Homeಮುಖಪುಟಮುಂಬೈ | ಕೋಚಿಂಗ್ ಸೆಂಟರ್ ನಡೆಸುತ್ತಿದ್ದ 3 ಸಹೋದರರಿಂದ ಅಪ್ರಾಪ್ತ ಬಾಲಕಿಯ ಮೇಲೆ 2 ವರ್ಷ...

ಮುಂಬೈ | ಕೋಚಿಂಗ್ ಸೆಂಟರ್ ನಡೆಸುತ್ತಿದ್ದ 3 ಸಹೋದರರಿಂದ ಅಪ್ರಾಪ್ತ ಬಾಲಕಿಯ ಮೇಲೆ 2 ವರ್ಷ ಅತ್ಯಾಚಾರ

- Advertisement -
- Advertisement -

ದಕ್ಷಿಣ ಮುಂಬೈನಲ್ಲಿ ಕೋಚಿಂಗ್ ಸೆಂಟರ್ ನಡೆಸುತ್ತಿರುವ ಮೂವರು ಸಹೋದರರು ಸುಮಾರು ಎರಡು ವರ್ಷಗಳ ಅವಧಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಹೋದರರು ತನ್ನನ್ನು ಕೋಚಿಂಗ್ ಸೆಂಟರ್‌ಗೆ ಬೇಗನೆ ಬರುವಂತೆ ಮತ್ತು ಕೊನೆಗೆ ತೆರಳುವಂತೆ ಒತ್ತಾಯಿಸುತ್ತಿದ್ದರು. ಈ ವೇಳೆ ಅವರು ಪದೇ ಪದೇ ಅತ್ಯಾಚಾರ ನಡೆಸಿದ್ದಾರೆ ಬಾಲಕಿ ಹೇಳಿದ್ದಾರೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಂಬೈ ಪೊಲೀಸರ ಪ್ರಕಾರ, ಗೌತಮ್ ಮತ್ತು ತರುಣ್ ರಾಜಪುರೋಹಿತ್ ಅವರನ್ನು ಶನಿವಾರ ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ಹಿರಿಯ ಸಹೋದರ ಮೂರನೇ ಆರೋಪಿ ಸತ್ಯ ರಾಜ್ ಅವರನ್ನು ಭಾನುವಾರ ಬಂಧಿಸಲಾಗಿದೆ.

ಮಕ್ಕಳ ಅಭಿವೃದ್ಧಿ ಕೇಂದ್ರದ ಆಪ್ತಸಮಾಲೋಚಕರ ಬಳಿ ಈ ಬಗ್ಗೆ ಸಂತ್ರಸ್ತ ಬಾಲಕಿ ಮಾರ್ಚ್‌ ತಿಂಗಳ ವೇಳೆಗೆ ಹೇಳಿಕೊಂಡಿದ್ದು, ಶುಕ್ರವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂಓದಿ: ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಉಯನಿಧಿ ಸ್ಟಾಲಿನ್ ಅಧಿಕಾರ ಸ್ವೀಕಾರ

24, 25 ಮತ್ತು 27 ವರ್ಷ ವಯಸ್ಸಿನ ಸಹೋದರರು ದಕ್ಷಿಣ ಮುಂಬೈನಲ್ಲಿ ನೆಲೆಸಿದ್ದು, 7 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೋಚಿಂಗ್ ಸಂಸ್ಥೆಯನ್ನು ನಡೆಸುತ್ತಿದ್ದರು. ಅವರ ತರಗತಿಗಳಿಗೆ 35ರಿಂದ 40 ಹುಡುಗಿಯರು ಹಾಜರಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಹೆತ್ತವರ ವಿಚ್ಛೇದನದ ನಂತರ ತನ್ನ ತಾಯಿಯೊಂದಿಗಿದ್ದ ಬಾಲಕಿ 2022 ರಲ್ಲಿ ಕೋಚಿಂಗ್ ಸೆಂಟರ್‌ಗೆ ಸೇರಿಕೊಂಡಿದ್ದರು. ಕೋಚಿಂಗ್‌ಗೆ ಸೇವರು ವೇಳೆ ಬಾಲಕಿ ಹೊಸ ಶಾಲೆಗೆ ಕೂಡಾ ದಾಖಲಾಗಿದ್ದರು. 2022 ರ ಕೊನೆಯಲ್ಲಿ ಬಾಲಕಿಯ ನಡವಳಿಕೆಯಲ್ಲಿ ಬದಲಾವಣೆಗಳನ್ನು ಗಮನಿಸಿದ ಅವರ ತಾಯಿ 2023ರ ಜನವರಿಯಲ್ಲಿ ಸಮಾಲೋಚನೆಗಾಗಿ ಮಕ್ಕಳ ಅಭಿವೃದ್ಧಿ ಕೇಂದ್ರಕ್ಕೆ ಸೇರಿಸಲಾಗಿತ್ತು.

ಸಂತ್ರಸ್ತೆ ಮೇ 2023 ರಲ್ಲಿ ಸಮಾಲೋಚನೆಯನ್ನು ನಿಲ್ಲಿಸಿದ್ದರು. ಅದಕ್ಕೂ ಮೊದಲು ನಾಲ್ಕು ತಿಂಗಳ ಕಾಲ ಸಮಾಲೋಚನೆಗೆ ಅವರು ಹಾಜರಾಗಿದ್ದರು. ಅದರ ನಂತರ ಅವರು ಈ ವರ್ಷದ ಫೆಬ್ರವರಿಯಲ್ಲಿ ಸಮಾಲೋಚನಾ ಕೇಂದ್ರವನ್ನು ಮತ್ತೆ ಸೇರಿಕೊಂಡಿದ್ದರು. ಮಾರ್ಚ್‌ ವೇಳೆಗೆ ಮೂವರು ಸಹೋದರರು ತನ್ನ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಸಮಾಲೋಚಕರಿಗೆ ಬಹಿರಂಗಪಡಿಸಿದ್ದರು.

ಸಾಮಾಜಿಕ ಕಳಂಕದ ಭಯದ ಕಾರಣಕ್ಕೆ ಈ ಬಗ್ಗೆ ತನ್ನ ತಾಯಿಗೆ ತಿಳಿಸದಂತೆ ಬಾಲಕಿಯು ಸಮಾಲೋಚಕರಲ್ಲಿ ವಿನಂತಿಸಿದ್ದರು. ಮತ್ತು ಮಾರ್ಚ್‌ನಲ್ಲಿ ಕೋಚಿಂಗ್ ತರಗತಿಗಳಿಗೆ ಹಾಜರಾಗುವುದನ್ನು ನಿಲ್ಲಿಸಿದ್ದರು. ಅದಾಗ್ಯೂ, ಆಪ್ತಸಮಾಲೋಚಕರು ಹುಡುಗಿಯ ತಾಯಿಗೆ ಪರಿಸ್ಥಿತಿಯ ಬಗ್ಗೆ ತಿಳಿಸಿದ್ದು, ಆದರೆ ತಾಯಿ ಮತ್ತು ಮಗಳು ಇಬ್ಬರೂ ಪೊಲೀಸ್ ದೂರು ನೀಡಲು ಆರಂಭದಲ್ಲಿ ನಿರಾಕರಿಸಿದ್ದರು.

ಇದನ್ನೂಓದಿ: ಜಮ್ಮು-ಕಾಶ್ಮೀರ: ಕಡಿಮೆ ರಕ್ತದೊತ್ತಡದಿಂದ ವೇದಿಕೆ ಮೇಲೆ ಅಸ್ವಸ್ಥರಾದ ಮಲ್ಲಿಕಾರ್ಜುನ ಖರ್ಗೆ

ಅದಾಗ್ಯೂ, ಶುಕ್ರವಾರ ತಡರಾತ್ರಿ ಶಿಶು ಅಭಿವೃದ್ಧಿ ಕೇಂದ್ರದ ಅಧಿಕಾರಿಗಳು ಪೊಲೀಸರನ್ನು ಸಂಪರ್ಕಿಸಿ ಅಧಿಕೃತವಾಗಿ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಕಿರುಕುಳ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆ, ಹಾಗೆಯೇ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ), 2012 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

“ಎಫ್ಐಆರ್ ದಾಖಲಾದ ನಂತರ, ಹುಡುಗಿ ಮತ್ತು ಆಕೆಯ ತಾಯಿಯ ಹೇಳಿಕೆಗಳನ್ನು ದಾಖಲಿಸಲಾಗಿದೆ. ಹಾಗಾಗಿ ಇಬ್ಬರು ಸಹೋದರರನ್ನು ಬಂಧಿಸಲು ಕಾರಣವಾಯಿತು. ಹಿರಿಯ ಸಹೋದರ, 27 ವರ್ಷ ವಯಸ್ಸಿನ ಮತ್ತೊಬ್ಬ ಶಿಕ್ಷಕ ಇನ್ನೂ ತಲೆಮರೆಸಿಕೊಂಡಿದ್ದಾನೆ. ನಾವು ಅವನನ್ನು ಪತ್ತೆಹಚ್ಚಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೋಚಿಂಗ್ ಸೆಂಟರ್‌ನಲ್ಲಿ ಸುಮಾರು 35-40 ವಿದ್ಯಾರ್ಥಿನಿಯರು ದಾಖಲಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಆರೋಪಿಗಳಾದ ಮೂವರು ಸಹೋದರರು ಬೇರೆ ಯಾವುದೇ ವಿದ್ಯಾರ್ಥಿಗಳ ಮೇಲೆ ಇದೇ ರೀತಿಯಲ್ಲಿ ದೌರ್ಜನ್ಯ ನಡೆಸಿದ್ದಾರೆಯೆ ಎಂದು ತನಿಖೆ ನಡೆಸುತ್ತಿದ್ದಾರೆ. ಬಂಧಿತ ಇಬ್ಬರು ಸಹೋದರರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ವಿಡಿಯೊನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...