Homeಮುಖಪುಟಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

ಕಾಂಗ್ರೆಸ್ ಅಭ್ಯರ್ಥಿಗೆ ಮುಖೇಶ್ ಅಂಬಾನಿ ಬೆಂಬಲ ಏನನ್ನು ತೋರಿಸುತ್ತದೆ?

- Advertisement -
- Advertisement -

| ನೀಲಗಾರ |

ಯಾವುದೇ ಚುನಾವಣೆಯ ಫಲಿತಾಂಶ ಬರುವ ಮುಂಚೆ ಎರಡು ಗುಂಪುಗಳಿಗೆ ಅದರ ವಾಸನೆ ಹತ್ತಿರುತ್ತದೆ ಎನ್ನಲಾಗುತ್ತದೆ. ಒಂದು ಉದ್ಯಮಿಗಳ ಗುಂಪು. ಇನ್ನೊಂದು ಅಧಿಕಾರಿಗಳ ಗುಂಪು. ಆದರೆ, ನರೇಂದ್ರ ಮೋದಿಯವರು ಮತ್ತು ಅವರ ತಂಡ ಹುಟ್ಟಿಸಿರುವ ಭೀತಿಯ ವಾತಾವರಣದಲ್ಲಿ ಯಾವುದೇ ಅಧಿಕಾರಿ ಅಥವಾ ಉದ್ದಿಮೆಪತಿ ಅವರ ವಿರುದ್ಧ ಮಾತನಾಡುವ ಪರಿಸ್ಥಿತಿ ಇಲ್ಲ.

ಸಮಾಜದಲ್ಲಿ ಸಾಮಾನ್ಯವಾಗಿ ನಿರ್ಭೀತಿಯಿಂದ ಮಾತಾಡುವ ಸಾಹಿತಿಗಳು, ಕಲಾವಿದರೇ ಹೆದರಿ ನಡುಗುವಂತಹ ವಾತಾವರಣ ಇದೆ. ಧಾಬೋಲ್ಕರ್, ಪಾನ್ಸರೆ, ಕಲಬುರ್ಗಿ, ಗೌರಿ ಲಂಕೇಶ್, ಜಸ್ಟೀಸ್ ಲೋಯಾರೂ ಸೇರಿದಂತೆ ಹಲವು ಕೊಲೆಗಳು ಸಮಾಜದಲ್ಲಿ ಒಂದು ನಿರ್ದಿಷ್ಟ ಸಂದೇಶವನ್ನು ರವಾನಿಸಿವೆ.

ಹೀಗಿರುವಾಗ ಉದ್ದಿಮೆಪತಿಗಳು ಮತ್ತು ಅಧಿಕಾರಿಗಳು ಮಾತನಾಡುವುದು ಕಷ್ಟಸಾಧ್ಯವೇ ಸರಿ.

ಇಂತಹ ಪರಿಸ್ಥಿತಿಯಲ್ಲಿ ದೇಶದ ನಂ.1 ಶ್ರೀಮಂತ ಮುಖೇಶ್ ಅಂಬಾನಿಯು ದಕ್ಷಿಣ ಮುಂಬೈನ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದೇವ್ರಾ ಪರವಾಗಿ ಬ್ಯಾಟಿಂಗ್ ಮಾಡಿರುವುದು ಏನನ್ನು ತೋರಿಸುತ್ತದೆ ಎಂಬ ಕುತೂಹಲ ಮೂಡಿದೆ. ಮುಖೇಶ್ ಅಂಬಾನಿಯ ಜಿಯೋ ಲಾಂಚ್ ಮಾಡಿದಾಗ, ಸ್ವತಃ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನೇ ಬಳಸಿಕೊಂಡಿದ್ದರು. ಅಷ್ಟಲ್ಲದೇ ಮುಖೇಶ್ ಅಂಬಾನಿ ಕಳೆದ 2014ರ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ದೊಡ್ಡ ಪ್ರಮಾಣದಲ್ಲಿ ಹಣಕಾಸನ್ನು ಒದಗಿಸಿಕೊಟ್ಟಿದ್ದರು ಎಂಬ ಆರೋಪವಿದೆ.

ಮೋದಿ ಸರ್ಕಾರವನ್ನು ‘ಅಂಬಾನಿ, ಅದಾನಿಗಳ ಸರ್ಕಾರ’ ಎಂದು ಕರೆಯುವುದು ಒಂದು ನುಡಿಗಟ್ಟಾಗಿ ಹೋಗಿದೆ. ರಫೇಲ್ ಡೀಲ್.ಅನ್ನು ಮೋದಿ ಸರ್ಕಾರ ಎಲ್ಲಾ ನಿಯಮಗಳನ್ನೂ ಉಲ್ಲಂಘಿಸಿ ದಯಪಾಲಿಸಿದ್ದು ಅನಿಲ್ ಅಂಬಾನಿಗೆ. ಅಂದರೆ ಇದೇ ಮುಖೇಶ್ ಅಂಬಾನಿಯ ಸ್ವಂತ ಸಹೋದರನಿಗೆ. ಅದನ್ನು ರಾಹುಲ್ ಗಾಂಧಿಯವರು ತಮ್ಮ ಯಾವ ಚುನಾವಣಾ ಭಾಷಣದಲ್ಲೂ ಉಲ್ಲೇಖಿಸದೇ ಬಿಟ್ಟಿಲ್ಲ.

ಹೀಗಿದ್ದರೂ, ಮುಖೇಶ್ ಅಂಬಾನಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಬಹಿರಂಗವಾಗಿ ಮಾತಾಡಿರುವುದು ಏಕೆ? ಮಿಲಿಂದ್ ದೇವ್ರಾ ಮೊದಲಿಗೆ ಮು.ಅಂಬಾನಿಯ ವಿಡಿಯೋವನ್ನು ಟ್ವೀಟ್ ಮಾಡಿ, ಬೆಂಬಲವನ್ನು ಸಾದರಪಡಿಸಿದ್ದರು.

ಇದನ್ನು ಎರಡು ರೀತಿಯಲ್ಲಿ ಅರ್ಥ ಮಾಡಿಕೊಳ್ಳಬಹುದು.

ಒಂದು, ಮೇಲೆ ಹೇಳಿದಂತೆ ಮೋದಿಯೇತರ ಸರ್ಕಾರ ಕೇಂದ್ರದಲ್ಲಿ ಬರಬಹುದು ಎಂಬ ವಾಸನೆ ಅಂಬಾನಿಗೆ ಹತ್ತಿದೆ. ಕೆಲವು ಕೋಟಿಗಳನ್ನು ಖರ್ಚು ಮಾಡಿದರೆ, ದೇಶಾದ್ಯಂತ ಇರುವ ಮತದಾರರ ಮನದಿಂಗಿತವನ್ನು ಸರ್ವೇ ಮಾಡಿಕೊಡುವ ಏಜೆನ್ಸಿಗಳಿವೆ. ದೇಶದ ನಂ.1 ಕಾರ್ಪೋರೇಟ್ ಸಂಸ್ಥೆಯು ತನಗಿಷ್ಟ ಬಂದ ಹಾಗೆ ಮತದಾರರ ಒಲವನ್ನು ತಿರುಚಲು ಅಥವಾ ಗಾಳಿ ಬಂದ ಕಡೆಗೆ ತಿರುಗಿಕೊಳ್ಳಲು ಇಂತಹ ಸರ್ವೇ ಮಾಡಿಸಿರಲ್ಲ ಎಂದು ನಂಬಲಾಗದು. ಹಾಗಾಗಿ ಮುಖೇಶ್ ಅಂಬಾನಿಗೆ ಸಣ್ಣ ಮೊತ್ತವಾಗಿರಬಹುದಾದ ಕೆಲವು ಕೋಟಿಗಳನ್ನು ಖರ್ಚು ಮಾಡಿ ತಿಳಿದುಕೊಂಡಿರಬಹುದಾದ, ಗಾಳಿಯ ದಿಕ್ಕಿನ ಅನುಸಾರ ಈ ಬಹಿರಂಗ ಬೆಂಬಲ ಇರಬಹುದು.

ಎರಡು, ಮಿಲಿಂದ್ ದೇವ್ರಾ ಕುಟುಂಬ ಮತ್ತು ಅಂಬಾನಿ ಕುಟುಂಬದ ಸಂಬಂಧ ಬಹಳ ಹಳೆಯದು. ಮುಂಬೈನ ಮೇಯರ್ ಸಹಾ ಆಗಿದ್ದ ಮುರಳಿ ಮನೋಹರ್ ದೇವ್ರಾ ಈ ಅಂಬಾನಿಯ ಅಪ್ಪ ಧೀರೂಬಾಯಿ ಅಂಬಾನಿಯ ಸ್ನೇಹಿತರಾಗಿದ್ದರು. ಸೀನಿಯರ್ ದೇವ್ರಾ ತೀರಿಕೊಂಡಾಗ ಅಂಬಾನಿಯ  ಇಡೀ ಕುಟುಂಬವಲ್ಲದೇ ಸೋನಿಯಾಗಾಂಧಿಯವರ ಇಡೀ ಕುಟುಂಬವೂ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿತ್ತು. ಆ ರೀತಿಯಲ್ಲಿ ದೇವ್ರಾ ಕುಟುಂಬವು 10, ಜನಪತ್ (ಸೋನಿಯಾ ನಿವಾಸ) ಮತ್ತು ಮುಂಬೈ ಉದ್ದಿಮೆದಾರರ ನಡುವಿನ ಕೊಂಡಿಯಾಗಿ ಕೆಲಸ ಮಾಡುತ್ತದೆ.

ಮುರಳೀ ದೇವ್ರಾ 2006ರಿಂದ 2011ರವರೆಗೆ ಸತತ ಐದು ವರ್ಷಗಳ ಕಾಲ ಕೇಂದ್ರ ಪೆಟ್ರೋಲಿಯಂ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಕೃಷ್ಣಾ ಗೋದಾವರಿ ಕಣಿವೆಯ ತೈಲ –ಅನಿಲ ನಿಕ್ಷೇಪಗಳು ಅಂಬಾನಿಯ ಪಾಲಿಗೆ ಹೋಗುವ ಪ್ರಕ್ರಿಯೆ ನಡೆದಿತ್ತು.

ಇವೆಲ್ಲದರ ಭಾಗವಾಗಿ ಮಿಲಿಂದ್ ಗೆ ನೀಡುತ್ತಿರುವ ಬೆಂಬಲ ಸುದೀರ್ಘ ಕಾಲದ ಕೌಟುಂಬಿಕ ಬಾಂಧವ್ಯದ ಕಾರಣಕ್ಕೆ ಎಂದು ಹೇಳಬಹುದಾಗಿದ್ದರೂ, ಅದನ್ನು ಬಹಿರಂಗವಾಗಿ ಹೇಳುವ ಅಗತ್ಯವಿರಲಿಲ್ಲ. ಬದಲಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದರೆ, ಇದೇ ಮಿಲಿಂದ್ ಸರ್ಕಾರದ ಜೊತೆ ಕೊಂಡಿಯಾಗಿ ಕಾರ್ಯನಿರ್ವಹಿಸಲಿ ಎಂಬ ಮುಂದಾಲೋಚನೆಯೂ ಅಂಬಾನಿಯದ್ದಿರಬಹುದು.

ಯಾರು ಅಧಿಕಾರಕ್ಕೆ ಬಂದರೂ, ಅಂಬಾನಿಗೆ ಏನೂ ಧಕ್ಕೆಯಾಗದಂತೆ ಇಂತಹ ಹಲವು ಏರ್ಪಾಡುಗಳಿರಲು ಸಾಧ್ಯ. ಆದರೆ, ‘ಮೋದಿಯು ಆ 15-20 ಉದ್ದಿಮೆಪತಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಪದೇ ಪದೇ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿಯು ಮುಖೇಶ್ ಅಂಬಾನಿಯ ಪರವಾಗಿ ಇರುತ್ತಾರಾ ಎಂಬ ಪ್ರಶ್ನೆಗೆ ಭವಿಷ್ಯವಷ್ಟೇ ಉತ್ತರ ನೀಡಬಲ್ಲುದು.

ಅದೇ ಸಂದರ್ಭದಲ್ಲಿ ಮಿಲಿಂದ್ ದೇವ್ರಾನಂತಹ ವ್ಯಕ್ತಿಗಳು ಹೇಗೆ ರಾಜಕಾರಣ ಮತ್ತು ಉದ್ದಿಮೆಪತಿಗಳ ನಡುವಿನ ಕೊಂಡಿಯಾಗಿ ಎಲ್ಲಾ ಕಾಲದಲ್ಲೂ ಚಲಾವಣೆಯಲ್ಲಿರುತ್ತಾರೆಂಬುದನ್ನೂ ಈ ಬೆಳವಣಿಗೆ ತೋರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...