾಗಿತ್ತು.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...