Homeಮುಖಪುಟಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

- Advertisement -
- Advertisement -

ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಬಂದಾ ಜೈಲಿನಲ್ಲಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ಹತ್ಯೆಗೆ ಸಂಚು ರೂಪಿಸಿದೆ ಎಂದು ಆರೋಪಿಸಿ ಅನ್ಸಾರಿ ಕಟುಂಬ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಅನ್ಸಾರಿ ಅವರ ಕಿರಿಯ ಮಗ ಉಮರ್ ಅನ್ಸಾರಿ ಅವರು ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಬಂದಾ ಜೈಲಿನಿಂದ ಸ್ಥಳಾಂತರಿಸಿ ತಮ್ಮ ತಂದೆಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ. ಉತ್ತರಪ್ರದೇಶದ ಬಂದಾ ಜೈಲಿನಲ್ಲಿ ಮುಖ್ತಾರ್ ತನ್ನ ಜೀವಕ್ಕೆ  ಗಂಭೀರ ಬೆದರಿಕೆಯನ್ನು ಎದುರಿಸುತ್ತಾರೆ ಎಂದು ಉಮರ್ ಸುಪ್ರೀಂಗೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಉತ್ತರ ಪ್ರದೇಶದ ಪೂರ್ವ ಮೌ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಮಾಜಿ ಶಾಸಕ ಮುಖ್ತಾರ್,  ಅವರ ಕುಟುಂಬಸ್ಥರು, ಬೆಂಬಲಿಗರ ಮೇಲೆ 2017ರಲ್ಲಿ ಯೋಗಿ ಅಧಿಕಾರಕ್ಕೆ ಬಂದ ನಂತರ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರವು ಮುಖ್ತಾರ್‌ನನ್ನು ದರೋಡೆಕೋರ ಮತ್ತು ಗ್ಯಾಂಗ್ IS191ನ ಮುಖ್ಯಸ್ಥ ಎಂದು ಹೇಳಿಕೊಂಡಿದ್ದು ಮುಖ್ತಾರ್‌ ಮತ್ತು ಅವನ ಮಕ್ಕಳು, ಹಾಲಿ ಶಾಸಕ ಅಬ್ಬಾಸ್ ಅನ್ಸಾರಿ, ಸಹೋದರ ಮತ್ತು ಮಾಜಿ ಸಂಸದ ಅಫ್ಜಲ್ ಅನ್ಸಾರಿ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದೆ.

ಕಟ್ಟುನಿಟ್ಟಾದ ದರೋಡೆಕೋರರ ಕಾಯಿದೆಯಡಿಯಲ್ಲಿ ಅನ್ಸಾರಿ ಕುಟುಂಬಕ್ಕೆ ಸೇರಿದ ಕೋಟಿಗಟ್ಟಲೆ ಮೌಲ್ಯದ ಆಸ್ತಿಯನ್ನು ಸರ್ಕಾರವು ವಶಪಡಿಸಿಕೊಂಡಿದೆ ಮತ್ತು ನೆಲಸಮಗೊಳಿಸಿದೆ.

ಅರ್ಜಿದಾರರಾದ ಉಮರ್ ಅನ್ಸಾರಿ ಅವರು ತಮ್ಮ ತಂದೆಯ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.  ಪ್ರಯಾಗ್‌ರಾಜ್‌ನಲ್ಲಿ ಮಾಜಿ ಲೋಕಸಭಾ ಸಂಸದ ಮತ್ತು ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ತಂಡದ ಎದುರು ಪತ್ರಕರ್ತನ ಸೋಗಿನಲ್ಲಿ ಬಂದು ಹತ್ಯೆಗೈದ ಬಗ್ಗೆ ಉಲ್ಲೇಖಿಸಲಾಗಿದೆ. ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಬಂಧಿತ ಅತೀಕ್ ರಕ್ಷಣೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.

ಮುಖ್ತಾರ್ ಅವರ ಪುತ್ರ ಉಮರ್ ಅವರು ತಮ್ಮ ಅರ್ಜಿಯಲ್ಲಿ, ಆದಿತ್ಯನಾಥ್ ಸರ್ಕಾರವು ಮುಖ್ತಾರ್‌ನ್ನು  ಜೈಲಿನಲ್ಲಿ ಹತ್ಯೆಗೆ ದೊಡ್ಡ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬೆದರಿಕೆಯ ಆರೋಪವು ವಿಶ್ವಾಸಾರ್ಹ ಮಾಹಿತಿಯನ್ನು ಆಧರಿಸಿದೆ. ತಂದೆಯ ಜೀವವು ಗಂಭೀರ ಅಪಾಯದಲ್ಲಿದೆ. ಬಂದಾ ಜೈಲಿನಲ್ಲಿ ಅವರನ್ನು ಹತ್ಯೆಗೆ ಸಂಚು ರೂಪಿಸಲಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

2005ರಲ್ಲಿ ಬಿಜೆಪಿ ಶಾಸಕ ಕೃಷ್ಣಾನಂದ್ ರೈ ಅವರ ಹತ್ಯೆಯ ಆರೋಪದಲ್ಲಿ ಮುಕ್ತಾರ್ ಅವರನ್ನು ಈ ವರ್ಷದ ಆರಂಭದಲ್ಲಿ 10 ವರ್ಷಗಳ ಶಿಕ್ಷೆಗೆ ಗುರಿಪಡಿಸಲಾಯಿತು. ರೈ ಹತ್ಯೆ ಆರೋಪಿಗಳ ಪೈಕಿ ಈಗಾಗಲೇ ನಾಲ್ವರನ್ನು ಕೊಲೆ ಮಾಡಲಾಗಿದೆ. 2006ರಲ್ಲಿ ಫಿರ್ದೌಸ್‌ನನ್ನು ಎಸ್‌ಟಿಎಫ್ ಗುಂಡಿಕ್ಕಿ ಕೊಂದರೆ, ಪ್ರೇಮ್ ಪ್ರಕಾಶ್ ಸಿಂಗ್ ಅಲಿಯಾಸ್ ಮುನ್ನಾ ಬಜರಂಗಿಯನ್ನು 2018ರಲ್ಲಿ ಬಾಗ್‌ಪತ್ ಜೈಲಿನಲ್ಲಿ ಇನ್ನೊಬ್ಬ ಅಪರಾಧಿ ದರೋಡೆಕೋರ ಸುನಿಲ್ ರಾಠಿ ಕೊಲೆ ಮಾಡಿದ್ದಾನೆ. ಆತನ ಹತ್ಯೆಗೆ ಒಂದು ವಾರಕ್ಕೂ ಮುನ್ನ ಬಜರಂಗಿಯ ಪತ್ನಿ ಸೀಮಾ ಸಿಂಗ್ ಲಕ್ನೋದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆಲವು ರಾಜಕೀಯ ಮುಖಂಡರು ಮತ್ತು ಅಧಿಕಾರಿಗಳು ಸೇರಿ ಪತಿಯ ಕೊಲೆಗೆ ಜೈಲಿನ ಹೊರಗೆ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಝಾನ್ಸಿ ಜೈಲಿನಲ್ಲಿದ್ದ ಸಮಯದಲ್ಲಿ ಆಕೆಯ ಪತಿಗೆ ವಿಷ ಕೊಡುವ ಪ್ರಯತ್ನ ನಡೆದಿತ್ತು ಎಂದು ಸಿಂಗ್ ಹೇಳಿಕೊಂಡಿದ್ದರು.

ಮುಖ್ತಾರ್ ಅವರ ಇನ್ನೊಬ್ಬ ಸಹಾಯಕ ರಾಕೇಶ್ ಪಾಂಡೆಯನ್ನು 2020ರ ಆಗಸ್ಟ್‌ನಲ್ಲಿ ಎನ್‌ಕೌಂಟರ್‌ನಲ್ಲಿ ಕೊಲೆ ಮಾಡಲಾಗಿದೆ. ಮುಖ್ತಾರ್‌ನ ನಿಕಟನಾಗಿದ್ದ ಸಂಜೀವ್ ಮಹೇಶ್ವರಿ ಅಲಿಯಾಸ್ ಜೀವಾ ಅವರನ್ನು ಜೂ.2023ರಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾಗ ಲಕ್ನೋದ ನ್ಯಾಯಾಲಯದ ಕೊಠಡಿಯೊಳಗೆ ಗುಂಡಿಕ್ಕಿ ಕೊಲ್ಲಲಾಯಿತು. ಬಿಜೆಪಿ ನಾಯಕ ಬ್ರಹ್ಮದತ್ ದ್ವಿವೇದಿ ಹತ್ಯೆ ಪ್ರಕರಣದಲ್ಲೂ ಜೀವಾ ಆರೋಪಿಯಾಗಿದ್ದ.

ತನ್ನ ಅರ್ಜಿಯಲ್ಲಿ ಉಮರ್ ಅನ್ಸಾರಿ, ವಿಶ್ವಾಸಾರ್ಹ ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ ತಂದೆಯನ್ನು ಹತ್ಯೆ ಮಾಡುವ ಉದ್ದೇಶದಿಂದ ಕೊಲೆಗಾರ ವ್ಯಕ್ತಿಗಳನ್ನು ಪೊಲೀಸರು ಬಂಧಿಸುತ್ತಾರೆ. ನಂತರ ಅವರನ್ನು ಪ್ರಸ್ತುತ ತಂದೆ ಇರುವ ಬಂದಾ ಜೈಲಿಗೆ ಕರೆದೊಯ್ಯಲಾಗುತ್ತದೆ. ಈ ಬಾಡಿಗೆ ಕೊಲೆಗಾರರಿಗೆ ಜೈಲಿನೊಳಗೆ ಶಸ್ತ್ರಾಸ್ತ್ರಗಳನ್ನು ನೀಡಿ ಕೃತ್ಯ ನಡೆಸಲಾಗುತ್ತದೆ. ಆದರೆ ಸಂಪೂರ್ಣ ಘಟನೆಯನ್ನು ಗ್ಯಾಂಗ್-ವಾರ್ ಎಂದು ದಾರಿ ತಪ್ಪಿಸಲಾಗುತ್ತದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ.

ಮುಖ್ತಾರ್ ಅವರು 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರು ಆರು ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಇದರಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಅವರ ಸಹೋದರ ಅವದೇಶ್ ರೈ ಹತ್ಯೆಗೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯವು ಜೂನ್‌ನಲ್ಲಿ ಅವರಿಗೆ ನೀಡಿದ್ದ ಜೀವಾವಧಿ ಶಿಕ್ಷೆ ಕೂಡ ಸೇರಿದೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...