Homeಮುಖಪುಟ’ಮೂಕಜ್ಜಿಯ ಕನಸುಗಳು’ ಸಿನಿಮಾ 'FUC'ಯಲ್ಲಿ ಮುಂದಿನ ತಿಂಗಳು ಮರು ಬಿಡುಗಡೆ

’ಮೂಕಜ್ಜಿಯ ಕನಸುಗಳು’ ಸಿನಿಮಾ ‘FUC’ಯಲ್ಲಿ ಮುಂದಿನ ತಿಂಗಳು ಮರು ಬಿಡುಗಡೆ

'FUC' ಸಿನಿಮಾ ಬಗೆಗಿನ ಜ್ಞಾನ, ಮಾಹಿತಿ ವಿನಿಮಯ ಹಾಗೂ ಕನ್ನಡ ಸಿನಿಮಾಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಕಟ್ಟಿಕೊಂಡಿರುವ ಕ್ಲಬ್‌ ಆಗಿದೆ.

- Advertisement -
- Advertisement -

ಶಿವರಾಮ ಕಾರಂತರ ಜ್ಞಾನಪೀಠ ಪ್ರಶಸ್ತಿ ವಿಜೇತ ಕೃತಿ ’ಮೂಕಜ್ಜಿಯ ಕನಸುಗಳು’ ಕೃತಿ ಆಧಾರಿತ ಸಿನಿಮಾವು ಕನ್ನಡ ಚಿತ್ರರಂಗದ ನೂತನ ಪ್ರಯೋಗ ‘FUC‘ (ದಿ ಫಿಲ್ಮ್‌ ಮೇಕರ್ಸ್‌ ಯುನೈಟೆಡ್‌ ಕ್ಲಬ್) ವೆಬ್‌ಸೈಟ್‌ನಲ್ಲಿ ಮುಂದಿನ ತಿಂಗಳು ಮರು ಬಿಡುಗಡೆಯಾಗಲಿದೆ.

ಈ ಸಿನಿಮಾ 2019ರ ನವೆಂಬರ್‌ 29 ರಂದು ಟಾಕಿಸುಗಳಲ್ಲಿ ಬಿಡುಗಡೆಯಾಗಿ ವಿಮರ್ಶಕರ ಮೆಚ್ಚುಗೆ ಗಳಿಸಿತ್ತು. ಈ ನಡುವೆ ಸಿನಿಮಾ ನಿರ್ದೇಶಕ ಪಿ. ಶೇಷಾದ್ರಿಯವರು ಹೆಚ್ಚಿನ ಜನರಿಗೆ ಸಿನಿಮಾ ತಲುಪಿಸಲು ಹೊಸ ದಾರಿಯನ್ನು ಕಂಡು ಕೊಂಡಿದ್ದು, ’FUC’ ವೆಬ್‌ಸೈಟ್‌ನಲ್ಲಿ ಮರು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ಇದನ್ನೂಓದಿ: ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

“ಸಿನಿಮಾ ನೋಡಲು ಆಸಕ್ತಿ ಇರುವವರು ’FUC’‌ ವೆಬ್‌ಸೈಟ್‌ನಲ್ಲಿ 300 ರೂಪಾಯಿ ನೀಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. 3000ಕ್ಕೂ ಹೆಚ್ಚು ಮಂದಿ ಹೆಸರು ನೋಂದಾಯಿಸಿದರೆ‍ ಎಫ್‌ಯುಸಿ ವೆಬ್‌ಸೈಟ್‌ನಲ್ಲಿ ಈ ಸಿನಿಮಾ ಲಭ್ಯವಾಗಲಿದೆ. ಒಂದು ವೇಳೆ 3000 ಮಂದಿ ಹೆಸರು ನೋಂದಾಯಿಸದೆ ಇದ್ದರೆ ಸಿನಿಮಾ ಬಿಡುಗಡೆ ಆಗುವುದಿಲ್ಲ. ಆಗ ಯಾರು ಹೆಸರು ನೋಂದಾಯಿಸಿಕೊಂಡಿರುತ್ತಾರೋ ಅವರಿಗೆ ಹಣ ಮರಳಿಸಲಾಗುವುದು” ಎಂದು ನಿರ್ದೇಶಕ ಪಿ. ಶೇಷಾದ್ರಿ ತಿಳಿಸಿದ್ದಾರೆ.

ಪ್ರಸ್ತುತ ‘FUC’ ವೆಬ್‌ಸೈಟ್‌‌ನಲ್ಲಿ ಬುಕಿಂಗ್ ಚಲಾವಣೆಯಲ್ಲಿದ್ದು 09 ಅಕ್ಟೋಬರ್‌ 2020 ರಂದು ಈ ಅಭಿಯಾನ ಮುಕ್ತಾಯವಾಗಲಿದೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

‘FUC’ ಸಿನಿಮಾ ಬಗೆಗಿನ ಜ್ಞಾನ, ಮಾಹಿತಿ ವಿನಿಮಯ ಹಾಗೂ ಕನ್ನಡ ಸಿನಿಮಾಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಕಟ್ಟಿಕೊಂಡಿರುವ ಕ್ಲಬ್‌ ಆಗಿದೆ. ಇದು ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಪ್ರಾರಂಭವಾಗಿದ್ದು ಕ್ಲಬ್‌ಗೆ ನಿರ್ದೇಶಕರಾದ ಕೆ.ಎಂ. ಚೈತನ್ಯ, ಜಯತೀರ್ಥ, ಬಿ.ಎಂ. ಗಿರಿರಾಜ್‌, ಅರವಿಂದ ಶಾಸ್ತ್ರಿ, ಮಂಸೋರೆ, ಹಿರಿಯ ನಿರ್ದೇಶಕ ಗಿರೀಶ ಕಾಸರವಳ್ಳಿ, ಪಿ.ಶೇಷಾದ್ರಿ, ಯೋಗರಾಜ್‌ ಭಟ್‌ ಸೇರಿದಂತೆ ಹಲವು ಮಂದಿ ಕನ್ನಡ ನಿರ್ದೇಶಕರು ಬೆಂಬಲ ನೀಡಿದ್ದಾರೆ.

ಪ್ರಸ್ತುತ ಇದಕ್ಕೆ ಕನ್ನಡದ ನಿರ್ದೇಶಕರು ಮಾತ್ರವಲ್ಲದೆ ತೆಲುಗಿನ ತರುಣ್‌ ಭಾಸ್ಕರ್‌, ನಂದಿನಿ ರೆಡ್ಡಿ, ತಮಿಳಿನ ವಸಂತ ಬಾಲನ್‌ ಹಾಗೂ ಮಲಯಾಳದ ಲಿಜೊ ಸೇರಿದಂತೆ ಹಲವರು ಸಹ  ‘FUC’ ಸೇರಿದ್ದಾರೆ.


ಇದನ್ನೂ ಓದಿ: ’ಜಾಫರ್ ಪನಾಹಿ’ ಸಿನಿಮಾ ಜಗತ್ತಿನ ಬಂಡುಕೋರ: ಕೀಲಾರ ಟೆಂಟ್ ಹೌಸ್-5

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...