HomeಮುಖಪುಟMGNREGA ಯೋಜನೆಯಲ್ಲಿ ಬಹು ಕೋಟಿ ಹಗರಣ: ಜಿಗ್ನೇಶ್ ಮೇವಾನಿ ಆರೋಪ

MGNREGA ಯೋಜನೆಯಲ್ಲಿ ಬಹು ಕೋಟಿ ಹಗರಣ: ಜಿಗ್ನೇಶ್ ಮೇವಾನಿ ಆರೋಪ

ಬಲೂಂದ್ರ ಗ್ರಾಮದಲ್ಲಿ ಸುಮಾರು 500 ಜನರು MGNREGA ದೈನಂದಿನ ವೇತನ ಕೆಲಸಕ್ಕೆ ಹೋಗಿಲ್ಲ. ಆದರೂ ಅವರು ಕೆಲಸ ಮಾಡುತ್ತಿದ್ದಾರೆಂದು ತೋರಿಸಲಾಗಿದೆ. ಅವರ ಜಾಬ್ ಕಾರ್ಡ್‌ಗಳನ್ನು ತಯಾರಿಸಿ, ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣ ಹೊಡೆದಿದ್ದಾರೆ ಎಂದು ಮೇವಾನಿ ತಿಳಿಸಿದ್ದಾರೆ.

- Advertisement -
- Advertisement -

ಗುಜರಾತ್‌ನ ಬನಸ್ಕಂತ ಜಿಲ್ಲೆಯ ಹಳ್ಳಿಯಲ್ಲಿ ಬಹು ಕೋಟಿ ಹಗರಣ ಬೆಳಕಿಗೆ ಬಂದಿದ್ದು, ಎಂಜಿಎನ್‌ಆರ್‌ಇಜಿಎ ಯೋಜನೆಯಡಿ ಹಣ ವರ್ಗಾವಣೆಯ ಅರಿವಿಲ್ಲದ ಸುಮಾರು 500 ಗ್ರಾಮಸ್ಥರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಆರೋಪಿಸಿದ್ದಾರೆ.

ಕೊರೊನಾದಿಂದ ಆರ್ಥಿಕವಾಗಿ ಹಾನಿಗೊಳಗಾದ ಕೆಲವು ಗ್ರಾಮಸ್ಥರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಪಡೆಯಲು ಹೋದ ನಂತರ ಅಮೀರ್‌ಗಡ್‌ನ ಬಲುಂದ್ರ ಗ್ರಾಮದಲ್ಲಿ ಹಗರಣ ಬೆಳಕಿಗೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಗುಜರಾತ್‌ನ ಇತರ ಹಳ್ಳಿಗಳಲ್ಲಿ ಇದೇ ರೀತಿಯ ಹಗರಣಗಳು ನಡೆಯುತ್ತಿವೆ ಎಂದು ಮೇವಾನಿ ಆರೋಪಿಸಿದ್ದಾರೆ.

ಅವರ ಕ್ಷೇತ್ರವಾದ ಬನಸ್ಕಂತ ಜಿಲ್ಲೆಯ ವಡ್ಗಾವ್‌ ಸೇರಿದಂತೆ, ಹಲವೆಡೆ ಹಣವನ್ನು ಇತರರು ಕಸಿದುಕೊಳ್ಳುತ್ತಿದ್ದಾರೆ. ಆದರೆ ಗ್ರಾಮಸ್ಥರನ್ನು ಅದರ ಫಲಾನುಭವಿಗಳೆಂದು ತೋರಿಸಿ ವಂಚಿಸಲಾಗುತ್ತಿದೆ ಎಂದಿದ್ದಾರೆ.

ಬಲೂಂದ್ರ ಗ್ರಾಮದಲ್ಲಿ ಸುಮಾರು 500 ಜನರು MGNREGA ದೈನಂದಿನ ವೇತನ ಕೆಲಸಕ್ಕೆ ಹೋಗಿಲ್ಲ. ಆದರೂ ಅವರು ಕೆಲಸ ಮಾಡುತ್ತಿದ್ದಾರೆಂದು ತೋರಿಸಲಾಗಿದೆ. ಅವರ ಜಾಬ್ ಕಾರ್ಡ್‌ಗಳನ್ನು ತಯಾರಿಸಿ, ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣ ಹೊಡೆದಿದ್ದಾರೆ ಎಂದು ಮೇವಾನಿ ತಿಳಿಸಿದ್ದಾರೆ.

ಅಹ್ಮದಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಸರ್ಕಾರಿ ಯೋಜನೆಗಳ ಲಾಭವನ್ನು ಪಡೆಯುತ್ತೀರಿ ಎಂದು ಗ್ರಾಮಸ್ಥರ ಸಹಿ ಅಥವಾ ಹೆಬ್ಬೆರಳು ಗುರುತನ್ನು ಪಡೆಯಲಾಗುತ್ತದೆ. ನಂತರ ಗ್ರಾಮಸ್ಥರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ಪಾಸ್‌ಬುಕ್ ಮತ್ತು ಎಟಿಎಂ ತಾವೇ ಇಟ್ಟುಕೊಂಡಿರುತ್ತಾರೆ. ನಂತರ ಲೂಟಿಕೋರರು ಜೆಸಿಬಿ ಯಂತ್ರಗಳನ್ನು ಬಳಸಿಕೊಂಡು ನರೇಗ ಅಡಿಯಲ್ಲಿ ನಿಗದಿಪಡಿಸಿದ ಕೆಲಸವನ್ನು ನಿರ್ವಹಿಸುತ್ತಾರೆ. ಹೆಚ್ಚು ದಿನ ಊರಿನ ಜನರೇ ಕೆಲಸ ಮಾಡಿದ್ದಾರೆ ಎಂದು ಸುಳ್ಳು ದಾಖಲೆ ಸೃಷ್ಟಿಸಿ ಆ ಖಾತೆಗಳಿಗೆ ಹಣ ಹೋಗುವಂತೆ ಮಾಡಿ ಅದನ್ನು ಲಪಟಾಯಿಸುತ್ತಿದ್ದಾರೆ. ಹೀಗೆ ಸುಮಾರು 9-10 ಕೋಟಿ ಹಣ ನುಂಗಿದ್ದಾರೆ ಎಂದು ಮೇವಾನಿ ಆರೋಪಿಸಿದ್ದಾರೆ.

ಈ ಆರೋಪಗಳನ್ನು ಸಾಬೀತುಪಡಿಸಲು ಸಾಕ್ಷ್ಯಗಳು ದೊರೆತಿವೆ ಎಂದು ಹೇಳಿದ ಮೇವಾನಿ, ಈ ಸಂಬಂಧ ಶೀಘ್ರದಲ್ಲೇ ಪೊಲೀಸರಲ್ಲಿ ದೂರು ದಾಖಲಿಸುವುದಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಗುಜರಾತ್ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷ ಹಾರ್ದಿಕ್ ಪಟೇಲ್ ಉಪಸ್ಥಿತರಿದ್ದರು.


ಇದನ್ನೂ ಓದಿ: ಮೆಹಬೂಬಾ ಮುಫ್ತಿ ಬಂಧನ ಕಾನೂನಿನ ದುರುಪಯೋಗ, ಸಂವಿಧಾನಕ್ಕೆ ವಿರುದ್ಧ: ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...