Homeಮುಖಪುಟಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

ಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

- Advertisement -
- Advertisement -

| ನೀಲಗಾರ |

ಯಾವುದೇ ಚುನಾವಣೆಯ ಫಲಿತಾಂಶ ಬರುವ ಮುಂಚೆ ಎರಡು ಗುಂಪುಗಳಿಗೆ ಅದರ ವಾಸನೆ ಹತ್ತಿರುತ್ತದೆ ಎನ್ನಲಾಗುತ್ತದೆ. ಒಂದು ಉದ್ಯಮಿಗಳ ಗುಂಪು. ಇನ್ನೊಂದು ಅಧಿಕಾರಿಗಳ ಗುಂಪು. ಆದರೆ, ನರೇಂದ್ರ ಮೋದಿಯವರು ಮತ್ತು ಅವರ ತಂಡ ಹುಟ್ಟಿಸಿರುವ ಭೀತಿಯ ವಾತಾವರಣದಲ್ಲಿ ಯಾವುದೇ ಅಧಿಕಾರಿ ಅಥವಾ ಉದ್ದಿಮೆಪತಿ ಅವರ ವಿರುದ್ಧ ಮಾತನಾಡುವ ಪರಿಸ್ಥಿತಿ ಇಲ್ಲ.

ಸಮಾಜದಲ್ಲಿ ಸಾಮಾನ್ಯವಾಗಿ ನಿರ್ಭೀತಿಯಿಂದ ಮಾತಾಡುವ ಸಾಹಿತಿಗಳು, ಕಲಾವಿದರೇ ಹೆದರಿ ನಡುಗುವಂತಹ ವಾತಾವರಣ ಇದೆ. ಧಾಬೋಲ್ಕರ್, ಪಾನ್ಸರೆ, ಕಲಬುರ್ಗಿ, ಗೌರಿ ಲಂಕೇಶ್, ಜಸ್ಟೀಸ್ ಲೋಯಾರೂ ಸೇರಿದಂತೆ ಹಲವು ಕೊಲೆಗಳು ಸಮಾಜದಲ್ಲಿ ಒಂದು ನಿರ್ದಿಷ್ಟ ಸಂದೇಶವನ್ನು ರವಾನಿಸಿವೆ.

ಹೀಗಿರುವಾಗ ಉದ್ದಿಮೆಪತಿಗಳು ಮತ್ತು ಅಧಿಕಾರಿಗಳು ಮಾತನಾಡುವುದು ಕಷ್ಟಸಾಧ್ಯವೇ ಸರಿ.

ಇಂತಹ ಪರಿಸ್ಥಿತಿಯಲ್ಲಿ ದೇಶದ ನಂ.1 ಶ್ರೀಮಂತ ಮುಖೇಶ್ ಅಂಬಾನಿಯು ದಕ್ಷಿಣ ಮುಂಬೈನ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದೇವ್ರಾ ಪರವಾಗಿ ಬ್ಯಾಟಿಂಗ್ ಮಾಡಿರುವುದು ಏನನ್ನು ತೋರಿಸುತ್ತದೆ ಎಂಬ ಕುತೂಹಲ ಮೂಡಿದೆ. ಮುಖೇಶ್ ಅಂಬಾನಿಯ ಜಿಯೋ ಲಾಂಚ್ ಮಾಡಿದಾಗ, ಸ್ವತಃ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನೇ ಬಳಸಿಕೊಂಡಿದ್ದರು. ಅಷ್ಟಲ್ಲದೇ ಮುಖೇಶ್ ಅಂಬಾನಿ ಕಳೆದ 2014ರ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ದೊಡ್ಡ ಪ್ರಮಾಣದಲ್ಲಿ ಹಣಕಾಸನ್ನು ಒದಗಿಸಿಕೊಟ್ಟಿದ್ದರು ಎಂಬ ಆರೋಪವಿದೆ.

ಮೋದಿ ಸರ್ಕಾರವನ್ನು ‘ಅಂಬಾನಿ, ಅದಾನಿಗಳ ಸರ್ಕಾರ’ ಎಂದು ಕರೆಯುವುದು ಒಂದು ನುಡಿಗಟ್ಟಾಗಿ ಹೋಗಿದೆ. ರಫೇಲ್ ಡೀಲ್.ಅನ್ನು ಮೋದಿ ಸರ್ಕಾರ ಎಲ್ಲಾ ನಿಯಮಗಳನ್ನೂ ಉಲ್ಲಂಘಿಸಿ ದಯಪಾಲಿಸಿದ್ದು ಅನಿಲ್ ಅಂಬಾನಿಗೆ. ಅಂದರೆ ಇದೇ ಮುಖೇಶ್ ಅಂಬಾನಿಯ ಸ್ವಂತ ಸಹೋದರನಿಗೆ. ಅದನ್ನು ರಾಹುಲ್ ಗಾಂಧಿಯವರು ತಮ್ಮ ಯಾವ ಚುನಾವಣಾ ಭಾಷಣದಲ್ಲೂ ಉಲ್ಲೇಖಿಸದೇ ಬಿಟ್ಟಿಲ್ಲ.

ಹೀಗಿದ್ದರೂ, ಮುಖೇಶ್ ಅಂಬಾನಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಮಾತಾಡಿರುವುದು ಏಕೆ? ಮಿಲಿಂದ್ ದೇವ್ರಾ ಮೊದಲಿಗೆ ಮು.ಅಂಬಾನಿಯ ವಿಡಿಯೋವನ್ನು ಟ್ವೀಟ್ ಮಾಡಿ, ಬೆಂಬಲವನ್ನು ಸಾದರಪಡಿಸಿದ್ದರು.

ಇದನ್ನು ಎರಡು ರೀತಿಯಲ್ಲಿ ಅರ್ಥ ಮಾಡಿಕೊಳ್ಳಬಹುದು.

ಒಂದು, ಮೇಲೆ ಹೇಳಿದಂತೆ ಮೋದಿಯೇತರ ಸರ್ಕಾರ ಕೇಂದ್ರದಲ್ಲಿ ಬರಬಹುದು ಎಂಬ ವಾಸನೆ ಅಂಬಾನಿಗೆ ಹತ್ತಿದೆ. ಕೆಲವು ಕೋಟಿಗಳನ್ನು ಖರ್ಚು ಮಾಡಿದರೆ, ದೇಶಾದ್ಯಂತ ಇರುವ ಮತದಾರರ ಮನದಿಂಗಿತವನ್ನು ಸರ್ವೇ ಮಾಡಿಕೊಡುವ ಏಜೆನ್ಸಿಗಳಿವೆ. ದೇಶದ ನಂ.1 ಕಾರ್ಪೋರೇಟ್ ಸಂಸ್ಥೆಯು ತನಗಿಷ್ಟ ಬಂದ ಹಾಗೆ ಮತದಾರರ ಒಲವನ್ನು ತಿರುಚಲು ಅಥವಾ ಗಾಳಿ ಬಂದ ಕಡೆಗೆ ತಿರುಗಿಕೊಳ್ಳಲು ಇಂತಹ ಸರ್ವೇ ಮಾಡಿಸಿರಲ್ಲ ಎಂದು ನಂಬಲಾಗದು. ಹಾಗಾಗಿ ಮುಖೇಶ್ ಅಂಬಾನಿಗೆ ಸಣ್ಣ ಮೊತ್ತವಾಗಿರಬಹುದಾದ ಕೆಲವು ಕೋಟಿಗಳನ್ನು ಖರ್ಚು ಮಾಡಿ ತಿಳಿದುಕೊಂಡಿರಬಹುದಾದ, ಗಾಳಿಯ ದಿಕ್ಕಿನ ಅನುಸಾರ ಈ ಬಹಿರಂಗ ಬೆಂಬಲ ಇರಬಹುದು.

ಎರಡು, ಮಿಲಿಂದ್ ದೇವ್ರಾ ಕುಟುಂಬ ಮತ್ತು ಅಂಬಾನಿ ಕುಟುಂಬದ ಸಂಬಂಧ ಬಹಳ ಹಳೆಯದು. ಮುಂಬೈನ ಮೇಯರ್ ಸಹಾ ಆಗಿದ್ದ ಮುರಳಿ ಮನೋಹರ್ ದೇವ್ರಾ ಈ ಅಂಬಾನಿಯ ಅಪ್ಪ ಧೀರೂಬಾಯಿ ಅಂಬಾನಿಯ ಸ್ನೇಹಿತರಾಗಿದ್ದರು. ಸೀನಿಯರ್ ದೇವ್ರಾ ತೀರಿಕೊಂಡಾಗ ಅಂಬಾನಿಯ  ಇಡೀ ಕುಟುಂಬವಲ್ಲದೇ ಸೋನಿಯಾಗಾಂಧಿಯವರ ಇಡೀ ಕುಟುಂಬವೂ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿತ್ತು. ಆ ರೀತಿಯಲ್ಲಿ ದೇವ್ರಾ ಕುಟುಂಬವು 10, ಜನಪತ್ (ಸೋನಿಯಾ ನಿವಾಸ) ಮತ್ತು ಮುಂಬೈ ಉದ್ದಿಮೆದಾರರ ನಡುವಿನ ಕೊಂಡಿಯಾಗಿ ಕೆಲಸ ಮಾಡುತ್ತದೆ.

ಮುರಳೀ ದೇವ್ರಾ 2006ರಿಂದ 2011ರವರೆಗೆ ಸತತ ಐದು ವರ್ಷಗಳ ಕಾಲ ಕೇಂದ್ರ ಪೆಟ್ರೋಲಿಯಂ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಕೃಷ್ಣಾ ಗೋದಾವರಿ ಕಣಿವೆಯ ತೈಲ –ಅನಿಲ ನಿಕ್ಷೇಪಗಳು ಅಂಬಾನಿಯ ಪಾಲಿಗೆ ಹೋಗುವ ಪ್ರಕ್ರಿಯೆ ನಡೆದಿತ್ತು.

ಇವೆಲ್ಲದರ ಭಾಗವಾಗಿ ಮಿಲಿಂದ್ ಗೆ ನೀಡುತ್ತಿರುವ ಬೆಂಬಲ ಸುದೀರ್ಘ ಕಾಲದ ಕೌಟುಂಬಿಕ ಬಾಂಧವ್ಯದ ಕಾರಣಕ್ಕೆ ಎಂದು ಹೇಳಬಹುದಾಗಿದ್ದರೂ, ಅದನ್ನು ಬಹಿರಂಗವಾಗಿ ಹೇಳುವ ಅಗತ್ಯವಿರಲಿಲ್ಲ. ಬದಲಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದರೆ, ಇದೇ ಮಿಲಿಂದ್ ಸರ್ಕಾರದ ಜೊತೆ ಕೊಂಡಿಯಾಗಿ ಕಾರ್ಯನಿರ್ವಹಿಸಲಿ ಎಂಬ ಮುಂದಾಲೋಚನೆಯೂ ಅಂಬಾನಿಯದ್ದಿರಬಹುದು.

ಯಾರು ಅಧಿಕಾರಕ್ಕೆ ಬಂದರೂ, ಅಂಬಾನಿಗೆ ಏನೂ ಧಕ್ಕೆಯಾಗದಂತೆ ಇಂತಹ ಹಲವು ಏರ್ಪಾಡುಗಳಿರಲು ಸಾಧ್ಯ. ಆದರೆ, ‘ಮೋದಿಯು ಆ 15-20 ಉದ್ದಿಮೆಪತಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಪದೇ ಪದೇ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿಯು ಮುಖೇಶ್ ಅಂಬಾನಿಯ ಪರವಾಗಿ ಇರುತ್ತಾರಾ ಎಂಬ ಪ್ರಶ್ನೆಗೆ ಭವಿಷ್ಯವಷ್ಟೇ ಉತ್ತರ ನೀಡಬಲ್ಲುದು.

ಅದೇ ಸಂದರ್ಭದಲ್ಲಿ ಮಿಲಿಂದ್ ದೇವ್ರಾನಂತಹ ವ್ಯಕ್ತಿಗಳು ಹೇಗೆ ರಾಜಕಾರಣ ಮತ್ತು ಉದ್ದಿಮೆಪತಿಗಳ ನಡುವಿನ ಕೊಂಡಿಯಾಗಿ ಎಲ್ಲಾ ಕಾಲದಲ್ಲೂ ಚಲಾವಣೆಯಲ್ಲಿರುತ್ತಾರೆಂಬುದನ್ನೂ ಈ ಬೆಳವಣಿಗೆ ತೋರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...