Homeಮುಖಪುಟಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

- Advertisement -
- Advertisement -

ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಬಂದಾ ಜೈಲಿನಲ್ಲಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ಹತ್ಯೆಗೆ ಸಂಚು ರೂಪಿಸಿದೆ ಎಂದು ಆರೋಪಿಸಿ ಅನ್ಸಾರಿ ಕಟುಂಬ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಅನ್ಸಾರಿ ಅವರ ಕಿರಿಯ ಮಗ ಉಮರ್ ಅನ್ಸಾರಿ ಅವರು ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಬಂದಾ ಜೈಲಿನಿಂದ ಸ್ಥಳಾಂತರಿಸಿ ತಮ್ಮ ತಂದೆಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ. ಉತ್ತರಪ್ರದೇಶದ ಬಂದಾ ಜೈಲಿನಲ್ಲಿ ಮುಖ್ತಾರ್ ತನ್ನ ಜೀವಕ್ಕೆ  ಗಂಭೀರ ಬೆದರಿಕೆಯನ್ನು ಎದುರಿಸುತ್ತಾರೆ ಎಂದು ಉಮರ್ ಸುಪ್ರೀಂಗೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಉತ್ತರ ಪ್ರದೇಶದ ಪೂರ್ವ ಮೌ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಮಾಜಿ ಶಾಸಕ ಮುಖ್ತಾರ್,  ಅವರ ಕುಟುಂಬಸ್ಥರು, ಬೆಂಬಲಿಗರ ಮೇಲೆ 2017ರಲ್ಲಿ ಯೋಗಿ ಅಧಿಕಾರಕ್ಕೆ ಬಂದ ನಂತರ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರವು ಮುಖ್ತಾರ್‌ನನ್ನು ದರೋಡೆಕೋರ ಮತ್ತು ಗ್ಯಾಂಗ್ IS191ನ ಮುಖ್ಯಸ್ಥ ಎಂದು ಹೇಳಿಕೊಂಡಿದ್ದು ಮುಖ್ತಾರ್‌ ಮತ್ತು ಅವನ ಮಕ್ಕಳು, ಹಾಲಿ ಶಾಸಕ ಅಬ್ಬಾಸ್ ಅನ್ಸಾರಿ, ಸಹೋದರ ಮತ್ತು ಮಾಜಿ ಸಂಸದ ಅಫ್ಜಲ್ ಅನ್ಸಾರಿ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದೆ.

ಕಟ್ಟುನಿಟ್ಟಾದ ದರೋಡೆಕೋರರ ಕಾಯಿದೆಯಡಿಯಲ್ಲಿ ಅನ್ಸಾರಿ ಕುಟುಂಬಕ್ಕೆ ಸೇರಿದ ಕೋಟಿಗಟ್ಟಲೆ ಮೌಲ್ಯದ ಆಸ್ತಿಯನ್ನು ಸರ್ಕಾರವು ವಶಪಡಿಸಿಕೊಂಡಿದೆ ಮತ್ತು ನೆಲಸಮಗೊಳಿಸಿದೆ.

ಅರ್ಜಿದಾರರಾದ ಉಮರ್ ಅನ್ಸಾರಿ ಅವರು ತಮ್ಮ ತಂದೆಯ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.  ಪ್ರಯಾಗ್‌ರಾಜ್‌ನಲ್ಲಿ ಮಾಜಿ ಲೋಕಸಭಾ ಸಂಸದ ಮತ್ತು ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ತಂಡದ ಎದುರು ಪತ್ರಕರ್ತನ ಸೋಗಿನಲ್ಲಿ ಬಂದು ಹತ್ಯೆಗೈದ ಬಗ್ಗೆ ಉಲ್ಲೇಖಿಸಲಾಗಿದೆ. ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಬಂಧಿತ ಅತೀಕ್ ರಕ್ಷಣೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.

ಮುಖ್ತಾರ್ ಅವರ ಪುತ್ರ ಉಮರ್ ಅವರು ತಮ್ಮ ಅರ್ಜಿಯಲ್ಲಿ, ಆದಿತ್ಯನಾಥ್ ಸರ್ಕಾರವು ಮುಖ್ತಾರ್‌ನ್ನು  ಜೈಲಿನಲ್ಲಿ ಹತ್ಯೆಗೆ ದೊಡ್ಡ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬೆದರಿಕೆಯ ಆರೋಪವು ವಿಶ್ವಾಸಾರ್ಹ ಮಾಹಿತಿಯನ್ನು ಆಧರಿಸಿದೆ. ತಂದೆಯ ಜೀವವು ಗಂಭೀರ ಅಪಾಯದಲ್ಲಿದೆ. ಬಂದಾ ಜೈಲಿನಲ್ಲಿ ಅವರನ್ನು ಹತ್ಯೆಗೆ ಸಂಚು ರೂಪಿಸಲಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

2005ರಲ್ಲಿ ಬಿಜೆಪಿ ಶಾಸಕ ಕೃಷ್ಣಾನಂದ್ ರೈ ಅವರ ಹತ್ಯೆಯ ಆರೋಪದಲ್ಲಿ ಮುಕ್ತಾರ್ ಅವರನ್ನು ಈ ವರ್ಷದ ಆರಂಭದಲ್ಲಿ 10 ವರ್ಷಗಳ ಶಿಕ್ಷೆಗೆ ಗುರಿಪಡಿಸಲಾಯಿತು. ರೈ ಹತ್ಯೆ ಆರೋಪಿಗಳ ಪೈಕಿ ಈಗಾಗಲೇ ನಾಲ್ವರನ್ನು ಕೊಲೆ ಮಾಡಲಾಗಿದೆ. 2006ರಲ್ಲಿ ಫಿರ್ದೌಸ್‌ನನ್ನು ಎಸ್‌ಟಿಎಫ್ ಗುಂಡಿಕ್ಕಿ ಕೊಂದರೆ, ಪ್ರೇಮ್ ಪ್ರಕಾಶ್ ಸಿಂಗ್ ಅಲಿಯಾಸ್ ಮುನ್ನಾ ಬಜರಂಗಿಯನ್ನು 2018ರಲ್ಲಿ ಬಾಗ್‌ಪತ್ ಜೈಲಿನಲ್ಲಿ ಇನ್ನೊಬ್ಬ ಅಪರಾಧಿ ದರೋಡೆಕೋರ ಸುನಿಲ್ ರಾಠಿ ಕೊಲೆ ಮಾಡಿದ್ದಾನೆ. ಆತನ ಹತ್ಯೆಗೆ ಒಂದು ವಾರಕ್ಕೂ ಮುನ್ನ ಬಜರಂಗಿಯ ಪತ್ನಿ ಸೀಮಾ ಸಿಂಗ್ ಲಕ್ನೋದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆಲವು ರಾಜಕೀಯ ಮುಖಂಡರು ಮತ್ತು ಅಧಿಕಾರಿಗಳು ಸೇರಿ ಪತಿಯ ಕೊಲೆಗೆ ಜೈಲಿನ ಹೊರಗೆ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಝಾನ್ಸಿ ಜೈಲಿನಲ್ಲಿದ್ದ ಸಮಯದಲ್ಲಿ ಆಕೆಯ ಪತಿಗೆ ವಿಷ ಕೊಡುವ ಪ್ರಯತ್ನ ನಡೆದಿತ್ತು ಎಂದು ಸಿಂಗ್ ಹೇಳಿಕೊಂಡಿದ್ದರು.

ಮುಖ್ತಾರ್ ಅವರ ಇನ್ನೊಬ್ಬ ಸಹಾಯಕ ರಾಕೇಶ್ ಪಾಂಡೆಯನ್ನು 2020ರ ಆಗಸ್ಟ್‌ನಲ್ಲಿ ಎನ್‌ಕೌಂಟರ್‌ನಲ್ಲಿ ಕೊಲೆ ಮಾಡಲಾಗಿದೆ. ಮುಖ್ತಾರ್‌ನ ನಿಕಟನಾಗಿದ್ದ ಸಂಜೀವ್ ಮಹೇಶ್ವರಿ ಅಲಿಯಾಸ್ ಜೀವಾ ಅವರನ್ನು ಜೂ.2023ರಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾಗ ಲಕ್ನೋದ ನ್ಯಾಯಾಲಯದ ಕೊಠಡಿಯೊಳಗೆ ಗುಂಡಿಕ್ಕಿ ಕೊಲ್ಲಲಾಯಿತು. ಬಿಜೆಪಿ ನಾಯಕ ಬ್ರಹ್ಮದತ್ ದ್ವಿವೇದಿ ಹತ್ಯೆ ಪ್ರಕರಣದಲ್ಲೂ ಜೀವಾ ಆರೋಪಿಯಾಗಿದ್ದ.

ತನ್ನ ಅರ್ಜಿಯಲ್ಲಿ ಉಮರ್ ಅನ್ಸಾರಿ, ವಿಶ್ವಾಸಾರ್ಹ ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ ತಂದೆಯನ್ನು ಹತ್ಯೆ ಮಾಡುವ ಉದ್ದೇಶದಿಂದ ಕೊಲೆಗಾರ ವ್ಯಕ್ತಿಗಳನ್ನು ಪೊಲೀಸರು ಬಂಧಿಸುತ್ತಾರೆ. ನಂತರ ಅವರನ್ನು ಪ್ರಸ್ತುತ ತಂದೆ ಇರುವ ಬಂದಾ ಜೈಲಿಗೆ ಕರೆದೊಯ್ಯಲಾಗುತ್ತದೆ. ಈ ಬಾಡಿಗೆ ಕೊಲೆಗಾರರಿಗೆ ಜೈಲಿನೊಳಗೆ ಶಸ್ತ್ರಾಸ್ತ್ರಗಳನ್ನು ನೀಡಿ ಕೃತ್ಯ ನಡೆಸಲಾಗುತ್ತದೆ. ಆದರೆ ಸಂಪೂರ್ಣ ಘಟನೆಯನ್ನು ಗ್ಯಾಂಗ್-ವಾರ್ ಎಂದು ದಾರಿ ತಪ್ಪಿಸಲಾಗುತ್ತದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ.

ಮುಖ್ತಾರ್ ಅವರು 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರು ಆರು ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಇದರಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಅವರ ಸಹೋದರ ಅವದೇಶ್ ರೈ ಹತ್ಯೆಗೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯವು ಜೂನ್‌ನಲ್ಲಿ ಅವರಿಗೆ ನೀಡಿದ್ದ ಜೀವಾವಧಿ ಶಿಕ್ಷೆ ಕೂಡ ಸೇರಿದೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...