- Advertisement -
- Advertisement -
ಸಮಾಜವಾದಿ ಪಕ್ಷದ ಪಿತಾಮಹ ಮುಲಾಯಂ ಸಿಂಗ್ ಯಾದವ್ ಮಲಬದ್ಧತೆ ಮತ್ತು ಹೊಟ್ಟೆನೋವಿನ ಸಮಸ್ಯೆಯಿಂದ ಗುರುವಾರ ರಾತ್ರಿ ಲಖನೌದ ಮೆಡಂತ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಹೊಟ್ಟೆನೋವಿನಿಂದ ಬಳಲುತ್ತಿದ್ದರು ಮತ್ತು ಹೊಟ್ಟೆಯ ಸಮಸ್ಯೆಯಿಂದಾಗಿ ಆಹಾರವನ್ನು ಸರಿಯಾಗಿ ತೆಗೆದುಕೊಳ್ಳುತ್ತಿರಲಿಲ್ಲ, ಎಂದ ಮೆಡಂತ ಆಸ್ಪತ್ರೆಯ ನಿರ್ದೇಶಕ ಡಾ. ರಾಕೇಶ್ ಕಪೂರ್, ಅವರ ಒಟ್ಟಾರೆ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.
ಮುಲಾಯಂ ಪುತ್ರ ಅಖಿಲೇಶ್ ಯಾದವ್ ಮತ್ತು ಸೊಸೆ ಡಿಂಪಲ್ ಯಾದವ್ ಸೇರಿದಂತೆ ಸಮಾಜವಾದಿ ಪಕ್ಷದ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದರು.
ಈ ಹಿಂದೆ ಮೇ ತಿಂಗಳಲ್ಲೂ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗೆ 80 ವರ್ಷದ ಹಿರಿಯ ರಾಜಕಾರಣಿ ಮುಲಾಯಂ ಸಿಂಗ್ ಅವರನ್ನು ಅದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ನಂತರ ಅವರನ್ನು ಬಿಡುಗಡೆ ಮಾಡಲಾಗಿತ್ತು
ಓದಿ: ಬೇಕಾಗಿದ್ದಾರೆ, ಹಿಂದಿ ಭೂತವನ್ನು ಓಡಿಸಬಲ್ಲ ಮಂತ್ರವಾದಿಗಳು