Homeಮುಖಪುಟ'ಮುಲ್ಲಾ ಭಯೋತ್ಪಾದಕ': ಲೋಕಸಭೆಯಲ್ಲಿ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ...

‘ಮುಲ್ಲಾ ಭಯೋತ್ಪಾದಕ’: ಲೋಕಸಭೆಯಲ್ಲಿ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ನಿಂದನೆ

- Advertisement -
- Advertisement -

ದಕ್ಷಿಣ ದೆಹಲಿಯ ಬಿಜೆಪಿ ಸಂಸದ ರಮೇಶ್ ಬಿಧುರಿ ಗುರುವಾರ ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಶಾಸಕ ಡ್ಯಾನಿಶ್ ಅಲಿ ಅವರನ್ನು “ಭರ್ವಾ (ಪಿಂಪ್), “ಕತ್ವಾ” (ಸುನ್ನತಿ), “ಮುಲ್ಲಾ” “ಅಟಂಕವಾಡಿ” (ಭಯೋತ್ಪಾದಕ) ಮತ್ತು “ಉಗ್ರವಾದಿ” (ಉಗ್ರವಾದಿ) ಎಂದು ಲೋಕಸಭೆಯಲ್ಲಿ ಕರೆದಿದ್ದಾರೆ.

ಸಂಸತ್ತಿನ ಕೆಳಮನೆಯಲ್ಲಿ ಚಂದ್ರಯಾನ-3ರ ಯಶಸ್ಸಿನ ಚರ್ಚೆಯ ವೇಳೆ ಬಿಜೆಪಿ ನಾಯಕರ ಈ ದ್ವೇಷಪೂರಿತ ಹೇಳಿಕೆ ಹೊರಬಿದ್ದಿದೆ. “ಯೇ ಉಗ್ರವಾದಿ (ಉಗ್ರವಾದಿ), ಯೇ ಆಟಂಕ್ವಾಡಿ ಹೈ, ಉಗ್ರವಾದಿ ಹೈ, ಯೇ ಆಂತಂಕ್ವಾದಿ (ಭಯೋತ್ಪಾದಕ) ಹೈ,” ಎಂದು ಬಿಧುರಿ ಹೇಳುವುದನ್ನು ಕೇಳಬಹುದು.

ಇದನ್ನೂ ಓದಿ: NDA ಆಡಳಿತದ 16 ರಾಜ್ಯಗಳಲ್ಲಿ ಒಬ್ಬರೇ ಒಬ್ಬ ಮಹಿಳಾ ಸಿಎಂಗಳಿಲ್ಲ: ಡೆರೆಕ್ ಓಬ್ರಿಯಾನ್

ಡ್ಯಾನಿಶ್ ಅಲಿ ಲೋಕಸಭೆಯಲ್ಲಿ ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಧುರಿ ಹೇಳಿಕೆಗೆ ರಕ್ಷಣಾ ಸಚಿವ ಮತ್ತು ಲೋಕಸಭೆಯ ಉಪನಾಯಕ ರಾಜನಾಥ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇದೀಗ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರ ಧ್ವೇಷಪೂರಿತ ಹೇಳಿಕೆ ವೈರಲ್ ಆಗುತ್ತಿದ್ದು, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಅವರು ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ”ಮುಸ್ಲಿಮರನ್ನು, ಒಬಿಸಿಗಳನ್ನು ನಿಂದಿಸುವುದು ಬಿಜೆಪಿಯ ಅಂತರ್ಗತ ಸಂಸ್ಕೃತಿಯಾಗಿದೆ. ಈಗ ಹೆಚ್ಚಿನವರಿಗೆ ಅದರಲ್ಲಿ ಯಾವುದೇ ತಪ್ಪು ಕಾಣುತ್ತಿಲ್ಲ. ಮುಸ್ಲಿಮರು ತಮ್ಮ ಸ್ವಂತ ನೆಲದಲ್ಲಿ ಭಯದಿಂದ ಬದುಕುವ ಪರಿಸ್ಥಿತಿಯನ್ನು ನರೇಂದ್ರ ಮೋದಿ ಸರ್ಕಾರ ಸೃಷ್ಟಿಸಿದೆ. ಅವರು ನಗುತ್ತಾ ಎಲ್ಲವನ್ನು ಸಹಿಸಿಕೊಂಡಿದ್ದಾರೆ. ಕ್ಷಮಿಸಿ, ಇದು ಅಪರಾಧ ಎಂದು ಎಂದು ನಾನು ಕರೆಯುತ್ತೇನೆ. ಮಾ ಕಾಳಿ ನನ್ನ ಬೆನ್ನಿಗಿದ್ದಾರೆ” ಎಂದು ಬರೆದಿದ್ದಾರೆ.

ಬಿಧುರಿ ಅವರು ಮಾತನಾಡಿರುವ ವಿಡಿಯೋವನ್ನು ಪತ್ರಕರ್ತ ಮೊಹಮ್ಮದ್ ಜುಬೇರ್ ಹಂಚಿಕೊಂಡಿದ್ದು, ”ಬಿಜೆಪಿ ಸಂಸದ ರಮೇಶಬಿಧುರಿ ಅವರು ಸಂಸದ ಡ್ಯಾನಿಶ್ ಅಲಿ ಅವರನ್ನು “ಭರ್ವಾ (ಪಿಂಪ್), “ಕತ್ವಾ” (ಸುನ್ನತಿ), “ಮುಲ್ಲಾ” “ಅಟಂಕವಾಡಿ” (ಭಯೋತ್ಪಾದಕ) ಮತ್ತು “ಉಗ್ರವಾದಿ” (ಉಗ್ರವಾದಿ) ಎಂದು ಲೋಕಸಭೆಯಲ್ಲಿ ರೆಕಾರ್ಡ್‌ನಲ್ಲಿ ಕರೆಯುವುದನ್ನು ಕೇಳಬಹುದು, ಆದರೆ ರವಿಶಂಕರ್ ಪ್ರಸಾದ್ ಮತ್ತು ಹರ್ಷವರ್ಧನ್ ಅವರು ಈ ಹೇಳಿಕೆಗೆ ನಗುತ್ತ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ” ಎಂದು ವಿಡಿಯೋ ಶೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...