Homeಮುಖಪುಟ‘ಮುಖ್ ಮೇ ರಾಮ್, ಬಗಲ್ ಮೇ ಚೂರಿ…’; ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

‘ಮುಖ್ ಮೇ ರಾಮ್, ಬಗಲ್ ಮೇ ಚೂರಿ…’; ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

- Advertisement -
- Advertisement -

ಮಣಿಪುರದಲ್ಲಿ ಇಂದು ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ಚಾಲನೆ ನೀಡುವ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಮಣಿಪುರಕ್ಕೆ ಮತ ಕೇಳಲು ಬರುತ್ತಾರೆ .ಆದರೆ, ರಾಜ್ಯದ ಜನತೆ ಸಂಕಷ್ಟದಲ್ಲಿದ್ದಾಗ ಮುಖ ತೋರಿಸುವುದಿಲ್ಲ’ ಎಂದು ವಾಗ್ದಾಳಿ ನಡೆಸಿದರು.

‘ವೋ ಸಮಂದರ್ ಕೆ ಉಪರ್ ಸೈರ್ ಕರ್ತಾ ಫಿರ್ತಾ ಹೈ ಔರ್ ಬೈತೆ ಜಗಹ್ ಜಪ್ ಕರ್ತೆ ರೆಹತೇ ಹೇ ರಾಮ್ ರಾಮ್ (ಅವರು ಸಮುದ್ರದ ಮೇಲಿನ ಸೇತುವೆಯ ಮೇಲೆ ಪ್ರವಾಸ ಮಾಡುತ್ತಿರುವುದನ್ನು ಕಾಣಬಹುದು ಅಥವಾ ರಾಮ್ ರಾಮ್ ಎಂದು ಜಪಿಸುತ್ತಿರುವುದು ಕಂಡುಬರುತ್ತದೆ)’ ಎಂದು ಖರ್ಗೆ ಹೇಳಿದರು.

‘ಮುಖ್ ಮೇ ರಾಮ್, ಬಗಲ್ ಮೇ ಚೂರಿ, ಜನರೊಂದಿಗೆ ಹೀಗೆ ಮಾಡಬೇಡಿ… ಎಲ್ಲರಿಗೂ ದೇವರಲ್ಲಿ ನಂಬಿಕೆ ಇದೆ. ಆದರೆ ಮತಕ್ಕಾಗಿ ಇದನ್ನು ಮಾಡಬೇಡಿ… ಬಿಜೆಪಿಗರು ಜನರನ್ನು ಪ್ರಚೋದಿಸಲು ಧರ್ಮವನ್ನು ಬಳಸುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.

‘ಬಿಜೆಪಿ ಧರ್ಮವನ್ನು ರಾಜಕೀಯದೊಂದಿಗೆ ಬೆರೆಸುತ್ತದೆ, ಜನರನ್ನು ಪ್ರಚೋದಿಸುತ್ತದೆ; ನಾವು ಜಾತ್ಯತೀತತೆ, ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತೇವೆ’ ಎಂದು ಖರ್ಗೆ ಹೇಳಿದರು.

‘ಜವಾಹರಲಾಲ್ ನೆಹರು ಅವರು ಮಣಿಪುರಕ್ಕೆ ಮೊದಲು ಭೇಟಿ ನೀಡಿದಾಗ, ಅವರು ಅದನ್ನು ಭಾರತದ ರತ್ನ ಎಂದು ಬಣ್ಣಿಸಿದರು. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಕೂಡ ಅದನ್ನೇ ಹೇಳಿದ್ದರು. ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಮತ್ತು ದೇಶದಲ್ಲಿ ಫ್ಯಾಸಿಸ್ಟ್ ಶಕ್ತಿಗಳನ್ನು ನಿಲ್ಲಿಸಲು ಕಾಂಗ್ರೆಸ್ ಯಾತ್ರೆ ಕೈಗೊಂಡಿದೆ’ ಎಂದು ಖರ್ಗೆ ಹೇಳಿದರು.

‘ಯಾತ್ರೆಯು ಜನರಿಗೆ ಉದ್ಯೋಗವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ; ಬೆಲೆ ಏರಿಕೆ ವಿರುದ್ಧವಾಗಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡ ಭಾರತ್ ಜೋಡೋ ಯಾತ್ರೆಯ ಭಾಗವಾಗಿದೆ. ಭಾನುವಾರ ಮಣಿಪುರದ ತೌಬಲ್‌ನಲ್ಲಿ ಕಾಂಗ್ರೆಸ್‌ನಿಂದ ಯಾತ್ರೆಗೆ ಚಾಲನೆ ನೀಡಲಾಯಿತು.

ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಕಳೆದ ವರ್ಷದಂತೆ ನಾನು ಈ (ಭಾರತ್ ಜೋಡೋ ನ್ಯಾಯ್) ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡಲು ಬಯಸಿದ್ದೆ. ಆದರೆ, ಮುಂಬರುವ (ಲೋಕಸಭಾ) ಚುನಾವಣೆಯನ್ನು ಪರಿಗಣಿಸಿ, ಕಾಲ್ನಡಿಗೆಯಲ್ಲಿ ನಡೆಯುವುದಕ್ಕೆ ಹೆಚ್ಚಿನ ಸಮಯ ಅಗತ್ಯವಾಗಿತ್ತು. ಆದ್ದರಿಂದ, ಕಾಂಗ್ರೆಸ್ ಪಕ್ಷವು ಈ ಯಾತ್ರೆಯನ್ನು ಹೈಬ್ರಿಡ್ ಮೋಡ್‌ನಲ್ಲಿ ಮಾಡಲು ನಿರ್ಧರಿಸಿದೆ’ ಎಂದರು.

ಇದನ್ನೂ ಓದಿ; ಮಣಿಪುರದ ತೌಬಲ್ ಜಿಲ್ಲೆಯಿಂದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...