Homeಮುಖಪುಟಮುಕುಲ್ ರಾಯ್ ನಿರ್ಗಮನ: ಬಂಗಾಳ ಬಿಜೆಪಿಯಲ್ಲಿ ಆಂತರೀಕ ಕಲಹ ಆರಂಭ

ಮುಕುಲ್ ರಾಯ್ ನಿರ್ಗಮನ: ಬಂಗಾಳ ಬಿಜೆಪಿಯಲ್ಲಿ ಆಂತರೀಕ ಕಲಹ ಆರಂಭ

- Advertisement -
- Advertisement -

ಬಿಜೆಪಿಯ ಹಿರಿಯ ನಾಯಕರಾಗಿದ್ದ ಮುಕುಲ್ ರಾಯ್ ತಮ್ಮ ಮಗನೊಂದಿಗೆ ಬಿಜೆಪಿ ತೊರೆದು ತಮ್ಮ ಹಳೆಯ ಟಿಎಂಸಿ ಪಕ್ಷ ಸೇರಿದ್ದು ಸರಿಯಷ್ಟೆ. ತದನಂತರ ಬಂಗಾಳ ಬಿಜೆಪಿಯಲ್ಲಿ ಆರೋಪ – ಪ್ರತ್ಯಾರೋಪಗಳು ಭುಗಿಲೆದ್ದಿದ್ದು ಬಹಳಷ್ಟು ಶಾಸಕರು ಬಹಿರಂಗವಾಗಿಯೇ ಬಿಜೆಪಿ ನಾಯಕತ್ವದ ವಿರುದ್ಧ ಪ್ರಶ್ನೆಗಳನೆತ್ತಿದ್ದಾರೆ.

ಮುಕುಲ್ ರಾಯ್‌ರವರು 2019 ರ ಲೋಕಸಭಾ ಚುನಾವಣೆಯ ಉಸ್ತುವಾರಿ ವಹಿಸಿಕೊಂಡು ಅತ್ಯುತ್ತಮವಾಗಿ ಪಕ್ಷ ಸಂಘಟಿಸಿದ್ದರು. ಹಾಗಾಗಿಯೇ 18 ಸಂಸತ್ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗಿತ್ತು. ಆದರೆ ತದನಂತರ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಯಿತು. 2021ರ ವಿಧಾನಸಭಾ ಚುನಾವಣೆಯಲ್ಲಿ ರಾಯ್ ಅವರ ರಾಜಕೀಯ ಕುಶಾಗ್ರಮತಿಯನ್ನು ಬಳಸಿಕೊಳ್ಳುವಲ್ಲಿ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಕೆಲ ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರನ್ನು ಕೇವಲ ಪಕ್ಷದ ವಿಧಾನಸಭಾ ಅಭ್ಯರ್ಥಿಯಂತೆ ನಡೆಸಿಕೊಳ್ಳಲಾಯಿತು. ಇತ್ತೀಚೆಗೆ ಪಕ್ಷ ಸೇರಿದ ಸುವೇಂದು ಅಧಿಕಾರಿ ಮತ್ತು ರಾಜ್ಬ್ ಬ್ಯಾನರ್ಜಿಯವರನ್ನು ಮುನ್ನೆಲೆಗೆ ತರಲಾಯಿತು. ಹಾಗಾಗಿಯೇ ಬಿಜೆಪಿ ಸೋಲಬೇಕಾಯಿತು ಎಂದು ಶಾಸಕರು ದೂರಿದ್ದಾರೆ.

ಉತ್ತರ 24 ಪರಗಣ ಜಿಲ್ಲೆಯ ಬಗ್ದಹ್ ಕ್ಷೇತ್ರದ ಬಿಜೆಪಿ ಶಾಸಕ ಬೈಸ್ವಜಿತ್ ದಾಸ್ ಮಾತನಾಡಿ “ಮುಕುಲ್ ರಾಯ್ ಟಿಎಂಸಿಗೆ ಮರಳಿರುವುದು ಬಂಗಾಳ ಬಿಜೆಪಿಗೆ ದೊಡ್ಡ ಹೊಡೆತವಾಗಿದೆ. ನಾನು ಮುಕುಲ್ ರಾಯ್, ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿಯೊಂದಿಗೆ ಸಾಮಾನ್ಯವಾಗಿ ಮಾತನಾಡುತ್ತಿದ್ದೇನೆಯೇ ಹೊರತು ಅದರಲ್ಲಿ ಯಾವುದೇ ರಾಜಕೀಯವಿಲ್ಲ. ನನ್ನ ಭವಿಷ್ಯದ ರಾಜಕೀಯವನ್ನು ಸಮಯ ನಿರ್ಧರಿಸುತ್ತದೆ” ಎನ್ನುವ ಮೂಲಕ ತಾವು ಟಿಎಂಸಿ ಹಾದಿಯಲ್ಲಿದ್ದೇನೆ ಎಂಬ ಸುಳಿವು ನೀಡಿದ್ದಾರೆ.

ಟಿಎಂಸಿಯಿಂದ ಬಿಜೆಪಿಗೆ ಬಂದು ನೋಪುರದಿಂದ ಶಾಸಕನಾಗಿರುವ ಸುನೀಲ್ ಸಿಂಗ್ ಮಾತನಾಡಿ “ಮುಕುಲ್ ರಾಯ್‌ರವರ ನಿರ್ಗಮನ ಬಿಜೆಪಿ ಮೇಲೆ ನಕರಾತ್ಮಕ ಪರಿಣಾಮ ಬೀರಲಿದೆ. ನಾನು ಮುಕುಲ್ ರಾಯ್‌ರವರೊಂದಿಗೆ ಬಿಜೆಪಿಗೆ ಬಂದಿದ್ದೆ. ಭವಿಷ್ಯದಲ್ಲಿ ಏನಾಗುತ್ತದೆಯೋ ನೋಡೋಣ” ಎಂದಿದ್ದಾರೆ.

ಇದಕ್ಕೆ ತದ್ವಿರುದ್ದವಾಗಿ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ “ಮುಕುಲ್ ರಾಯ್ ನಿರ್ಗಮನ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದಿದ್ದಾರೆ.

ಒಟ್ಟಿನಲ್ಲಿ ಮತ್ತಷ್ಟು ಜನ ಮುಕುಲ್ ರಾಯ್‌ ಹಾದಿಯಲ್ಲಿದ್ದಾರೆ. ಅತ್ತ ಟಿಎಂಸಿಯ ಮಮತಾ ಬ್ಯಾನರ್ಜಿ ಸಹ ಮತ್ತಷ್ಟು ಜನರನ್ನು ಸೆಳೆಯಲು ಮಿಷನ್ ಒಂದನ್ನು ರೂಪಿಸಿದ್ದಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಮುಕುಲ್ ರಾಯ್ ಬಿಜೆಪಿ ತೊರೆಯಲು ಕಾರಣಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...