Homeಮುಖಪುಟಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ಲಾಕ್‌ಡೌನ್ ಅವದಿಯಲ್ಲಿ ವಿಶ್ವವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವಾಗ, ಮುಖೇಶ್ ಅಂಬಾನಿಯವರ ಸಂಪತ್ತು ಮಾತ್ರ ಗಣನೀಯವಾಗಿ ಏರಿಕೆಯಾಗಿದ್ದು, ಈ ಪಟ್ಟಿಯಲ್ಲಿ ತಮ್ಮ ಮುಂದಿನ 'ಐದು ಜನ ಶತಕೋಟ್ಯಾಧಿಪತಿಗಳ ಒಟ್ಟು ಸಂಪತ್ತಿ'ಗಿಂತ ಅಂಬಾನಿಯವರ ಸಂಪತ್ತು ಹೆಚ್ಚಾಗಿದೆ.

- Advertisement -
- Advertisement -

IIFL ವೆಲ್ತ್ ಹುರುನ್ ಇಂಡಿಯಾ ರಿಚ್ ಲಿಸ್ಟ್ 2020ರ ವರದಿಯ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಮುಖೇಶ್ ಅಂಬಾನಿ, ಕಳೆದ 6 ತಿಂಗಳ ಲಾಕ್‌ಡೌನ್ ಅವಧಿಯಲ್ಲಿ ಗಂಟೆಗೆ 90 ಕೋಟಿಯಂತೆ ಆದಾಯ ಗಳಿಸಿದ್ದು, ಪ್ರಸ್ತುತ ಒಟ್ಟು 6 ಲಕ್ಷದ 58 ಸಾವಿರದ 400 ಕೋಟಿ ಸಂಪತ್ತನ್ನು ಹೊಂದಿದ್ದಾರೆ.

ಲಾಕ್‌ಡೌನ್ ಅವದಿಯಲ್ಲಿ ವಿಶ್ವವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವಾಗ, ಮುಖೇಶ್ ಅಂಬಾನಿಯವರ ಸಂಪತ್ತು ಮಾತ್ರ ಗಣನೀಯವಾಗಿ ಏರಿಕೆಯಾಗಿದ್ದು, ಈ ಪಟ್ಟಿಯಲ್ಲಿ ತಮ್ಮ ಮುಂದಿನ ಐದು ಜನ ಶತಕೋಟ್ಯಾಧಿಪತಿಗಳ ಒಟ್ಟು ಸಂಪತ್ತಿಗಿಂತ ಅಂಬಾನಿಯವರ ಸಂಪತ್ತು ಹೆಚ್ಚಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ಮುಖೇಶ್ ಅಂಬಾನಿ ಕಳೆದ 9 ನೇ ವರ್ಷದಿಂದಲೂ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಮೊದಲ ಸ್ಥಾನವನ್ನು ಉಳಿಸಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಅಂಬಾನಿ ವಿಶ್ವದ ಐದನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಇದನ್ನೂ ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ಆರ್‌ಐಎಲ್ ಭಾರತದಲ್ಲಿ ಲಾಕ್‌ಡೌನ್ ಹೊರತಾಗಿಯೂ 13,248 ಕೋಟಿ ರೂ. ಆದಾಯ ಗಳಿಸಿದ್ದಾರೆ.

“ಕೊರೊನಾ ಸಾಂಕ್ರಾಮಿಕದ ಆರಂಭದಲ್ಲಿ, ಅಂಬಾನಿಯ ಸಂಪತ್ತು 28% ನಷ್ಟು ಇಳಿದು 3,50,000 ಕೋಟಿ ರೂ.ಗಳಿಗೆ ತಲುಪಿತ್ತು. ನಂತರ ಫೇಸ್‌ಬುಕ್, ಗೂಗಲ್ ಮತ್ತು ಇತರ ಜಿಯೋ ಮತ್ತು ರಿಲಯನ್ಸ್ ರಿಟೇಲ್‌ನಿಂದ ಧನಸಹಾಯ ಮತ್ತು ಕಾರ್ಯತಂತ್ರದ ಹೂಡಿಕೆಯ ಬೆಂಬಲದೊಂದಿಗೆ ‘ವಿ-ಆಕಾರದ ಚೇತರಿಕೆ’ ಕಂಡುಬಂದು, 4 ತಿಂಗಳಲ್ಲಿ 85% ಸಂಪತ್ತು ಹೆಚ್ಚಾಗಿದೆ” ಎಂದು ವರದಿ ತಿಳಿಸಿದೆ.

88.3 ಬಿಲಿಯನ್ ಡಾಲರ್ ನಿವ್ವಳ ಆಸ್ತಿಯನ್ನು ಹೊಂದಿರುವ ಅಂಬಾನಿ ಕುಟುಂಬವು ಏಷ್ಯಾದ ಅತ್ಯಂತ ಶ್ರೀಮಂತ ಕುಟುಂಬವಾಗಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ದೇಶದ ಜಿಡಿಪಿ ಕುಸಿದು, ಇತ್ತೀಚಿನ ವರ್ತಮಾನದ ಪ್ರಕಾರ ಅದು ಶೇ. -23ರಷ್ಟು ಕುಸಿದಿತ್ತು. ನಿರುದ್ಯೋಗ ದಾಖಲೆ ಪ್ರಮಾಣದಲ್ಲಿ ಏರಿತ್ತು. ಕೃಷಿಯೊಂದನ್ನು ಹೊರತುಪಡಿಸಿದರೆ ಉತ್ಪಾದನೆ, ಸೇವಾ ವಲಯ, ನಿರ್ಮಾಣ ವಲಯ ಸೇರಿದಂತೆ ಮಿಕ್ಕೆಲ್ಲಾ ಕ್ಷೇತ್ರಗಳು ತೀವ್ರ ಸಂಕಷ್ಟ ಅನುಭವಿಸಿದ್ದವು. ಹೀಗಿದ್ದಾಗ ಅಂಬಾನಿ ಆಸ್ತಿ ಮತ್ತು ಸಂಪಾದನೆ ಮಾತ್ರ ಏರಿದ್ದು ಹೇಗೆ ಎಂಬುದು ಮಹತ್ವದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಯೆಸ್‌ ಬ್ಯಾಂಕ್‌ ಬಿಕ್ಕಟ್ಟು: ರಿಲಾಯನ್ಸ್‌ ಮುಖ್ಯಸ್ಥ ಅನಿಲ್‌ ಅಂಬಾನಿಗೆ ಸಮನ್ಸ್‌..!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....