Homeಮುಖಪುಟಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

ಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

- Advertisement -
- Advertisement -

| ನೀಲಗಾರ |

ಯಾವುದೇ ಚುನಾವಣೆಯ ಫಲಿತಾಂಶ ಬರುವ ಮುಂಚೆ ಎರಡು ಗುಂಪುಗಳಿಗೆ ಅದರ ವಾಸನೆ ಹತ್ತಿರುತ್ತದೆ ಎನ್ನಲಾಗುತ್ತದೆ. ಒಂದು ಉದ್ಯಮಿಗಳ ಗುಂಪು. ಇನ್ನೊಂದು ಅಧಿಕಾರಿಗಳ ಗುಂಪು. ಆದರೆ, ನರೇಂದ್ರ ಮೋದಿಯವರು ಮತ್ತು ಅವರ ತಂಡ ಹುಟ್ಟಿಸಿರುವ ಭೀತಿಯ ವಾತಾವರಣದಲ್ಲಿ ಯಾವುದೇ ಅಧಿಕಾರಿ ಅಥವಾ ಉದ್ದಿಮೆಪತಿ ಅವರ ವಿರುದ್ಧ ಮಾತನಾಡುವ ಪರಿಸ್ಥಿತಿ ಇಲ್ಲ.

ಸಮಾಜದಲ್ಲಿ ಸಾಮಾನ್ಯವಾಗಿ ನಿರ್ಭೀತಿಯಿಂದ ಮಾತಾಡುವ ಸಾಹಿತಿಗಳು, ಕಲಾವಿದರೇ ಹೆದರಿ ನಡುಗುವಂತಹ ವಾತಾವರಣ ಇದೆ. ಧಾಬೋಲ್ಕರ್, ಪಾನ್ಸರೆ, ಕಲಬುರ್ಗಿ, ಗೌರಿ ಲಂಕೇಶ್, ಜಸ್ಟೀಸ್ ಲೋಯಾರೂ ಸೇರಿದಂತೆ ಹಲವು ಕೊಲೆಗಳು ಸಮಾಜದಲ್ಲಿ ಒಂದು ನಿರ್ದಿಷ್ಟ ಸಂದೇಶವನ್ನು ರವಾನಿಸಿವೆ.

ಹೀಗಿರುವಾಗ ಉದ್ದಿಮೆಪತಿಗಳು ಮತ್ತು ಅಧಿಕಾರಿಗಳು ಮಾತನಾಡುವುದು ಕಷ್ಟಸಾಧ್ಯವೇ ಸರಿ.

ಇಂತಹ ಪರಿಸ್ಥಿತಿಯಲ್ಲಿ ದೇಶದ ನಂ.1 ಶ್ರೀಮಂತ ಮುಖೇಶ್ ಅಂಬಾನಿಯು ದಕ್ಷಿಣ ಮುಂಬೈನ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದೇವ್ರಾ ಪರವಾಗಿ ಬ್ಯಾಟಿಂಗ್ ಮಾಡಿರುವುದು ಏನನ್ನು ತೋರಿಸುತ್ತದೆ ಎಂಬ ಕುತೂಹಲ ಮೂಡಿದೆ. ಮುಖೇಶ್ ಅಂಬಾನಿಯ ಜಿಯೋ ಲಾಂಚ್ ಮಾಡಿದಾಗ, ಸ್ವತಃ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನೇ ಬಳಸಿಕೊಂಡಿದ್ದರು. ಅಷ್ಟಲ್ಲದೇ ಮುಖೇಶ್ ಅಂಬಾನಿ ಕಳೆದ 2014ರ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ದೊಡ್ಡ ಪ್ರಮಾಣದಲ್ಲಿ ಹಣಕಾಸನ್ನು ಒದಗಿಸಿಕೊಟ್ಟಿದ್ದರು ಎಂಬ ಆರೋಪವಿದೆ.

ಮೋದಿ ಸರ್ಕಾರವನ್ನು ‘ಅಂಬಾನಿ, ಅದಾನಿಗಳ ಸರ್ಕಾರ’ ಎಂದು ಕರೆಯುವುದು ಒಂದು ನುಡಿಗಟ್ಟಾಗಿ ಹೋಗಿದೆ. ರಫೇಲ್ ಡೀಲ್.ಅನ್ನು ಮೋದಿ ಸರ್ಕಾರ ಎಲ್ಲಾ ನಿಯಮಗಳನ್ನೂ ಉಲ್ಲಂಘಿಸಿ ದಯಪಾಲಿಸಿದ್ದು ಅನಿಲ್ ಅಂಬಾನಿಗೆ. ಅಂದರೆ ಇದೇ ಮುಖೇಶ್ ಅಂಬಾನಿಯ ಸ್ವಂತ ಸಹೋದರನಿಗೆ. ಅದನ್ನು ರಾಹುಲ್ ಗಾಂಧಿಯವರು ತಮ್ಮ ಯಾವ ಚುನಾವಣಾ ಭಾಷಣದಲ್ಲೂ ಉಲ್ಲೇಖಿಸದೇ ಬಿಟ್ಟಿಲ್ಲ.

ಹೀಗಿದ್ದರೂ, ಮುಖೇಶ್ ಅಂಬಾನಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಮಾತಾಡಿರುವುದು ಏಕೆ? ಮಿಲಿಂದ್ ದೇವ್ರಾ ಮೊದಲಿಗೆ ಮು.ಅಂಬಾನಿಯ ವಿಡಿಯೋವನ್ನು ಟ್ವೀಟ್ ಮಾಡಿ, ಬೆಂಬಲವನ್ನು ಸಾದರಪಡಿಸಿದ್ದರು.

ಇದನ್ನು ಎರಡು ರೀತಿಯಲ್ಲಿ ಅರ್ಥ ಮಾಡಿಕೊಳ್ಳಬಹುದು.

ಒಂದು, ಮೇಲೆ ಹೇಳಿದಂತೆ ಮೋದಿಯೇತರ ಸರ್ಕಾರ ಕೇಂದ್ರದಲ್ಲಿ ಬರಬಹುದು ಎಂಬ ವಾಸನೆ ಅಂಬಾನಿಗೆ ಹತ್ತಿದೆ. ಕೆಲವು ಕೋಟಿಗಳನ್ನು ಖರ್ಚು ಮಾಡಿದರೆ, ದೇಶಾದ್ಯಂತ ಇರುವ ಮತದಾರರ ಮನದಿಂಗಿತವನ್ನು ಸರ್ವೇ ಮಾಡಿಕೊಡುವ ಏಜೆನ್ಸಿಗಳಿವೆ. ದೇಶದ ನಂ.1 ಕಾರ್ಪೋರೇಟ್ ಸಂಸ್ಥೆಯು ತನಗಿಷ್ಟ ಬಂದ ಹಾಗೆ ಮತದಾರರ ಒಲವನ್ನು ತಿರುಚಲು ಅಥವಾ ಗಾಳಿ ಬಂದ ಕಡೆಗೆ ತಿರುಗಿಕೊಳ್ಳಲು ಇಂತಹ ಸರ್ವೇ ಮಾಡಿಸಿರಲ್ಲ ಎಂದು ನಂಬಲಾಗದು. ಹಾಗಾಗಿ ಮುಖೇಶ್ ಅಂಬಾನಿಗೆ ಸಣ್ಣ ಮೊತ್ತವಾಗಿರಬಹುದಾದ ಕೆಲವು ಕೋಟಿಗಳನ್ನು ಖರ್ಚು ಮಾಡಿ ತಿಳಿದುಕೊಂಡಿರಬಹುದಾದ, ಗಾಳಿಯ ದಿಕ್ಕಿನ ಅನುಸಾರ ಈ ಬಹಿರಂಗ ಬೆಂಬಲ ಇರಬಹುದು.

ಎರಡು, ಮಿಲಿಂದ್ ದೇವ್ರಾ ಕುಟುಂಬ ಮತ್ತು ಅಂಬಾನಿ ಕುಟುಂಬದ ಸಂಬಂಧ ಬಹಳ ಹಳೆಯದು. ಮುಂಬೈನ ಮೇಯರ್ ಸಹಾ ಆಗಿದ್ದ ಮುರಳಿ ಮನೋಹರ್ ದೇವ್ರಾ ಈ ಅಂಬಾನಿಯ ಅಪ್ಪ ಧೀರೂಬಾಯಿ ಅಂಬಾನಿಯ ಸ್ನೇಹಿತರಾಗಿದ್ದರು. ಸೀನಿಯರ್ ದೇವ್ರಾ ತೀರಿಕೊಂಡಾಗ ಅಂಬಾನಿಯ  ಇಡೀ ಕುಟುಂಬವಲ್ಲದೇ ಸೋನಿಯಾಗಾಂಧಿಯವರ ಇಡೀ ಕುಟುಂಬವೂ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿತ್ತು. ಆ ರೀತಿಯಲ್ಲಿ ದೇವ್ರಾ ಕುಟುಂಬವು 10, ಜನಪತ್ (ಸೋನಿಯಾ ನಿವಾಸ) ಮತ್ತು ಮುಂಬೈ ಉದ್ದಿಮೆದಾರರ ನಡುವಿನ ಕೊಂಡಿಯಾಗಿ ಕೆಲಸ ಮಾಡುತ್ತದೆ.

ಮುರಳೀ ದೇವ್ರಾ 2006ರಿಂದ 2011ರವರೆಗೆ ಸತತ ಐದು ವರ್ಷಗಳ ಕಾಲ ಕೇಂದ್ರ ಪೆಟ್ರೋಲಿಯಂ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಕೃಷ್ಣಾ ಗೋದಾವರಿ ಕಣಿವೆಯ ತೈಲ –ಅನಿಲ ನಿಕ್ಷೇಪಗಳು ಅಂಬಾನಿಯ ಪಾಲಿಗೆ ಹೋಗುವ ಪ್ರಕ್ರಿಯೆ ನಡೆದಿತ್ತು.

ಇವೆಲ್ಲದರ ಭಾಗವಾಗಿ ಮಿಲಿಂದ್ ಗೆ ನೀಡುತ್ತಿರುವ ಬೆಂಬಲ ಸುದೀರ್ಘ ಕಾಲದ ಕೌಟುಂಬಿಕ ಬಾಂಧವ್ಯದ ಕಾರಣಕ್ಕೆ ಎಂದು ಹೇಳಬಹುದಾಗಿದ್ದರೂ, ಅದನ್ನು ಬಹಿರಂಗವಾಗಿ ಹೇಳುವ ಅಗತ್ಯವಿರಲಿಲ್ಲ. ಬದಲಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದರೆ, ಇದೇ ಮಿಲಿಂದ್ ಸರ್ಕಾರದ ಜೊತೆ ಕೊಂಡಿಯಾಗಿ ಕಾರ್ಯನಿರ್ವಹಿಸಲಿ ಎಂಬ ಮುಂದಾಲೋಚನೆಯೂ ಅಂಬಾನಿಯದ್ದಿರಬಹುದು.

ಯಾರು ಅಧಿಕಾರಕ್ಕೆ ಬಂದರೂ, ಅಂಬಾನಿಗೆ ಏನೂ ಧಕ್ಕೆಯಾಗದಂತೆ ಇಂತಹ ಹಲವು ಏರ್ಪಾಡುಗಳಿರಲು ಸಾಧ್ಯ. ಆದರೆ, ‘ಮೋದಿಯು ಆ 15-20 ಉದ್ದಿಮೆಪತಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಪದೇ ಪದೇ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿಯು ಮುಖೇಶ್ ಅಂಬಾನಿಯ ಪರವಾಗಿ ಇರುತ್ತಾರಾ ಎಂಬ ಪ್ರಶ್ನೆಗೆ ಭವಿಷ್ಯವಷ್ಟೇ ಉತ್ತರ ನೀಡಬಲ್ಲುದು.

ಅದೇ ಸಂದರ್ಭದಲ್ಲಿ ಮಿಲಿಂದ್ ದೇವ್ರಾನಂತಹ ವ್ಯಕ್ತಿಗಳು ಹೇಗೆ ರಾಜಕಾರಣ ಮತ್ತು ಉದ್ದಿಮೆಪತಿಗಳ ನಡುವಿನ ಕೊಂಡಿಯಾಗಿ ಎಲ್ಲಾ ಕಾಲದಲ್ಲೂ ಚಲಾವಣೆಯಲ್ಲಿರುತ್ತಾರೆಂಬುದನ್ನೂ ಈ ಬೆಳವಣಿಗೆ ತೋರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...