Homeಮುಖಪುಟಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

ಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

- Advertisement -
- Advertisement -

| ನೀಲಗಾರ |

ಯಾವುದೇ ಚುನಾವಣೆಯ ಫಲಿತಾಂಶ ಬರುವ ಮುಂಚೆ ಎರಡು ಗುಂಪುಗಳಿಗೆ ಅದರ ವಾಸನೆ ಹತ್ತಿರುತ್ತದೆ ಎನ್ನಲಾಗುತ್ತದೆ. ಒಂದು ಉದ್ಯಮಿಗಳ ಗುಂಪು. ಇನ್ನೊಂದು ಅಧಿಕಾರಿಗಳ ಗುಂಪು. ಆದರೆ, ನರೇಂದ್ರ ಮೋದಿಯವರು ಮತ್ತು ಅವರ ತಂಡ ಹುಟ್ಟಿಸಿರುವ ಭೀತಿಯ ವಾತಾವರಣದಲ್ಲಿ ಯಾವುದೇ ಅಧಿಕಾರಿ ಅಥವಾ ಉದ್ದಿಮೆಪತಿ ಅವರ ವಿರುದ್ಧ ಮಾತನಾಡುವ ಪರಿಸ್ಥಿತಿ ಇಲ್ಲ.

ಸಮಾಜದಲ್ಲಿ ಸಾಮಾನ್ಯವಾಗಿ ನಿರ್ಭೀತಿಯಿಂದ ಮಾತಾಡುವ ಸಾಹಿತಿಗಳು, ಕಲಾವಿದರೇ ಹೆದರಿ ನಡುಗುವಂತಹ ವಾತಾವರಣ ಇದೆ. ಧಾಬೋಲ್ಕರ್, ಪಾನ್ಸರೆ, ಕಲಬುರ್ಗಿ, ಗೌರಿ ಲಂಕೇಶ್, ಜಸ್ಟೀಸ್ ಲೋಯಾರೂ ಸೇರಿದಂತೆ ಹಲವು ಕೊಲೆಗಳು ಸಮಾಜದಲ್ಲಿ ಒಂದು ನಿರ್ದಿಷ್ಟ ಸಂದೇಶವನ್ನು ರವಾನಿಸಿವೆ.

ಹೀಗಿರುವಾಗ ಉದ್ದಿಮೆಪತಿಗಳು ಮತ್ತು ಅಧಿಕಾರಿಗಳು ಮಾತನಾಡುವುದು ಕಷ್ಟಸಾಧ್ಯವೇ ಸರಿ.

ಇಂತಹ ಪರಿಸ್ಥಿತಿಯಲ್ಲಿ ದೇಶದ ನಂ.1 ಶ್ರೀಮಂತ ಮುಖೇಶ್ ಅಂಬಾನಿಯು ದಕ್ಷಿಣ ಮುಂಬೈನ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದೇವ್ರಾ ಪರವಾಗಿ ಬ್ಯಾಟಿಂಗ್ ಮಾಡಿರುವುದು ಏನನ್ನು ತೋರಿಸುತ್ತದೆ ಎಂಬ ಕುತೂಹಲ ಮೂಡಿದೆ. ಮುಖೇಶ್ ಅಂಬಾನಿಯ ಜಿಯೋ ಲಾಂಚ್ ಮಾಡಿದಾಗ, ಸ್ವತಃ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನೇ ಬಳಸಿಕೊಂಡಿದ್ದರು. ಅಷ್ಟಲ್ಲದೇ ಮುಖೇಶ್ ಅಂಬಾನಿ ಕಳೆದ 2014ರ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ದೊಡ್ಡ ಪ್ರಮಾಣದಲ್ಲಿ ಹಣಕಾಸನ್ನು ಒದಗಿಸಿಕೊಟ್ಟಿದ್ದರು ಎಂಬ ಆರೋಪವಿದೆ.

ಮೋದಿ ಸರ್ಕಾರವನ್ನು ‘ಅಂಬಾನಿ, ಅದಾನಿಗಳ ಸರ್ಕಾರ’ ಎಂದು ಕರೆಯುವುದು ಒಂದು ನುಡಿಗಟ್ಟಾಗಿ ಹೋಗಿದೆ. ರಫೇಲ್ ಡೀಲ್.ಅನ್ನು ಮೋದಿ ಸರ್ಕಾರ ಎಲ್ಲಾ ನಿಯಮಗಳನ್ನೂ ಉಲ್ಲಂಘಿಸಿ ದಯಪಾಲಿಸಿದ್ದು ಅನಿಲ್ ಅಂಬಾನಿಗೆ. ಅಂದರೆ ಇದೇ ಮುಖೇಶ್ ಅಂಬಾನಿಯ ಸ್ವಂತ ಸಹೋದರನಿಗೆ. ಅದನ್ನು ರಾಹುಲ್ ಗಾಂಧಿಯವರು ತಮ್ಮ ಯಾವ ಚುನಾವಣಾ ಭಾಷಣದಲ್ಲೂ ಉಲ್ಲೇಖಿಸದೇ ಬಿಟ್ಟಿಲ್ಲ.

ಹೀಗಿದ್ದರೂ, ಮುಖೇಶ್ ಅಂಬಾನಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಮಾತಾಡಿರುವುದು ಏಕೆ? ಮಿಲಿಂದ್ ದೇವ್ರಾ ಮೊದಲಿಗೆ ಮು.ಅಂಬಾನಿಯ ವಿಡಿಯೋವನ್ನು ಟ್ವೀಟ್ ಮಾಡಿ, ಬೆಂಬಲವನ್ನು ಸಾದರಪಡಿಸಿದ್ದರು.

ಇದನ್ನು ಎರಡು ರೀತಿಯಲ್ಲಿ ಅರ್ಥ ಮಾಡಿಕೊಳ್ಳಬಹುದು.

ಒಂದು, ಮೇಲೆ ಹೇಳಿದಂತೆ ಮೋದಿಯೇತರ ಸರ್ಕಾರ ಕೇಂದ್ರದಲ್ಲಿ ಬರಬಹುದು ಎಂಬ ವಾಸನೆ ಅಂಬಾನಿಗೆ ಹತ್ತಿದೆ. ಕೆಲವು ಕೋಟಿಗಳನ್ನು ಖರ್ಚು ಮಾಡಿದರೆ, ದೇಶಾದ್ಯಂತ ಇರುವ ಮತದಾರರ ಮನದಿಂಗಿತವನ್ನು ಸರ್ವೇ ಮಾಡಿಕೊಡುವ ಏಜೆನ್ಸಿಗಳಿವೆ. ದೇಶದ ನಂ.1 ಕಾರ್ಪೋರೇಟ್ ಸಂಸ್ಥೆಯು ತನಗಿಷ್ಟ ಬಂದ ಹಾಗೆ ಮತದಾರರ ಒಲವನ್ನು ತಿರುಚಲು ಅಥವಾ ಗಾಳಿ ಬಂದ ಕಡೆಗೆ ತಿರುಗಿಕೊಳ್ಳಲು ಇಂತಹ ಸರ್ವೇ ಮಾಡಿಸಿರಲ್ಲ ಎಂದು ನಂಬಲಾಗದು. ಹಾಗಾಗಿ ಮುಖೇಶ್ ಅಂಬಾನಿಗೆ ಸಣ್ಣ ಮೊತ್ತವಾಗಿರಬಹುದಾದ ಕೆಲವು ಕೋಟಿಗಳನ್ನು ಖರ್ಚು ಮಾಡಿ ತಿಳಿದುಕೊಂಡಿರಬಹುದಾದ, ಗಾಳಿಯ ದಿಕ್ಕಿನ ಅನುಸಾರ ಈ ಬಹಿರಂಗ ಬೆಂಬಲ ಇರಬಹುದು.

ಎರಡು, ಮಿಲಿಂದ್ ದೇವ್ರಾ ಕುಟುಂಬ ಮತ್ತು ಅಂಬಾನಿ ಕುಟುಂಬದ ಸಂಬಂಧ ಬಹಳ ಹಳೆಯದು. ಮುಂಬೈನ ಮೇಯರ್ ಸಹಾ ಆಗಿದ್ದ ಮುರಳಿ ಮನೋಹರ್ ದೇವ್ರಾ ಈ ಅಂಬಾನಿಯ ಅಪ್ಪ ಧೀರೂಬಾಯಿ ಅಂಬಾನಿಯ ಸ್ನೇಹಿತರಾಗಿದ್ದರು. ಸೀನಿಯರ್ ದೇವ್ರಾ ತೀರಿಕೊಂಡಾಗ ಅಂಬಾನಿಯ  ಇಡೀ ಕುಟುಂಬವಲ್ಲದೇ ಸೋನಿಯಾಗಾಂಧಿಯವರ ಇಡೀ ಕುಟುಂಬವೂ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿತ್ತು. ಆ ರೀತಿಯಲ್ಲಿ ದೇವ್ರಾ ಕುಟುಂಬವು 10, ಜನಪತ್ (ಸೋನಿಯಾ ನಿವಾಸ) ಮತ್ತು ಮುಂಬೈ ಉದ್ದಿಮೆದಾರರ ನಡುವಿನ ಕೊಂಡಿಯಾಗಿ ಕೆಲಸ ಮಾಡುತ್ತದೆ.

ಮುರಳೀ ದೇವ್ರಾ 2006ರಿಂದ 2011ರವರೆಗೆ ಸತತ ಐದು ವರ್ಷಗಳ ಕಾಲ ಕೇಂದ್ರ ಪೆಟ್ರೋಲಿಯಂ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಕೃಷ್ಣಾ ಗೋದಾವರಿ ಕಣಿವೆಯ ತೈಲ –ಅನಿಲ ನಿಕ್ಷೇಪಗಳು ಅಂಬಾನಿಯ ಪಾಲಿಗೆ ಹೋಗುವ ಪ್ರಕ್ರಿಯೆ ನಡೆದಿತ್ತು.

ಇವೆಲ್ಲದರ ಭಾಗವಾಗಿ ಮಿಲಿಂದ್ ಗೆ ನೀಡುತ್ತಿರುವ ಬೆಂಬಲ ಸುದೀರ್ಘ ಕಾಲದ ಕೌಟುಂಬಿಕ ಬಾಂಧವ್ಯದ ಕಾರಣಕ್ಕೆ ಎಂದು ಹೇಳಬಹುದಾಗಿದ್ದರೂ, ಅದನ್ನು ಬಹಿರಂಗವಾಗಿ ಹೇಳುವ ಅಗತ್ಯವಿರಲಿಲ್ಲ. ಬದಲಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದರೆ, ಇದೇ ಮಿಲಿಂದ್ ಸರ್ಕಾರದ ಜೊತೆ ಕೊಂಡಿಯಾಗಿ ಕಾರ್ಯನಿರ್ವಹಿಸಲಿ ಎಂಬ ಮುಂದಾಲೋಚನೆಯೂ ಅಂಬಾನಿಯದ್ದಿರಬಹುದು.

ಯಾರು ಅಧಿಕಾರಕ್ಕೆ ಬಂದರೂ, ಅಂಬಾನಿಗೆ ಏನೂ ಧಕ್ಕೆಯಾಗದಂತೆ ಇಂತಹ ಹಲವು ಏರ್ಪಾಡುಗಳಿರಲು ಸಾಧ್ಯ. ಆದರೆ, ‘ಮೋದಿಯು ಆ 15-20 ಉದ್ದಿಮೆಪತಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಪದೇ ಪದೇ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿಯು ಮುಖೇಶ್ ಅಂಬಾನಿಯ ಪರವಾಗಿ ಇರುತ್ತಾರಾ ಎಂಬ ಪ್ರಶ್ನೆಗೆ ಭವಿಷ್ಯವಷ್ಟೇ ಉತ್ತರ ನೀಡಬಲ್ಲುದು.

ಅದೇ ಸಂದರ್ಭದಲ್ಲಿ ಮಿಲಿಂದ್ ದೇವ್ರಾನಂತಹ ವ್ಯಕ್ತಿಗಳು ಹೇಗೆ ರಾಜಕಾರಣ ಮತ್ತು ಉದ್ದಿಮೆಪತಿಗಳ ನಡುವಿನ ಕೊಂಡಿಯಾಗಿ ಎಲ್ಲಾ ಕಾಲದಲ್ಲೂ ಚಲಾವಣೆಯಲ್ಲಿರುತ್ತಾರೆಂಬುದನ್ನೂ ಈ ಬೆಳವಣಿಗೆ ತೋರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...