Homeಮುಖಪುಟಇದು ನಮ್ಮೆಲ್ಲರ ಭಾರತವಲ್ಲ, ಬದಲಿಗೆ ಅಂಬಾನಿಯ ಭಾರತವಷ್ಟೆ

ಇದು ನಮ್ಮೆಲ್ಲರ ಭಾರತವಲ್ಲ, ಬದಲಿಗೆ ಅಂಬಾನಿಯ ಭಾರತವಷ್ಟೆ

- Advertisement -
- Advertisement -

ಆತನ ಹೆಸರು ಕುನಾಲ್ ಕಮ್ರ. ಭಾರತದ ಹೆಸರಾಂತ ಸ್ಟ್ಯಾಂಡಪ್ ಕಾಮಿಡಿಯನ್. ಜನರ ಪರ ಮಿಡಿಯುವ ಆತನ ಮನಸ್ಸು ಸಹಜವಾಗಿಯೇ ಮೋದಿ ಆಡಳಿತದ ವಿರುದ್ಧ. ಈತ ತನ್ನ ಒಂದು ಶೋನಲ್ಲಿ ‘ಅಲ್ಲ ನಾವು ನೇರವಾಗಿ ಅಂಬಾನಿಗೆ ಯಾಕ್ ಓಟ್ ಹಾಕೋಕೆ ಆಗೋಲ್ಲ. ಮಧ್ಯದಲ್ಲಿ ಈ ಮೋದಿ ಯಾಕೆ? ನೇರವಾಗಿ ಅಂಬಾನಿಯೇ ಪ್ರಧಾನಮಂತ್ರಿ ಆಗಬಹುದಲ್ಲ?’ ಎಂದು ಪ್ರಶ್ನೆ ಮಾಡುತ್ತಾನೆ. ಇದು ಕಾಮಿಡಿ ಶೋ ಆದರೂ ಆತ ಹೇಳಿದ ಆ ಮಾತು ಮಾತ್ರ ಅಕ್ಷರಶಃ ಸತ್ಯ. ಇಂದು ಈ ನಮ್ಮ ದೇಶವನ್ನಾಳುತ್ತಿರುವುದು ಹೆಸರಿಗೆ ಮಾತ್ರ ಮೋದಿ, ಮನಮೋಹನ್ ಸಿಂಗ್ ಆದರೂ ನಿಜವಾಗಿಯೂ ಆಳುತ್ತಿರುವುದು ಮತ್ತು ಬೃಹತ್ ಮಟ್ಟದಲ್ಲಿ ಕೊಳ್ಳೆ ಹೊಡೆಯುತ್ತಿರುವುದು ಅಂಬಾನಿ, ಅದಾನಿ, ಟಾಟಾ ಥರದ ಬೆರಳೆಣಿಕೆಯ ಕ್ರೋನಿ ಬಂಡವಾಳಿಗರು ಎಂಬುದರಲ್ಲಿ ಯಾವುದೇ ಸಂದೇಹವೇ ಇಲ್ಲ. ಬನ್ನಿ ಇದರ ಸತ್ಯಾಸತ್ಯತೆ ಬಗ್ಗೆ ವಿಚಾರ ಮಾಡೋಣ.

ಬಡವನಾಗಿ ಹುಟ್ಟುವುದು ನಿಮ್ಮ ತಪ್ಪಲ್ಲ, ಆದರೆ ಬಡವನಾಗಿ ಸಾಯುವುದು ನಿಮ್ಮ ತಪ್ಪು ಎಂಬ ಹೇಳಿಕೆಗಳ ಮೂಲಕ ಯಾವುದೇ ಮಾರ್ಗವಾದರೂ ಸರಿ ಹಣ ಸಂಪಾದಿಸಿ ಎಂಬ ಕಡುಬಡತನದಿಂದ ಸಿರಿವಂತರಾದವರ ಕಥೆಗಳಲ್ಲಿ ಅಂಬಾನಿಯ ಕಥೆಯೂ ಒಂದಿದೆ. ಈ ದೇಶದಲ್ಲಿ ಭ್ರಷ್ಟಾಚಾರ ಇಲ್ಲದಿದ್ದರೆ ಏನಾಗುತ್ತಿತ್ತು? ಎಂಬ ಪ್ರಶ್ನೆಯನ್ನು ಪತ್ರಕರ್ತರೊಬ್ಬರು 1990ರ ದಶಕದಲ್ಲಿ ಧೀರೂಬಾಯಿ ಅಂಬಾನಿ ಎಂಬ ದೊಡ್ಡ ಉದ್ಯಮಿಗೆ ಕೇಳುತ್ತಾರೆ. ಆಗ ಆತ ‘ಭ್ರಷ್ಟಾಚಾರ ಇಲ್ಲದಿದ್ದರೆ ಈ ಧೀರೂಬಾಯಿ ಅಂಬಾನಿ ಇನ್ನೂ ಕೂಡ ಪೆಟ್ರೋಲ್ ಬಂಕ್‍ನಲ್ಲಿ ಪೆಟ್ರೋಲ್ ಹಾಕುವ ಕೆಲಸ ಮಾಡಿಕೊಂಡು ಇರಬೇಕಿತ್ತು ಅಷ್ಟೇ’ ಎನ್ನುತ್ತಾನೆ. ಅಂದರೆ ಅಷ್ಟರ ಮಟ್ಟಿಗೆ ಆತ ನೇರವಾಗಿ ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡು ಅದರಿಂದಲೇ ನಾನಿಂದು ದೊಡ್ಡ ಉದ್ಯಮಿಯಾಗಿದ್ದೇನೆಂದು ಹೇಳಿದರೂ ಕೂಡ ಬಹುತೇಕ ಮಾಧ್ಯಮಗಳು ಆತನಿಗೆ ಬಹಪರಾಕ್ ಹೇಳಿ, ಆತನನ್ನು ನಮ್ಮೆಲ್ಲರ ಉದ್ದಾರಕನೆಂಬಂತೆ ಬಿಂಬಿಸಿ ಹೊಗಳಿ ಅಟ್ಟಕೇರಿಸುತ್ತಿವೆ. ಆ ಕಡು ಭ್ರಷ್ಟಾಚಾರಿಯ ಮಕ್ಕಳೇ ಇಂದು ಹೆಚ್ಚು ಸುದ್ದಿಯಲ್ಲಿರುವ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ.

 

ಸಾವಿರಾರು ಜನರ ಷೇರುಗಳ ಆಧಾರದಲ್ಲಿ ಧೀರೂಬಾಯಿ ಅಂಬಾನಿ 1977ರಲ್ಲಿ ಕಟ್ಟಿದ ವಾಣಿಜ್ಯ ಕಂಪನಿಯ ಹೆಸರೇ ರಿಲಯನ್ಸ್ ಇಂಡಸ್ಟ್ರೀಸ್. ಷೇರುಗಳು, ಮೊಬೈಲ್, ಸಿಮ್, ಟಿವಿಯಿಂದ ಆರಂಭವಾಗಿ ಕೊತ್ತಂಬರಿ ಸೊಪ್ಪು, ಮೀನು ಮಾಂಸದವರೆಗೂ ಸಾವಿರಾರು ವಸ್ತುಗಳನ್ನು ಮಾರಟ ಮಾಡುವಷ್ಟರ ಮಟ್ಟಿಗೆ ಈ ಕಂಪನಿ ಬೆಳೆದು ನಿಂತಿದೆ. ಅಪರಿಮಿತ ಭ್ರಷ್ಟಾಚಾರ, ಆಳುವವರೊಂದಿಗಿನ ಅಪವಿತ್ರ ಮೈತ್ರಿ, ಸ್ವಜನ ಪಕ್ಷಪಾತತನದಿಂದ ಹೆಚ್ಚು ಲಾಭ ಗಳಿಸಿ ಬೆಳೆದ ಕಂಪನಿ 2002ರಲ್ಲಿ ಧೀರೂಭಾಯಿ ಅಂಬಾನಿಯ ಮರಣದ ನಂತರ ಅವರ ಮಕ್ಕಳಿಬ್ಬರ ನಡುವೆ ಪಾಲಾಯಿತು. ರಿಲಯನ್ಸ್ ಇಂಡಸ್ಟ್ರಿಸ್, ಪೆಟ್ರೋಲಿಯಂ ಮುಖೇಶ್ ಪಾಲಿಗೆ ಬಂದರೆ, ರಿಲಯನ್ಸ್ ಕಮ್ಯುನಿಕೇಶನ್ಸ್, ಟೆಲಿಕಾಂ ಅನಿಲ್ ಪಾಲಾಯಿತು. ಇನ್ನು ನೀನಾ ಕೊಥಾರಿ ಮತ್ತು ದೀಪ್ತಿ ಸಾಲ್ಗೋಂಕರ್ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರೂ ಸಹ ಯಥಾ ಭಾರತೀಯರಂತೆ ಅವರಿಗೇನೂ ಆಸ್ತಿಯಲ್ಲಿ ಪಾಲು ದಕ್ಕಲಿಲ್ಲ ಅಷ್ಟೆ.

ಧೀರೂಭಾಯಿ ಅಂಬಾನಿ ಸಾಮಾನ್ಯ ಮನುಷ್ಯನಾಗಿದ್ದವನು ತಾನು ಸಾಯುವ 2002ರ ವೇಳೆಗೆ 6.1 ಬಿಲಿಯನ್ ಡಾಲರ್ (ಆಗಲೇ ಸುಮಾರು 60ಸಾವಿರ ಕೋಟಿ ರುಪಾಯಿಗಳು) ಆಸ್ತಿಯ ಒಡೆಯನಾಗಿದ್ದನು. ಇದು ಹೇಗೆ ಸಾಧ್ಯ ಎಂದು ಅನುಮಾನ ಬಂದರೆ ಗೂಗಲ್‍ನಲ್ಲಿ ಧೀರೂಭಾಯಿ ಅಂಬಾನಿ ಬಗೆಗಿನ ಟೀಕೆಗಳು ಎಂದು ಟೈಪ್ ಮಾಡಿ ನೊಡಿ ಸಾಕು. ಭ್ರಷ್ಟ ವ್ಯಾವಹಾರಿಕ ನಡವಳಿಕೆಗಳು, ತನ್ನ ಅಗತ್ಯಗಳಿಗಾಗಿ ಸರ್ಕಾರಿ ನೀತಿಗಳ ತಿರುಚುವಿಕೆ, ದಬ್ಬಾಳಿಕೆ ವರ್ತನೆ, ಚುನಾವಣೆಗಳಲ್ಲಿ ರಾಜಕೀಯ ಪ್ರಭಾವ ಬೀರುವುದು, ತನ್ನ ಪರವಾಗಿ ಮಾಧ್ಯಮಗಳಿಂದ ರಕ್ಷಣೆ ಮುಂತಾದ ಕ್ರಮಗಳಿಂದಲೇ ಮತ್ತು ತಾನೇ ಒಪ್ಪಿಕೊಂಡಂತೆ ಪರಮ ಭ್ರಷ್ಟಾಚಾರದ ಕಾರಣಕ್ಕಾಗಿ ಅವರು ಅಷ್ಟು ದೊಡ್ಡ ಮಟ್ಟದ ಆಸ್ತಿ ಮಾಡಲು ಸಾಧ್ಯವಾಯಿತು.

ಒಬ್ಬರನ್ನು ಮುಗಿಸಿ ಮತ್ತೊಬ್ಬರು ಏಕಾಧಿಪತ್ಯ ಸಾಧಿಸುವುದೇ ಬಂಡವಾಳಶಾಹಿ ವ್ಯವಸ್ಥೆ ಇರುವ್ಯದರಿಂದಲೇ ಆಗ ಧೀರೂಭಾಯಿ ತನ್ನ ಪ್ರತಿಸ್ಪರ್ಧಿ ನುಸ್ಲಿ ವಾಡಿಯಾರೊಂದಿಗೆ ಹಣಾಹಣಿ ನಡೆಸಿದ್ದರು. ಆನಂತರ ಇಂಡಿಯನ್ ಎಕ್ಸ್‍ಪ್ರೆಸ್‍ನ ಪ್ರಕಾಶಕ ರಾಮನಾಥ್ ಗೋಯೆಂಕಾ ನಡುವೆಯೂ ಗುದ್ದಾಟ ನಡೆದಿತ್ತು. ಇದರ ಕುರಿತ ಹೇರಳ ದಾಖಲೆಗಳು ಇತಿಹಾಸದಲ್ಲಿ ಸಿಕ್ಕಿದರೂ, ಈಗ ಅವರ ಮಕ್ಕಳು ಅದರ ಹತ್ತು ಪಟ್ಟು ಅಂದರೆ ಸುಮಾರ 6 ಲಕ್ಷಕೋಟಿ ರೂಗಳಷ್ಟು ಆಸ್ತಿಯ ಒಡೆಯರಾಗಿದ್ದಾರೆ. ಹಾಗಾಗಿ ಗತಿಸಿಹೋದವನ ಹಗರಣಗಳಿಗಿಂತ ಪ್ರಸ್ತುತ ಲೂಟಿಕೋರರ ಬಗೆಗೆ ಹೆಚ್ಚು ಚರ್ಚಿಸುವುದು ಒಳಿತು.

ಭಾರತದ ಅತಿದೊಡ್ಡ ಲೂಟಿಕೋರ ಅಂಬಾನಿ ಮಕ್ಕಳು

ತನ್ನ ತಂದೆಯ ಹಾದಿಯಲ್ಲಿ ಮತ್ತಷ್ಟು ಮುನ್ನಡೆದ ಮಕ್ಕಳು ಸಾಮ್ರಾಜ್ಯ ವಿಸ್ತರಣೆಗೆ ಹಲವು ಬಗೆಯ ಭ್ರಷ್ಟ ದಾರಿಗಳನ್ನು ಹಿಡಿದರು. ನೋಡುನೋಡುತ್ತಲೇ ಮುಖೇಶ್ ಅಂಬಾನಿ ದೇಶದ ನಂ.1 ಶ್ರೀಮಂತನಾಗಿ ಬೆಳೆದ. ಮೊದಮೊದಲು ಮೊದಲ 20 ಶ್ರೀಮಂತರ ಪಟ್ಟಿಯಲ್ಲಿರುತ್ತಿದ್ದ ಅಣ್ಣನಿಂದ ಪೂರ್ಣವಾಗಿ ದೂರ ಸರಿದ ಅನಿಲ್ ಅಂಬಾನಿ, ನಿಧಾನಕ್ಕೆ ಕೆಳಗಿಳಿದಿದ್ದಾನೆ. ಆ ರೀತಿ ದೂರ ಸರಿಯಲು ಕಾರಣವಾದ ಒಂದು ಮುಖ್ಯವಾದ ಸಂಗತಿಯನ್ನು ನೋಡೋಣ.

ಭಾರತದ ಕೃಷ್ಣ ಗೋದಾವರಿ ನದಿ ಪಾತ್ರದಲ್ಲಿರುವ ಹೇರಳವಾದ ನೈಸರ್ಗಿಕ ಮತ್ತು ತೈಲೋತ್ಪನ್ನ ಸಂಪನ್ಮೂಲಗಳ ಮೇಲೆ ಈ ಅಂಬಾನಿ ಸಹೋದರರ ಕಣ್ಣು ಬಿದ್ದಿತು. ನೆಹರೂರವರು ಪ್ರಧಾನಿಯಾಗಿದ್ದಾದ ಸ್ಥಾಪಿಸಿದ್ದ ಸರ್ಕಾರಿ ಸ್ವಾಮ್ಯದ ಒಎನ್‍ಜಿಸಿ ಅಲ್ಲಿ ತೈಲ ಮತ್ತು ಅನಿಲ ಸಂಪನ್ಮೂಲಗಳನ್ನು ಹೊರತೆಗೆದು ಸಂಸ್ಕರಣೆ ಮತ್ತು ಮಾರಾಟದ ಕಾರ್ಯನಿರ್ವಹಿಸುವ ಮೂಲಕ ಅಪಾರ ಲಾಭದ ಉದ್ದಿಮೆಯಾಗಿತ್ತು. ಅಲ್ಲಿ 2006-07 ರಿಂದ ನೆಲಬಗೆದು ಲೂಟಿ ಹೊಡೆಯಲು ಆರಂಭಿಸಿತು ಮುಖೇಶ್ ಅಂಬಾನಿ ನೇತೃತ್ವದ ರಿಲೆಯನ್ಸ್. ಅಲ್ಲಿನ ತೈಲಸಂಸ್ಕರಣಗೆ ನನಗೆ ಅವಕಾಶಕೊಡಬೇಕೆಂದು ತಮ್ಮ ಅನಿಲ್ ಅಂಬಾನಿ ತಗಾದೆ ತೆಗೆದನು. ಅಣ್ಣ ತಮ್ಮಂದಿರಿಬ್ಬರ ನಡುವೆ ಜಗಳ ಅಲ್ಲಿಂದ ಆರಂಭವಾದ ಜಗಳ ಯಾವ ಮಟ್ಟ ಹೋಯಿತೆಂದರೆ ಅದನ್ನು ಬಗೆಹರಿಸಲು ಲಾಲ್ ಕೃಷ್ಣ ಅಡ್ವಾಣಿ ಥರದವರು ಮಧ್ಯಸ್ಥಿಕೆ ವಹಿಸಬೇಕಾಗಿ ಬಂದಿತ್ತು. ಅಂದರೆ ಈ ದೇಶದ ಸಮಸ್ತ ಜನರಿಗೂ ಹಕ್ಕಿರುವ ಕೃಷ್ಣ ಗೋದಾವರಿ ನದಿಪಾತ್ರದಲ್ಲಿ ತೈಲ ಲೂಟಿ ಹೊಡೆಯಲು ‘ಅವರಪ್ಪನ ಮನೆ ಆಸ್ತಿ’ ಎಂಬಂತೆ ಅಂಬಾನಿ ಸಹೋದರರಿಬ್ಬರು ಮುಗಿಬಿದ್ದರು.

ಕೊನೆಗೆ ಅದನ್ನು ತನ್ನ ವಶಕ್ಕೆ ಪಡೆಯಲು ಯಶಸ್ವಿಯಾದ ಮುಖೇಶ್ ಅಂಬಾನಿ ಈ ದೇಶದ ಕಾನೂನಗಳನ್ನೆಲ್ಲಾ ಗಾಳಿಗೆ ತೂರಿ ಮನಸ್ಸಿಗೆ ಬಂದ ಹಾಗೆ ತೈಲ ಲೂಟಿ ಹೊಡೆಯಲು ಮುಂದಾದ. ಪೆಟ್ರೋಲಿಯಂ ಖಾತೆಯ ಜಂಟಿ ಕಾರ್ಯದರ್ಶಿಯಾಗಿದ್ದ ನಜೀಬ್ ಜಂಗ್‍ರವರು ಸರ್ಕಾರದ ಪರವಾಗಿ ಅಂಬಾನಿಯ ರಿಲೆಯನ್ಸ್‍ನೊಂದಿಗಿನ ಒಪ್ಪಂದಕ್ಕೆ ಸಹಿ ಹಾಕಿದರು. ಅದಾದ ಕೆಲವೇ ದಿನಗಳಲ್ಲಿ ಅವರು ತಮ್ಮ ಹುದ್ದೆಯಿಂದ ಸ್ವಯಂ ನಿವೃತ್ತಿ ಹೊಂದಿ, ಅದೇ ರಿಲೆಯನ್ಸ್ ಸೇರಿದರು ಎಂದರೆ ಅಂಬಾನಿಯ ಕುಟಿಲತೆ ಎಷ್ಟಿರಬೇಡ ನೀವೇ ಹೇಳಿ? ಲಕ್ಷಾಂತರ ಕೋಟಿ ಬೆಲೆ ಬಾಳುವ ಅಲ್ಲಿನ ಕಚ್ಛಾ ತೈಲ ಸಂಪತ್ತನ್ನು ಸರ್ಕಾರಿ ಸ್ವಾಮ್ಯದ ಒಎನ್‍ಜಿಸಿಗೆ ಕೊಡುವುದು ಬಿಟ್ಟು ಆಗಿನ ಯುಪಿಎ ಸರ್ಕಾರ ಮುಖೇಶ್ ಅಂಬಾನಿಗೆ ಬಿಡಿಗಾಸಿಗೆ ಹರಾಜು ಹಾಕಿತ್ತು.

ಈ ಕಳ್ಳ ತನ್ನ ಪಾಲಿನ ಜಾಗದಲ್ಲಿ ತೈಲ ಹೊರತೆಗೆಯುವುದಲ್ಲದೇ ಒಎನ್‍ಜಿಸಿಯ ಕೊಳವೆಗಳಿಗೂ ಕನ್ನ ಹಾಕಿ ಲಕ್ಷಾಂತರ ಕೋಟಿ ಬೆಲೆ ಬಾಳುವ ತೈಲವನ್ನು ಕದ್ದುಬಿಟ್ಟಿದ್ದನ್ನು. ಅದಕ್ಕೆ ವಿರೊಧ ವ್ಯಕ್ತಪಡಿಸಿದ ಕಾರಣಕ್ಕಾಗಿ ಆಗಿನ ಸರ್ಕಾರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವರಾಗಿದ್ದ ಮಣಿಶಂಕರ್ ಅಯ್ಯರ್ ರನ್ನು ಬದಲಿಸಿ ಮುರಳಿ ದೇವ್ರಗೆ ಕೊಡಲಾಯಿತು. ಅದೂ ಸಾಲದೆಂಬಂತೆ ವೀರಪ್ಪ ಮೋಯ್ಲಿಯನ್ನು ತರಲಾಯಿತು. ಅರಣ್ಯ ಮತ್ತು ಪರಿಸರ ಸಚಿವರಾಗಿದ್ದ ಜೈರಾಂ ರಮೇಶ್ ಮತ್ತು ಜೈಪಾಲ್ ರೆಡ್ಡಿಯವರು ಅಂಬಾನಿ ಲೂಟಿಯನ್ನು ಸುತಾರಂ ಒಪ್ಪಲಿಲ್ಲ ಮಾತ್ರವಲ್ಲ ಅಂಬಾನಿಯ ಅವ್ಯವಹಾರಗಳಿಗೆ ಕಡಿವಾಣ ಹಾಕಲು ಬಯಸಿದರು. ಆದರೆ ಈ ಅಂಬಾನಿ ಎಷ್ಟು ಪ್ರಭಾವಿಯಾಗಿದ್ದ ಎಂದರೆ ಅವರೆಲ್ಲರನ್ನು ಕೆಳಗಿಳಿಸಿ, ಇಂಧನ ಸಚಿವ ವೀರಪ್ಪ ಮೋಯ್ಲಿಯನ್ನೆ ಅರಣ್ಯ ಖಾತೆಗೂ ಸಚಿವರನ್ನಾಗಿಸಿ  ತನ್ನೆಲ್ಲಾ ಅವ್ಯವಹಾರಗಳನ್ನು ಕಾನೂನುಬದ್ಧಗೊಳಿಸಿಕೊಂಡ.

ಇಷ್ಟೆಲ್ಲಾ ಅನ್ಯಾಯಗಳನ್ನು ವಿರೋಧಿಸಿ ದೆಹಲಿಯಲ್ಲಿ ಆಮ್ ಆದ್ಮ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ ಪರಿಣಾಮ ಮುಖೇಶ್ ಅಂಬಾನಿ ಮತ್ತು ವೀರಪ್ಪ ಮೋಯ್ಲಿ ಮೇಲೆ ಎಫ್‍ಐಆರ್ ದಾಖಲಾಯಿತು. ಅರವಿಂದ್ ಕೇಜ್ರಿವಾಲ್ ನೇರವಾಗಿ ಅಂಬಾನಿಯನ್ನು ಎದರುಗೊಂಡ ಕಾರಣ ಬಹಳಷ್ಟು ಜನ ಕೇಜ್ರಿವಾಲ್ ಬೆಂಬಲಕ್ಕೆ ನಿಂತರು. ಆದರೆ ಚೌಕಿದಾರೆನೆಂದು ಕರೆದುಕೊಳ್ಳುವ ಮೋದಿ ಕೃಷ್ಣ ಗೋದಾವರಿ ಬೇಸಿನ್‍ನ ವಿಚಾರಣೆಗಳಿಗೂ ದೆಹಲಿಗೂ ಸಂಬಂಧವಿಲ್ಲವೆಂದು ಸಂಸತ್ತಿನಲ್ಲಿ ತಿದ್ದುಪಡಿ ತಂದರು. ಇದು ಮುಂದಕ್ಕೂ ಅನ್ವಯಿಸುತ್ತದೆ ಮತ್ತು ಹಿಂದಿನ ವರ್ಷಗಳಿಗೂ ಅನ್ವಯಿಸುತ್ತದೆ ಎಂದುಬಿಟ್ಟರು. ಅಂಬಾನಿ ಸೇಫ್ ಆದ, ನಾವು ಪೆಟ್ರೋಲ್ ಡೀಸೆಲ್ ಗ್ಯಾಸ್‍ಗಾಗಿ ಅತಿ ಹೆಚ್ಚಿನ ತೆರಿಗೆ ಕಟ್ಟುವ ದುಸ್ಥಿತಿ ಬಂತು.

2014ರ ಲೋಕಸಭಾ ಚುನಾವಣೆಗೂ ಮುನ್ನ ಎಲೆಕ್ಷನ್ ಪ್ರಚಾರಕ್ಕಾಗಿ 35ಸಾವಿರ ಕೋಟಿ ರೂಗಳನ್ನು ಮುಖೇಶ್ ಅಂಬಾನಿ ಮೋದಿ ಜೇಬಿಗಿಟ್ಟ ಕಾರಣಕ್ಕಾಗಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲಂತೂ ಅಂಬಾನಿ ಅದೃಷ್ಟ ಎರಡು ಪಟ್ಟು ಹೆಚ್ಚಾಯಿತು. 2013ರಲ್ಲಿ ತನ್ನ ಬ್ಲಾಕ್‍ಗಳಿಂದ ತೈಲ ಮತ್ತು ಅನಿಲ್ ಕಳ್ಳತನ ಮಾಡಿದ್ದಕ್ಕಾಗಿ ಒಎನ್‍ಜಿಸಿಯು ಅಂಬಾನಿ ರಿಲೆಯನ್ಸ್ ವಿರುದ್ಧ ದೆಹಲಿ ಹೈಕೋರ್ಟ್‍ನಲ್ಲಿ ದಾವೆ ಹೂಡಿತ್ತು. ಡಿ ಅಂಡ್ ಎಂ ಕನ್ಸಲ್ಟಿಂಗ್ ಕಂಪನಿಯ ವರದಿ ಆಧಾರದಲ್ಲಿ ಎ.ಪಿ ಶಾ ಸಮಿತಿಯು ತೈಲ ಮತ್ತು ಅನಿಲ ಕಳ್ಳತನವಾಗಿದೆ ಎಂದು ವರದಿ ನೀಡಿತ್ತು. ಹಾಗಾಗಿ ಕೋರ್ಟ್ 10,300 ಕೋಟಿ ರೂಗಳ ದೊಡ್ಡ ಮೊತ್ತದ ದಂಡವನ್ನು ಅಂಬಾನಿಯ ರಿಲೆಯನ್ಸ್‍ಗೆ ಹಾಕಿತ್ತು. ಮೋದಿ ಕೃಪೆಯಿಂದಾಗಿ ಸರ್ಕಾರ ಮತ್ತು ಒಎನ್‍ಜಿಸಿ ಈ ಕೇಸಿನಲ್ಲಿ ಸರಿಯಾಗಿ ವಾದಿಸದೇ ಸಾಕ್ಷಿಗಳನ್ನು ನಾಶಮಾಡಿ ಕೊನೆಗೆ ಅಂಬಾನಿ ದಂಡ ಕಟ್ಟದಂತೆ ನೋಡಿಕೊಂಡರು.

ಇನ್ನು ಇದೇ ಅಂಬಾನಿ 2016ರಲ್ಲಿ ಟೆಲಿಕಾಂ ಕ್ಷೇತ್ರಕ್ಕೆ ಲಗ್ಗೆಯಿಟ್ಟು ಜಿಯೋ ಸಿಮ್ ಹೊರತಂದಾಗ ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತು ನೀಡಿದ್ದು ಇದೇ ಅಂಬಾನಿಯ ಪ್ರಧಾನ ಸೇವಕ ನರೇಂದ್ರ ಮೋದಿ. ಜಿಯೋ ಲಾಭಕ್ಕಾಗಿ ಯಶಸ್ವಿಯಾಗಿ ನಡೆಯುತ್ತಿದ್ದ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಅನ್ನು ಮುಳುಗಿಸಲಾಯಿತು. ಲಕ್ಷಕ್ಕೂ ಅಧಿಕ ನೌಕರರು ಈಗ ಬೀದಿಗೆ ಬೀಳುವ ಅಪಾಯದಲ್ಲಿದ್ದಾರೆ. ಈ ದೇಶದ ಕೃಷಿ ಸಾಲಕ್ಕಾಗಿ ನಿಗಧಿಯಾದ ಹಣದಲ್ಲಿ ಮುಖೇಶ್ ಅಂಬಾನಿ ಇದುವರೆಗೂ ಒಂದು ಲಕ್ಷ ಕೋಟಿಗೂ ಅಧಿಕ ಸಾಲ ಪಡೆದು ಸದ್ದಿಲ್ಲದೇ ಮನ್ನಾವಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಖೇಶ್ ಅಂಬಾನಿಗೆ ನೀಡಿದ ತೆರಿಗೆ ವಿನಾಯಿತಿಗಳಿಗೆ ಲೆಕ್ಕವಿಲ್ಲ. ಅಂಬಾನಿಗೆ ನೆರವಾಗಲೆಂದು ಭೂಸ್ವಾದೀನ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ಮೋದಿ ಮುಂದಾಗಿದ್ದರು ಅಲ್ಲವೇ?

ಇದನ್ನೂ ಓದಿ: ವಿಶ್ವಗುರು’ ನುಡಿಯಲ್ಲಿ ಆಗಿ ನಡೆಯಲ್ಲಿ ತಪ್ಪಬಹುದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...