HomeಮುಖಪುಟMGNREGA ಯೋಜನೆಯಲ್ಲಿ ಬಹು ಕೋಟಿ ಹಗರಣ: ಜಿಗ್ನೇಶ್ ಮೇವಾನಿ ಆರೋಪ

MGNREGA ಯೋಜನೆಯಲ್ಲಿ ಬಹು ಕೋಟಿ ಹಗರಣ: ಜಿಗ್ನೇಶ್ ಮೇವಾನಿ ಆರೋಪ

ಬಲೂಂದ್ರ ಗ್ರಾಮದಲ್ಲಿ ಸುಮಾರು 500 ಜನರು MGNREGA ದೈನಂದಿನ ವೇತನ ಕೆಲಸಕ್ಕೆ ಹೋಗಿಲ್ಲ. ಆದರೂ ಅವರು ಕೆಲಸ ಮಾಡುತ್ತಿದ್ದಾರೆಂದು ತೋರಿಸಲಾಗಿದೆ. ಅವರ ಜಾಬ್ ಕಾರ್ಡ್‌ಗಳನ್ನು ತಯಾರಿಸಿ, ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣ ಹೊಡೆದಿದ್ದಾರೆ ಎಂದು ಮೇವಾನಿ ತಿಳಿಸಿದ್ದಾರೆ.

- Advertisement -
- Advertisement -

ಗುಜರಾತ್‌ನ ಬನಸ್ಕಂತ ಜಿಲ್ಲೆಯ ಹಳ್ಳಿಯಲ್ಲಿ ಬಹು ಕೋಟಿ ಹಗರಣ ಬೆಳಕಿಗೆ ಬಂದಿದ್ದು, ಎಂಜಿಎನ್‌ಆರ್‌ಇಜಿಎ ಯೋಜನೆಯಡಿ ಹಣ ವರ್ಗಾವಣೆಯ ಅರಿವಿಲ್ಲದ ಸುಮಾರು 500 ಗ್ರಾಮಸ್ಥರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಆರೋಪಿಸಿದ್ದಾರೆ.

ಕೊರೊನಾದಿಂದ ಆರ್ಥಿಕವಾಗಿ ಹಾನಿಗೊಳಗಾದ ಕೆಲವು ಗ್ರಾಮಸ್ಥರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಪಡೆಯಲು ಹೋದ ನಂತರ ಅಮೀರ್‌ಗಡ್‌ನ ಬಲುಂದ್ರ ಗ್ರಾಮದಲ್ಲಿ ಹಗರಣ ಬೆಳಕಿಗೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಗುಜರಾತ್‌ನ ಇತರ ಹಳ್ಳಿಗಳಲ್ಲಿ ಇದೇ ರೀತಿಯ ಹಗರಣಗಳು ನಡೆಯುತ್ತಿವೆ ಎಂದು ಮೇವಾನಿ ಆರೋಪಿಸಿದ್ದಾರೆ.

ಅವರ ಕ್ಷೇತ್ರವಾದ ಬನಸ್ಕಂತ ಜಿಲ್ಲೆಯ ವಡ್ಗಾವ್‌ ಸೇರಿದಂತೆ, ಹಲವೆಡೆ ಹಣವನ್ನು ಇತರರು ಕಸಿದುಕೊಳ್ಳುತ್ತಿದ್ದಾರೆ. ಆದರೆ ಗ್ರಾಮಸ್ಥರನ್ನು ಅದರ ಫಲಾನುಭವಿಗಳೆಂದು ತೋರಿಸಿ ವಂಚಿಸಲಾಗುತ್ತಿದೆ ಎಂದಿದ್ದಾರೆ.

ಬಲೂಂದ್ರ ಗ್ರಾಮದಲ್ಲಿ ಸುಮಾರು 500 ಜನರು MGNREGA ದೈನಂದಿನ ವೇತನ ಕೆಲಸಕ್ಕೆ ಹೋಗಿಲ್ಲ. ಆದರೂ ಅವರು ಕೆಲಸ ಮಾಡುತ್ತಿದ್ದಾರೆಂದು ತೋರಿಸಲಾಗಿದೆ. ಅವರ ಜಾಬ್ ಕಾರ್ಡ್‌ಗಳನ್ನು ತಯಾರಿಸಿ, ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣ ಹೊಡೆದಿದ್ದಾರೆ ಎಂದು ಮೇವಾನಿ ತಿಳಿಸಿದ್ದಾರೆ.

ಅಹ್ಮದಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಸರ್ಕಾರಿ ಯೋಜನೆಗಳ ಲಾಭವನ್ನು ಪಡೆಯುತ್ತೀರಿ ಎಂದು ಗ್ರಾಮಸ್ಥರ ಸಹಿ ಅಥವಾ ಹೆಬ್ಬೆರಳು ಗುರುತನ್ನು ಪಡೆಯಲಾಗುತ್ತದೆ. ನಂತರ ಗ್ರಾಮಸ್ಥರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ಪಾಸ್‌ಬುಕ್ ಮತ್ತು ಎಟಿಎಂ ತಾವೇ ಇಟ್ಟುಕೊಂಡಿರುತ್ತಾರೆ. ನಂತರ ಲೂಟಿಕೋರರು ಜೆಸಿಬಿ ಯಂತ್ರಗಳನ್ನು ಬಳಸಿಕೊಂಡು ನರೇಗ ಅಡಿಯಲ್ಲಿ ನಿಗದಿಪಡಿಸಿದ ಕೆಲಸವನ್ನು ನಿರ್ವಹಿಸುತ್ತಾರೆ. ಹೆಚ್ಚು ದಿನ ಊರಿನ ಜನರೇ ಕೆಲಸ ಮಾಡಿದ್ದಾರೆ ಎಂದು ಸುಳ್ಳು ದಾಖಲೆ ಸೃಷ್ಟಿಸಿ ಆ ಖಾತೆಗಳಿಗೆ ಹಣ ಹೋಗುವಂತೆ ಮಾಡಿ ಅದನ್ನು ಲಪಟಾಯಿಸುತ್ತಿದ್ದಾರೆ. ಹೀಗೆ ಸುಮಾರು 9-10 ಕೋಟಿ ಹಣ ನುಂಗಿದ್ದಾರೆ ಎಂದು ಮೇವಾನಿ ಆರೋಪಿಸಿದ್ದಾರೆ.

ಈ ಆರೋಪಗಳನ್ನು ಸಾಬೀತುಪಡಿಸಲು ಸಾಕ್ಷ್ಯಗಳು ದೊರೆತಿವೆ ಎಂದು ಹೇಳಿದ ಮೇವಾನಿ, ಈ ಸಂಬಂಧ ಶೀಘ್ರದಲ್ಲೇ ಪೊಲೀಸರಲ್ಲಿ ದೂರು ದಾಖಲಿಸುವುದಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಗುಜರಾತ್ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷ ಹಾರ್ದಿಕ್ ಪಟೇಲ್ ಉಪಸ್ಥಿತರಿದ್ದರು.


ಇದನ್ನೂ ಓದಿ: ಮೆಹಬೂಬಾ ಮುಫ್ತಿ ಬಂಧನ ಕಾನೂನಿನ ದುರುಪಯೋಗ, ಸಂವಿಧಾನಕ್ಕೆ ವಿರುದ್ಧ: ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...