Homeಮುಖಪುಟಇದು ನಮ್ಮೆಲ್ಲರ ಭಾರತವಲ್ಲ, ಬದಲಿಗೆ ಅಂಬಾನಿಯ ಭಾರತವಷ್ಟೆ

ಇದು ನಮ್ಮೆಲ್ಲರ ಭಾರತವಲ್ಲ, ಬದಲಿಗೆ ಅಂಬಾನಿಯ ಭಾರತವಷ್ಟೆ

- Advertisement -
- Advertisement -

ಆತನ ಹೆಸರು ಕುನಾಲ್ ಕಮ್ರ. ಭಾರತದ ಹೆಸರಾಂತ ಸ್ಟ್ಯಾಂಡಪ್ ಕಾಮಿಡಿಯನ್. ಜನರ ಪರ ಮಿಡಿಯುವ ಆತನ ಮನಸ್ಸು ಸಹಜವಾಗಿಯೇ ಮೋದಿ ಆಡಳಿತದ ವಿರುದ್ಧ. ಈತ ತನ್ನ ಒಂದು ಶೋನಲ್ಲಿ ‘ಅಲ್ಲ ನಾವು ನೇರವಾಗಿ ಅಂಬಾನಿಗೆ ಯಾಕ್ ಓಟ್ ಹಾಕೋಕೆ ಆಗೋಲ್ಲ. ಮಧ್ಯದಲ್ಲಿ ಈ ಮೋದಿ ಯಾಕೆ? ನೇರವಾಗಿ ಅಂಬಾನಿಯೇ ಪ್ರಧಾನಮಂತ್ರಿ ಆಗಬಹುದಲ್ಲ?’ ಎಂದು ಪ್ರಶ್ನೆ ಮಾಡುತ್ತಾನೆ. ಇದು ಕಾಮಿಡಿ ಶೋ ಆದರೂ ಆತ ಹೇಳಿದ ಆ ಮಾತು ಮಾತ್ರ ಅಕ್ಷರಶಃ ಸತ್ಯ. ಇಂದು ಈ ನಮ್ಮ ದೇಶವನ್ನಾಳುತ್ತಿರುವುದು ಹೆಸರಿಗೆ ಮಾತ್ರ ಮೋದಿ, ಮನಮೋಹನ್ ಸಿಂಗ್ ಆದರೂ ನಿಜವಾಗಿಯೂ ಆಳುತ್ತಿರುವುದು ಮತ್ತು ಬೃಹತ್ ಮಟ್ಟದಲ್ಲಿ ಕೊಳ್ಳೆ ಹೊಡೆಯುತ್ತಿರುವುದು ಅಂಬಾನಿ, ಅದಾನಿ, ಟಾಟಾ ಥರದ ಬೆರಳೆಣಿಕೆಯ ಕ್ರೋನಿ ಬಂಡವಾಳಿಗರು ಎಂಬುದರಲ್ಲಿ ಯಾವುದೇ ಸಂದೇಹವೇ ಇಲ್ಲ. ಬನ್ನಿ ಇದರ ಸತ್ಯಾಸತ್ಯತೆ ಬಗ್ಗೆ ವಿಚಾರ ಮಾಡೋಣ.

ಬಡವನಾಗಿ ಹುಟ್ಟುವುದು ನಿಮ್ಮ ತಪ್ಪಲ್ಲ, ಆದರೆ ಬಡವನಾಗಿ ಸಾಯುವುದು ನಿಮ್ಮ ತಪ್ಪು ಎಂಬ ಹೇಳಿಕೆಗಳ ಮೂಲಕ ಯಾವುದೇ ಮಾರ್ಗವಾದರೂ ಸರಿ ಹಣ ಸಂಪಾದಿಸಿ ಎಂಬ ಕಡುಬಡತನದಿಂದ ಸಿರಿವಂತರಾದವರ ಕಥೆಗಳಲ್ಲಿ ಅಂಬಾನಿಯ ಕಥೆಯೂ ಒಂದಿದೆ. ಈ ದೇಶದಲ್ಲಿ ಭ್ರಷ್ಟಾಚಾರ ಇಲ್ಲದಿದ್ದರೆ ಏನಾಗುತ್ತಿತ್ತು? ಎಂಬ ಪ್ರಶ್ನೆಯನ್ನು ಪತ್ರಕರ್ತರೊಬ್ಬರು 1990ರ ದಶಕದಲ್ಲಿ ಧೀರೂಬಾಯಿ ಅಂಬಾನಿ ಎಂಬ ದೊಡ್ಡ ಉದ್ಯಮಿಗೆ ಕೇಳುತ್ತಾರೆ. ಆಗ ಆತ ‘ಭ್ರಷ್ಟಾಚಾರ ಇಲ್ಲದಿದ್ದರೆ ಈ ಧೀರೂಬಾಯಿ ಅಂಬಾನಿ ಇನ್ನೂ ಕೂಡ ಪೆಟ್ರೋಲ್ ಬಂಕ್‍ನಲ್ಲಿ ಪೆಟ್ರೋಲ್ ಹಾಕುವ ಕೆಲಸ ಮಾಡಿಕೊಂಡು ಇರಬೇಕಿತ್ತು ಅಷ್ಟೇ’ ಎನ್ನುತ್ತಾನೆ. ಅಂದರೆ ಅಷ್ಟರ ಮಟ್ಟಿಗೆ ಆತ ನೇರವಾಗಿ ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡು ಅದರಿಂದಲೇ ನಾನಿಂದು ದೊಡ್ಡ ಉದ್ಯಮಿಯಾಗಿದ್ದೇನೆಂದು ಹೇಳಿದರೂ ಕೂಡ ಬಹುತೇಕ ಮಾಧ್ಯಮಗಳು ಆತನಿಗೆ ಬಹಪರಾಕ್ ಹೇಳಿ, ಆತನನ್ನು ನಮ್ಮೆಲ್ಲರ ಉದ್ದಾರಕನೆಂಬಂತೆ ಬಿಂಬಿಸಿ ಹೊಗಳಿ ಅಟ್ಟಕೇರಿಸುತ್ತಿವೆ. ಆ ಕಡು ಭ್ರಷ್ಟಾಚಾರಿಯ ಮಕ್ಕಳೇ ಇಂದು ಹೆಚ್ಚು ಸುದ್ದಿಯಲ್ಲಿರುವ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ.

 

ಸಾವಿರಾರು ಜನರ ಷೇರುಗಳ ಆಧಾರದಲ್ಲಿ ಧೀರೂಬಾಯಿ ಅಂಬಾನಿ 1977ರಲ್ಲಿ ಕಟ್ಟಿದ ವಾಣಿಜ್ಯ ಕಂಪನಿಯ ಹೆಸರೇ ರಿಲಯನ್ಸ್ ಇಂಡಸ್ಟ್ರೀಸ್. ಷೇರುಗಳು, ಮೊಬೈಲ್, ಸಿಮ್, ಟಿವಿಯಿಂದ ಆರಂಭವಾಗಿ ಕೊತ್ತಂಬರಿ ಸೊಪ್ಪು, ಮೀನು ಮಾಂಸದವರೆಗೂ ಸಾವಿರಾರು ವಸ್ತುಗಳನ್ನು ಮಾರಟ ಮಾಡುವಷ್ಟರ ಮಟ್ಟಿಗೆ ಈ ಕಂಪನಿ ಬೆಳೆದು ನಿಂತಿದೆ. ಅಪರಿಮಿತ ಭ್ರಷ್ಟಾಚಾರ, ಆಳುವವರೊಂದಿಗಿನ ಅಪವಿತ್ರ ಮೈತ್ರಿ, ಸ್ವಜನ ಪಕ್ಷಪಾತತನದಿಂದ ಹೆಚ್ಚು ಲಾಭ ಗಳಿಸಿ ಬೆಳೆದ ಕಂಪನಿ 2002ರಲ್ಲಿ ಧೀರೂಭಾಯಿ ಅಂಬಾನಿಯ ಮರಣದ ನಂತರ ಅವರ ಮಕ್ಕಳಿಬ್ಬರ ನಡುವೆ ಪಾಲಾಯಿತು. ರಿಲಯನ್ಸ್ ಇಂಡಸ್ಟ್ರಿಸ್, ಪೆಟ್ರೋಲಿಯಂ ಮುಖೇಶ್ ಪಾಲಿಗೆ ಬಂದರೆ, ರಿಲಯನ್ಸ್ ಕಮ್ಯುನಿಕೇಶನ್ಸ್, ಟೆಲಿಕಾಂ ಅನಿಲ್ ಪಾಲಾಯಿತು. ಇನ್ನು ನೀನಾ ಕೊಥಾರಿ ಮತ್ತು ದೀಪ್ತಿ ಸಾಲ್ಗೋಂಕರ್ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರೂ ಸಹ ಯಥಾ ಭಾರತೀಯರಂತೆ ಅವರಿಗೇನೂ ಆಸ್ತಿಯಲ್ಲಿ ಪಾಲು ದಕ್ಕಲಿಲ್ಲ ಅಷ್ಟೆ.

ಧೀರೂಭಾಯಿ ಅಂಬಾನಿ ಸಾಮಾನ್ಯ ಮನುಷ್ಯನಾಗಿದ್ದವನು ತಾನು ಸಾಯುವ 2002ರ ವೇಳೆಗೆ 6.1 ಬಿಲಿಯನ್ ಡಾಲರ್ (ಆಗಲೇ ಸುಮಾರು 60ಸಾವಿರ ಕೋಟಿ ರುಪಾಯಿಗಳು) ಆಸ್ತಿಯ ಒಡೆಯನಾಗಿದ್ದನು. ಇದು ಹೇಗೆ ಸಾಧ್ಯ ಎಂದು ಅನುಮಾನ ಬಂದರೆ ಗೂಗಲ್‍ನಲ್ಲಿ ಧೀರೂಭಾಯಿ ಅಂಬಾನಿ ಬಗೆಗಿನ ಟೀಕೆಗಳು ಎಂದು ಟೈಪ್ ಮಾಡಿ ನೊಡಿ ಸಾಕು. ಭ್ರಷ್ಟ ವ್ಯಾವಹಾರಿಕ ನಡವಳಿಕೆಗಳು, ತನ್ನ ಅಗತ್ಯಗಳಿಗಾಗಿ ಸರ್ಕಾರಿ ನೀತಿಗಳ ತಿರುಚುವಿಕೆ, ದಬ್ಬಾಳಿಕೆ ವರ್ತನೆ, ಚುನಾವಣೆಗಳಲ್ಲಿ ರಾಜಕೀಯ ಪ್ರಭಾವ ಬೀರುವುದು, ತನ್ನ ಪರವಾಗಿ ಮಾಧ್ಯಮಗಳಿಂದ ರಕ್ಷಣೆ ಮುಂತಾದ ಕ್ರಮಗಳಿಂದಲೇ ಮತ್ತು ತಾನೇ ಒಪ್ಪಿಕೊಂಡಂತೆ ಪರಮ ಭ್ರಷ್ಟಾಚಾರದ ಕಾರಣಕ್ಕಾಗಿ ಅವರು ಅಷ್ಟು ದೊಡ್ಡ ಮಟ್ಟದ ಆಸ್ತಿ ಮಾಡಲು ಸಾಧ್ಯವಾಯಿತು.

ಒಬ್ಬರನ್ನು ಮುಗಿಸಿ ಮತ್ತೊಬ್ಬರು ಏಕಾಧಿಪತ್ಯ ಸಾಧಿಸುವುದೇ ಬಂಡವಾಳಶಾಹಿ ವ್ಯವಸ್ಥೆ ಇರುವ್ಯದರಿಂದಲೇ ಆಗ ಧೀರೂಭಾಯಿ ತನ್ನ ಪ್ರತಿಸ್ಪರ್ಧಿ ನುಸ್ಲಿ ವಾಡಿಯಾರೊಂದಿಗೆ ಹಣಾಹಣಿ ನಡೆಸಿದ್ದರು. ಆನಂತರ ಇಂಡಿಯನ್ ಎಕ್ಸ್‍ಪ್ರೆಸ್‍ನ ಪ್ರಕಾಶಕ ರಾಮನಾಥ್ ಗೋಯೆಂಕಾ ನಡುವೆಯೂ ಗುದ್ದಾಟ ನಡೆದಿತ್ತು. ಇದರ ಕುರಿತ ಹೇರಳ ದಾಖಲೆಗಳು ಇತಿಹಾಸದಲ್ಲಿ ಸಿಕ್ಕಿದರೂ, ಈಗ ಅವರ ಮಕ್ಕಳು ಅದರ ಹತ್ತು ಪಟ್ಟು ಅಂದರೆ ಸುಮಾರ 6 ಲಕ್ಷಕೋಟಿ ರೂಗಳಷ್ಟು ಆಸ್ತಿಯ ಒಡೆಯರಾಗಿದ್ದಾರೆ. ಹಾಗಾಗಿ ಗತಿಸಿಹೋದವನ ಹಗರಣಗಳಿಗಿಂತ ಪ್ರಸ್ತುತ ಲೂಟಿಕೋರರ ಬಗೆಗೆ ಹೆಚ್ಚು ಚರ್ಚಿಸುವುದು ಒಳಿತು.

ಭಾರತದ ಅತಿದೊಡ್ಡ ಲೂಟಿಕೋರ ಅಂಬಾನಿ ಮಕ್ಕಳು

ತನ್ನ ತಂದೆಯ ಹಾದಿಯಲ್ಲಿ ಮತ್ತಷ್ಟು ಮುನ್ನಡೆದ ಮಕ್ಕಳು ಸಾಮ್ರಾಜ್ಯ ವಿಸ್ತರಣೆಗೆ ಹಲವು ಬಗೆಯ ಭ್ರಷ್ಟ ದಾರಿಗಳನ್ನು ಹಿಡಿದರು. ನೋಡುನೋಡುತ್ತಲೇ ಮುಖೇಶ್ ಅಂಬಾನಿ ದೇಶದ ನಂ.1 ಶ್ರೀಮಂತನಾಗಿ ಬೆಳೆದ. ಮೊದಮೊದಲು ಮೊದಲ 20 ಶ್ರೀಮಂತರ ಪಟ್ಟಿಯಲ್ಲಿರುತ್ತಿದ್ದ ಅಣ್ಣನಿಂದ ಪೂರ್ಣವಾಗಿ ದೂರ ಸರಿದ ಅನಿಲ್ ಅಂಬಾನಿ, ನಿಧಾನಕ್ಕೆ ಕೆಳಗಿಳಿದಿದ್ದಾನೆ. ಆ ರೀತಿ ದೂರ ಸರಿಯಲು ಕಾರಣವಾದ ಒಂದು ಮುಖ್ಯವಾದ ಸಂಗತಿಯನ್ನು ನೋಡೋಣ.

ಭಾರತದ ಕೃಷ್ಣ ಗೋದಾವರಿ ನದಿ ಪಾತ್ರದಲ್ಲಿರುವ ಹೇರಳವಾದ ನೈಸರ್ಗಿಕ ಮತ್ತು ತೈಲೋತ್ಪನ್ನ ಸಂಪನ್ಮೂಲಗಳ ಮೇಲೆ ಈ ಅಂಬಾನಿ ಸಹೋದರರ ಕಣ್ಣು ಬಿದ್ದಿತು. ನೆಹರೂರವರು ಪ್ರಧಾನಿಯಾಗಿದ್ದಾದ ಸ್ಥಾಪಿಸಿದ್ದ ಸರ್ಕಾರಿ ಸ್ವಾಮ್ಯದ ಒಎನ್‍ಜಿಸಿ ಅಲ್ಲಿ ತೈಲ ಮತ್ತು ಅನಿಲ ಸಂಪನ್ಮೂಲಗಳನ್ನು ಹೊರತೆಗೆದು ಸಂಸ್ಕರಣೆ ಮತ್ತು ಮಾರಾಟದ ಕಾರ್ಯನಿರ್ವಹಿಸುವ ಮೂಲಕ ಅಪಾರ ಲಾಭದ ಉದ್ದಿಮೆಯಾಗಿತ್ತು. ಅಲ್ಲಿ 2006-07 ರಿಂದ ನೆಲಬಗೆದು ಲೂಟಿ ಹೊಡೆಯಲು ಆರಂಭಿಸಿತು ಮುಖೇಶ್ ಅಂಬಾನಿ ನೇತೃತ್ವದ ರಿಲೆಯನ್ಸ್. ಅಲ್ಲಿನ ತೈಲಸಂಸ್ಕರಣಗೆ ನನಗೆ ಅವಕಾಶಕೊಡಬೇಕೆಂದು ತಮ್ಮ ಅನಿಲ್ ಅಂಬಾನಿ ತಗಾದೆ ತೆಗೆದನು. ಅಣ್ಣ ತಮ್ಮಂದಿರಿಬ್ಬರ ನಡುವೆ ಜಗಳ ಅಲ್ಲಿಂದ ಆರಂಭವಾದ ಜಗಳ ಯಾವ ಮಟ್ಟ ಹೋಯಿತೆಂದರೆ ಅದನ್ನು ಬಗೆಹರಿಸಲು ಲಾಲ್ ಕೃಷ್ಣ ಅಡ್ವಾಣಿ ಥರದವರು ಮಧ್ಯಸ್ಥಿಕೆ ವಹಿಸಬೇಕಾಗಿ ಬಂದಿತ್ತು. ಅಂದರೆ ಈ ದೇಶದ ಸಮಸ್ತ ಜನರಿಗೂ ಹಕ್ಕಿರುವ ಕೃಷ್ಣ ಗೋದಾವರಿ ನದಿಪಾತ್ರದಲ್ಲಿ ತೈಲ ಲೂಟಿ ಹೊಡೆಯಲು ‘ಅವರಪ್ಪನ ಮನೆ ಆಸ್ತಿ’ ಎಂಬಂತೆ ಅಂಬಾನಿ ಸಹೋದರರಿಬ್ಬರು ಮುಗಿಬಿದ್ದರು.

ಕೊನೆಗೆ ಅದನ್ನು ತನ್ನ ವಶಕ್ಕೆ ಪಡೆಯಲು ಯಶಸ್ವಿಯಾದ ಮುಖೇಶ್ ಅಂಬಾನಿ ಈ ದೇಶದ ಕಾನೂನಗಳನ್ನೆಲ್ಲಾ ಗಾಳಿಗೆ ತೂರಿ ಮನಸ್ಸಿಗೆ ಬಂದ ಹಾಗೆ ತೈಲ ಲೂಟಿ ಹೊಡೆಯಲು ಮುಂದಾದ. ಪೆಟ್ರೋಲಿಯಂ ಖಾತೆಯ ಜಂಟಿ ಕಾರ್ಯದರ್ಶಿಯಾಗಿದ್ದ ನಜೀಬ್ ಜಂಗ್‍ರವರು ಸರ್ಕಾರದ ಪರವಾಗಿ ಅಂಬಾನಿಯ ರಿಲೆಯನ್ಸ್‍ನೊಂದಿಗಿನ ಒಪ್ಪಂದಕ್ಕೆ ಸಹಿ ಹಾಕಿದರು. ಅದಾದ ಕೆಲವೇ ದಿನಗಳಲ್ಲಿ ಅವರು ತಮ್ಮ ಹುದ್ದೆಯಿಂದ ಸ್ವಯಂ ನಿವೃತ್ತಿ ಹೊಂದಿ, ಅದೇ ರಿಲೆಯನ್ಸ್ ಸೇರಿದರು ಎಂದರೆ ಅಂಬಾನಿಯ ಕುಟಿಲತೆ ಎಷ್ಟಿರಬೇಡ ನೀವೇ ಹೇಳಿ? ಲಕ್ಷಾಂತರ ಕೋಟಿ ಬೆಲೆ ಬಾಳುವ ಅಲ್ಲಿನ ಕಚ್ಛಾ ತೈಲ ಸಂಪತ್ತನ್ನು ಸರ್ಕಾರಿ ಸ್ವಾಮ್ಯದ ಒಎನ್‍ಜಿಸಿಗೆ ಕೊಡುವುದು ಬಿಟ್ಟು ಆಗಿನ ಯುಪಿಎ ಸರ್ಕಾರ ಮುಖೇಶ್ ಅಂಬಾನಿಗೆ ಬಿಡಿಗಾಸಿಗೆ ಹರಾಜು ಹಾಕಿತ್ತು.

ಈ ಕಳ್ಳ ತನ್ನ ಪಾಲಿನ ಜಾಗದಲ್ಲಿ ತೈಲ ಹೊರತೆಗೆಯುವುದಲ್ಲದೇ ಒಎನ್‍ಜಿಸಿಯ ಕೊಳವೆಗಳಿಗೂ ಕನ್ನ ಹಾಕಿ ಲಕ್ಷಾಂತರ ಕೋಟಿ ಬೆಲೆ ಬಾಳುವ ತೈಲವನ್ನು ಕದ್ದುಬಿಟ್ಟಿದ್ದನ್ನು. ಅದಕ್ಕೆ ವಿರೊಧ ವ್ಯಕ್ತಪಡಿಸಿದ ಕಾರಣಕ್ಕಾಗಿ ಆಗಿನ ಸರ್ಕಾರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವರಾಗಿದ್ದ ಮಣಿಶಂಕರ್ ಅಯ್ಯರ್ ರನ್ನು ಬದಲಿಸಿ ಮುರಳಿ ದೇವ್ರಗೆ ಕೊಡಲಾಯಿತು. ಅದೂ ಸಾಲದೆಂಬಂತೆ ವೀರಪ್ಪ ಮೋಯ್ಲಿಯನ್ನು ತರಲಾಯಿತು. ಅರಣ್ಯ ಮತ್ತು ಪರಿಸರ ಸಚಿವರಾಗಿದ್ದ ಜೈರಾಂ ರಮೇಶ್ ಮತ್ತು ಜೈಪಾಲ್ ರೆಡ್ಡಿಯವರು ಅಂಬಾನಿ ಲೂಟಿಯನ್ನು ಸುತಾರಂ ಒಪ್ಪಲಿಲ್ಲ ಮಾತ್ರವಲ್ಲ ಅಂಬಾನಿಯ ಅವ್ಯವಹಾರಗಳಿಗೆ ಕಡಿವಾಣ ಹಾಕಲು ಬಯಸಿದರು. ಆದರೆ ಈ ಅಂಬಾನಿ ಎಷ್ಟು ಪ್ರಭಾವಿಯಾಗಿದ್ದ ಎಂದರೆ ಅವರೆಲ್ಲರನ್ನು ಕೆಳಗಿಳಿಸಿ, ಇಂಧನ ಸಚಿವ ವೀರಪ್ಪ ಮೋಯ್ಲಿಯನ್ನೆ ಅರಣ್ಯ ಖಾತೆಗೂ ಸಚಿವರನ್ನಾಗಿಸಿ  ತನ್ನೆಲ್ಲಾ ಅವ್ಯವಹಾರಗಳನ್ನು ಕಾನೂನುಬದ್ಧಗೊಳಿಸಿಕೊಂಡ.

ಇಷ್ಟೆಲ್ಲಾ ಅನ್ಯಾಯಗಳನ್ನು ವಿರೋಧಿಸಿ ದೆಹಲಿಯಲ್ಲಿ ಆಮ್ ಆದ್ಮ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ ಪರಿಣಾಮ ಮುಖೇಶ್ ಅಂಬಾನಿ ಮತ್ತು ವೀರಪ್ಪ ಮೋಯ್ಲಿ ಮೇಲೆ ಎಫ್‍ಐಆರ್ ದಾಖಲಾಯಿತು. ಅರವಿಂದ್ ಕೇಜ್ರಿವಾಲ್ ನೇರವಾಗಿ ಅಂಬಾನಿಯನ್ನು ಎದರುಗೊಂಡ ಕಾರಣ ಬಹಳಷ್ಟು ಜನ ಕೇಜ್ರಿವಾಲ್ ಬೆಂಬಲಕ್ಕೆ ನಿಂತರು. ಆದರೆ ಚೌಕಿದಾರೆನೆಂದು ಕರೆದುಕೊಳ್ಳುವ ಮೋದಿ ಕೃಷ್ಣ ಗೋದಾವರಿ ಬೇಸಿನ್‍ನ ವಿಚಾರಣೆಗಳಿಗೂ ದೆಹಲಿಗೂ ಸಂಬಂಧವಿಲ್ಲವೆಂದು ಸಂಸತ್ತಿನಲ್ಲಿ ತಿದ್ದುಪಡಿ ತಂದರು. ಇದು ಮುಂದಕ್ಕೂ ಅನ್ವಯಿಸುತ್ತದೆ ಮತ್ತು ಹಿಂದಿನ ವರ್ಷಗಳಿಗೂ ಅನ್ವಯಿಸುತ್ತದೆ ಎಂದುಬಿಟ್ಟರು. ಅಂಬಾನಿ ಸೇಫ್ ಆದ, ನಾವು ಪೆಟ್ರೋಲ್ ಡೀಸೆಲ್ ಗ್ಯಾಸ್‍ಗಾಗಿ ಅತಿ ಹೆಚ್ಚಿನ ತೆರಿಗೆ ಕಟ್ಟುವ ದುಸ್ಥಿತಿ ಬಂತು.

2014ರ ಲೋಕಸಭಾ ಚುನಾವಣೆಗೂ ಮುನ್ನ ಎಲೆಕ್ಷನ್ ಪ್ರಚಾರಕ್ಕಾಗಿ 35ಸಾವಿರ ಕೋಟಿ ರೂಗಳನ್ನು ಮುಖೇಶ್ ಅಂಬಾನಿ ಮೋದಿ ಜೇಬಿಗಿಟ್ಟ ಕಾರಣಕ್ಕಾಗಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲಂತೂ ಅಂಬಾನಿ ಅದೃಷ್ಟ ಎರಡು ಪಟ್ಟು ಹೆಚ್ಚಾಯಿತು. 2013ರಲ್ಲಿ ತನ್ನ ಬ್ಲಾಕ್‍ಗಳಿಂದ ತೈಲ ಮತ್ತು ಅನಿಲ್ ಕಳ್ಳತನ ಮಾಡಿದ್ದಕ್ಕಾಗಿ ಒಎನ್‍ಜಿಸಿಯು ಅಂಬಾನಿ ರಿಲೆಯನ್ಸ್ ವಿರುದ್ಧ ದೆಹಲಿ ಹೈಕೋರ್ಟ್‍ನಲ್ಲಿ ದಾವೆ ಹೂಡಿತ್ತು. ಡಿ ಅಂಡ್ ಎಂ ಕನ್ಸಲ್ಟಿಂಗ್ ಕಂಪನಿಯ ವರದಿ ಆಧಾರದಲ್ಲಿ ಎ.ಪಿ ಶಾ ಸಮಿತಿಯು ತೈಲ ಮತ್ತು ಅನಿಲ ಕಳ್ಳತನವಾಗಿದೆ ಎಂದು ವರದಿ ನೀಡಿತ್ತು. ಹಾಗಾಗಿ ಕೋರ್ಟ್ 10,300 ಕೋಟಿ ರೂಗಳ ದೊಡ್ಡ ಮೊತ್ತದ ದಂಡವನ್ನು ಅಂಬಾನಿಯ ರಿಲೆಯನ್ಸ್‍ಗೆ ಹಾಕಿತ್ತು. ಮೋದಿ ಕೃಪೆಯಿಂದಾಗಿ ಸರ್ಕಾರ ಮತ್ತು ಒಎನ್‍ಜಿಸಿ ಈ ಕೇಸಿನಲ್ಲಿ ಸರಿಯಾಗಿ ವಾದಿಸದೇ ಸಾಕ್ಷಿಗಳನ್ನು ನಾಶಮಾಡಿ ಕೊನೆಗೆ ಅಂಬಾನಿ ದಂಡ ಕಟ್ಟದಂತೆ ನೋಡಿಕೊಂಡರು.

ಇನ್ನು ಇದೇ ಅಂಬಾನಿ 2016ರಲ್ಲಿ ಟೆಲಿಕಾಂ ಕ್ಷೇತ್ರಕ್ಕೆ ಲಗ್ಗೆಯಿಟ್ಟು ಜಿಯೋ ಸಿಮ್ ಹೊರತಂದಾಗ ಪತ್ರಿಕೆಗಳ ಮುಖಪುಟದಲ್ಲಿ ಜಾಹೀರಾತು ನೀಡಿದ್ದು ಇದೇ ಅಂಬಾನಿಯ ಪ್ರಧಾನ ಸೇವಕ ನರೇಂದ್ರ ಮೋದಿ. ಜಿಯೋ ಲಾಭಕ್ಕಾಗಿ ಯಶಸ್ವಿಯಾಗಿ ನಡೆಯುತ್ತಿದ್ದ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಅನ್ನು ಮುಳುಗಿಸಲಾಯಿತು. ಲಕ್ಷಕ್ಕೂ ಅಧಿಕ ನೌಕರರು ಈಗ ಬೀದಿಗೆ ಬೀಳುವ ಅಪಾಯದಲ್ಲಿದ್ದಾರೆ. ಈ ದೇಶದ ಕೃಷಿ ಸಾಲಕ್ಕಾಗಿ ನಿಗಧಿಯಾದ ಹಣದಲ್ಲಿ ಮುಖೇಶ್ ಅಂಬಾನಿ ಇದುವರೆಗೂ ಒಂದು ಲಕ್ಷ ಕೋಟಿಗೂ ಅಧಿಕ ಸಾಲ ಪಡೆದು ಸದ್ದಿಲ್ಲದೇ ಮನ್ನಾವಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಖೇಶ್ ಅಂಬಾನಿಗೆ ನೀಡಿದ ತೆರಿಗೆ ವಿನಾಯಿತಿಗಳಿಗೆ ಲೆಕ್ಕವಿಲ್ಲ. ಅಂಬಾನಿಗೆ ನೆರವಾಗಲೆಂದು ಭೂಸ್ವಾದೀನ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ಮೋದಿ ಮುಂದಾಗಿದ್ದರು ಅಲ್ಲವೇ?

ಇದನ್ನೂ ಓದಿ: ವಿಶ್ವಗುರು’ ನುಡಿಯಲ್ಲಿ ಆಗಿ ನಡೆಯಲ್ಲಿ ತಪ್ಪಬಹುದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...