Homeಮುಖಪುಟಮುಂಬೈ | ಕೋಚಿಂಗ್ ಸೆಂಟರ್ ನಡೆಸುತ್ತಿದ್ದ 3 ಸಹೋದರರಿಂದ ಅಪ್ರಾಪ್ತ ಬಾಲಕಿಯ ಮೇಲೆ 2 ವರ್ಷ...

ಮುಂಬೈ | ಕೋಚಿಂಗ್ ಸೆಂಟರ್ ನಡೆಸುತ್ತಿದ್ದ 3 ಸಹೋದರರಿಂದ ಅಪ್ರಾಪ್ತ ಬಾಲಕಿಯ ಮೇಲೆ 2 ವರ್ಷ ಅತ್ಯಾಚಾರ

- Advertisement -
- Advertisement -

ದಕ್ಷಿಣ ಮುಂಬೈನಲ್ಲಿ ಕೋಚಿಂಗ್ ಸೆಂಟರ್ ನಡೆಸುತ್ತಿರುವ ಮೂವರು ಸಹೋದರರು ಸುಮಾರು ಎರಡು ವರ್ಷಗಳ ಅವಧಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಹೋದರರು ತನ್ನನ್ನು ಕೋಚಿಂಗ್ ಸೆಂಟರ್‌ಗೆ ಬೇಗನೆ ಬರುವಂತೆ ಮತ್ತು ಕೊನೆಗೆ ತೆರಳುವಂತೆ ಒತ್ತಾಯಿಸುತ್ತಿದ್ದರು. ಈ ವೇಳೆ ಅವರು ಪದೇ ಪದೇ ಅತ್ಯಾಚಾರ ನಡೆಸಿದ್ದಾರೆ ಬಾಲಕಿ ಹೇಳಿದ್ದಾರೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಂಬೈ ಪೊಲೀಸರ ಪ್ರಕಾರ, ಗೌತಮ್ ಮತ್ತು ತರುಣ್ ರಾಜಪುರೋಹಿತ್ ಅವರನ್ನು ಶನಿವಾರ ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ಹಿರಿಯ ಸಹೋದರ ಮೂರನೇ ಆರೋಪಿ ಸತ್ಯ ರಾಜ್ ಅವರನ್ನು ಭಾನುವಾರ ಬಂಧಿಸಲಾಗಿದೆ.

ಮಕ್ಕಳ ಅಭಿವೃದ್ಧಿ ಕೇಂದ್ರದ ಆಪ್ತಸಮಾಲೋಚಕರ ಬಳಿ ಈ ಬಗ್ಗೆ ಸಂತ್ರಸ್ತ ಬಾಲಕಿ ಮಾರ್ಚ್‌ ತಿಂಗಳ ವೇಳೆಗೆ ಹೇಳಿಕೊಂಡಿದ್ದು, ಶುಕ್ರವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂಓದಿ: ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಉಯನಿಧಿ ಸ್ಟಾಲಿನ್ ಅಧಿಕಾರ ಸ್ವೀಕಾರ

24, 25 ಮತ್ತು 27 ವರ್ಷ ವಯಸ್ಸಿನ ಸಹೋದರರು ದಕ್ಷಿಣ ಮುಂಬೈನಲ್ಲಿ ನೆಲೆಸಿದ್ದು, 7 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೋಚಿಂಗ್ ಸಂಸ್ಥೆಯನ್ನು ನಡೆಸುತ್ತಿದ್ದರು. ಅವರ ತರಗತಿಗಳಿಗೆ 35ರಿಂದ 40 ಹುಡುಗಿಯರು ಹಾಜರಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಹೆತ್ತವರ ವಿಚ್ಛೇದನದ ನಂತರ ತನ್ನ ತಾಯಿಯೊಂದಿಗಿದ್ದ ಬಾಲಕಿ 2022 ರಲ್ಲಿ ಕೋಚಿಂಗ್ ಸೆಂಟರ್‌ಗೆ ಸೇರಿಕೊಂಡಿದ್ದರು. ಕೋಚಿಂಗ್‌ಗೆ ಸೇವರು ವೇಳೆ ಬಾಲಕಿ ಹೊಸ ಶಾಲೆಗೆ ಕೂಡಾ ದಾಖಲಾಗಿದ್ದರು. 2022 ರ ಕೊನೆಯಲ್ಲಿ ಬಾಲಕಿಯ ನಡವಳಿಕೆಯಲ್ಲಿ ಬದಲಾವಣೆಗಳನ್ನು ಗಮನಿಸಿದ ಅವರ ತಾಯಿ 2023ರ ಜನವರಿಯಲ್ಲಿ ಸಮಾಲೋಚನೆಗಾಗಿ ಮಕ್ಕಳ ಅಭಿವೃದ್ಧಿ ಕೇಂದ್ರಕ್ಕೆ ಸೇರಿಸಲಾಗಿತ್ತು.

ಸಂತ್ರಸ್ತೆ ಮೇ 2023 ರಲ್ಲಿ ಸಮಾಲೋಚನೆಯನ್ನು ನಿಲ್ಲಿಸಿದ್ದರು. ಅದಕ್ಕೂ ಮೊದಲು ನಾಲ್ಕು ತಿಂಗಳ ಕಾಲ ಸಮಾಲೋಚನೆಗೆ ಅವರು ಹಾಜರಾಗಿದ್ದರು. ಅದರ ನಂತರ ಅವರು ಈ ವರ್ಷದ ಫೆಬ್ರವರಿಯಲ್ಲಿ ಸಮಾಲೋಚನಾ ಕೇಂದ್ರವನ್ನು ಮತ್ತೆ ಸೇರಿಕೊಂಡಿದ್ದರು. ಮಾರ್ಚ್‌ ವೇಳೆಗೆ ಮೂವರು ಸಹೋದರರು ತನ್ನ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಸಮಾಲೋಚಕರಿಗೆ ಬಹಿರಂಗಪಡಿಸಿದ್ದರು.

ಸಾಮಾಜಿಕ ಕಳಂಕದ ಭಯದ ಕಾರಣಕ್ಕೆ ಈ ಬಗ್ಗೆ ತನ್ನ ತಾಯಿಗೆ ತಿಳಿಸದಂತೆ ಬಾಲಕಿಯು ಸಮಾಲೋಚಕರಲ್ಲಿ ವಿನಂತಿಸಿದ್ದರು. ಮತ್ತು ಮಾರ್ಚ್‌ನಲ್ಲಿ ಕೋಚಿಂಗ್ ತರಗತಿಗಳಿಗೆ ಹಾಜರಾಗುವುದನ್ನು ನಿಲ್ಲಿಸಿದ್ದರು. ಅದಾಗ್ಯೂ, ಆಪ್ತಸಮಾಲೋಚಕರು ಹುಡುಗಿಯ ತಾಯಿಗೆ ಪರಿಸ್ಥಿತಿಯ ಬಗ್ಗೆ ತಿಳಿಸಿದ್ದು, ಆದರೆ ತಾಯಿ ಮತ್ತು ಮಗಳು ಇಬ್ಬರೂ ಪೊಲೀಸ್ ದೂರು ನೀಡಲು ಆರಂಭದಲ್ಲಿ ನಿರಾಕರಿಸಿದ್ದರು.

ಇದನ್ನೂಓದಿ: ಜಮ್ಮು-ಕಾಶ್ಮೀರ: ಕಡಿಮೆ ರಕ್ತದೊತ್ತಡದಿಂದ ವೇದಿಕೆ ಮೇಲೆ ಅಸ್ವಸ್ಥರಾದ ಮಲ್ಲಿಕಾರ್ಜುನ ಖರ್ಗೆ

ಅದಾಗ್ಯೂ, ಶುಕ್ರವಾರ ತಡರಾತ್ರಿ ಶಿಶು ಅಭಿವೃದ್ಧಿ ಕೇಂದ್ರದ ಅಧಿಕಾರಿಗಳು ಪೊಲೀಸರನ್ನು ಸಂಪರ್ಕಿಸಿ ಅಧಿಕೃತವಾಗಿ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಕಿರುಕುಳ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆ, ಹಾಗೆಯೇ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ), 2012 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

“ಎಫ್ಐಆರ್ ದಾಖಲಾದ ನಂತರ, ಹುಡುಗಿ ಮತ್ತು ಆಕೆಯ ತಾಯಿಯ ಹೇಳಿಕೆಗಳನ್ನು ದಾಖಲಿಸಲಾಗಿದೆ. ಹಾಗಾಗಿ ಇಬ್ಬರು ಸಹೋದರರನ್ನು ಬಂಧಿಸಲು ಕಾರಣವಾಯಿತು. ಹಿರಿಯ ಸಹೋದರ, 27 ವರ್ಷ ವಯಸ್ಸಿನ ಮತ್ತೊಬ್ಬ ಶಿಕ್ಷಕ ಇನ್ನೂ ತಲೆಮರೆಸಿಕೊಂಡಿದ್ದಾನೆ. ನಾವು ಅವನನ್ನು ಪತ್ತೆಹಚ್ಚಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೋಚಿಂಗ್ ಸೆಂಟರ್‌ನಲ್ಲಿ ಸುಮಾರು 35-40 ವಿದ್ಯಾರ್ಥಿನಿಯರು ದಾಖಲಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಆರೋಪಿಗಳಾದ ಮೂವರು ಸಹೋದರರು ಬೇರೆ ಯಾವುದೇ ವಿದ್ಯಾರ್ಥಿಗಳ ಮೇಲೆ ಇದೇ ರೀತಿಯಲ್ಲಿ ದೌರ್ಜನ್ಯ ನಡೆಸಿದ್ದಾರೆಯೆ ಎಂದು ತನಿಖೆ ನಡೆಸುತ್ತಿದ್ದಾರೆ. ಬಂಧಿತ ಇಬ್ಬರು ಸಹೋದರರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ವಿಡಿಯೊನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...