Homeಮುಖಪುಟಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

ಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

- Advertisement -
- Advertisement -

| ನೀಲಗಾರ |

ಯಾವುದೇ ಚುನಾವಣೆಯ ಫಲಿತಾಂಶ ಬರುವ ಮುಂಚೆ ಎರಡು ಗುಂಪುಗಳಿಗೆ ಅದರ ವಾಸನೆ ಹತ್ತಿರುತ್ತದೆ ಎನ್ನಲಾಗುತ್ತದೆ. ಒಂದು ಉದ್ಯಮಿಗಳ ಗುಂಪು. ಇನ್ನೊಂದು ಅಧಿಕಾರಿಗಳ ಗುಂಪು. ಆದರೆ, ನರೇಂದ್ರ ಮೋದಿಯವರು ಮತ್ತು ಅವರ ತಂಡ ಹುಟ್ಟಿಸಿರುವ ಭೀತಿಯ ವಾತಾವರಣದಲ್ಲಿ ಯಾವುದೇ ಅಧಿಕಾರಿ ಅಥವಾ ಉದ್ದಿಮೆಪತಿ ಅವರ ವಿರುದ್ಧ ಮಾತನಾಡುವ ಪರಿಸ್ಥಿತಿ ಇಲ್ಲ.

ಸಮಾಜದಲ್ಲಿ ಸಾಮಾನ್ಯವಾಗಿ ನಿರ್ಭೀತಿಯಿಂದ ಮಾತಾಡುವ ಸಾಹಿತಿಗಳು, ಕಲಾವಿದರೇ ಹೆದರಿ ನಡುಗುವಂತಹ ವಾತಾವರಣ ಇದೆ. ಧಾಬೋಲ್ಕರ್, ಪಾನ್ಸರೆ, ಕಲಬುರ್ಗಿ, ಗೌರಿ ಲಂಕೇಶ್, ಜಸ್ಟೀಸ್ ಲೋಯಾರೂ ಸೇರಿದಂತೆ ಹಲವು ಕೊಲೆಗಳು ಸಮಾಜದಲ್ಲಿ ಒಂದು ನಿರ್ದಿಷ್ಟ ಸಂದೇಶವನ್ನು ರವಾನಿಸಿವೆ.

ಹೀಗಿರುವಾಗ ಉದ್ದಿಮೆಪತಿಗಳು ಮತ್ತು ಅಧಿಕಾರಿಗಳು ಮಾತನಾಡುವುದು ಕಷ್ಟಸಾಧ್ಯವೇ ಸರಿ.

ಇಂತಹ ಪರಿಸ್ಥಿತಿಯಲ್ಲಿ ದೇಶದ ನಂ.1 ಶ್ರೀಮಂತ ಮುಖೇಶ್ ಅಂಬಾನಿಯು ದಕ್ಷಿಣ ಮುಂಬೈನ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದೇವ್ರಾ ಪರವಾಗಿ ಬ್ಯಾಟಿಂಗ್ ಮಾಡಿರುವುದು ಏನನ್ನು ತೋರಿಸುತ್ತದೆ ಎಂಬ ಕುತೂಹಲ ಮೂಡಿದೆ. ಮುಖೇಶ್ ಅಂಬಾನಿಯ ಜಿಯೋ ಲಾಂಚ್ ಮಾಡಿದಾಗ, ಸ್ವತಃ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನೇ ಬಳಸಿಕೊಂಡಿದ್ದರು. ಅಷ್ಟಲ್ಲದೇ ಮುಖೇಶ್ ಅಂಬಾನಿ ಕಳೆದ 2014ರ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ದೊಡ್ಡ ಪ್ರಮಾಣದಲ್ಲಿ ಹಣಕಾಸನ್ನು ಒದಗಿಸಿಕೊಟ್ಟಿದ್ದರು ಎಂಬ ಆರೋಪವಿದೆ.

ಮೋದಿ ಸರ್ಕಾರವನ್ನು ‘ಅಂಬಾನಿ, ಅದಾನಿಗಳ ಸರ್ಕಾರ’ ಎಂದು ಕರೆಯುವುದು ಒಂದು ನುಡಿಗಟ್ಟಾಗಿ ಹೋಗಿದೆ. ರಫೇಲ್ ಡೀಲ್.ಅನ್ನು ಮೋದಿ ಸರ್ಕಾರ ಎಲ್ಲಾ ನಿಯಮಗಳನ್ನೂ ಉಲ್ಲಂಘಿಸಿ ದಯಪಾಲಿಸಿದ್ದು ಅನಿಲ್ ಅಂಬಾನಿಗೆ. ಅಂದರೆ ಇದೇ ಮುಖೇಶ್ ಅಂಬಾನಿಯ ಸ್ವಂತ ಸಹೋದರನಿಗೆ. ಅದನ್ನು ರಾಹುಲ್ ಗಾಂಧಿಯವರು ತಮ್ಮ ಯಾವ ಚುನಾವಣಾ ಭಾಷಣದಲ್ಲೂ ಉಲ್ಲೇಖಿಸದೇ ಬಿಟ್ಟಿಲ್ಲ.

ಹೀಗಿದ್ದರೂ, ಮುಖೇಶ್ ಅಂಬಾನಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಮಾತಾಡಿರುವುದು ಏಕೆ? ಮಿಲಿಂದ್ ದೇವ್ರಾ ಮೊದಲಿಗೆ ಮು.ಅಂಬಾನಿಯ ವಿಡಿಯೋವನ್ನು ಟ್ವೀಟ್ ಮಾಡಿ, ಬೆಂಬಲವನ್ನು ಸಾದರಪಡಿಸಿದ್ದರು.

ಇದನ್ನು ಎರಡು ರೀತಿಯಲ್ಲಿ ಅರ್ಥ ಮಾಡಿಕೊಳ್ಳಬಹುದು.

ಒಂದು, ಮೇಲೆ ಹೇಳಿದಂತೆ ಮೋದಿಯೇತರ ಸರ್ಕಾರ ಕೇಂದ್ರದಲ್ಲಿ ಬರಬಹುದು ಎಂಬ ವಾಸನೆ ಅಂಬಾನಿಗೆ ಹತ್ತಿದೆ. ಕೆಲವು ಕೋಟಿಗಳನ್ನು ಖರ್ಚು ಮಾಡಿದರೆ, ದೇಶಾದ್ಯಂತ ಇರುವ ಮತದಾರರ ಮನದಿಂಗಿತವನ್ನು ಸರ್ವೇ ಮಾಡಿಕೊಡುವ ಏಜೆನ್ಸಿಗಳಿವೆ. ದೇಶದ ನಂ.1 ಕಾರ್ಪೋರೇಟ್ ಸಂಸ್ಥೆಯು ತನಗಿಷ್ಟ ಬಂದ ಹಾಗೆ ಮತದಾರರ ಒಲವನ್ನು ತಿರುಚಲು ಅಥವಾ ಗಾಳಿ ಬಂದ ಕಡೆಗೆ ತಿರುಗಿಕೊಳ್ಳಲು ಇಂತಹ ಸರ್ವೇ ಮಾಡಿಸಿರಲ್ಲ ಎಂದು ನಂಬಲಾಗದು. ಹಾಗಾಗಿ ಮುಖೇಶ್ ಅಂಬಾನಿಗೆ ಸಣ್ಣ ಮೊತ್ತವಾಗಿರಬಹುದಾದ ಕೆಲವು ಕೋಟಿಗಳನ್ನು ಖರ್ಚು ಮಾಡಿ ತಿಳಿದುಕೊಂಡಿರಬಹುದಾದ, ಗಾಳಿಯ ದಿಕ್ಕಿನ ಅನುಸಾರ ಈ ಬಹಿರಂಗ ಬೆಂಬಲ ಇರಬಹುದು.

ಎರಡು, ಮಿಲಿಂದ್ ದೇವ್ರಾ ಕುಟುಂಬ ಮತ್ತು ಅಂಬಾನಿ ಕುಟುಂಬದ ಸಂಬಂಧ ಬಹಳ ಹಳೆಯದು. ಮುಂಬೈನ ಮೇಯರ್ ಸಹಾ ಆಗಿದ್ದ ಮುರಳಿ ಮನೋಹರ್ ದೇವ್ರಾ ಈ ಅಂಬಾನಿಯ ಅಪ್ಪ ಧೀರೂಬಾಯಿ ಅಂಬಾನಿಯ ಸ್ನೇಹಿತರಾಗಿದ್ದರು. ಸೀನಿಯರ್ ದೇವ್ರಾ ತೀರಿಕೊಂಡಾಗ ಅಂಬಾನಿಯ  ಇಡೀ ಕುಟುಂಬವಲ್ಲದೇ ಸೋನಿಯಾಗಾಂಧಿಯವರ ಇಡೀ ಕುಟುಂಬವೂ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿತ್ತು. ಆ ರೀತಿಯಲ್ಲಿ ದೇವ್ರಾ ಕುಟುಂಬವು 10, ಜನಪತ್ (ಸೋನಿಯಾ ನಿವಾಸ) ಮತ್ತು ಮುಂಬೈ ಉದ್ದಿಮೆದಾರರ ನಡುವಿನ ಕೊಂಡಿಯಾಗಿ ಕೆಲಸ ಮಾಡುತ್ತದೆ.

ಮುರಳೀ ದೇವ್ರಾ 2006ರಿಂದ 2011ರವರೆಗೆ ಸತತ ಐದು ವರ್ಷಗಳ ಕಾಲ ಕೇಂದ್ರ ಪೆಟ್ರೋಲಿಯಂ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಕೃಷ್ಣಾ ಗೋದಾವರಿ ಕಣಿವೆಯ ತೈಲ –ಅನಿಲ ನಿಕ್ಷೇಪಗಳು ಅಂಬಾನಿಯ ಪಾಲಿಗೆ ಹೋಗುವ ಪ್ರಕ್ರಿಯೆ ನಡೆದಿತ್ತು.

ಇವೆಲ್ಲದರ ಭಾಗವಾಗಿ ಮಿಲಿಂದ್ ಗೆ ನೀಡುತ್ತಿರುವ ಬೆಂಬಲ ಸುದೀರ್ಘ ಕಾಲದ ಕೌಟುಂಬಿಕ ಬಾಂಧವ್ಯದ ಕಾರಣಕ್ಕೆ ಎಂದು ಹೇಳಬಹುದಾಗಿದ್ದರೂ, ಅದನ್ನು ಬಹಿರಂಗವಾಗಿ ಹೇಳುವ ಅಗತ್ಯವಿರಲಿಲ್ಲ. ಬದಲಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದರೆ, ಇದೇ ಮಿಲಿಂದ್ ಸರ್ಕಾರದ ಜೊತೆ ಕೊಂಡಿಯಾಗಿ ಕಾರ್ಯನಿರ್ವಹಿಸಲಿ ಎಂಬ ಮುಂದಾಲೋಚನೆಯೂ ಅಂಬಾನಿಯದ್ದಿರಬಹುದು.

ಯಾರು ಅಧಿಕಾರಕ್ಕೆ ಬಂದರೂ, ಅಂಬಾನಿಗೆ ಏನೂ ಧಕ್ಕೆಯಾಗದಂತೆ ಇಂತಹ ಹಲವು ಏರ್ಪಾಡುಗಳಿರಲು ಸಾಧ್ಯ. ಆದರೆ, ‘ಮೋದಿಯು ಆ 15-20 ಉದ್ದಿಮೆಪತಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಪದೇ ಪದೇ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿಯು ಮುಖೇಶ್ ಅಂಬಾನಿಯ ಪರವಾಗಿ ಇರುತ್ತಾರಾ ಎಂಬ ಪ್ರಶ್ನೆಗೆ ಭವಿಷ್ಯವಷ್ಟೇ ಉತ್ತರ ನೀಡಬಲ್ಲುದು.

ಅದೇ ಸಂದರ್ಭದಲ್ಲಿ ಮಿಲಿಂದ್ ದೇವ್ರಾನಂತಹ ವ್ಯಕ್ತಿಗಳು ಹೇಗೆ ರಾಜಕಾರಣ ಮತ್ತು ಉದ್ದಿಮೆಪತಿಗಳ ನಡುವಿನ ಕೊಂಡಿಯಾಗಿ ಎಲ್ಲಾ ಕಾಲದಲ್ಲೂ ಚಲಾವಣೆಯಲ್ಲಿರುತ್ತಾರೆಂಬುದನ್ನೂ ಈ ಬೆಳವಣಿಗೆ ತೋರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...