Homeಮುಖಪುಟ'ಮುಲ್ಲಾ ಭಯೋತ್ಪಾದಕ': ಲೋಕಸಭೆಯಲ್ಲಿ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ...

‘ಮುಲ್ಲಾ ಭಯೋತ್ಪಾದಕ’: ಲೋಕಸಭೆಯಲ್ಲಿ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ನಿಂದನೆ

- Advertisement -
- Advertisement -

ದಕ್ಷಿಣ ದೆಹಲಿಯ ಬಿಜೆಪಿ ಸಂಸದ ರಮೇಶ್ ಬಿಧುರಿ ಗುರುವಾರ ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಶಾಸಕ ಡ್ಯಾನಿಶ್ ಅಲಿ ಅವರನ್ನು “ಭರ್ವಾ (ಪಿಂಪ್), “ಕತ್ವಾ” (ಸುನ್ನತಿ), “ಮುಲ್ಲಾ” “ಅಟಂಕವಾಡಿ” (ಭಯೋತ್ಪಾದಕ) ಮತ್ತು “ಉಗ್ರವಾದಿ” (ಉಗ್ರವಾದಿ) ಎಂದು ಲೋಕಸಭೆಯಲ್ಲಿ ಕರೆದಿದ್ದಾರೆ.

ಸಂಸತ್ತಿನ ಕೆಳಮನೆಯಲ್ಲಿ ಚಂದ್ರಯಾನ-3ರ ಯಶಸ್ಸಿನ ಚರ್ಚೆಯ ವೇಳೆ ಬಿಜೆಪಿ ನಾಯಕರ ಈ ದ್ವೇಷಪೂರಿತ ಹೇಳಿಕೆ ಹೊರಬಿದ್ದಿದೆ. “ಯೇ ಉಗ್ರವಾದಿ (ಉಗ್ರವಾದಿ), ಯೇ ಆಟಂಕ್ವಾಡಿ ಹೈ, ಉಗ್ರವಾದಿ ಹೈ, ಯೇ ಆಂತಂಕ್ವಾದಿ (ಭಯೋತ್ಪಾದಕ) ಹೈ,” ಎಂದು ಬಿಧುರಿ ಹೇಳುವುದನ್ನು ಕೇಳಬಹುದು.

ಇದನ್ನೂ ಓದಿ: NDA ಆಡಳಿತದ 16 ರಾಜ್ಯಗಳಲ್ಲಿ ಒಬ್ಬರೇ ಒಬ್ಬ ಮಹಿಳಾ ಸಿಎಂಗಳಿಲ್ಲ: ಡೆರೆಕ್ ಓಬ್ರಿಯಾನ್

ಡ್ಯಾನಿಶ್ ಅಲಿ ಲೋಕಸಭೆಯಲ್ಲಿ ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಧುರಿ ಹೇಳಿಕೆಗೆ ರಕ್ಷಣಾ ಸಚಿವ ಮತ್ತು ಲೋಕಸಭೆಯ ಉಪನಾಯಕ ರಾಜನಾಥ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇದೀಗ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರ ಧ್ವೇಷಪೂರಿತ ಹೇಳಿಕೆ ವೈರಲ್ ಆಗುತ್ತಿದ್ದು, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಅವರು ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ”ಮುಸ್ಲಿಮರನ್ನು, ಒಬಿಸಿಗಳನ್ನು ನಿಂದಿಸುವುದು ಬಿಜೆಪಿಯ ಅಂತರ್ಗತ ಸಂಸ್ಕೃತಿಯಾಗಿದೆ. ಈಗ ಹೆಚ್ಚಿನವರಿಗೆ ಅದರಲ್ಲಿ ಯಾವುದೇ ತಪ್ಪು ಕಾಣುತ್ತಿಲ್ಲ. ಮುಸ್ಲಿಮರು ತಮ್ಮ ಸ್ವಂತ ನೆಲದಲ್ಲಿ ಭಯದಿಂದ ಬದುಕುವ ಪರಿಸ್ಥಿತಿಯನ್ನು ನರೇಂದ್ರ ಮೋದಿ ಸರ್ಕಾರ ಸೃಷ್ಟಿಸಿದೆ. ಅವರು ನಗುತ್ತಾ ಎಲ್ಲವನ್ನು ಸಹಿಸಿಕೊಂಡಿದ್ದಾರೆ. ಕ್ಷಮಿಸಿ, ಇದು ಅಪರಾಧ ಎಂದು ಎಂದು ನಾನು ಕರೆಯುತ್ತೇನೆ. ಮಾ ಕಾಳಿ ನನ್ನ ಬೆನ್ನಿಗಿದ್ದಾರೆ” ಎಂದು ಬರೆದಿದ್ದಾರೆ.

ಬಿಧುರಿ ಅವರು ಮಾತನಾಡಿರುವ ವಿಡಿಯೋವನ್ನು ಪತ್ರಕರ್ತ ಮೊಹಮ್ಮದ್ ಜುಬೇರ್ ಹಂಚಿಕೊಂಡಿದ್ದು, ”ಬಿಜೆಪಿ ಸಂಸದ ರಮೇಶಬಿಧುರಿ ಅವರು ಸಂಸದ ಡ್ಯಾನಿಶ್ ಅಲಿ ಅವರನ್ನು “ಭರ್ವಾ (ಪಿಂಪ್), “ಕತ್ವಾ” (ಸುನ್ನತಿ), “ಮುಲ್ಲಾ” “ಅಟಂಕವಾಡಿ” (ಭಯೋತ್ಪಾದಕ) ಮತ್ತು “ಉಗ್ರವಾದಿ” (ಉಗ್ರವಾದಿ) ಎಂದು ಲೋಕಸಭೆಯಲ್ಲಿ ರೆಕಾರ್ಡ್‌ನಲ್ಲಿ ಕರೆಯುವುದನ್ನು ಕೇಳಬಹುದು, ಆದರೆ ರವಿಶಂಕರ್ ಪ್ರಸಾದ್ ಮತ್ತು ಹರ್ಷವರ್ಧನ್ ಅವರು ಈ ಹೇಳಿಕೆಗೆ ನಗುತ್ತ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ” ಎಂದು ವಿಡಿಯೋ ಶೇರ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...