Homeಮುಖಪುಟಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

- Advertisement -
- Advertisement -

ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಬಂದಾ ಜೈಲಿನಲ್ಲಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿಯ ಹತ್ಯೆಗೆ ಸಂಚು ರೂಪಿಸಿದೆ ಎಂದು ಆರೋಪಿಸಿ ಅನ್ಸಾರಿ ಕಟುಂಬ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಅನ್ಸಾರಿ ಅವರ ಕಿರಿಯ ಮಗ ಉಮರ್ ಅನ್ಸಾರಿ ಅವರು ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಬಂದಾ ಜೈಲಿನಿಂದ ಸ್ಥಳಾಂತರಿಸಿ ತಮ್ಮ ತಂದೆಗೆ ರಕ್ಷಣೆ ನೀಡುವಂತೆ ಕೋರಿದ್ದಾರೆ. ಉತ್ತರಪ್ರದೇಶದ ಬಂದಾ ಜೈಲಿನಲ್ಲಿ ಮುಖ್ತಾರ್ ತನ್ನ ಜೀವಕ್ಕೆ  ಗಂಭೀರ ಬೆದರಿಕೆಯನ್ನು ಎದುರಿಸುತ್ತಾರೆ ಎಂದು ಉಮರ್ ಸುಪ್ರೀಂಗೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಉತ್ತರ ಪ್ರದೇಶದ ಪೂರ್ವ ಮೌ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಮಾಜಿ ಶಾಸಕ ಮುಖ್ತಾರ್,  ಅವರ ಕುಟುಂಬಸ್ಥರು, ಬೆಂಬಲಿಗರ ಮೇಲೆ 2017ರಲ್ಲಿ ಯೋಗಿ ಅಧಿಕಾರಕ್ಕೆ ಬಂದ ನಂತರ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರವು ಮುಖ್ತಾರ್‌ನನ್ನು ದರೋಡೆಕೋರ ಮತ್ತು ಗ್ಯಾಂಗ್ IS191ನ ಮುಖ್ಯಸ್ಥ ಎಂದು ಹೇಳಿಕೊಂಡಿದ್ದು ಮುಖ್ತಾರ್‌ ಮತ್ತು ಅವನ ಮಕ್ಕಳು, ಹಾಲಿ ಶಾಸಕ ಅಬ್ಬಾಸ್ ಅನ್ಸಾರಿ, ಸಹೋದರ ಮತ್ತು ಮಾಜಿ ಸಂಸದ ಅಫ್ಜಲ್ ಅನ್ಸಾರಿ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದೆ.

ಕಟ್ಟುನಿಟ್ಟಾದ ದರೋಡೆಕೋರರ ಕಾಯಿದೆಯಡಿಯಲ್ಲಿ ಅನ್ಸಾರಿ ಕುಟುಂಬಕ್ಕೆ ಸೇರಿದ ಕೋಟಿಗಟ್ಟಲೆ ಮೌಲ್ಯದ ಆಸ್ತಿಯನ್ನು ಸರ್ಕಾರವು ವಶಪಡಿಸಿಕೊಂಡಿದೆ ಮತ್ತು ನೆಲಸಮಗೊಳಿಸಿದೆ.

ಅರ್ಜಿದಾರರಾದ ಉಮರ್ ಅನ್ಸಾರಿ ಅವರು ತಮ್ಮ ತಂದೆಯ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.  ಪ್ರಯಾಗ್‌ರಾಜ್‌ನಲ್ಲಿ ಮಾಜಿ ಲೋಕಸಭಾ ಸಂಸದ ಮತ್ತು ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ತಂಡದ ಎದುರು ಪತ್ರಕರ್ತನ ಸೋಗಿನಲ್ಲಿ ಬಂದು ಹತ್ಯೆಗೈದ ಬಗ್ಗೆ ಉಲ್ಲೇಖಿಸಲಾಗಿದೆ. ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಬಂಧಿತ ಅತೀಕ್ ರಕ್ಷಣೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.

ಮುಖ್ತಾರ್ ಅವರ ಪುತ್ರ ಉಮರ್ ಅವರು ತಮ್ಮ ಅರ್ಜಿಯಲ್ಲಿ, ಆದಿತ್ಯನಾಥ್ ಸರ್ಕಾರವು ಮುಖ್ತಾರ್‌ನ್ನು  ಜೈಲಿನಲ್ಲಿ ಹತ್ಯೆಗೆ ದೊಡ್ಡ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬೆದರಿಕೆಯ ಆರೋಪವು ವಿಶ್ವಾಸಾರ್ಹ ಮಾಹಿತಿಯನ್ನು ಆಧರಿಸಿದೆ. ತಂದೆಯ ಜೀವವು ಗಂಭೀರ ಅಪಾಯದಲ್ಲಿದೆ. ಬಂದಾ ಜೈಲಿನಲ್ಲಿ ಅವರನ್ನು ಹತ್ಯೆಗೆ ಸಂಚು ರೂಪಿಸಲಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

2005ರಲ್ಲಿ ಬಿಜೆಪಿ ಶಾಸಕ ಕೃಷ್ಣಾನಂದ್ ರೈ ಅವರ ಹತ್ಯೆಯ ಆರೋಪದಲ್ಲಿ ಮುಕ್ತಾರ್ ಅವರನ್ನು ಈ ವರ್ಷದ ಆರಂಭದಲ್ಲಿ 10 ವರ್ಷಗಳ ಶಿಕ್ಷೆಗೆ ಗುರಿಪಡಿಸಲಾಯಿತು. ರೈ ಹತ್ಯೆ ಆರೋಪಿಗಳ ಪೈಕಿ ಈಗಾಗಲೇ ನಾಲ್ವರನ್ನು ಕೊಲೆ ಮಾಡಲಾಗಿದೆ. 2006ರಲ್ಲಿ ಫಿರ್ದೌಸ್‌ನನ್ನು ಎಸ್‌ಟಿಎಫ್ ಗುಂಡಿಕ್ಕಿ ಕೊಂದರೆ, ಪ್ರೇಮ್ ಪ್ರಕಾಶ್ ಸಿಂಗ್ ಅಲಿಯಾಸ್ ಮುನ್ನಾ ಬಜರಂಗಿಯನ್ನು 2018ರಲ್ಲಿ ಬಾಗ್‌ಪತ್ ಜೈಲಿನಲ್ಲಿ ಇನ್ನೊಬ್ಬ ಅಪರಾಧಿ ದರೋಡೆಕೋರ ಸುನಿಲ್ ರಾಠಿ ಕೊಲೆ ಮಾಡಿದ್ದಾನೆ. ಆತನ ಹತ್ಯೆಗೆ ಒಂದು ವಾರಕ್ಕೂ ಮುನ್ನ ಬಜರಂಗಿಯ ಪತ್ನಿ ಸೀಮಾ ಸಿಂಗ್ ಲಕ್ನೋದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೆಲವು ರಾಜಕೀಯ ಮುಖಂಡರು ಮತ್ತು ಅಧಿಕಾರಿಗಳು ಸೇರಿ ಪತಿಯ ಕೊಲೆಗೆ ಜೈಲಿನ ಹೊರಗೆ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಝಾನ್ಸಿ ಜೈಲಿನಲ್ಲಿದ್ದ ಸಮಯದಲ್ಲಿ ಆಕೆಯ ಪತಿಗೆ ವಿಷ ಕೊಡುವ ಪ್ರಯತ್ನ ನಡೆದಿತ್ತು ಎಂದು ಸಿಂಗ್ ಹೇಳಿಕೊಂಡಿದ್ದರು.

ಮುಖ್ತಾರ್ ಅವರ ಇನ್ನೊಬ್ಬ ಸಹಾಯಕ ರಾಕೇಶ್ ಪಾಂಡೆಯನ್ನು 2020ರ ಆಗಸ್ಟ್‌ನಲ್ಲಿ ಎನ್‌ಕೌಂಟರ್‌ನಲ್ಲಿ ಕೊಲೆ ಮಾಡಲಾಗಿದೆ. ಮುಖ್ತಾರ್‌ನ ನಿಕಟನಾಗಿದ್ದ ಸಂಜೀವ್ ಮಹೇಶ್ವರಿ ಅಲಿಯಾಸ್ ಜೀವಾ ಅವರನ್ನು ಜೂ.2023ರಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾಗ ಲಕ್ನೋದ ನ್ಯಾಯಾಲಯದ ಕೊಠಡಿಯೊಳಗೆ ಗುಂಡಿಕ್ಕಿ ಕೊಲ್ಲಲಾಯಿತು. ಬಿಜೆಪಿ ನಾಯಕ ಬ್ರಹ್ಮದತ್ ದ್ವಿವೇದಿ ಹತ್ಯೆ ಪ್ರಕರಣದಲ್ಲೂ ಜೀವಾ ಆರೋಪಿಯಾಗಿದ್ದ.

ತನ್ನ ಅರ್ಜಿಯಲ್ಲಿ ಉಮರ್ ಅನ್ಸಾರಿ, ವಿಶ್ವಾಸಾರ್ಹ ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ ತಂದೆಯನ್ನು ಹತ್ಯೆ ಮಾಡುವ ಉದ್ದೇಶದಿಂದ ಕೊಲೆಗಾರ ವ್ಯಕ್ತಿಗಳನ್ನು ಪೊಲೀಸರು ಬಂಧಿಸುತ್ತಾರೆ. ನಂತರ ಅವರನ್ನು ಪ್ರಸ್ತುತ ತಂದೆ ಇರುವ ಬಂದಾ ಜೈಲಿಗೆ ಕರೆದೊಯ್ಯಲಾಗುತ್ತದೆ. ಈ ಬಾಡಿಗೆ ಕೊಲೆಗಾರರಿಗೆ ಜೈಲಿನೊಳಗೆ ಶಸ್ತ್ರಾಸ್ತ್ರಗಳನ್ನು ನೀಡಿ ಕೃತ್ಯ ನಡೆಸಲಾಗುತ್ತದೆ. ಆದರೆ ಸಂಪೂರ್ಣ ಘಟನೆಯನ್ನು ಗ್ಯಾಂಗ್-ವಾರ್ ಎಂದು ದಾರಿ ತಪ್ಪಿಸಲಾಗುತ್ತದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ.

ಮುಖ್ತಾರ್ ಅವರು 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರು ಆರು ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಇದರಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಅವರ ಸಹೋದರ ಅವದೇಶ್ ರೈ ಹತ್ಯೆಗೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯವು ಜೂನ್‌ನಲ್ಲಿ ಅವರಿಗೆ ನೀಡಿದ್ದ ಜೀವಾವಧಿ ಶಿಕ್ಷೆ ಕೂಡ ಸೇರಿದೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...